ಹೊಸದಿಲ್ಲಿ: ಎಲ್ಲರಿಗೂ ಉಚಿತ ಲಸಿಕೆ ಮೋದಿ ಘೋಷಣೆ

Source: VB | By S O News | Published on 9th June 2021, 6:50 AM | National News |

ಹೊಸದಿಲ್ಲಿ: ಸೋಮವಾರ ರಾಷ್ಟ್ರವನ್ನುದ್ದೇಶಿಸಿ ಭಾಷಣ ಮಾಡಿದ ಪ್ರಧಾನಿ ನರೇಂದ್ರ ಮೋದಿ ಅವರು, ಜೂ.21ರಿಂದ 18 ವರ್ಷ ಮೇಲ್ಪಟ್ಟ ಎಲ್ಲರಿಗೂ ಲಸಿಕೆಗಳನ್ನು ನೀಡಲು ಕೇಂದ್ರ ಸರಕಾರವು ರಾಜ್ಯಗಳಿಗೆ ಉಚಿತ ಕೋವಿಡ್ ಲಸಿಕೆಯನ್ನು ಪೂರೈಸಲಿದೆ ಎಂದು ಪ್ರಕಟಿಸಿದರು. ಮುಂದಿನ ದಿನಗಳಲ್ಲಿ ದೇಶದಲ್ಲಿ ಲಸಿಕೆ ಪೂರೈಕೆಯು ಗಣನೀಯವಾಗಿ ಹೆಚ್ಚಲಿದೆ ಎಂದು ಅವರು ಒತ್ತಿ ಹೇಳಿದರು.

ಲಸಿಕೆ ತಯಾರಕರ ಒಟ್ಟು ಉತ್ಪಾದನೆಯ ಶೇ.75ರಷ್ಟನ್ನು ಕೇಂದ್ರ ಸರಕಾರವೇ ಖರೀದಿಸಲಿದೆ ಮತ್ತು ಅದನ್ನು ರಾಜ್ಯ ಸರಕಾರಗಳಿಗೆ ಉಚಿತವಾಗಿ ನೀಡಲಿದೆ ಎಂದರು.

ಲಸಿಕೆ ರಾಜಕೀಯದಲ್ಲಿ ತೊಡಗಿಕೊಂಡಿರುವುದಕ್ಕಾಗಿ ಪ್ರತಿಪಕ್ಷ ಆಡಳಿತದ

ಜೂ.21ರಿಂದ 18 ವರ್ಷ ಮೇಲ್ಪಟ್ಟ ಎಲ್ಲರಿಗೂ ಲಸಿಕೆ ನೀಡಿಕೆ.

ದೇಶದ 80 ಕೋಟಿ ಜನರಿಗೆ ಉಚಿತ ಪಡಿತರ ದೀಪಾವಳಿವರೆಗೆ ವಿಸ್ತರಣೆ.

ಕೇಂದ್ರದಿಂದಲೇ ಲಸಿಕೆ ಖರೀದಿಸಿ ರಾಜ್ಯಗಳಿಗೆ ವಿತರಣೆ.

ಶೇ.25ರಷ್ಟು ಲಸಿಕೆಗಳ ಖರೀದಿಗೆ ಖಾಸಗಿ ಆಸ್ಪತ್ರೆಗಳಿಗೆ ಅವಕಾಶ. ಪ್ರತಿ ಡೋಸ್‌ಗೆ ಲಸಿಕೆಯ ನಿಗದಿತ ಬೆಲೆಯ ಜೊತೆಗೆ 150 ರೂ.ಗಿಂತ ಹೆಚ್ಚಿನ ಸೇವಾಶುಲ್ಕವನ್ನು ಪಡೆಯುವಂತಿಲ್ಲ.

ರಾಜ್ಯಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ ಅವರು, ದೇಶದಲ್ಲಿ ಕೊರೋನ ವೈರಸ್ ಪ್ರಕರಣ ಗಳು ಇಳಿಕೆಯಾಗುತ್ತಿರುವ ಮಧ್ಯೆಯೇ ಕೇಂದ್ರಕ್ಕೆ ವಿವಿಧ ಸಲಹೆಗಳು, ವಿವಿಧ ಬೇಡಿಕೆಗಳು ಬರಲು ಆರಂಭವಾಗಿದ್ದು ಎಂದು ಲಸಿಕೆ ನೀಡಿಕೆ ಪ್ರಕ್ರಿಯೆಯ ವಿಕೇಂದ್ರೀಕರಣಕ್ಕಾಗಿ ವಿವಿಧ ರಾಜ್ಯ ಸರಕಾರಗಳಿಂದ ಆಗ್ರಹಗಳನ್ನು ಪ್ರಸ್ತಾಪಿಸಿ ಹೇಳಿದರು. ಲಸಿಕೆ ನೀಡಿಕೆಗೆ ವಯಸ್ಸನ್ನು ಕೇಂದ್ರವು ನಿರ್ಧರಿಸುವುದಕ್ಕೆ ವಿರೋಧವೂ ವ್ಯಕ್ತವಾಗಿತ್ತು ಎಂದರು.

