ಬೆಂಗಳೂರು : ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ಜಾರಿಗೆ ತರುವ ಮಸೂದೆಗೆ ಇಡೀ ದೇಶದಾದ್ಯಂತ ವಿರೋಧ ವ್ಯಕ್ತವಾಗಿದೆ. ಹೀಗಾಗಿ ಸಪ್ಟೆಂಬರ್ 25ಕ್ಕೆ ಬಾರೀ ಪ್ರತಿಭಟನೆಗಳು ಬಂದ್ ನಡೆಸಲು ವಿವಿಧ ಸಂಘಟನೆಗಳು ನಿರ್ಧಾರ ಮಾಡಿವೆ.
ರೈತ ಸಂಘಟನೆಳು, ಕಾರ್ಮಿಕ ಸಂಘಟನೆಗಳು, ದಲಿತ ಸಂಘಟನೆಗಳು, ಕರವೇ ಸೇರಿದಂತೆ 32 ಕ್ಕೂ ಹೆಚ್ಚು ಸಂಘ ಸಂಸ್ಥೆಗಳು ಬಂದ್ ಗೆ ಬೆಂಬಲ ಸೂಚಿಸಿವೆ. ಹೀಗಾಗಿ ಬಂದ್ ನಿಂದ ಜನತೆಗೆ ತೊಂದರೆಎಯಾಗುವ ಸಂಭವವಿದೆ.
ಮಸೂದೆ ವಿರೋಧಿಸಿ ಈಗಾಗಲೆ ಪ್ರತಿಭಟನೆಗಳು ನಡೆಯುತ್ತಿದೆ. ಆದರೆ ಸರ್ಕಾರದ ಯಾವ ಪ್ರತಿನಿಧಿಗಳು ಸ್ಥಳಕ್ಕೆ ಬಂದು ರೈತರ ಅಹವಾಲು ಆಲಿಸಿಲ್ಲ. ಹೀಗಾಗಿ ವ್ಯಾಪಕ ಆಕ್ರೋಶ ವ್ಯಕ್ತವಾಗಿದೆ.
ರೈತರ ಸಮಸ್ಯೆಗಳಿಗೆ ಸರ್ಕಾರ ಸ್ಪಂದಿಸುತ್ತಿಲ್ಲ. ಪ್ರವಾಹದಿಂದ ಬೆಳೆ ನಷ್ಟವಾಗಿದ್ದು ಸಮರ್ಪಕ ಪರಿಹಾರ ಸಿಕ್ಕಿಲ್ಲ. ಬೆಳೆದ ಬೆಳೆಗೆ ಸೂಕ್ತ ಬೆಲೆ ಸಿಗುತ್ತಿಲ್ಲ. ಈ ನಡುವೆ ಮಾರಕ ಕಾಯ್ದೆಗಳನ್ನ ಜಾರಿಗೊಳಿಸಲಾಗುತ್ತಿದೆ ಎಂದು ರೈತ ಸಂಘಟನೆಗಳು ಆಪಾದಿಸಿವೆ.
ಹೀಗಾಗಿ ಇಡೀ ದೇಶದಾದ್ಯಂತ ಸಪ್ಟೆಂಬರ್ 25ರಂದು ಹೆದ್ದಾರಿ ಬಂದ್ ಪ್ರತಿಭಟನೆಗಳು ನಡೆಸಲು ಸಂಘಟನೆಗಳು ನಿರ್ಧರಿಸಿವೆ.