ಗಣೇಶೋತ್ಸವಕ್ಕೆ ಐದು ದಿನಗಳ ಮಿತಿಗೆ ಮಹಾಮಂಡಳಿಗಳ ಒಕ್ಕೊರಲಿನ ವಿರೋಧ. ಸರಕಾರಕ್ಕೆ ತಕ್ಷಣವೇ ವರದಿ: ಜಿಲ್ಲಾಧಿಕಾರಿ ಎಂ.ಜಿ.ಹಿರೇಮಠ

Source: SO News | By Laxmi Tanaya | Published on 7th September 2021, 10:23 PM | State News | Don't Miss |

ಬೆಳಗಾವಿ : ಬೆಳಗಾವಿ ಮಹಾನಗರದ ಗಣೇಶೋತ್ಸವ ಮಹಾಮಂಡಳಗಳ ಒಕ್ಕೊರಲಿನ ಕೋರಿಕೆಯಂತೆ ಗಣೇಶೋತ್ಸವವನ್ನು ಐದು‌ ದಿನಗಳ ಬದಲಾಗಿ ಹತ್ತು ದಿನಗಳ ಉತ್ಸವಕ್ಕೆ ಅವಕಾಶ ಕಲ್ಪಿಸುವ ಬೇಡಿಕೆಗೆ ಸಂಬಂಧಿಸಿದಂತೆ ಸರಕಾರಕ್ಕೆ ‌ತಕ್ಷಣವೇ ವರದಿ ಕಳಿಸಲಾಗುವುದು. ಈ ಕುರಿತು ಅಂತಿಮವಾಗಿ ಸರಕಾರ ‌ನೀಡುವ ನಿರ್ದೇಶನವನ್ನು ಎಲ್ಲರೂ ಪಾಲಿಸಬೇಕು  ಎಂದು ಜಿಲ್ಲಾಧಿಕಾರಿ ಎಂ.ಜಿ.ಹಿರೇಮಠ ಹೇಳಿದರು.

ಗಣೇಶೋತ್ಸವ ಆಚರಣೆಗೆ ಸಂಬಂಧಿಸಿದಂತೆ ಜಿಲ್ಲಾಧಿಕಾರಿ ಕಚೇರಿಯ ಸಭಾಂಗಣದಲ್ಲಿ ಮಂಗಳವಾರ  ನಡೆದ ಗಣೇಶೋತ್ಸವ ಮಹಾಮಂಡಳಗಳ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಗಣೇಶೋತ್ಸವಕ್ಕೆ ಕೆಲವೇ ದಿನಗಳು ಬಾಕಿ ಉಳಿದಿರುವುದರಿಂದ ಏಕಗವಾಕ್ಷಿ ವ್ಯವಸ್ಥೆ ಮೂಲಕ ಗಣೇಶೋತ್ಸವ ಮಂಡಳಿಗಳಿಗೆ ಅಗತ್ಯ ಅನುಮತಿ ನೀಡಲು ಸಂಬಂಧಿಸಿದ ಇಲಾಖೆಗಳ ಸಮನ್ವಯದೊಂದಿಗೆ ಚರ್ಚಿಸಿ ಕೂಡಲೇ ಏಕ‌ಗವಾಕ್ಷಿ ವ್ಯವಸ್ಥೆ ಮಾಡಲಾಗುವುದು ಎಂದು ಜಿಲ್ಲಾಧಿಕಾರಿ ಭರವಸೆ ನೀಡಿದರು.

ಗಣೇಶೋತ್ಸವ ಆಚರಣೆಗೆ ಸಂಬಂಧಿಸಿದಂತೆ ಸರಕಾರ ಮಾರ್ಗಸೂಚಿಯನ್ನು ಪ್ರಕಟಿಸಿದೆ. 
ಸಾರ್ವಜನಿಕ ಗಣೇಶೋತ್ಸವ ವೇಳೆ ಕೋವಿಡ್ ನಿಯಮಾವಳಿ ಪಾಲಿಸುವುದು ಕಡ್ಡಾಯವಾಗಿದೆ. 20 ಗಿಂತ ಹೆಚ್ಚು ಜನರು ಒಂದೆಡೆ ಸೇರಬಾರದು. ಆಯೋಜಕರು ಲಸಿಕೆ ಹಾಕಿಸಿಕೊಳ್ಳಬೇಕು. ಒಂದು ವೇಳೆ ಲಸಿಕೆ ಹಾಕಿಸಿರದಿದ್ದರೆ ಆರೋಗ್ಯ ಇಲಾಖೆಯ ವತಿಯಿಂದ ಲಸಿಕೆ‌ ವ್ಯವಸ್ಥೆ ಮಾಡಲಾಗುವುದು.

