ವಿಧಾನಸಭಾ ಚುನಾವಣೆಗೆ ಸಿದ್ಧತೆ: ರಾಜ್ಯದ 221 ಕ್ಷೇತ್ರಗಳಲ್ಲಿ 5.05 ಕೋಟಿ ಮತದಾರರಿದ್ದಾರೆ; ಅಂತಿಮ ಮತದಾರರ ಪಟ್ಟಿ ಪ್ರಕಟ

Source: The New Indian Express | By MV Bhatkal | Published on 6th January 2023, 7:35 PM | State News |

ಬೆಂಗಳೂರು: ಕರ್ನಾಟಕದ 224 ವಿಧಾನಸಭಾ ಕ್ಷೇತ್ರಗಳ ಪೈಕಿ 221 ಕ್ಷೇತ್ರಗಳ ಅಂತಿಮ ಮತದಾರರ ಪಟ್ಟಿಯನ್ನು ಚುನಾವಣಾ ಆಯೋಗ ಗುರುವಾರ ಬಿಡುಗಡೆ ಮಾಡಲಾಗಿದ್ದು, 221 ಕ್ಷೇತ್ರಗಳಲ್ಲಿ 5.05 ಕೋಟಿ ಮತದಾರರು ಇರುವುದು ಪಟ್ಟಿಯಿಂದ ತಿಳಿದುಬಂದಿದೆ.
ಇನ್ನುಳಿದ ಮೂರು ವಿಧಾನಸಭಾ ಕ್ಷೇತ್ರಗಳಾದ ಶಿವಾಜಿನಗರ, ಚಿಕ್ಕಪೇಟೆ ಮತ್ತು ಮಹದೇವಪುರದಲ್ಲಿ ಮತದಾರರ ಮಾಹಿತಿ ಕಳ್ಳತನ ಆರೋಪದ ಕುರಿತು ವಿಚಾರಣೆ ನಡೆಯುತ್ತಿರುವ ಕಾರಣ ಜನವರಿ 15 ರಂದು ಪಟ್ಟಿಯ ಪ್ರಕಟಗೊಳ್ಳಲಿದೆ ಎಂದು ತಿಳಿದುಬಂದಿದೆ.
ಮುಖ್ಯ ಚುನಾವಣಾಧಿಕಾರಿ ಮನೋಜ್ ಕುಮಾರ್ ಮೀನಾ ಅವರು ಮತದಾರರ ಅಂತಿಮ ಪಟ್ಟಿಯನ್ನು ಬಿಡುಗಡೆ ಮಾಡಿದರು.
ಮತದಾರರ ಪಟ್ಟಿಯ ವಿಶೇಷ ಪರಿಷ್ಕರಣೆ ವಿವರಗಳ ಪ್ರಕಾರ, ಕರ್ನಾಟಕದಲ್ಲಿ ಮತದಾರರ ಸಂಖ್ಯೆ 5,05,48,553 ಇದ್ದು, ಹೊಸದಾಗಿ 12,31,540 ಮತದಾರರು ಸೇರ್ಪಡೆಗೊಂಡಿರುವುದು ತಿಳಿದುಬಂದಿದೆ. 6,18,965 ಮತದಾರರನ್ನು ಮತದಾರರ ಪಟ್ಟಿಯಿಂದ ಅಳಿಸಿರುವುದು ಕಂಡು ಬಂದಿದ್ದು, ಪರಿಷ್ಕೃತ ಮತದಾರರ ಪಟ್ಟಿಯಲ್ಲಿ 221 ಕ್ಷೇತ್ರಗಳಲ್ಲಿ ಒಟ್ಟು ಮತದಾರರ ಸಂಖ್ಯೆ 4,99,34,730 ಕಂಡು ಬಂದಿದೆ.
 
