ಹೆಣ್ಣು ಮಗುವಿನ ಕಾಳಜಿ ಬಗ್ಗೆ ಪಾಲಕರಲ್ಲಿ ಅರಿವು ಅವಶ್ಯ - ಶಾಸಕರಾದ ನೆಹರು ಓಲೇಕಾರ

Source: S.O. News Service | Published on 21st January 2020, 7:24 PM | State News | Don't Miss |

ಹಾವೇರಿ : ಪಾಲಕರು ಹೆಣ್ಣು ಮಗುವಿಗೆ ಶಿಕ್ಷಣ ಒದಗಿಸಿ ಉತ್ತಮ ಭವಿಷ್ಯ ರೂಪಿಸಬೇಕು. ಹೆಣ್ಣು ಮಗುವಿನ ಬಗ್ಗೆ ಪ್ರತಿಯೊಬ್ಬ ಪಾಲಕರಿಗೂ ಕಾಳಜಿ ಹಾಗೂ ಅರಿವು ಅವಶ್ಯ ಎಂದು ಶಾಸಕರಾದ ನೆಹರು ಓಲೇಕಾರ ಅವರು ಹೇಳಿದರು.
ನಗರದ ಜಿಲ್ಲಾ ಕ್ರೀಡಾಂಗಣದಲ್ಲಿ ಮಂಗಳವಾರ ನಡೆದ ಜಿಲ್ಲಾ ಆಡಳಿತ, ಜಿಲ್ಲಾ ಪಂಚಾಯತ್, ಸಾರ್ವಜನಿಕ ಶಿಕ್ಷಣ ಇಲಾಖೆ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಪೋಲಿಸ್ ಇಲಾಖೆ, ಶಿಶು ಅಭಿವೃದ್ಧಿ ಯೋಜನೆ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಹಾವೇರಿ ಇವರ ಸಂಯುಕ್ತಾಶ್ರಯದಲ್ಲಿ ಹೆಣ್ಣು ಮಗುವನ್ನು ರಕ್ಷಿಸಿ ಹೆಣ್ಣು ಮಗುವನ್ನು ಓದಿಸಿ ಜಾಗೃತಿ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.
ಸಮಾಜದಲ್ಲಿ ಹೆಣ್ಣುಮಗುವನ್ನು ಗೌರವಿಸಬೇಕು. ಭ್ರೂಣ ಹತ್ಯೆ ತಡೆಗಟ್ಟಿ ಹೆಣ್ಣುಮಗುವನ್ನು ರಕ್ಷಿಸಬೇಕು. ಹೆಣ್ಣು ಮಗುವಿನ ಉತ್ತಮ ಭವಿಷ್ಯಕ್ಕಾಗಿ ರಾಜ್ಯಸರ್ಕಾರದಿಂದ ಭಾಗ್ಯಲಕ್ಷ್ಮೀ ಯೋಜನೆಯನ್ನು ಜಾರಿಗೆ ತರಲಾಗಿದೆ. ಹೆಣ್ಣು ಮಗುವಿಗೆ 18 ವರ್ಷವಾದಾಗ ಒಂದು ಲಕ್ಷ ರೂ.ಗಳ ಬಾಂಡ್‍ನ್ನು ಸರ್ಕಾರದಿಂದ ನೀಡಲಾಗುತ್ತಿದೆ. ಈ ಯೋಜನೆ ಜಾರಿಗೆ ಬಂದ ಮೇಲೆ ಭ್ರೂಣ ಹತ್ಯೆ ಕಡಿಮೆಯಾಗಿದೆ. ಮಹಿಳೆಯರನ್ನು ಮುಖ್ಯವಾಹಿನಿಗೆ ತರಲು ಸಹಕಾರಿಯಾಗಿದೆ ಎಂದು ಅವರು ಹೇಳಿದರು.
ಬೇಟಿ ಬಚಾವೋ ಬೇಟಿ ಪಡಾವೋ ಜಾಗೃತಿಗಾಗಿ ನಗರದ ಪ್ರಮುಖ ಬೀದಿಗಳಲಿ ಜಾಥಾದ ಮೂಲಕ ಜಾಗೃತಿ ಮೂಡಿಸಲಾಯಿತು.
ಸಂಚಾರ ಮಾಡಿ ಪಾಲಕರಲ್ಲಿ ಹಾಗೂ ಸಾರ್ವಜನಿಕರಲ್ಲಿ ಹೆಣ್ಣು ಮಗುವಿನ ರಕ್ಷಣೆಯ ಇದರ ಸದುಪಯೋಗವನ್ನು ಸಾರ್ವಜನಿಕರು ಪಡೆದುಕೊಳ್ಳಬೇಕು ಎಂದು ಹೇಳಿದರು.
ಕಾರ್ಯಕ್ರಮದಲ್ಲಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪನಿರ್ದೇಶಕ ಪಿ.ವೈ.ಶೆಟ್ಟೆಪ್ಪನವರ, ಜಿಲ್ಲಾ ವಿಕಲಚೇತನರ ಕಲ್ಯಾಣಾಧಿಕಾರಿ ಮಲ್ಲಿಕಾರ್ಜುನ ಮಠದ, ಕ್ಷೇತ್ರ ಶಿಕ್ಷಣಾಧಿಕಾರಿ ಎಂ.ಹೆಚ್.ಪಾಟೀಲ, ಬಿಇಓ , ಬಾಲವಿಕಾಸ ಯೋಜನಾಧಿಕಾರಿ ಉಮಾ ಮತ್ತಿತರರು ಭಾಗವಹಿಸಿದ್ದರು.
ಜಾಥಾ: ಜಾಗೃತಿ ಜಾಥಾದಲ್ಲಿ ನಗರದ ಮುನ್ಸಿಪಲ್ ಹೈಸ್ಕೂಲ್, ಶ್ರೀ ಮಂಜುನಾಥ ಪ್ರೌಢಶಾಲೆ, ಸರ್ಕಾರಿ ಉರ್ದು ಪ್ರೌಢಶಾಲೆ, ಸರ್.ಎಂ. ವಿಶ್ವೇಶ್ವರಯ್ಯ ಇಂಗ್ಲೀಷ್ ಮಿಡಿಯಂ ಪ್ರೈಮರಿ ಮತ್ತು ಹೈಸ್ಕೂಲ್ ಸೇರಿದಂತೆ ವಿವಿಧ ಶಾಲೆಯ ಶಿಕ್ಷಕರು ಹಾಗೂ ವಿದ್ಯಾರ್ಥಿಗಳು ಪಾಲ್ಗೋಂಡಿದ್ದರು.
ವಿದ್ಯಾರ್ಥಿಗಳು ಹೆಣ್ಣು ಮಗುವನ್ನು ಓದಿಸಿ, ಬಾಲ್ಯವಿವಾಹ ಮಾಡಬೇಡಿ ಶಿಕ್ಷೆಗೆ ಗುರಿಯಾಗಬೇಡಿ, ಬಾಲ್ಯವಿವಾಹ ತಡೆಗಟ್ಟಿ ಮಕ್ಕಳ ಬಾಳನ್ನು ಬೆಳಗಿಸಿ, ಶಿಕ್ಷಣ ನನ್ನ ಮೂಲಬೂತ ಹಕ್ಕು, ಮಕ್ಕಳ ಬಾಲ್ಯವನ್ನು ಬಲಿಕೊಡಬೇಡಿ ಎಂಬ ವಿವಿಧ ಘೋಷವಾಕ್ಯಗಳ ಜಾಗೃತಿ ಫಲಕಗಳನ್ನು ಹಿಡಿದು ಜಾಗೃತಿ ಮೂಡಿಸದರು.