ಸಾಂಸ್ಕೃತಿಕ-ಮನೋರಂಜನಾ ಕಾರ್ಯಕ್ರಮ ನಿಷೇಧ:
ಗಣೇಶೋತ್ಸವ ಸಂದರ್ಭದಲ್ಲಿ ಯಾವುದೇ ರೀತಿಯ ಸಂಗೀತ, ಸಾಂಸ್ಕೃತಿಕ ಕಾರ್ಯಕ್ರಮಗಳು, ಡಿಜೆ, ನೃತ್ಯ ಮತ್ತಿತರ ಮನೋರಂಜನಾ ಕಾರ್ಯಕ್ರಮ ಹಮ್ಮಿಕೊಳ್ಳಬಾರದು.
ಗಣೇಶ ಪ್ರತಿಷ್ಠಾನ ಹಾಗೂ ವಿಸರ್ಜನೆ ವೇಳೆ ಮೆರವಣಿಗೆ ನಿಷೇಧಿಸಲಾಗಿದೆ ಎಂದು ಜಿಲ್ಲಾಧಿಕಾರಿ ಎಂ.ಜಿ.ಹಿರೇಮಠ ಸ್ಪಷ್ಟಪಡಿಸಿದರು.

ಪಾಲಿಕೆ‌ ನಿಗದಿಪಡಿಸಿದ ಸ್ಥಳಗಳಲ್ಲಿ ಮಾತ್ರ ವಿಸರ್ಜನೆಗೆ ಅವಕಾಶ ಕಲ್ಪಿಸಲಾಗಿದೆ. ಬಡಾವಣೆಗಳಿಗೆ ಮೊಬೈಲ್ ಟ್ಯಾಂಕ್ ಗಳನ್ನು ಕೂಡ‌ ಒದಗಿಸಲಾಗುತ್ತದೆ. ಕೃತಕ ಹೊಂಡಗಳನ್ನು ಕೂಡ ಪಾಲಿಕೆ ವತಿಯಿಂದ ನಿರ್ಮಿಸಲಾಗುವುದು.

ಗಣೇಶೋತ್ಸವ ಸ್ಥಳಗಳಲ್ಲಿ ಕೋವಿಡ್ ಮಾರ್ಗಸೂಚಿ ಕಡ್ಡಾಯವಾಗಿ ಪಾಲಿಸಬೇಕು. ಜನಸಂದಣಿ ಉಂಟಾಗದಂತೆ ಆಯೋಜಕರು ಕ್ರಮ ಕೈಗೊಳ್ಳಬೇಕು. ಮಾಸ್ಕ್, ಸ್ಯಾನಿಟೈಸರ್ ಗಳನ್ನು ಕಡ್ಡಾಯಗೊಳಿಸಬೇಕು.
ಸರಕಾರದ ಮಾರ್ಗಸೂಚಿಗಳನ್ನು ಎಲ್ಲರೂ ಕಡ್ಡಾಯವಾಗಿ ಪಾಲಿಸಬೇಕು. ಆದೇಶ ಉಲ್ಲಂಘಿಸಿದರೆ ವಿಪತ್ತು ನಿರ್ವಹಣಾ ಕಾಯ್ದೆ ಪ್ರಕಾರ ಕ್ರಮಗಳನ್ನು ತೆಗೆದುಕೊಳ್ಳಲು‌ ಮಾರ್ಗಸೂಚಿಯಲ್ಲಿ ತಿಳಿಸಲಾಗಿದೆ.

