ಸಂವಿಧಾನ ಉಳಿಸುವ ಈ ಮಹತ್ವದ ಚುನಾವಣೆಯಲ್ಲಿ ನಿಷ್ಟೆಯಿಂದ ಕಾಂಗ್ರೇಸ್ ಗೆ ಮತ ನೀಡಿ-ಪದ್ಮನಾಭ ಪುಜಾರಿ

Source: SOnews | By Staff Correspondent | Published on 5th May 2024, 2:57 PM | Coastal News |

 

ಭಟ್ಕಳ: ದೇಶದಲ್ಲಿ ಉಂಟಾಗುತ್ತಿರುವ ಬದಲಾವಣೆಗಳನ್ನು ಗಮನಿಸಿದರೆ ಈ ಬಾರಿಯ ಚುನಾವಣೆ ಸಂವಿಧಾನ ಉಳಿಸುವ ನಿಟ್ಟಿನಲ್ಲಿ ಅತ್ಯಂತ ಮಹತ್ವದ ಚುನಾವಣೆಯಾಗಿದೆ ಎಂದು ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಹಾಗೂ ದ.ಕ. ಲೋಕಸಭಾ ಕ್ಷೇತ್ರದ ಕಾಂಗ್ರೇಸ್ ಅಭ್ಯಾರ್ಥಿ ಪದ್ಮನಾಭ ಪೂಜಾರಿ ಹೇಳಿದರು.

ಅವರು ರವಿವಾರ ಭಟ್ಕಳದ ಬ್ಲಾಕ್ ಕಾಂಗ್ರೇಸ್ ಕಚೇರಿಯಲ್ಲಿ ಪತ್ರಿಕಾಗೋಷ್ಟಿಯನ್ನುದ್ದೇಶಿಸಿ ಮಾತನಾಡಿದರು.

ಕಾಂಗ್ರೇಸ್ ಪಕ್ಷವು ಯಾವತ್ತೂ ದ್ವೇಷವನ್ನು ಸಾಧಿಸಿಲ್ಲ. ಇದು ಪ್ರೀತಿಯ ಸಂದೇಶ ಸಾರುವುದರ ಮೂಲಕ ದೇಶವನ್ನು ವಿಶ್ವಗುರುವನ್ನಾಗಿಸುವ ಕನಸು ಕಾಣುತ್ತಿದೆ. ಸಮಾಜದಲ್ಲಿರುವ ಎಲ್ಲ ಸಮುದಾಯಗಳನ್ನು ಒಟ್ಟಿಗೆ ತೆಗೆದುಕೊಂಡು ದೇಶಕಟ್ಟುವ ಪ್ರಯತ್ನದಲ್ಲಿದೆ ಎಂದರು. ಉ.ಕ ಕ್ಷೇತ್ರದಲ್ಲಿ ಕಳೆದ ಮೂವತ್ತು ವರ್ಷಗಳಿಂದ ಬಿಜೆಪಿ ಸಂಸದರಿದ್ದು ಯಾವುದೇ ಪ್ರಯೋಜವಾಗಿಲ್ಲ. ಇಲ್ಲಿನ ರಸ್ತೆಗಳನ್ನು ಕಂಡರೆ ಇಲ್ಲಿ ಒಂದಿಂಚೂ ಅಭಿವೃದ್ಧಿಯಾಗಿಲ್ಲ ಎಂದು ಆರೋಪಿಸಿದ ಅವರು, ಈ ಮೂವತ್ತು ವರ್ಷಗಳಲ್ಲಿ ಸಂವಿಧಾನವನ್ನು ವಿರೋಧಿಸುತ್ತ, ಧರ್ಮ, ಜಾತಿಗಳ ನಡುವೆ ಕಂದಕವನ್ನುಂಟು ಮಾಡುವ ಕೆಲಸ ಮಾಡಿದ್ದು ಬಿಟ್ಟರೆ, ಅಭಿವೃದ್ಧಿಯ ವಿಷಯದಲ್ಲಿ ಪ್ರಶ್ನೆಗಳನ್ನು ಕೇಳಿದರೆ ಅವರ ಬಳಿ ಯಾವುದೇ ಉತ್ತರವಿಲ್ಲ ಎಂದು ಪರೋಕ್ಷವಾಗಿ ಅನಂತ್ ಕುಮಾರ್ ಹೆಗಡೆಯವರ ಹೆಸರು ಉಲ್ಲೇಖಿಸಿದೆ ಅವರ ವಿರುದ್ಧ ವಾಗ್ದಾಳಿ ನಡೆಸಿದರು. ನಾನು ಕಳೆದ ಎರಡು ದಿನಗಳಿಂದ ಉ.ಕ ಲೋ.ಸ ಕ್ಷೇತ್ರದಲ್ಲಿ ಸುತ್ತಾಡುತ್ತಿದ್ದೇನೆ. ಜನರ ಬದುಕು, ಇಲ್ಲಿನ ಹಳ್ಳಿಗಾಡು ಪ್ರದೇಶ, ಇಲ್ಲಿನ ಪರಿಸ್ಥಿತಿ ಕಂಡರೆ ನನಗೆ ದುಖಃ ಮತ್ತು ಬೇಸರವಾಗುತ್ತಿದೆ. ಈ ಜಿಲ್ಲೆ ಇಷ್ಟೊಂದು ಹಿಂದೆ ಬೀಳಲು ಯಾರು ಕಾರಣರು? ಕಳೆದ ೩೦ ವರ್ಷಗಳಿಂದ ಇಲ್ಲಿ ಸಂಸದರಾಗಿದ್ದವರು ಹಾಗೂ ಅವರ ಪಕ್ಷವೇ ಇದಕ್ಕೆ ನೇರ ಹೊಣೆಯಾಗಿದೆ ಎಂದ ಅವರು, ಸಧ್ಯ ಕರಾವಳಿ ಜಿಲ್ಲೆಗಳಲ್ಲಿ ಕಾಂಗ್ರೇಸ್ ಪಕ್ಷದ ಪರವಾದ ಗಾಳಿ ಬೀಸುತ್ತಿದೆ. ದೇಶದ ಜನರು ಬದಲಾವಣೆಯನ್ನು ಬಯಸುತ್ತಿದ್ದಾರೆ ಎಂದರು.

