ಪ್ರಧಾನಿಯಿಂದ ಎಲ್‌ಪಿಜಿ ಪೈಪ್‌ಲೈನ್ ಉದ್ಘಾಟನೆ: ಬಿಹಾರ, ಪೂರ್ವ ಭಾರತದ ಅಭಿವೃದ್ಧಿಗೆ ಬದ್ಧವಿರುವುದಾಗಿ ಪುನರುಚ್ಛಾರ

Source: UNI | Published on 13th September 2020, 7:47 PM | National News | Don't Miss |

ಪಾಟ್ನಾ: ದುರ್ಗಾಪುರ-ಬಂಕಾ ವಿಭಾಗದ ಎಲ್ ಪಿಜಿ ಪೈಪ್ ಲೈನ್ ಅನ್ನು ಭಾನುವಾರ ಉದ್ಘಾಟಿಸಿರುವ ಪ್ರಧಾನಿ ನರೇಂದ್ರ ಮೋದಿ, ಪೂರ್ವ ಭಾರತ ಮತ್ತು ಬರುವ ಅಕ್ಟೋಬರ್-ನವೆಂಬರ್ ನಲ್ಲಿ ವಿಧಾನಸಭೆ ಚುನಾವಣೆ ನಡೆಯುವ ಬಿಹಾರದ ಅಭಿವೃದ್ಧಿಗೆ ತಮ್ಮ ಬದ್ಧತೆಯನ್ನು ಪುನರುಚ್ಚರಿಸಿದ್ದಾರೆ. 
ಎಲ್ ಪಿ ಜಿ ಪೈಪ್ ಲೈನ್ ,  ಬಂಕಾ ಹಾಗೂ ಪೂರ್ವ ಚಂಪಾರಣ್ ನಲ್ಲಿ ಎರಡು ಎಲ್ ಪಿಜಿ ಬಾಟ್ಲಿಂಗ್ ಸ್ಥಾವರಗಳನ್ನು ವಿಡಿಯೋ ಕಾನ್ಫರೆನ್ಸ್ ಮೂಲಕ ಉದ್ಘಾಟಿಸಿ ಮಾತನಾಡಿದ ಪ್ರಧಾನಿ, ಬಿಹಾರ ಮತ್ತು ಪೂರ್ವ ಭಾರತದ ಅಭಿವೃದ್ಧಿಗೆ ತಮ್ಮ ಸರ್ಕಾರ ಬದ್ಧವಾಗಿದೆ ಎಂದು ಹೇಳಿದ್ದಾರೆ.  
ಬಿಹಾರ ಮತ್ತು ಪೂರ್ವ ಭಾಗದ ಪ್ರದೇಶಗಳು ಅಭಿವೃದ್ಧಿ ಹೊಂದದ ಹೊರತು ಭಾರತ ಅಭಿವೃದ್ಧಿ ಹೊಂದಿದ ದೇಶವಾಗಲು ಸಾಧ್ಯವಿಲ್ಲ ಎಂದು ತಾವು ಬಹಳ ಹಿಂದಿನಿಂದಲೂ ಹೇಳುತ್ತಾ ಬಂದಿರುವುದಾಗಿ ಅವರು ಹೇಳಿದ್ದಾರೆ. 
ಕೊರೊನವೈರಸ್ ಸಾಂಕ್ರಾಮಿಕ ರೋಗದ ಸಮಯದಲ್ಲಿ ಅನೇಕ ತೊಂದರೆಗಳು ಎದುರಾದರೂ ನಿಗದಿತ ಸಮಯದಲ್ಲಿ ಇಂದು ಉದ್ಘಾಟಿಸಿದ ಎಲ್ ಪಿಜಿ ಯೋಜನೆಗಳು ಪೂರ್ಣಗೊಂಡಿವೆ. ಕೋಟ್ಯಂತರ ರೂ ವೆಚ್ಚದ ಈ ಯೋಜನೆಗಳು ಅಭಿವೃದ್ಧಿಯ ವೇಗವನ್ನು ಹೆಚ್ಚಿಸಲು ಖಂಡಿತವಾಗಿಯೂ ನೆರವಾಗುತ್ತವೆ. ಎಲ್ ಪಿಜಿ ಯೋಜನೆಗಗಳು ಪೂರ್ಣಗೊಂಡ ನಂತರ ಬಿಹಾರ ಅಭಿವೃದ್ಧಿಯಾಗಲಿದ್ದು ಮತ್ತು ಹೆಚ್ಚಿನ ಉದ್ಯೋಗಾವಕಾಶ ಸೃಷ್ಟಿಯಾಗಲಿದೆ ಎಂದು ಮೋದಿ ಹೇಳಿದ್ದಾರೆ.
ಎಲ್ ಪಿಜಿ ಯೋಜನೆಗಳು ಪೂರ್ಣಗೊಂಡ ನಂತರ ಬಿಹಾರದಲ್ಲಿ ಅನಿಲ ಆಧಾರಿತ ಆರ್ಥಿಕತೆ ವೃದ್ಧಿಸಲಿದೆ. ಕರೋನಾ ಸಾಂಕ್ರಾಮಿಕ ಸಮಯದಲ್ಲೂ  ಬಿಹಾರದಲ್ಲಿ ಅಭಿವೃದ್ಧಿಯ ವೇಗ ಅಡೆತಡೆಯಿಲ್ಲದೆ ಮುಂದುವರಿದಿದೆ. ಸಂಕಷ್ಟದ ಈ ಹಂತದಲ್ಲಿ ರಾಜ್ಯದ ಜನರು ದುಡಿದಿರುವುದು ಇದು ನಿಜಕ್ಕೂ ಶ್ಲಾಘನೀಯ ಎಂದು ಪ್ರಧಾನಿ ಹೇಳಿದ್ದಾರೆ.  