 

Read These Next

ರೇಪಿಷ್ಟ್ ಗಳ ಜೊತೆ ಬಿಜೆಪಿ ಹೊಂದಾಣಿಕೆ;  ಹೆಣ್ಣುಮಕ್ಕಳಿಗೆ ರಕ್ಷಣೆ ಕೊಡುವುದು ಅಂದರೆ ಇದೇನಾ? -ಸಿದ್ಧರಾಮಯ್ಯ

ಕುಮಟಾ: ಪ್ರಜ್ವಲ್ ರೇವಣ್ಣ ವಿಡಿಯೋ ಪ್ರಕರಣದ ಬಗ್ಗೆ ಗೊತ್ತಿದ್ದೂ ಬಿಜೆಪಿ ಜೆಡಿಸ್ ಜೊತೆ ಹೊಂದಾಣಿಕೆ ಮಾಡಿಕೊಂಡಿದೆ. ಇದೇನಾ ...

ಮುಂಡಗೋಡ: ಮೋದಿ ಸುಳ್ಳುಗಳ ಸರದಾರ, ಬಿಜೆಪಿ ಸುಳ್ಳಿನ ಕಾರ್ಖಾನೆ: ಸಿದ್ದರಾಮಯ್ಯ ವಾಗ್ದಾಳಿ

ಯುವಕರು ಕೆಲಸ ಕೊಡಿ ಎಂದರೆ ಪಕೋಡಾ ಮಾರಲು ಹೋಗಿ ಎಂದು ಪ್ರಧಾನಿ ಮೋದಿಯವರು ವಿದ್ಯಾವಂತ ಯುವಜನರಿಗೆ ಬೇಜವಾಬ್ದಾರಿ ಹೇಳಿಕೆ ಕೊಟ್ಟರು. ...

ಅತಿಕ್ರಮಣದಾರರ ವಿಚಾರದಲ್ಲೂ ಬಿಜೆಪಿಯಿಂದ ರಾಜಕೀಯ; ಮುಂಡಗೋಡದಲ್ಲಿ ಡಿಕೆಶಿ ವಾಗ್ದಾಳಿ

ರೈತರ ವಿಚಾರದಲ್ಲಿ ಬಿಜೆಪಿ ರಾಜಕಾರಣ ಮಾಡುತ್ತಿದೆ. ಆದಾಯ ಡಬಲ್ ಮಾಡುತ್ತೇವೆಂದು ಹೇಳಿ ರೈತರಿಗೆ ಮರಳು ಮಾಡಿದೆ. ಅತಿಕ್ರಮಣದಾರರ ...