ಕಾರ್ಕಳ ವಿಧಾನಸಭಾ ಕ್ಷೇತ್ರದ ಪರಾಜಿತ ಅಭ್ಯರ್ಥಿ ಹಾಗೂ ಕಾಂಗ್ರೇಸ್ ಮುಖಂಡ ಉದಯಕುಮಾರ್ ಶೆಟ್ಟಿ, ಭಟ್ಕಳ ಬ್ಲಾಕ್ ಕಾಂಗ್ರೇಸ್ ಅಧ್ಯಕ್ಷ ವೆಂಕಟೇಶ್ ನಾಯ್ಕ ಮಾತನಡಿದರು.

ಕಾಂಗ್ರೇಸ್ ಪಕ್ಷದ ಮುಖಂಡರಾದ ಗೋಪಾಲ್ ನಾಯ್ಕ, ಈಶ್ವರ ಮೊಗೇರ್, ಸುರೇಶ್ ನಾಯ್ಕ, ಮಂಜಪ್ಪ ನಾಯ್ಕ, ರಮೇಶ್ ನಾಯ್ಕ, ದೇವಿದಾಸ್ ಆಚಾರಿ ಸುಧಾಕರ್ ನಾಯ್ಕ ಮತ್ತಿತರರು ಇದ್ದರು.

 

Read These Next

ಆಹಾರ ಪದಾರ್ಥಗಳ ತಯಾರಿಕೆಯಲ್ಲಿ ರಾಸಾಯನಿಕ ಬಳಕೆ ಕುರಿತು ವ್ಯಾಪಕವಾಗಿ ಪರಿಶೀಲಿಸಿ : ಜಿಲ್ಲಾಧಿಕಾರಿ

ಕಾರವಾರ :ಜಿಲ್ಲೆಯಲ್ಲಿನ ಆಹಾರ ತಯಾರಿಕಾ ಘಟಕಗಳು, ಬೀದಿ ಬದಿ ವ್ಯಾಪಾರಿಗಳು ತಯಾರಿಸುವ ಆಹಾರ ಪದಾರ್ಥಗಳಲ್ಲಿ ಸಾರ್ವಜನಿಕರ ಆರೋಗ್ಯದ ...

ಮಳೆಗಾಲದಲ್ಲಿ ಮುನ್ನೆಚ್ಚರಿಕೆ; ಸಾಂಕ್ರಾಮಿಕ ರೋಗಗಳು ಹರಡದಂತೆ ಎಚ್ಚರವಹಿಸಲು ಆರೋಗ್ಯ ಇಲಾಖೆಗೆ ಜಿಲ್ಲಾಧಿಕಾರಿ ಸೂಚನೆ

ಮಳೆಗಾಲದಲ್ಲಿ ಕಂಡು ಬರಬಹುದಾದ ಡೆಂಗಿ, ಚಿಕುನ್ ಗುನ್ಯಾ, ಮಲೇರಿಯಾ, ಮಿದುಳು ಜ್ವರ ಮತ್ತಿತರ ರೋಗಗಳ ಲಕ್ಷಣಗಳು, ಅವುಗಳ ಹರಡುವಿಕೆ ಹಾಗೂ ...

ಸರ್ಕಾರದಿಂದ ಕೋಟಿಗಟ್ಟಲೆ ಅನುದಾನ ಬಂದರೂ ತೀವ್ರ ಕುಡಿಯುವ ನೀರಿನ ಸಮಸ್ಯೆ ಎದುರಿಸುತ್ತಿರುವ ಭಟ್ಕಳ ತಾಲೂಕು

ನೀರಿನ ಸಮಸ್ಯೆಯಿಂದಾಗಿ ಭಟ್ಕಳದ ನಗರ ಮತ್ತು ಗ್ರಾಮೀಣ ಪ್ರದೇಶಗಳ ನಿವಾಸಿಗಳು ಟ್ಯಾಂಕರ್ ಮೂಲಕ ಸರಬರಾಜು ಮಾಡುವ ನೀರಿಗಾಗಿ ಸರತಿ ...

ಎಸ್.ಎಸ್.ಎಲ್.ಸಿ ಪುನರ್ಬಲನ ತರಗತಿ; ಶಿಕ್ಷಕರ ಹಿತ ಕಾಪಾಡುವಂತೆ ಐಟಾ (AIITA) ದಿಂದ ಸರ್ಕಾರಕ್ಕೆ ಮನವಿ

ಗೌರವಾನ್ವಿತ ಪ್ರಧಾನ ಕಾರ್ಯದರ್ಶಿಯವರಿಗೆ ಸಮಗ್ರ ಮನವಿಯನ್ನು ಸಲ್ಲಿಸಿದ ಕರ್ನಾಟಕ ರಾಜ್ಯ ಪ್ರೌಢಶಾಲಾ ಸಹ ಶಿಕ್ಷಕರ ಸಂಘ ಬೆಂಗಳೂರು ...