ನವದೆಹಲಿ: ರಾಷ್ಟ್ರಪತಿ ರಾಮ್ ನಾಥ್ ಕೋವಿಂದ್ ಅವರು ರಿಯೊ ಪ್ಯಾರಾಲಿಂಪಿಕ್ ಚಿನ್ನದ ಪದಕ ವಿಜೇತ ಕ್ರೀಡಾಪಟು ಮರಿಯಪ್ಪನ್ ತಂಗವೇಲು, ಟೇಬಲ್ ಟೆನಿಸ್ ತಾರೆ ಮಾನಿಕಾ ಬಾತ್ರಾ ಮತ್ತು ಮಹಿಳಾ ಹಾಕಿ ತಂಡದ ನಾಯಕಿ ರಾಣಿ ರಾಂಪಾಲ್ ಅವರಿಗೆ ದೇಶದ ಅತ್ಯುನ್ನತ ಕ್ರೀಡಾ ಗೌರವ ರಾಜೀವ್ ಗಾಂಧಿ ಖೇಲ್ ರತ್ನ ನೀಡಿ ಸನ್ಮಾನಿಸಿದರು.
ರಾಷ್ಟ್ರೀಯ ಕ್ರೀಡಾ ಪ್ರಶಸ್ತಿಗಳ ಇತಿಹಾಸದಲ್ಲಿ ಮೊದಲ ಬಾರಿಗೆ ರಾಷ್ಟ್ರಪತಿ ಭವನದಿಂದ ನಡೆದ ವರ್ಚುಯಲ್ ಸಮಾರಂಭದಿಂದ ರಾಷ್ಟ್ರಪತಿಗಳು ಅರ್ಜುನ ಪ್ರಶಸ್ತಿ, ದ್ರೋಣಾಚಾರ್ಯ ಪ್ರಶಸ್ತಿ ಮತ್ತು ಧ್ಯಾನ್ಚಂದ್ ಪ್ರಶಸ್ತಿಯನ್ನು ಪ್ರದಾನ ಮಾಡಿದರು.
ಹಾಕಿ ಜಾದೂಗಾರ ಮೇಜರ್ ಧ್ಯಾನ್ ಚಂದ್ ಅವರ ಜನ್ಮದಿನವಾದ ಆಗಸ್ಟ್ 29 ರಂದು ದೇಶಾದ್ಯಂತ ರಾಷ್ಟ್ರೀಯ ಕ್ರೀಡಾ ದಿನವಾಗಿ ಆಚರಿಸಲಾಗುತ್ತಿದ್ದು, ಐದು ರಾಜೀವ್ ಗಾಂಧಿ ಖೇಲ್ ರತ್ನ, 27 ಅರ್ಜುನ ಪ್ರಶಸ್ತಿಗಳನ್ನು ರಾಷ್ಟ್ರಪತಿ ಪ್ರಧಾನ ಮಾಡಿದರು. 74 ಜನರ ಪೈಕಿ ವಿವಿಧ ನಗರಗಳ 11 ಭಾರತೀಯ ಕ್ರೀಡಾ ಪ್ರಾಧಿಕಾರದಿಂದ 60 ಮಂದಿ ವರ್ಚುಯಲ್ ಸಮಾರಂಭದಲ್ಲಿ ಪಾಲ್ಗೊಂಡಿದ್ದರು.
ಖೇಲ್ ರತ್ನ ಪ್ರಶಸ್ತಿ ವಿಜೇತರಾದ ರೋಹಿತ್ ಶರ್ಮಾ, ವಿಗ್ನೇಶ್ ಫೋಗಟ್ , ಅರ್ಜುನ ಪ್ರಶಸ್ತಿ ವಿಜೇತ ಇಶಾಂತ್ ಶರ್ಮಾ, ಸಾತ್ವಿಕ್ ಸಾಯಿ ರಾಜ್ ,ರಾಂಕಿರೆಡ್ಡಿ (ಬ್ಯಾಡ್ಮಿಂಟನ್ ) ಸಮಾರಂಭಕ್ಕೆ ಗೈರಾಗಿದ್ದರು. ರಾಣಿ ರಾಂಪಲ್ ಬೆಂಗಳೂರಿನ ಭಾರತೀಯ ಕ್ರೀಡಾ ಪ್ರಾಧಿಕಾರದಿಂದ ಪಾಲ್ಗೊಂಡಿದ್ದರು.