ಈ ವರ್ಷದ ಜ.16ರಿಂದ ಆರಂಭಿಸಿ ಎಪ್ರಿಲ್ ಅಂತ್ಯದವರೆಗೆ ಮುಖ್ಯವಾಗಿ ಕೇಂದ್ರ ಸರಕಾರದ ಉಸ್ತುವಾರಿಯಲ್ಲಿ ಲಸಿಕೆ ಕಾರ್ಯಕ್ರಮವನ್ನು ನಡೆಸಲಾಗಿದೆ ಎಲ್ಲರಿಗೂ ಉಚಿತ ಲಸಿಕೆ ಒದಗಿಸುವ ನಿಟ್ಟಿನಲ್ಲಿ ದೇಶವು ಮುನ್ನಡೆದಿದೆ. ದೇಶದ ಜನರು ಶಿಸ್ತನ್ನು ಪಾಲಿಸಿ ತಮ್ಮ ಸರದಿ ಬಂದಾಗ ಲಸಿಕೆಯನ್ನು ಪಡೆದುಕೊಳ್ಳುತ್ತಿದ್ದಾರೆ ಎಂದ ಮೋದಿ ಇನ್ನು ಮುಂದೆ ಲಸಿಕೆ ನೀಡಿಕೆಗೆ ಸಂಬಂಧಿಸಿದಂತೆ ರಾಜ್ಯಗಳ ಹೊಣೆಗಾರಿಕೆಯ ಶೇ.25ರಷ್ಟನ್ನು ಸಹ ಭಾರತ ಸರಕಾರವು ವಹಿಸಿಕೊಳ್ಳಲಿದೆ. ಮುಂದಿನ ಎರಡು ವಾರಗಳಲ್ಲಿ ಈ ವ್ಯವಸ್ಥೆ ಅನುಷ್ಠಾನಗೊಳ್ಳಲಿದೆ ಎಂದರು.

ಸಾಂಕ್ರಾಮಿಕದ ಹಿನ್ನೆಲೆಯಲ್ಲಿ ದೇಶದ 80 ಕೋಟಿ ಜನರಿಗೆ ಉಚಿತ ಪಡಿತರ

ಕೊರೋನ ಪ್ರಕರಣಗಳು ಕಡಿಮೆಯಾಗುವುದರೊಂದಿಗೆ ಹಲವಾರು ರಾಜ್ಯಗಳು ಲಾಕ್‌ಡೌನ್ ಹಿಂದೆಗೆದುಕೊಳ್ಳುವ ಮತ್ತು ನಿರ್ಬಂಧಗಳನ್ನು ಸಡಿಲಿಸುವ ನಿಟ್ಟಿನಲ್ಲಿ ಎಚ್ಚರಿಕೆಯ ಹೆಜ್ಜೆಗಳನ್ನಿರಿಸುತ್ತಿವೆ. ಲಸಿಕೆಯು ವೈರಸ್‌ನ ವಿರುದ್ಧ ರಕ್ಷಾ ಕವಚವಾಗಿದೆ ಮತ್ತು ಮುಂಬರುವ ದಿನಗಳಲ್ಲಿ ದೇಶದಲ್ಲಿ ಲಸಿಕೆ ಪೂರೈಕೆಯನ್ನು ಗಣನೀಯವಾಗಿ ಹೆಚ್ಚಿಸಲಾಗುವುದು.

