ಶಿವಮೊಗ್ಗ : ರಾಜ್ಯದ ಕೆಲ ಜಿಲ್ಲೆಗಳಲ್ಲಿ ರಾತ್ರಿ ಭೂಕಂಪನದ ಅನುಭವವಾಗಿದೆ.
ಚಿಕ್ಕಮಗಳೂರು, ದಾವಣಗೆರೆ ಶಿವಮೊಗ್ಗ ಹಾಗೂ ಉತ್ತರಕನ್ನಡ ಜಿಲ್ಲೆಯ ಕೆಲ ಭಾಗಗಳಲ್ಲಿ ಜನ ಮನೆಯಿಂದ ಓಡಿ ಹೊರಬಂದ ಘಟನೆ ನಡೆದಿದೆ.
ಗುರುವಾರ ರಾತ್ರಿ 10:20 ರ ರಾತ್ರಿ ಸುಮಾರಿಗೆ ಉತ್ತರಕನ್ನಡ ಜಿಲ್ಲೆಯ ಸಿದ್ದಾಪುರದ ಹೊಸೂರು, ಕೊಂಡ್ಲಿ, ಗುಂಜಗೋಡು, ಮಾವಿನಗುಂಡಿ, ಗೇರುಸೊಪ್ಪದಲ್ಲೂ ಬಾಂಬ್ ಸಿಡಿದಂತೆ ಸದ್ದು ಕೇಳಿದ್ದು ಜನ ಬೆಚ್ಚಿ ಬಿದ್ದಿದ್ದಾರೆ. ಆದರೆ ಹಾನಿಯಾದ ಬಗ್ಗೆ ವರದಿಯಾಗಿಲ್ಲ.