ಖೇಲ್ ರತ್ನ ಪ್ರಶಸ್ತಿಯನ್ನು 7.5 ಲಕ್ಷದಿಂದ 25 ಲಕ್ಷಕ್ಕೆ, ಅರ್ಜುನ ಪ್ರಶಸ್ತಿಯನ್ನು 10 ಲಕ್ಷದಿಂದ 15 ಲಕ್ಷಕ್ಕೆ ದ್ರೋಣಾಚಾರ್ಯ ಪ್ರಶಸ್ತಿಯನ್ನು 5 ಲಕ್ಷದಿಂದ 15 ಲಕ್ಷಕ್ಕೆ ಧ್ಯಾನ್ ಚಂದ್ ಪ್ರಶಸ್ತಿಯನ್ನು 5 ಲಕ್ಷದಿಂದ 10 ಲಕ್ಷಕ್ಕೆ ಏರಿಸಲಾಗಿದ್ದು, ನಿನ್ನೆ ಹೃದಯಾಘಾತದಿಂದ ಮೃತಪಟ್ಟ ಮಾಜಿ ಭಾರತೀಯ ಅಥ್ಲೇಟಿಕ್ ಕೋಚ್ ಪುರುಷೋತ್ತಮ್ ರೈ ಅವರಿಗೆ ಈ ಬಾರಿಯ ದ್ರೋಣಾಚಾರ್ಯ ಪ್ರಶಸ್ತಿಗೆ ಆಯ್ಕೆ ಮಾಡಲಾಗಿತ್ತು. ಇಂದು ವಿಕಾಸ ಸೌಧದಲ್ಲಿ ಅವರಿಗೆ ಸನ್ಮಾನ ಸಮಾರಂಭ ಕೂಡಾ ಆಯೋಜಿಸಲಾಗಿತ್ತು. ಆದರೆ, ವಿಧಿಯಾಟ ಬೇರೆಯಾಗಿತ್ತು.
ಕ್ರೀಡಾ ಸಾಧಕರ ಸಾಧನೆಯನ್ನು ರಾಷ್ಟ್ರಪತಿ ರಾಮನಾಥ್ ಕೋವಿಂದ್ ಕೊಂಡಾಡಿದರು. ಕೋವಿಡ್-19 ಸಂದರ್ಭದಲ್ಲಿ ಮೊದಲ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ರಾಷ್ಟ್ರಪತಿ ಪಾಲ್ಗೊಳ್ಳುತ್ತಿರುವುದಾಗಿ ಸಮಾರಂಭ ಆರಂಭಕ್ಕೂ ಮುನ್ನ ಕ್ರೀಡಾ ಸಚಿವ ಕಿರಣ್ ರಿಜಿಜು ತಿಳಿಸಿದರು.
Read These Next
ಸೋಮವಾರದ ಒಳಗೆ ಬರ ಪರಿಹಾರ ಬಿಡುಗಡೆ ಮಾಡಲು ಒಪ್ಪಿದ ಕೇಂದ್ರ ಸರ್ಕಾರ
ನವದೆಹಲಿ/ಬೆಂಗಳೂರು: ಕರ್ನಾಟಕಕ್ಕೆ ಸೋಮವಾರದ ಏಪ್ರಿಲ್ 29ರ ಒಳಗೆ ಬರ ಪರಿಹಾರ ಬಿಡುಗಡೆ ಮಾಡುತ್ತೇವೆ ಎಂದು ಕೇಂದ್ರ ಸರ್ಕಾರ ...
ಪ್ರಧಾನಿ ಮೋದಿಯಿಂದ ದ್ವೇಷ ಭಾಷಣ! ಚುನಾವಣಾ ಆಯೋಗದ ನಿಷ್ಕ್ರಿಯತೆಗೆ ಪ್ರತಿಪಕ್ಷಗಳ ಆಕ್ರೋಶ
ಪ್ರಧಾನಿ ನರೇಂದ್ರ ಮೋದಿಯವರು ಮುಸ್ಲಿಮ್ ಸಮುದಾಯದ ವಿರುದ್ದ ಆಕ್ಷೇಪಕಾರಿ ಭಾಷಣಗೈದು ತೀವ್ರ ವಿವಾದಕ್ಕೆ ಗುರಿಯಾಗಿದ್ದಾರೆ. ...