ನರೇಂದ್ರ ಮೋದಿ, ಪ್ರಧಾನಿ

ದೊರೆಯುವಂತಾಗಲು ಪ್ರಧಾನ ಮಂತ್ರಿ ಗರೀಬ್ ಕಲ್ಯಾಣ ಯೋಜನೆಯನ್ನು ದೀಪಾವಳಿಯವರೆಗೆ ವಿಸ್ತರಿಸಲಾಗಿದೆ ಎಂದೂ ಅವರು ಪ್ರಕಟಿಸಿದರು. ಶೇ.25ರಷ್ಟು ಲಸಿಕೆಗಳ ಖರೀದಿಯನ್ನು ಖಾಸಗಿ ಆಸ್ಪತ್ರೆಗಳು ಮುಂದುವರಿಸಬಹುದು, ಆದರೆ ಪ್ರತಿ ಡೋಸ್‌ಗೆ ಲಸಿಕೆಯ ನಿಗದಿತ ಬೆಲೆಯ ಜೊತೆಗೆ 150 ರೂ. ಗಿಂತ ಹೆಚ್ಚಿನ ಸೇವಾ ಶುಲ್ಕವನ್ನು ಪಡೆಯುವಂತಿಲ್ಲ ಎಂದರು.

ಕೋವಿಡ್-19 ಪ್ರಕರಣಗಳು ಕಡಿಮೆಯಾಗುವು ದರೊಂದಿಗೆ ಹಲವಾರು ರಾಜ್ಯಗಳು ಲಾಕ್‌ಡೌನ್ ಹಿಂದೆ ಗೆದುಕೊಳ್ಳುವ ಮತ್ತು ನಿರ್ಬಂಧಗಳನ್ನು ಸಡಿಲಿಸುವ ನಿಟ್ಟಿನಲ್ಲಿ ಎಚ್ಚರಿಕೆಯ ಹೆಜ್ಜೆಗಳನ್ನಿರಿಸುತ್ತಿವೆ ಎಂದ ಪ್ರಧಾನಿ, ಲಸಿಕೆಯು ವೈರಸ್‌ನ ವಿರುದ್ಧ ರಕ್ಷಾ ಕವಚವಾಗಿದೆ ಮತ್ತು ಮುಂಬರುವ ದಿನಗಳಲ್ಲಿ ದೇಶದಲ್ಲಿ ಲಸಿಕೆ ಪೂರೈಕೆಯನ್ನು ಗಣನೀಯವಾಗಿ ಹೆಚ್ಚಿಸಲಾಗುವುದು ಎಂದು ತಿಳಿಸಿದರು.

ದೇಶದಲ್ಲಿ ಏಳು ಕಂಪೆನಿಗಳು ಕೊರೋನ ವೈರಸ್ ವಿರುದ್ಧ ಲಸಿಕೆಗಳನ್ನು ತಯಾರಿಸುತ್ತಿವೆ ಮತ್ತು ಇನ್ನೂ ಮೂರು ಲಸಿಕೆಗಳ ಟ್ರಯಲ್‌ಗಳು ಮುಂದುವರಿದ ಹಂತದಲ್ಲಿವೆ ಎಂದು ಹೇಳಿದರು.

ಇತರ ದೇಶಗಳಿಂದ ಲಸಿಕೆಗಳನ್ನು ಖರೀದಿಸುವ ಪ್ರಕ್ರಿಯೆಯೂ ವೇಗವನ್ನು ಪಡೆದುಕೊಂಡಿದೆ ಎಂದ ಅವರು, ಮಕ್ಕಳು ಕೋವಿಡ್‌ನಿಂದ ಬಾಧಿತರಾಗುವ ಬಗ್ಗೆ ತಜ್ಞರು ಇತ್ತೀಚೆಗೆ ಕಳವಳಗಳನ್ನು ವ್ಯಕ್ತಪಡಿಸಿರುವ ಹಿನ್ನೆಲೆಯಲ್ಲಿ ಮಕ್ಕಳಿಗಾಗಿ ಎರಡು ಲಸಿಕೆಗಳ ಟ್ರಯಲ್ ಗಳನ್ನು ನಡೆಸಲಾಗುತ್ತಿದೆ. ಮೂಗಿನ ಮೂಲಕ ಸಿಂಪಡಿಸುವ ಲಸಿಕೆಯ ಅಭಿವೃದ್ಧಿಗಾಗಿ ಸಂಶೋಧನೆಗಳು ಮುಂದುವರಿದಿವೆ ಮತ್ತು ಇದು ಯಶಸ್ವಿಯಾದರೆ ಭಾರತದ ಲಸಿಕೆ ಅಭಿಯಾನಕ್ಕೆ ಹೆಚ್ಚಿನ ಉತ್ತೇಜನ ದೊರೆಯಲಿದೆ. ಅಲ್ಪಾವಧಿಯಲ್ಲಿ ಎರಡು ಮೇಡ್-ಇನ್-ಇಂಡಿಯಾ ಲಸಿಕೆಗಳ ಮೂಲಕ ಭಾರತವು ತನ್ನ ಸಾಮರ್ಥ್ಯವನ್ನು ಸಾಬೀತುಗೊಳಿಸಿದೆ ಮತ್ತು ಈಗಾಗಲೇ 23 ಕೋಟಿಗೂ ಅಧಿಕ ಡೋಸ್‌ಗಳನ್ನು ನೀಡಲಾಗಿದೆ ಎಂದರು.