Read These Next

ಪ್ರಧಾನಿ ಮೋದಿಯಿಂದ ದ್ವೇಷ ಭಾಷಣ! ಚುನಾವಣಾ ಆಯೋಗದ ನಿಷ್ಕ್ರಿಯತೆಗೆ ಪ್ರತಿಪಕ್ಷಗಳ ಆಕ್ರೋಶ

ಪ್ರಧಾನಿ ನರೇಂದ್ರ ಮೋದಿಯವರು ಮುಸ್ಲಿಮ್ ಸಮುದಾಯದ ವಿರುದ್ದ ಆಕ್ಷೇಪಕಾರಿ ಭಾಷಣಗೈದು ತೀವ್ರ ವಿವಾದಕ್ಕೆ ಗುರಿಯಾಗಿದ್ದಾರೆ. ...

ಅಣಕು ಮತದಾನದ ವೇಳೆ ಬಿಜೆಪಿಗೆ ಮತ

ಕೇರಳದ ಕಾಸರಗೋಡಿನಲ್ಲಿ ಅಣಕು ಮತದಾನದವೇಳೆ ಇವಿಎಂಗಳು ತಪ್ಪಾಗಿ ಬಿಜೆಪಿ ಪರವಾಗಿ ಮತಗಳನ್ನು ದಾಖಲಿಸಿವೆ ಎಂದು ಅರ್ಜಿದಾರರೊಬ್ಬರು ...

ಚುನಾವಣಾ ಪ್ರಕ್ರಿಯೆಯಲ್ಲಿ ಪಾವಿತ್ರ್ಯವಿರಬೇಕು; ಆಯೋಗಕ್ಕೆ ಹೇಳಿದ ಸುಪ್ರೀಂ ಕೋರ್ಟ್

ಚುನಾವಣಾ ಪ್ರಕ್ರಿಯೆ ಯಲ್ಲಿ ಪಾವಿತ್ರ್ಯವಿರಬೇಕು ಎಂದು ಚುನಾವಣಾ ಆಯೋಗಕ್ಕೆ ಇಂದು ಸುಪ್ರೀಂ ಕೋರ್ಟ್ ಹೇಳಿದೆಯಲ್ಲದೆ ಸ್ವತಂತ್ರ ...

ಮನೆಯಿಂದ‌ ಮತದಾನ ಪ್ರಕ್ರಿಯೆಗೆ ಡಿ.ಸಿ. ಚಾಲನೆ. ಹಿರಿಯ ನಾಗರೀಕರು, ವಿಶೇಷ ಚೇತನರಿಂದ ಮತದಾನ

ಕಲಬುರಗಿ : ಸಾರ್ವತ್ರಿಕ ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ 85 ವರ್ಷ ಮೇಲ್ಪಟ್ಟ ಹಿರಿಯ ನಾಗರೀಕರು ಹಾಗೂ ವಿಶೇಷಚೇತನರು ಮನೆಯಿಂದಲೇ ಮತ ...

ಒತ್ತಡ ನಿರ್ವಹಣೆ ಸಮರ್ಪಕವಾಗಿ ನಿರ್ವಹಿಸಿ ಸದೃಢ ಆರೋಗ್ಯ ಕಾಯ್ದುಕೊಳ್ಳಿ: ಡಾ.ವೀರೇಂದ್ರ ಕುಮಾರ್

ಬಳ್ಳಾರಿ : ಮಾನಸಿಕ ಆರೋಗ್ಯದ ಸದೃಢತೆಗೆ ಜೀವನದ ಪ್ರತಿಯೊಂದು ಕ್ಷಣಗಳನ್ನು ಸಮನಾಗಿ ಸ್ವೀಕರಿಸುವ ಮೂಲಕ ಆರೋಗ್ಯದ ಮೇಲುಂಟಾಗುವ ...