ಇವಿಎಂ - ವಿವಿಪ್ಯಾಟ್ ಮತ ಪರಿಶೀಲನೆ ತೀರ್ಪು ಕಾದಿರಿಸಿದ ಸುಪ್ರೀಂಕೋರ್ಟ್
ಇಲೆಕ್ಟ್ರಾನಿಕ್ ಮತಯಂತ್ರ (ಇವಿಎಂ)ದ ಮೂಲಕ ಚಲಾಯಿತವಾದ ಮತಗಳನ್ನು ವಿವಿಪ್ಯಾಟ್ ಯಂತ್ರದಲ್ಲಿ ದಾಖಲಾದ ಸ್ಲಿಪ್;ಗಳ ಜೊತೆ ತಾಳೆ ಹಾಕುವ ...
ಅಣಕು ಮತದಾನದ ವೇಳೆ ಬಿಜೆಪಿಗೆ ಮತ
ಕೇರಳದ ಕಾಸರಗೋಡಿನಲ್ಲಿ ಅಣಕು ಮತದಾನದವೇಳೆ ಇವಿಎಂಗಳು ತಪ್ಪಾಗಿ ಬಿಜೆಪಿ ಪರವಾಗಿ ಮತಗಳನ್ನು ದಾಖಲಿಸಿವೆ ಎಂದು ಅರ್ಜಿದಾರರೊಬ್ಬರು ...
ಚುನಾವಣಾ ಪ್ರಕ್ರಿಯೆಯಲ್ಲಿ ಪಾವಿತ್ರ್ಯವಿರಬೇಕು; ಆಯೋಗಕ್ಕೆ ಹೇಳಿದ ಸುಪ್ರೀಂ ಕೋರ್ಟ್
ಚುನಾವಣಾ ಪ್ರಕ್ರಿಯೆ ಯಲ್ಲಿ ಪಾವಿತ್ರ್ಯವಿರಬೇಕು ಎಂದು ಚುನಾವಣಾ ಆಯೋಗಕ್ಕೆ ಇಂದು ಸುಪ್ರೀಂ ಕೋರ್ಟ್ ಹೇಳಿದೆಯಲ್ಲದೆ ಸ್ವತಂತ್ರ ...
ಇಂದು ಮೊದಲ ಹಂತದ ಚುನಾವಣೆ; ದೇಶಾದ್ಯಂತ 102 ಕ್ಷೇತ್ರಗಳಿಗೆ ಮತದಾನ
ಪ್ರಜಾಪ್ರಭುತ್ವದ ಹಬ್ಬಕ್ಕೆ ಭಾರತ ಸಜ್ಜಾಗಿದ್ದು ಮೊದಲ ಹಂತದ ಲೋಕಸಭಾ ಚುನಾವಣೆ ಶುಕ್ರವಾರ ನಡೆಯಲಿದೆ. 21 ರಾಜ್ಯಗಳು, ಕೇಂದ್ರಾಡಳಿತ ...
ಅಂಕೋಲದಲ್ಲಿ ಬೈಕ್ ಮತ್ತು ಟ್ರಾಕ್ಸ್ ನಡುವೆ ಅಪಘಾತ. ಸವಾರ ಸಾವು. ಇಬ್ಬರು ಗಂಭೀರ.
ಅಂಕೋಲಾ : ಬೈಕ್ ಮತ್ತು ಟ್ರಾಕ್ಸ್ ನಡುವೆ ಸಂಭವಿಸಿದ ಅಪಘಾತದಲ್ಲಿ ಬೈಕ್ ಸವಾರ ಸಾವನ್ನಪ್ಪಿದ ಘಟನೆ ಅಕೋಲಾ ತಾಲೂಕಿನ ಹಟ್ಟಿಕೇರಿ ...