ಬೆಂಗಳೂರು ದಕ್ಷಿಣ ಕ್ಷೇತ್ರದಲ್ಲಿ ಅತಿ ಹೆಚ್ಚು ಅಂದರೆ 6,50,53 ಹಾಗೂ ಚಿಕ್ಕಮಗಳೂರು ಜಿಲ್ಲೆಯ ಶೃಂಗೇರಿಯಲ್ಲಿ ಅತಿ ಕಡಿಮೆ ಅಂದರೆ 1,66,521 ಮತದಾರರಿದ್ದಾರೆ.
ಕಳೆದ ಬಾರಿಗೆ ಹೋಲಿಸಿದರೆ ಈ ಬಾರಿ ಯುವ ಮತದಾರರ ಸಂಖ್ಯೆಯಲ್ಲಿ ಹೆಚ್ಚಳ ಕಂಡು ಬಂದಿದೆ. ಈ ಬಾರಿ ಯುವ ಮತದಾರರ ಸಂಖ್ಯೆ 7,01,243 ಆಗಿದೆ.
2011 ರ ಜನಗಣತಿಯ ಪ್ರಕಾರ, ಕರ್ನಾಟಕದ ಲಿಂಗ ಅನುಪಾತವು 973ರಷ್ಟಿದೆ ಎಂದು ತಿಳಿಸಿತ್ತು. ಆದರೆ, ಅಂತಿಮ ಮತದಾರರ ಪಟ್ಟಿ-2023 ರ ಪ್ರಕಾರ, ಲಿಂಗ ಅನುಪಾತವು 988 ಆಗಿದೆ ಎಂದು ತಿಳಿಸಿದೆ.
ಈ ವಿವರಗಳು ಜಿಲ್ಲಾ ಚುನಾವಣಾಧಿಕಾರಿಗಳು, ಚುನಾವಣಾ ನೋಂದಣಿ ಅಧಿಕಾರಿಗಳು, ಸಹಾಯಕ ಚುನಾವಣಾ ನೋಂದಣಿ ಅಧಿಕಾರಿಗಳು ಮತ್ತು ಎಲ್ಲಾ ಮತಗಟ್ಟೆಗಳಿಂದ ಬಂದಿರುವುದಾಗಿದೆ.
ವಿಧಾನಸಭಾ ಕ್ಷೇತ್ರಗಳ ಮತದಾರರ ಪಟ್ಟಿಗಳನ್ನು ಮುಖ್ಯ ಚುನಾವಣಾಧಿಕಾರಿ, ಕರ್ನಾಟಕ (https://ceo.karnataka.gov.in) ಅವರ ಅಧಿಕೃತ ವೆಬ್‌ಸೈಟ್‌ನಲ್ಲಿಯೂ ಪ್ರಕಟಿಸಲಾಗುತ್ತದೆ.
ಸರಿಯಾದ ಮಾಹಿತಿಯೊಂದಿಗೆ ತಮ್ಮ ಹೆಸರುಗಳನ್ನು ಪಟ್ಟಿಯಲ್ಲಿ ಸೇರಿಸಲಾಗಿದೆಯೇ ಎಂಬುದನ್ನು ಜನರು ಪರಿಶೀಲಿಸಬಹುದಾಗಿದೆ. "ನಿರಂತರ ಅಪ್‌ಡೇಟ್ ಅವಧಿಯಲ್ಲಿ" ಅರ್ಜಿಗಳನ್ನು ಪೋರ್ಟಲ್‌ಗಳಾದ NVSP, ವೋಟರ್ ಪೋರ್ಟಲ್ ಅಥವಾ ವೋಟರ್ ಹೆಲ್ಪ್‌ಲೈನ್ ಮೊಬೈಲ್ ಅಪ್ಲಿಕೇಶನ್ ಬಳಸಿ ಆನ್‌ಲೈನ್‌ನಲ್ಲಿ ಸಲ್ಲಿಸಬಹುದು.
ಯುವ ಮತದಾರರು
17 ವರ್ಷ ಪೂರೈಸಿದ ಯುವಕರು ತಮ್ಮ ಹೆಸರನ್ನು ಮತದಾರರ ಪಟ್ಟಿಯಲ್ಲಿ ಸೇರಿಸಲು ಅರ್ಜಿ ಸಲ್ಲಿಸಬಹುದಾಗಿದೆ. ಮತದಾರರ ದತ್ತಾಂಶ ಕಳ್ಳತನದ ಆರೋಪದ ಸಂಬಂಧ ತನಿಖೆ ಮುಂದುವರಿದಿದ್ದು, ಜನವರಿ 15 ರಂದು ವರದಿಯನ್ನು ಸಲ್ಲಿಸಲಾಗುವುದು. ಅದರ ಆಧಾರದ ಮೇಲೆ ಮುಂದಿನ ಕ್ರಮಗಳನ್ನು ಕೈಗೊಳ್ಳಲಾಗುತ್ತದೆ ಎಂದು ಮುಖ್ಯ ಚುನಾವಣಾಧಿಕಾರಿ ಮನೋಜ್ ಕುಮಾರ್ ಮೀನಾ ಅವರು ಹೇಳಿದ್ದಾರೆ.

