ಪಡುಬಿದ್ರಿ: ವೇಗವಾಗಿ ಚಲಿಸುತ್ತಿದ್ದ ಟ್ಯಾಂಕರ್ ಸ್ಕೂಟರ್ ಗೆ ಡಿಕ್ಕಿ ಹೊಡೆದ ಪರಿಣಾಮ ಸ್ಕೂಟರ್ ಸವಾರ ಸ್ಥಳದಲ್ಲೇ ಮೃತಪಟ್ಟ ಘಟನೆ ಶನಿವಾರ ಉಡುಪಿ ಜಿಲ್ಲೆಯ ಹೆಜಮಾಡಿ ಸರಹದ್ದಿನ ರಾ.ಹೆ.ಯಲ್ಲಿ ಸಂಭವಿಸಿದೆ.
ಘಟನೆಯಲ್ಲಿ ಮೃತ ವ್ಯಕ್ತಿಯನ್ನು ನೇಜಾರು ನಿವಾಸಿ ಜಯರಾಜ್(೫೫) ಎಂದು ಗುರುತಿಸಲಾಗಿದೆ.
ಟ್ಯಾಂಕರ್ ಪಣಂಬೂರಿನಿಂದ ಮೈಸೂರಿಗೆ ಸನ್ ಪ್ಲವರ್ ಎಣ್ಣೆ ಸಾಗಿಸುತ್ತಿದ್ದ ಟ್ಯಾಂಕರ್ ಡಿವೈಡರ್ ಏರಿ ಮತ್ತೋಂದು ಪಾಶ್ವಕ್ಕೆ ಬಂದು ಡಿಕ್ಕಿ ಹೊಡದ ಪರಿಣಾಮ ಈ ದುರ್ಘಟನೆ ಸಂಭವಿಸಿದೆ ಎನ್ನಲಾಗಿದೆ.ಡಿಕ್ಕಿಯ ರಭಸಕ್ಕೆ ಬೈಕಸವಾರನ ಶರೀರ ಟ್ಯಾಂಕರ್ ನಡಿ ಸಿಲುಕಿಕೊಂಡಿದ್ದು ಟ್ಯಾಂಕರ್ ಚಾಲಕನ ನಿರ್ಲಕ್ಷ್ಯವೇ ಅಪಘಾತಕ್ಕೆ ಕಾರಣ ಎಂದು ಹೇಳಲಾಗುತ್ತಿದೆ.
ಪಡುಬಿದ್ರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.