ದಾಖಲೆ ಇಲ್ಲದೆ ಬೆಳ್ಳಿ ಸಾಗಿಸುತ್ತಿದ್ದ ಇಬ್ಬರು ವ್ಯಕ್ತಿಯನ್ನು ಬಂಧಿಸಿದ ಪೊಲೀಸರು

Source: so news | By MV Bhatkal | Published on 27th March 2023, 1:04 AM | Coastal News | Don't Miss |

ಭಟ್ಕಳ: ದಾಖಲೆ ಇಲ್ಲದೆ ಬೆಳ್ಳಿ ಸಾಗಿಸುತ್ತಿದ್ದ ಇಬ್ಬರು ವ್ಯಕ್ತಿಗಳನ್ನು ವಾಹನ ಸಮೇತ ಭಟ್ಕಳ ಶಹರಠಾಣೆ ಪೊಲೀಸರು ಭಾನುವಾರ ಭಟ್ಕಳ ಪುರವರ್ಗ ಚೆಕ್ ಪೋಸ್ಟನಲ್ಲಿ ವಶಕ್ಕೆ ಪಡೆದಿದ್ದಾರೆ.
ಉಡುಪಿ ತಾಲೂಕಿನ ಇಂದ್ರಳ್ಳಿ ರೈಲ್ವೆ ನಿಲ್ದಾಣದ ಬಳಿಯ ನಿವಾಸಿ ಉಮೇಶ ಜನಾರ್ಧನ ಆಚಾರ್ಯ ಹಾಗೂ ಉಡುಪಿಯ ಅಂಬಾಬಾಗಿಲು ಕುಕ್ಕಂಜೆ ನಿವಾಸಿ ರವಿ ಶೀನಾ ಆಚಾರ್ಯ ಬಂಧಿತರು. ಇವರು ಉಡುಪಿಯಿಂದ ಹೊನ್ನಾವರದ ಕಡೆಗೆ ೭.೫ಲಕ್ಷ ಮೌಲ್ಯದ ೧೦ಕೆಜಿ ೮೨೦ ಗ್ರಾಂ ತೂಕದ ಬೆಳ್ಳಿಯನ್ನು ದಾಖಲೆ ಇಲ್ಲದೆ ಸಾಗಿಸುತ್ತಿದ್ದರು. ಪುರವರ್ಗ ಚೆಕ್‌ಪೋಸ್ಟನಲ್ಲಿ ಪೊಲೀಸರು ತಪಾಸಣೆ ನಡೆಸುವಾಗ ಸಂಶಯಾಸ್ಪದವಾಗಿ ಸಿಕ್ಕಿದ್ದರಿಂದ ಭಟ್ಕಳ ಶಹರ ಪೊಲೀಸರು ಇವರ ಮೇಲೆ ಪ್ರಕರಣ ದಾಖಲಿಸಿದ್ದಾರೆ.ಶಹರ ಠಾಣೆಯ ಪಿ.ಎಸ್.ಐ ಯೋಗೇಶ ತನಿಖೆ ನಡೆಸುತ್ತಿದ್ದಾರೆ.

Read These Next

ಕಾರವಾರ: ಮತದಾನ ಜಾಗೃತಿ ಜಾಥಾ

ಪ್ರತಿಯೊಂದು ಮತವು ದೇಶದ ಭವಿಷ್ಯವನ್ನು ನಿರ್ಧರಿಸುತ್ತದೆ. ಹಾಗಾಗಿ ನೀವು ನಿಮ್ಮ ಸುತ್ತಲಿನವರಿಗೂ ಮತದಾನ ಜಾಗೃತಿ ಮೂಡಿಸಬೇಕು ...

ಗುಲಬರ್ಗಾ ಲೋಕಸಭಾ (ಮೀಸಲು) ಕ್ಷೇತ್ರದ ಚುನಾವಣೆ: ಚುನಾವಣಾ ಸ್ಪರ್ಧಾ ಕಣದಲ್ಲಿ 14 ಅಭ್ಯರ್ಥಿಗಳು

ಕಲಬುರಗಿ : ಗುಲಬರ್ಗಾ ಲೋಕಸಭಾ (ಪ.ಜಾ. ಮೀಸಲು) ಕ್ಷೇತ್ರಕ್ಕೆ 2024ರ ಮೇ 7ರಂದು ನಡೆಯುವ ಚುನಾವಣೆಗಾಗಿ ನಾಮಪತ್ರಗಳನ್ನು ಹಿಂದಕ್ಕೆ ಪಡೆಯಲು ...

ಧಾರವಾಡ ಲೋಕಸಭೆ : ಉಮೇದುವಾರಿಕೆ ಹಿಂಪಡೆದ ಎಂಟು ಅಭ್ಯರ್ಥಿಗಳು; ಅಂತಿಮವಾಗಿ ಚುನಾವಣಾ ಸ್ಪರ್ಧೆಯಲ್ಲಿ 17 ಅಭ್ಯರ್ಥಿಗಳು

ಧಾರವಾಡ : 11-ಧಾರವಾಡ ಚುನಾವಣಾ ಕ್ಷೇತ್ರದಿಂದ ಲೋಕಸಭೆಗೆ ನಡೆಯುವ ಚುನಾವಣೆಗೆ ಕ್ರಮಬದ್ದವಾಗಿ ನಾಮನಿರ್ದೇಶನ ಮಾಡಲ್ಪಟ್ಟಿದ್ದ 25 ...

ಅಡಕೆ, ಕಾಫಿ ಬೆಳೆಗಾರರ ಸಂಕಷ್ಟಕ್ಕೆ ಬಿಜೆಪಿ ಏಕೆ ಸ್ಪಂದಿಸಿಲ್ಲ: ಜಯಪ್ರಕಾಶ್ ಹೆಗ್ಡೆ ಪ್ರಶ್ನೆ

ಬಾಳೆಹೊನ್ನೂರು: ಕಳೆದ ಹತ್ತು ವರ್ಷಗಳಿಂದ ಕೇಂದ್ರದಲ್ಲಿ ಅಧಿಕಾರದಲ್ಲಿರುವ ಬಿಜೆಪಿ, ಮಲೆನಾಡಿನ ಅಡಕೆ, ಕಾಫಿ ಬೆಳೆಗಾರರ ಸಂಕಷ್ಟಕ್ಕೆ ...