ಶಿರಸಿ/ಅಂಕೋಲಾ : ಉತ್ತರ ಕನ್ನಡ ಜಿಲ್ಲೆಯಲ್ಲಿ ಪೆಟ್ರೋಲ್ 100 ರೂ. ಡೀಸೆಲ್ 93 ರೂ. ದಾಟಿದ ಹಿನ್ನೆಲೆಯಲ್ಲಿ ಹಲವೆಡೆ ಪ್ರತಿಭಟನೆ ನಡೆಸಲಾಗಿದೆ.
ಶಿರಸಿಯಲ್ಲಿ ಕಾಂಗ್ರೆಸ್ ಮುಖಂಡ ರವೀಂದ್ರ ನಾಯ್ಕ ಮನೆಯ ಆವರಣದಲ್ಲಿ ಗಂಟೆ ಬಡಿದು ಪ್ರತಿಭಟಿಸಿದ್ದಾರೆ. ಅಂಕೋಲಾದಲ್ಲೂ ಕೂಡ ಸಿಪಿಐ(ಎಂ) ಜಿಲ್ಲಾ ಸಮಿತಿ ಕಾರ್ಯದರ್ಶಿ ಶಾಂತಾರಾಮ ನಾಯಕ ತಟ್ಟೆ ಬಡಿದು ಮನೆಯಿಂದಲೇ ಪ್ರತಿಭಟನೆ ನಡೆಸಿದರು.
ಕೇಂದ್ರ ಮತ್ತು ರಾಜ್ಯ ಸರಕಾರಗಳ ವಿಪರೀತ ಸುಂಕ ಏರಿಕೆಯಿಂದ ಪೆಟ್ರೋಲಿಯಂ ಪದಾರ್ಥಗಳ ಬೆಲೆ ಗಗನಕ್ಕೆ ಏರುತ್ತಿದೆ. ಇದರ ಪರಿಣಾಮವಾಗಿ ನಿತ್ಯೋಪಯೋಗಿ ವಸ್ತುಗಳ ಬೆಲೆ ತೀವ್ರ ಏರಿಕೆ ಕಂಡಿದೆ. ಸಾಮಾನ್ಯ ಜನರ ಸಂಕಷ್ಟ ತೀವ್ರವಾಗಿದೆ. ಕರೋನಾದಿಂದ ರೈತರು, ಕಾರ್ಮಿಕರು, ಕೂಲಿಕಾರರು, ಆದಿವಾಸಿಗಳು ಹೀಗೆ ಎಲ್ಲಾ ವಿಭಾಗದ ಜನರು ಸಂಕಷ್ಟ ದಲ್ಲಿದ್ದಾಗ ಬೆಲೆ ಏರಿಕೆ ಇನ್ನಷ್ಟು ಸಂಕಷ್ಟವನ್ನು ತಂದೊಡ್ಡಿದೆ. ಕೇಂದ್ರ ಮತ್ತು ರಾಜ್ಯ ಸರಕಾರಗಳು ಜನತೆಯ ಬದುಕನ್ನು ಉಳಿಸಲು ಬೆಲೆ ಏರಿಕೆಗೆ ಕಡಿವಾಣ ಹಾಕಬೇಕು , ಸುಂಕ ಕಡಿಮೆ ಮಾಡಬೇಕೆಂದು ಸಿಪಿಐ(ಎಂ) ಜಿಲ್ಲಾ ಸಮಿತಿ ಒತ್ತಾಯಿಸಿದೆ.