ಬೈಂದೂರು : ತಾಲೂಕಿನ ಪಡುವರಿ ಗ್ರಾಮದ ಒತ್ತಿನಣೆ ಬಳಿ ರಾತ್ರಿ ರೌಂಡ್ಸ್ ಕರ್ತವ್ಯದಲ್ಲಿದ್ದ ಬೈಂದೂರು ವೃತ್ತ ನಿರೀಕ್ಷಕರ ಜೀಪ್ ನಿಯಂತ್ರಣ ತಪ್ಪಿ ಪಲ್ಟಿ ಹೊಡೆದ ಘಟನೆ ನಡೆದಿದೆ.
ಶಿರೂರಿನಿಂದ ಬೈಂದೂರು ಕಡೆ ಬರುವಾಗ ನಿಯಂತ್ರಣ ತಪ್ಪಿ ಇನ್ನೊಂದು ರಸ್ತೆಯ ಬದಿಯ ಚರಂಡಿಗೆ ಅಡಿಮೇಲಾಗಿ ಬಿದ್ದು ಅಪಘಾತಗೊಂಡಿದೆ. ಪರಿಣಾಮವಾಗಿ ಜೀಪ್ ನಲ್ಲಿದ್ದ ವೃತ್ತ ನಿರೀಕ್ಷಕ ಸುರೇಶ್ ನಾಯ್ಕ್ ರವರ ಸೊಂಟ, ಕಾಲುಗಳಿಗೆ ತೀವೃ ಗಾಯವಾಗಿದೆ.ಅಲ್ಲದೇ ಜೀಪ್ ಚಾಲಕ ಹೇಮರಾಜ್ ರವರ ತಲೆ, ಕೈ, ಕಾಲಿಗೆ ಗಾಯವಾಗಿದೆ.
ಗಾಯಾಳುಗಳು ಜೀಪಲ್ಲಿ ಸಿಕ್ಕಿಬಿದ್ದಿದರಿಂದ ಕ್ರೇನ್ ಮೂಲಕ ಜೀಪ್ ಎತ್ತಿ ನಂತರ ಕುಂದಾಪುರದ ಆದರ್ಶ ಆಸ್ಪತ್ರೆಗೆ ದಾಖಲಿಸಲಾಗಿದೆ. ಜೀಪ್ ಸಂಪೂರ್ಣ ಜಖಂಗೊಂಡಿದೆ.