ಕೃಷಿ ಮಸೂದೆಗಳಿಗೆ ರಾಷ್ಟ್ರಪತಿಗಳಿಂದ ಅಂಕಿತ

Source: sonews | By Staff Correspondent | Published on 27th September 2020, 8:34 PM | National News |

ಹೊಸದಿಲ್ಲಿ: ರಾಜಕೀಯ ಬಿರುಗಾಳಿಯ ಕೇಂದ್ರ ಬಿಂದುವಾಗಿರುವ ಎಲ್ಲ ಮೂರು ಕೃಷಿ ವಿಧೇಯಕಗಳಿಗೆ ರಾಷ್ಟ್ರಪತಿ ರಾಮನಾಥ ಕೋವಿಂದ್ ಇಂದು ಅಂಕಿತ ಹಾಕಿದರು.

ಕಳೆದ ವಾರ ವಿಪಕ್ಷಗಳ ಕೋಲಾಹಲದ ನಡುವೆ ಎರಡು ಮಸೂದೆಗಳು ರಾಜ್ಯಸಭೆಯಲ್ಲಿ ಅಂಗೀಕೃತವಾಗಿದ್ದವು. ವಿಧೇಯಕಗಳಿಗೆ ಅಂಕಿತ ಹಾಕದೇ ಸಂಸತ್ತಿನ ಮರು ಪರಿಶೀಲನೆಗೆ ಅದನ್ನು ವಾಪಸ್ ಕಳುಹಿಸಿ ಎಂದು ಗುಲಾಂ ನಬಿ ಆಝಾದ್ ನೇತೃತ್ವದಲ್ಲಿ ರಾಷ್ಟ್ರಪತಿಭವನಕ್ಕೆ ತೆರಳಿದ್ದ ಕಾಂಗ್ರೆಸ್ ನೇತೃತ್ವದ ವಿರೋಧ ಪಕ್ಷಗಳು ವಿನಂತಿಸಿದ್ದವು.

ಜೂನ್ ನಲ್ಲಿ ಸರಕಾರ ಹೊರಡಿಸಿರುವ ಸುಗ್ರೀವಾಜ್ಞೆಯು ಈಗ ಮಸೂದೆಯಾಗಿ ಪರಿವರ್ತಿತವಾಗಿದ್ದು, ರೈತರಲ್ಲಿ ಈ ಮಸೂದೆ ಆತಂಕ ಮೂಡಿಸಿದೆ. ಇದು ರೈತರ ವಿರೋಧಿ ಎಂದು ದೂಷಿಸಲಾಗುತ್ತಿದೆ.ಈ ವಾರಾರಂಭದಲ್ಲಿ ಸಾವಿರಾರೂ ಸಂಖ್ಯೆಯಲ್ಲಿ ಜಮಾಯಿಸಿರುವ ರೈತರು ಮಸೂದೆಗಳನ್ನು ವಿರೋಧಿಸಿದ್ದರು. ಪಂಜಾಬ್  ಹಾಗೂ ಹರಿಯಾಣ ರಾಜ್ಯಗಳಲ್ಲಿ ರೃತರ ಪ್ರತಿಭಟನೆಯ ಕಾವು ಜೋರಾಗಿದೆ.

Read These Next

ಅಣಕು ಮತದಾನದ ವೇಳೆ ಬಿಜೆಪಿಗೆ ಮತ

ಕೇರಳದ ಕಾಸರಗೋಡಿನಲ್ಲಿ ಅಣಕು ಮತದಾನದವೇಳೆ ಇವಿಎಂಗಳು ತಪ್ಪಾಗಿ ಬಿಜೆಪಿ ಪರವಾಗಿ ಮತಗಳನ್ನು ದಾಖಲಿಸಿವೆ ಎಂದು ಅರ್ಜಿದಾರರೊಬ್ಬರು ...

ಚುನಾವಣಾ ಪ್ರಕ್ರಿಯೆಯಲ್ಲಿ ಪಾವಿತ್ರ್ಯವಿರಬೇಕು; ಆಯೋಗಕ್ಕೆ ಹೇಳಿದ ಸುಪ್ರೀಂ ಕೋರ್ಟ್

ಚುನಾವಣಾ ಪ್ರಕ್ರಿಯೆ ಯಲ್ಲಿ ಪಾವಿತ್ರ್ಯವಿರಬೇಕು ಎಂದು ಚುನಾವಣಾ ಆಯೋಗಕ್ಕೆ ಇಂದು ಸುಪ್ರೀಂ ಕೋರ್ಟ್ ಹೇಳಿದೆಯಲ್ಲದೆ ಸ್ವತಂತ್ರ ...

'ಚುನಾವಣಾ ಬಾಂಡ್' ವಿಶ್ವದ ದೊಡ್ಡ ಹಗರಣ; ಬಿಜೆಪಿ ವಿರುದ್ಧ ರಾಹುಲ್‌ ಗಾಂಧಿ ವಾಗ್ದಾಳಿ

ಬಿಜೆಪಿಯ ಚುನಾ ವಣಾ ಬಾಂಡ್ ವಿಶ್ವದ ಅತ್ಯಂತ ದೊಡ್ಡ ಹಗರಣವಾಗಿದ್ದು, ಗೂಂಡಾಗಳ ರೀತಿಯಲ್ಲಿ ಕೆಲವು ಉದ್ಯಮಿಗಳನ್ನು ಬೆದರಿಸಿ ಹಫ್ತಾ ...

ಗುಂಪಿನಿಂದ ಹತ್ಯೆ, ಗೋರಕ್ಷಣೆ ಹೆಸರಿನಲ್ಲಿ ಹಿಂಸಾಚಾರ ತಡೆಯಲು ಕೈಗೊಂಡ ಕ್ರಮಗಳ ಬಗ್ಗೆ ತಿಳಿಸಿ; ರಾಜ್ಯಗಳಿಗೆ ಸುಪ್ರೀಂ ಸೂಚನೆ

ಗುಂಪಿನಿಂದ ಥಳಿಸಿ ಹತ್ಯೆ ಮತ್ತು ಗೋರಕ್ಷಣೆಯ ಹೆಸರಿನಲ್ಲಿ ಹಿಂಸಾಚಾರದ ಘಟನೆಗಳನ್ನು ತಡೆಯಲು ಕೈಗೊಂಡಿರುವ ಕ್ರಮಗಳ ಬಗ್ಗೆ ಆರು ...