ಎಲ್ಲ ಗಣೇಶೋತ್ಸವ ಮಹಾಮಂಡಳಗಳು ಸಹಕರಿಸಬೇಕು. ನೆರೆಯ ಮಹಾರಾಷ್ಟ್ರದಲ್ಲಿ ಎರಡು ದಿನಗಳಿಂದ ಕೋವಿಡ್ ಪ್ರಮಾಣ ಏರಿಕೆ.
ಕೋವಿಡ್ ನಿಯಂತ್ರಣ ದೃಷ್ಟಿಯಿಂದ ‌ಮಾತ್ರ ಸರಕಾರ ಮಾರ್ಗಸೂಚಿಗಳನ್ನು ಪ್ರಕಟಿಸಿದೆ. ಆದ್ದರಿಂದ ಎಲ್ಲರೂ ‌ಸೇರಿ ಮಾರ್ಗಸೂಚಿಗಳನ್ನು ಪಾಲಿಸುವ ಮೂಲಕ ಕೋವಿಡ್ ನಿಯಂತ್ರಣಕ್ಕೆ ಮುಂದಾಗಬೇಕಿದೆ ಎಂದು ಜಿಲ್ಲಾಧಿಕಾರಿ ಎಂ.ಜಿ.ಹಿರೇಮಠ ಮನವಿ ಮಾಡಿಕೊಂಡರು.

ಐದು ದಿನಗಳ ಮಿತಿಗೆ ವಿರೋಧ:
ಸಭೆಯಲ್ಲಿ ಮಾತನಾಡಿದ ಲೋಕಮಾನ್ಯ ಟಿಳಕ ಗಣೇಶೋತ್ಸವ ಮಹಾಮಂಡಳದ ಅಧ್ಯಕ್ಷ ವಿಜಯ ಜಾಧವ ಮಾತನಾಡಿ, ಕೋವಿಡ್ ಹಿನ್ನೆಲೆಯಲ್ಲಿ ಸರಕಾರ ನೀಡಿರುವ ಮಾರ್ಗಸೂಚಿಗಳನ್ನು ಎರಡು ವರ್ಷಗಳಿಂದ ಪಾಲಿಸಲಾಗಿದೆ. ಆದರೆ ಈ‌ ಬಾರಿ ಐದು ದಿನಗಳಿಗೆ ಮಾತ್ರ ‌ಉತ್ಸವವನ್ನು ಮಿತಿಗೊಳಿಸಿರುವುದಕ್ಕೆ ತಮ್ಮ ವಿರೋಧವಿದೆ ಎಂದು ಹೇಳಿದರು.
ಇನ್ನುಳಿದಂತೆ ಕೋವಿಡ್ ಲಸಿಕೆ ಹಾಕಿಸಿಕೊಳ್ಳುವುದು; ಸೇರಿದಂತೆ ಎಲ್ಲ ನಿಯಮಗಳನ್ನು ಪಾಲಿಸಲಾಗುವುದು. ಆದರೆ ಸಂಪ್ರದಾಯ ಪ್ರಕಾರ ಹತ್ತು ದಿನಗಳ ಉತ್ಸವ ಆಚರಿಸಲು ಅವಕಾಶ ಕಲ್ಪಿಸಬೇಕು ಎಂದು ಮನವಿ ಮಾಡಿಕೊಂಡರು.