ವಿವಿಧ ಮಟ್ಟಗಳಲ್ಲಿ ಕೋವಿಡ್ ವಿರುದ್ಧ ಹೋರಾಡಲು ಸಮರೋಪಾದಿಯಲ್ಲಿ ಪ್ರಯತ್ನಗಳು ನಡೆಯುತ್ತಿವೆ, ದೇಶಾದ್ಯಂತ ಹೊಸ ಆರೋಗ್ಯ ಮೂಲಸೌಕರ್ಯಗಳನ್ನು ಸೃಷ್ಟಿಸಲಾಗಿದೆ. ಅಗತ್ಯ ಔಷಧಿಗಳ ಉತ್ಪಾದನೆಯನ್ನು ಹೆಚ್ಚಿಸಲಾಗುತ್ತಿದೆ ಎಂದ ಮೋದಿ,ಈ ಹೋರಾಟದಲ್ಲಿ ಭಾರತವು ಬಹಳಷ್ಟು ನೋವನ್ನುಂಡಿದೆ ಮತ್ತು ಹಲವರು ತಮ್ಮ ಪ್ರೀತಿಪಾತ್ರರನ್ನು ಕಳೆದುಕೊಂಡಿದ್ದಾರೆ ಎಂದರು. ಸಂತ್ರಸ್ತ ಕುಟುಂಬಗಳಿಗೆ ಸಂತಾಪಗಳನ್ನೂ ಅವರು ಸೂಚಿಸಿದರು.
 


 

Read These Next

ಪ್ರಧಾನಿ ಮೋದಿಯಿಂದ ದ್ವೇಷ ಭಾಷಣ! ಚುನಾವಣಾ ಆಯೋಗದ ನಿಷ್ಕ್ರಿಯತೆಗೆ ಪ್ರತಿಪಕ್ಷಗಳ ಆಕ್ರೋಶ

ಪ್ರಧಾನಿ ನರೇಂದ್ರ ಮೋದಿಯವರು ಮುಸ್ಲಿಮ್ ಸಮುದಾಯದ ವಿರುದ್ದ ಆಕ್ಷೇಪಕಾರಿ ಭಾಷಣಗೈದು ತೀವ್ರ ವಿವಾದಕ್ಕೆ ಗುರಿಯಾಗಿದ್ದಾರೆ. ...

ಅಣಕು ಮತದಾನದ ವೇಳೆ ಬಿಜೆಪಿಗೆ ಮತ

ಕೇರಳದ ಕಾಸರಗೋಡಿನಲ್ಲಿ ಅಣಕು ಮತದಾನದವೇಳೆ ಇವಿಎಂಗಳು ತಪ್ಪಾಗಿ ಬಿಜೆಪಿ ಪರವಾಗಿ ಮತಗಳನ್ನು ದಾಖಲಿಸಿವೆ ಎಂದು ಅರ್ಜಿದಾರರೊಬ್ಬರು ...

ಚುನಾವಣಾ ಪ್ರಕ್ರಿಯೆಯಲ್ಲಿ ಪಾವಿತ್ರ್ಯವಿರಬೇಕು; ಆಯೋಗಕ್ಕೆ ಹೇಳಿದ ಸುಪ್ರೀಂ ಕೋರ್ಟ್

ಚುನಾವಣಾ ಪ್ರಕ್ರಿಯೆ ಯಲ್ಲಿ ಪಾವಿತ್ರ್ಯವಿರಬೇಕು ಎಂದು ಚುನಾವಣಾ ಆಯೋಗಕ್ಕೆ ಇಂದು ಸುಪ್ರೀಂ ಕೋರ್ಟ್ ಹೇಳಿದೆಯಲ್ಲದೆ ಸ್ವತಂತ್ರ ...