 

Read These Next

ಪ್ರಜ್ವಲ್ ರೇವಣ್ಣ ಲೈಂಗಿಕ ಹಗರಣ; ಬಿಜೆಪಿ ಮುಖಂಡನಿಗೆ ಪೆನ್‌ಡ್ರೈವ್ ನೀಡಿದ್ದೆ; ಪ್ರಜ್ವಲ್ ಕಾರು ಚಾಲಕನಿಂದ ಹೇಳಿಕೆ

ಪ್ರಜ್ವ ರೇವಣ್ಣರದ್ದು ಎನ್ನಲಾದ ಅಶ್ಲೀಲ ವೀಡಿಯೊ ಪೆನ್ ಡ್ರೈವ್ ಬಿಜೆಪಿ ಮುಖಂಡರೂ ಆಗಿರುವ ವಕೀಲ ದೇವರಾಜೇಗೌಡ ಬಿಟ್ಟು ಬೇರೆ ಯಾರಿಗೂ ...

ಪ್ರಜ್ವಲ್ ರೇವಣ್ಣ ಲೈಂಗಿಕ ಹಗರಣ; ಅವಧಿ ಉಲ್ಲೇಖಿಸದೇ ಪ್ರಜ್ವಲ್ ರೇವಣ್ಣ ಜೆಡಿಎಸ್‌ನಿಂದ ಅಮಾನತು

ಹಲವು ಮಹಿಳೆಯರ ಮೇಲೆ ಲೈಂಗಿಕ ದೌರ್ಜನ್ಯವೆಸಗಿರುವ ಆರೋಪ ಪ್ರಕರಣ ಸಂಬಂಧ ಹಾಸನ ಸಂಸದ ಪ್ರಜ್ವಲ್ ರೇವಣ್ಣ ಅವರನ್ನು ಜೆಡಿಎಸ್ ಪಕ್ಷ ...

ಪ್ರಜ್ವಲ್ ರೇವಣ್ಣ ಲೈಂಗಿಕ ಹಗರಣ; ರೇವಣ್ಣ, ಪ್ರಜ್ವಲ್ ಉಚ್ಚಾಟನೆಗೆ ಜೆಡಿಎಸ್ ಶಾಸಕರ ಪಟ್ಟು

ರಾಜ್ಯದ ಜನತೆಯ ಮುಂದೆ ತಲೆ ತಗ್ಗಿಸುವಂತಹ ಕೆಲಸ ಮಾಡಿದವರನ್ನು ರಾಕ್ಷದಿಂದ ಉಚ್ಚಾಟನೆ ಮಾಡಿ ಪಕ್ಷದ ಘನತೆಯನ್ನು ಉಳಿಸಬೇಕಿದೆ ಎಂದು ...

ಪ್ರಜ್ವಲ್ ರೇವಣ್ಣ ಲೈಂಗಿಕ ಹಗರಣ; ನನ್ನನ್ನು, ದೇವೇಗೌಡರನ್ನು ಎಳೆದು ತರಬೇಡಿ: ಕುಮಾರಸ್ವಾಮಿ

ಜೆಡಿಎಸ್ ಸಂಸದ ಪ್ರಜಿ ಕುಮಾರಸ್ವಾಮಿ ಡ್ರೈವ್ ಪ್ರಕರಣದಲ್ಲಿ ನನ್ನನ್ನು, ದೇವೇಗೌಡರನ್ನು ಎಳೆದು ತರಬೇಡಿ' ಎಂದು ಮಾಧ್ಯಮಗಳ ಮುಂದೆ ...

ಪ್ರಜ್ವಲ್ ರೇವಣ್ಣ ಲೈಂಗಿಕ ಹಗರಣ; ತ್ವರಿತಗತಿಯಲ್ಲಿ ತನಿಖೆ ನಡೆಸಿ, ವರದಿ ಸಲ್ಲಿಸಲು ಸೂಚನೆ: ಪರಮೇಶ್ವ‌ರ್

ಪ್ರಜ್ವಲ್ ರೇವಣ್ಣ ವಿರುದ್ಧದ ಲೈಂಗಿಕ ದೌರ್ಜನ್ಯ ಆರೋಪ ಪ್ರಕರಣದ ತನಿಖೆಯನ್ನು ತ್ವರಿತಗತಿಯಲ್ಲಿ ನಡೆಸಿ, ವರದಿ ಸಲ್ಲಿಸುವಂತೆ ...