ಗಣೇಶೋತ್ಸವ ಐದು‌ ದಿನಗಳಿಗೆ ನಿರ್ಬಂಧಿಸಿರುವುದರಿಂದ ಗೊಂದಲ ಉಂಟಾಗಿದೆ. ಇದನ್ನು ಬಗೆಹರಿಸಬೇಕು ಎಂದು ಸರಕಾರಕ್ಕೆ ಮನವಿ ಮಾಡಿಕೊಂಡರು.
ಶಹಾಪುರ ವಿಭಾಗದ ನೇತಾಜಿ ಜಾಧವ ಮಾತನಾಡಿ, ಗಣೇಶೋತ್ಸವಕ್ಕೆ ಐದು ದಿನಗಳಿಗೆ ಮಿತಿಗೊಳಿಸಿರುವುದು ಚರ್ಚೆಗೆ ಕಾರಣವಾಗಿದೆ.  ಉತ್ಸವಕ್ಕೆ ಕೆಲವೇ ದಿನಗಳಿರುವಾಗ ಈ ರೀತಿಯ ಮಿತಿ‌ ವಿಧಿಸುವ ಮೂಲಕ ಸಂಪ್ರದಾಯಕ್ಕೆ ನಿರ್ಬಂಧ ವಿಧಿಸಿದಂತಾಗಿದೆ. ಅದ್ದರಿಂದ ಈ ಬಗ್ಗೆ ಶೀಘ್ರ ಸೂಕ್ತ ನಿರ್ಧಾರ ಪ್ರಕಟಿಸುವ ಮೂಲಕ ಉಳಿದ‌ ಮಾರ್ಗಸೂಚಿಗಳನ್ನು ಪಾಲಿಸುವ ಮೂಲಕ ಉತ್ಸವ ಆಚರಣೆಗೆ ಅನುಕೂಲ ಕಲ್ಪಿಸಬೇಕು ಎಂದು ಒತ್ತಾಯಿಸಿದರು.

ಏಕಗವಾಕ್ಷಿ ವ್ಯವಸ್ಥೆ ಮೂಲಕ ‌ಗಣೇಶೋತ್ಸವಕ್ಕೆ‌ ಅಗತ್ಯ ಅನುಮತಿಗಳನ್ನು ನೀಡಲು ವಿವಿಧ ಮಹಾಮಂಡಳಿಗಳ ಪದಾಧಿಕಾರಿಗಳು ಮನವಿ ಮಾಡಿಕೊಂಡರು.

ಹಿಂದೂ ಭಕ್ತಾಧಿಗಳ ಸಂಪ್ರದಾಯ ಹಾಗೂ ಭಾವನೆಗಳನ್ನು ಅರ್ಥ ಮಾಡಿಕೊಂಡು ಐದು ದಿನಗಳ ಬದಲಾಗಿ ಹತ್ತು ದಿನಗಳ ಉತ್ಸವಕ್ಕೆ ಅವಕಾಶ ಕಲ್ಪಿಸಬೇಕು ಎಂದು ‌ಎಲ್ಲರೂ ಒಕ್ಕೊರಲಿನಿಂದ ಆಗ್ರಹಿಸಿದರು.
ಪೊಲೀಸ್ ಆಯುಕ್ತ ಡಾ.ಕೆ.ತ್ಯಾಗರಾಜನ್, ಜಿಲ್ಲಾ ಪಂಚಾಯತ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ದರ್ಶನ್, ಬೆಳಗಾವಿ ಉಪ ಪೊಲೀಸ್ ಆಯುಕ್ತರಾದ ಡಾ.ವಿಕ್ರಮ್ ಆಮ್ಟೆ, ಅಪರ ಜಿಲ್ಲಾಧಿಕಾರಿ ಅಶೋಕ ದುಡಗುಂಟಿ, ಮಹಾನಗರ ಪಾಲಿಕೆಯ ಆಯುಕ್ತ ಡಾ.ರುದ್ರೇಶ್ ಘಾಳಿ ಮತ್ತಿತರರು ಉಪಸ್ಥಿತರಿದ್ದರು.
ಬೆಳಗಾವಿ ಮಹಾನಗರದ‌ ವಿವಿಧ ಗಣೇಶೋತ್ಸವ ಮಹಾಮಂಡಳಿಗಳ ಪದಾಧಿಕಾರಿಗಳು, ಮಹಾನಗರ ಪಾಲಿಕೆ, ಪೊಲೀಸ್ ಸೇರಿದಂತೆ ವಿವಿಧ ಇಲಾಖೆಯ ಅಧಿಕಾರಿಗಳು ಸಭೆಯಲ್ಲಿ ಪಾಲ್ಗೊಂಡಿದ್ದರು.