ಪ್ರಧಾನಿ ನರೇಂದ್ರ ಮೋದಿ ಅವರಿಂದ ಹಸಿ ಸುಳ್ಳು : ಸಿ lಎಂ ಸಿದ್ದರಾಮಯ್ಯ ಆರೋಪ
ಬೆಂಗಳೂರು : ಹಿಂದುಳಿದ ಜಾತಿ ಮತ್ತು ದಲಿತರ ಮೀಸಲಾತಿಯನ್ನು ಕಿತ್ತು ಮುಸ್ಲಿಮರಿಗೆ ನೀಡಲು ಕಾಂಗ್ರೆಸ್ ಹೊರಟಿದೆ ಎಂದು ಪ್ರಧಾನಿ ...
ರಾಜ್ಯದಲ್ಲಿ ಬಿಜೆಪಿ ಕುರುಬ ಸಮಾಜದ ಒಬ್ಬರಿಗೂ ಟಿಕೆಟ್ ಕೊಟ್ಟಿಲ್ಲ, ಒಬ್ಬೇ ಒಬ್ಬ ಮರಾಠರಿಗೂ, ಒಬ್ಬ ಮುಸ್ಲಿಂಗೂ ಟಿಕೆಟ್ ಕೊಟ್ಟಿಲ್ಲ: ಸಿ ಎಂ ಸಿದ್ದರಾಮಯ್ಯ
ಬೀದರ್ : ಅಧಿಕಾರ, ಅವಕಾಶ, ಸಂಪತ್ತು ಎಲ್ಲ ಸಮುದಾಯಗಳಿಗೂ ಹಂಚಿಕೆ ಆದರೆ ಮಾತ್ರ ದೇಶದ ಪ್ರಗತಿ ಸಾಧ್ಯ ಎಂದು ಮುಖ್ಯಮಂತ್ರಿ ...
ಗುಲಬರ್ಗಾ ಲೋಕಸಭಾ (ಮೀಸಲು) ಕ್ಷೇತ್ರದ ಚುನಾವಣೆ: ಚುನಾವಣಾ ಸ್ಪರ್ಧಾ ಕಣದಲ್ಲಿ 14 ಅಭ್ಯರ್ಥಿಗಳು
ಕಲಬುರಗಿ : ಗುಲಬರ್ಗಾ ಲೋಕಸಭಾ (ಪ.ಜಾ. ಮೀಸಲು) ಕ್ಷೇತ್ರಕ್ಕೆ 2024ರ ಮೇ 7ರಂದು ನಡೆಯುವ ಚುನಾವಣೆಗಾಗಿ ನಾಮಪತ್ರಗಳನ್ನು ಹಿಂದಕ್ಕೆ ಪಡೆಯಲು ...
ಬಳ್ಳಾರಿ ಲೋಕಸಭಾ ಚುನಾವಣೆ: ಅಂತಿಮ ಕಣದಲ್ಲಿ 10 ಅಭ್ಯರ್ಥಿಗಳು.
ಬಳ್ಳಾರಿ : 09-ಬಳ್ಳಾರಿ (ಪ.ಪಂ) ಲೋಕಸಭಾ ಚುನಾವಣೆಗೆ ಸಲ್ಲಿಕೆಯಾಗಿದ್ದ ನಾಮಪತ್ರಗಳನ್ನು ಹಿಂಪಡೆಯುವ ದಿನವಾದ ಸೋಮವಾರದಂದು, ಓರ್ವ ...
ಪಟ್ಟಣ ಗ್ರಾಮದಲ್ಲಿ ಎತ್ತಿನ ಬಂಡಿಗಳ ಮೂಲಕ ಮತದಾನದ ಜಾಗೃತಿ
ಕಲಬುರಗಿ : ಕಲಬುರಗಿ ಜಿಲ್ಲಾಡಳಿತ ಹಾಗೂ ಜಿಲ್ಲಾ ಹಾಗೂ ತಾಲೂಕು ಸ್ವೀಪ್ ಸಮಿತಿ ವತಿಯಿಂದ ಲೋಕಸಭಾ ಚುನಾವಣೆ-2024ರ ಹಿನ್ನೆಲೆಯಲ್ಲಿ ...