ಶ್ರೀನಿವಾಸಪುರ: ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಸುದರ್ಶನ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕಾರ್ತಿಕ್ ರೆಡ್ಡಿ ಭೇಟಿ ನೀಡಿ ಕೊರೊನಾ ನಿಯಂತ್ರಣಕ್ಕೆ ತಾಲ್ಲೂಕು ಆಡಳಿತದಿಂದ ಕೈಗೊಳ್ಳಲಾಗಿರುವ ಮುಂಜಾಗ್ರತಾ ಕ್ರಮಗಳನ್ನು ಪರಿಶೀಲಿಸಿದರು.
ಕರ್ನಾಟಕ ಆಂಧ್ರಪ್ರದೇಶದ ಗಡಿಯಲ್ಲಿ ಸ್ಥಾಪಿಸಲಾಗಿರುವ ತಾಲ್ಲೂಕಿನ ತನಿಖಾ ಕೇಂದ್ರಕ್ಕೆ ಭೇಟಿ ನೀಡಿ ಪೊಲೀಸ್, ಕಂದಾಯ ಹಾಗೂ ಆರೋಗ್ಯ ಇಲಾಖೆ ಅಧಿಕಾರಿಗಳ ಕಾರ್ಯನಿರ್ವಹಣೆಯನ್ನು ಪರಿಶೀಲಿಸಿದರು.
ತಹಶೀಲ್ದಾರ್ ಎಸ್.ಎಂ.ಶ್ರೀನಿವಾಸ್, ಡಿವೈಎಸ್ಪಿ ನಾರಾಯಣಸ್ವಾಮಿ, ಪೊಲೀಸ್ ಸರ್ಕಲ್ ಇನ್ಸ್ಪೆಕ್ಟರ್ ರಾಘವೇಂದ್ರ ಪ್ರಕಾಶ್ ಇದ್ದರು.