Read These Next

'ಚುನಾವಣಾ ಬಾಂಡ್' ವಿಶ್ವದ ದೊಡ್ಡ ಹಗರಣ; ಬಿಜೆಪಿ ವಿರುದ್ಧ ರಾಹುಲ್‌ ಗಾಂಧಿ ವಾಗ್ದಾಳಿ

ಬಿಜೆಪಿಯ ಚುನಾ ವಣಾ ಬಾಂಡ್ ವಿಶ್ವದ ಅತ್ಯಂತ ದೊಡ್ಡ ಹಗರಣವಾಗಿದ್ದು, ಗೂಂಡಾಗಳ ರೀತಿಯಲ್ಲಿ ಕೆಲವು ಉದ್ಯಮಿಗಳನ್ನು ಬೆದರಿಸಿ ಹಫ್ತಾ ...

ಸಂವಿಧಾನ ಮತ್ತು  ಪ್ರಜಾಪ್ರಭುತ್ವ ಉಳಿಸುವುದಕ್ಕೆ ಕಾಂಗ್ರೆಸ್ ಪಕ್ಷಕ್ಕೆ ಮತ ನೀಡಿ ಎಂದು ರಾಹುಲ್ ಗಾಂಧಿ ಕರೆ

ಮಾಲೂರು : ಈ ಲೋಕಸಭೆ ಚುನಾವಣೆಯು ಎರಡು ಸಿದ್ಧಾಂತಗಳ ನಡುವಿನ ಯುದ್ಧ ಇಂಡಿಯಾ ಬಣ ಒಂದು ಕಡೆ "ಸಂವಿಧಾನಕ್ಕಾಗಿ ಹೋರಾಟ" ನಡೆಸುತ್ತಿದೆ ...

ಉತ್ತರಕನ್ನಡ ಲೋಕಸಭಾ ಕ್ಷೇತ್ರದಲ್ಲಿ ಒಟ್ಟು 19 ಅಭ್ಯರ್ಥಿಗಳಿಂದ 36 ನಾಮಪತ್ರ ಸಲ್ಲಿಕೆ.

ಕಾರವಾರ :12- ಉತ್ತರ ಕನ್ನಡ ಲೋಕಸಭಾ ಕ್ಷೇತ್ರದ ಸಾರ್ವತ್ರಿಕ ಚುನಾವಣೆಗೆ ಸಂಬಂಧಿಸಿದಂತೆ , ನಾಮಪತ್ರಗಳ ಸಲ್ಲಿಕೆಗೆ ಕೊನೆಯ ದಿನವಾದ ...

ಭಟ್ಕಳ : ಈದುಲ್ ಫಿತ್ರ್ ನಿಮಿತ್ತ ಒಂದು ಲಕ್ಷ ಇಪ್ಪತ್ತು ಸಾವಿರಕ್ಕೂ ಅಧಿಕ ಫೀತ್ರ್ ಅಕ್ಕಿ ವಿತರಣೆ

ಭಟ್ಕಳ: ಈದುಲ್ ಫಿತ್ರ್ ಸಂದರ್ಭದಲ್ಲಿ ಪ್ರತಿಯೊಬ್ಬ ಮುಸ್ಲಿಮನು ತನ್ನ ಈದ್ ಹಬ್ಬಕ್ಕೆ ಒಂದು ಮುಂಚೆ ಕಡ್ಡಾಯವಾಗಿ ನೀಡುವ ಫಿತ್ರ್ ...

ಭಟ್ಕಳ ಸ್ಪೋರ್ಟ್ಸ್ ಅಕಾಡೆಮಿ ಮತ್ತು BMYF ಸಹಯೋಗದೊಂದಿಗೆ ಎ.20-21 ರಂದು ಯುವ ಪ್ರತಿಭೆಗಳಿಗಾಗಿ ಇಂಟರ್-ಕ್ರಿಕೆಟ್ ಲೀಗ್ ಆಯ್ಕೆ

ಭಟ್ಕಳ: ಉತ್ತರ ಕನ್ನಡ ಜಿಲ್ಲೆಯ ಉದಯೋನ್ಮುಖ ಕ್ರಿಕೆಟ್ ಪ್ರತಿಭೆಗಳನ್ನು ಗುರುತಿಸುವ ಮತ್ತು ಪೋಷಿಸುವ ಪ್ರಯತ್ನದಲ್ಲಿ, ಭಟ್ಕಳ ...