ಕೋವಿಡ್ನಿಂದ ಅನಾಥರಾದ ಮಕ್ಕಳ ನೆರವಿಗೆ 'ಪಿಎಂ ಕೇರ್ಸ್
ನವದೆಹಲಿ: ಕೋವಿಡ್ನಿಂದ ತಂದೆ-ತಾಯಿಯರನ್ನು ಕಳೆದುಕೊಂಡು ಅನಾಥರಾದ ಮಕ್ಕಳಿಗೆ 'ಪಿಎಂ ಕೇರ್ಸ್' ಅಡಿಯಲ್ಲಿ ನೆರವು ನೀಡುವುದಾಗಿ ಕೇಂದ್ರ ಸರ್ಕಾರ ಹೇಳಿದೆ.
ಅನಾಥರಾದ ಮಕ್ಕಳಿಗೆ 18 ವರ್ಷ ತುಂಬುತ್ತಲೇ ಪ್ರತಿ ತಿಂಗಳು ಸ್ಟೈಫಂಡ್ ನೀಡಲಾಗುವುದು. 23 ವರ್ಷ ತುಂಬಿದ ನಂತರ ಪಿಎಂ ಕೇರ್ಸ್ನಿಂದ ₹10 ಲಕ್ಷ ನಗದು ನೀಡಲಾಗುವುದು ಎಂದು ಕೇಂದ್ರ ತಿಳಿಸಿದೆ.
ಉನ್ನತ ಶಿಕ್ಷಣ ಪಡೆಯುಲು ಮುಂದಾಗುವ ಮಕ್ಕಳಿಗೆ ಶಿಕ್ಷಣ ಸಾಲದ ವ್ಯವಸ್ಥೆ ಮಾಡಲಾಗುವುದು. ಆದರೆ, ಬಡ್ಡಿಯನ್ನು ಕೇಂದ್ರ ಸರ್ಕಾರ ಪಾವತಿ ಮಾಡಲಿದೆ.
ಕೋವಿಡ್ನಿಂದ ಅನಾಥರಾದ ಮಕ್ಕಳು 18 ವರ್ಷದವರಾಗುವವರೆಗೆ ಅವರಿಗೆ ₹5ಲಕ್ಷ ಮೊತ್ತದ ಆರೋಗ್ಯ ವಿಮೆ ಸೌಲಭ್ಯ ಒದಗಿಸಲಾಗುವುದು. ಅದರ ಪ್ರೀಮಿಯಮ್ ಮೊತ್ತವನ್ನು ಪಿಎಂ ಕೇರ್ಸ್ನಿಂದ ನೀಡಲಾಗುತ್ತದೆ ಎಂದು ಕೇಂದ್ರ ಹೇಳಿದೆ.
'ಸಾಂಕ್ರಾಮಿಕ ರೋಗ ಕೋವಿಡ್ ದೇಶದಲ್ಲಿ 577 ಮಕ್ಕಳ ಅನಾಥರನ್ನಾಗಿಸಿದೆ. ತಂದೆ ತಾಯಿರನ್ನು ಕಳೆದುಕೊಂಡ ಆ ಮಕ್ಕಳು ತಮ್ಮ ಹತ್ತಿರದ ಸಂಬಂಧಿಗಳ ಆರೈಕೆಯಲ್ಲಿದ್ದಾರೆ,' ಎಂದು ಕೇಂದ್ರ ಸರ್ಕಾರದ ಉನ್ನತ ಮೂಲಗಳು ಮಾಹಿತಿ ನೀಡಿವೆ.