ಮಂಡ್ಯ - 2021-22ನೇ ಸಾಲಿನ ಪ್ರಧಾನಮಂತ್ರಿ ಮತ್ಸ್ಯಸಂಪದ ಯೋಜನೆಯನ್ನು ಅನುಷ್ಠಾನಗೊಳಿಸಲು ಜಿಲ್ಲಾಧಿಕಾರಿಗಳ ಅಧ್ಯಕ್ಷತೆಯಲ್ಲಿ ಜಿಲ್ಲಾಮಟ್ಟದ ಸಮಿತಿ ಸಭೆ ನಡೆಯಿತು.
ಈ ಸಂದರ್ಭದಲ್ಲಿ ಜಿಲ್ಲೆಯ ಯೋಜನಾ ವಿವರಗಳನ್ನು ಒಳಗೊಂಡಿರುವ ಕೈಪಿಡಿಯನ್ನು ಜಿಲ್ಲಾಧಿಕಾರಿ ಎಸ್.ಅಶ್ವತಿ ಬಿಡುಗಡೆ ಮಾಡಿದರು.
ಜಿಲ್ಲಾಧಿಕಾರಿಗಳ ಕಛೇರಿ ಸಭಾಂಗಣದಲ್ಲಿ ನಡೆದ ಸಭೆಯಲ್ಲಿ ಪಿಎಮ್ಎಮ್ಎಸ್ವೈ ಯೋಜನೆಯ ಜಿಲ್ಲಾ ಮಟ್ಟದ ಸಮಿತಿಯ ಅಧ್ಯಕ್ಷರಾದ ಜಿಲ್ಲಾಧಿಕಾರಿಗಳ ಹಾಗೂ ಸದಸ್ಯರಾದ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳ ನೇತೃತ್ವದಲ್ಲಿ 2021-22ನೇ 837 ಲಕ್ಷ ರೂ ವೆಚ್ಚದ ಯೋಜನೆಗೆ ಪ್ರಸ್ತಾವನೆಯನ್ನು ಸಲ್ಲಿಸಲಾಯಿತು.
ಸಭೆಯಲ್ಲಿ ಜಿ.ಪಂ ಸಿ.ಇ.ಓ ದಿವ್ಯ ಪ್ರಭು, ಕೃಷಿ ಇಲಾಖೆಯ ಜಂಟಿನಿರ್ದೇಶಕರು ಬಿ.ಎಸ್ ಚಂದ್ರಶೇಖರ್, ಮೀನುಗಾರಿಕೆ ಉಪನಿರ್ದೇಶಕರು ಬಿಬಿನ್ ಬೋಪಣ್ಣ, ಲೀಡ್ ಬ್ಯಾಂಕ್ ಮ್ಯಾನೇಜರ್ ಕದ್ರಪ್ಪ ಹಾಗೂ ಸಮಿತಿಯ ಇತರೆ ಸದಸ್ಯರು ಉಪಸ್ಥಿತರಿದ್ದರು