ಧರ್ಮ, ಜಾತಿ, ಲಿಂಗ, ಬಣ್ಣ, ವರ್ಗ ಮೀರಿ ಮಾನವೀಯ ಸಂಬಂಧ, ಏಕತೆ ಸಾರುವ ಶಕ್ತಿ ಯೋಗಕ್ಕಿದೆ: ಪ್ರಧಾನಿ ಮೋದಿ

Source: PTI | Published on 21st June 2020, 4:59 PM | National News | Don't Miss |

ನವದೆಹಲಿ: ಎಲ್ಲರೂ ತಮ್ಮ ಮನೆಯಲ್ಲಿ ಯೋಗದ ಮೂಲಕ ಕುಟುಂಬ ಸಂಬಂಧವನ್ನು ಹೆಚ್ಚಿಸುವ ಸಂದರ್ಭ ಇದಾಗಿದೆ ಎಂದು ಪ್ರಧಾನ ಮಂತ್ರಿ ನರೇಂದ್ರ ಮೋದಿ ಹೇಳಿದ್ದಾರೆ.
6ನೇ ಅಂತಾರಾಷ್ಟ್ರೀಯ ಯೋಗ ದಿನದ ಅಂಗವಾಗಿ ದೆಹಲಿಯಲ್ಲಿ ಇಂದು ಭಾಷಣ ಮಾಡಿದ ಅವರು, ಪ್ರತಿಕೂಲ ಪರಿಸ್ಥಿತಿಗಳನ್ನು ಎದುರಿಸಲು ಮನಸ್ಸಿನಲ್ಲಿ ಆತ್ಮವಿಶ್ವಾಸ ವೃದ್ಧಿಸಲು ಯೋಗ ಸಹಕಾರಿಯಾಗಿದೆ. ದೃಢ, ಆರೋಗ್ಯ ಸಮಾಜ ನಿರ್ಮಾಣಕ್ಕೆ ಯೋಗ ಮಾಡುವುದು ಅತ್ಯಂತ ಉಪಕಾರಿ. ನಮ್ಮಲ್ಲಿ ಏಕತೆ, ಒಗ್ಗಟ್ಟನ್ನು ಯೋಗ ಹೆಚ್ಚಿಸಿ ಮಾನವೀಯ ಸಂಬಂಧಗಳನ್ನು ಇನ್ನಷ್ಟು ಗಟ್ಟಿಗೊಳಿಸುತ್ತದೆ ಎಂದು ಹೇಳಿದರು.
ನಮ್ಮ ಆರೋಗ್ಯ ಮತ್ತು ಭರವಸೆಯ ಸ್ವರಮೇಳವನ್ನು ಉತ್ತಮಗೊಳಿಸಲು, ಆರೋಗ್ಯಕರ ಮತ್ತು ಸಂತೋಷದ ಮಾನವೀಯತೆಯ ಯಶಸ್ಸಿಗೆ ಜಗತ್ತು ಸಾಕ್ಷಿಯಾಗುವ ದಿನ ದೂರವಿಲ್ಲ. ಇದನ್ನು ಮಾಡಲು ಯೋಗ ಖಂಡಿತವಾಗಿಯೂ ನಮಗೆ ಸಹಾಯ ಮಾಡುತ್ತದೆ, ಯೋಗವು ಏಕತೆಯ ಶಕ್ತಿಯಾಗಿ ಹೊರಹೊಮ್ಮಿದೆ; ಯೋಗ ಮಾಡುವುದಕ್ಕೆ ಯಾವುದೇ ಜನಾಂಗ, ಬಣ್ಣ, ಲಿಂಗ, ನಂಬಿಕೆ ಮತ್ತು ರಾಷ್ಟ್ರಗಳ ತಾರತಮ್ಯವಿಲ್ಲ, ಇವೆಲ್ಲಕ್ಕೂ ನೀರಿದ ಶಕ್ತಿ ಇರುವುದು ಯೋಗಕ್ಕೆ ಎಂದು ಬಣ್ಣಿಸಿದರು.
ಈ ವರ್ಷದ ಯೋಗ ದಿನದ ಧ್ಯೇಯವಾಕ್ಯ ಮನೆಯಲ್ಲಿಯೇ ಯೋಗ ಎಂಬುದಾಗಿದ್ದು ಕೋವಿಡ್-19 ಸಾಂಕ್ರಾಮಿಕ ರೋಗದಿಂದಾಗಿ ಇಂದು ಯಾವುದೇ ಸಾರ್ವಜನಿಕ ಸಮಾರಂಭಗಳನ್ನು ಮತ್ತು ಕಾರ್ಯಕ್ರಮಗಳನ್ನು ಆಯೋಜಿಸಿಲ್ಲ ಎಂದರು.
ವಿಶ್ವಸಂಸ್ಥೆಯ ಸಾಮಾನ್ಯ ಸಭೆಯಲ್ಲಿ 2014ರ ಸೆಪ್ಟೆಂಬರ್ 27ರಂದು ಪ್ರಧಾನಿ ನರೇಂದ್ರ ಮೋದಿ ಅಂತಾರಾಷ್ಟ್ರೀಯ ಯೋಗ ದಿನ ಆಚರಿಸುವ ಬಗ್ಗೆ ಪ್ರಸ್ತಾವನೆ ಮುಂದಿಟ್ಟಿದ್ದರು. ಅದನ್ನು ಎಲ್ಲಾ ರಾಷ್ಟ್ರಗಳು ಒಪ್ಪಿ ಮರುವರ್ಷದಿಂದ 2015ರಿಂದ ಜೂನ್ 21ನ್ನು ಅಂತಾರಾಷ್ಟ್ರೀಯ ಯೋಗ ದಿನವೆಂದು ಆಚರಿಸಿಕೊಂಡು ಬರಲಾಗುತ್ತಿದೆ.

 

Read These Next

ಪ್ರಧಾನಿ ಮೋದಿಯಿಂದ ದ್ವೇಷ ಭಾಷಣ! ಚುನಾವಣಾ ಆಯೋಗದ ನಿಷ್ಕ್ರಿಯತೆಗೆ ಪ್ರತಿಪಕ್ಷಗಳ ಆಕ್ರೋಶ

ಪ್ರಧಾನಿ ನರೇಂದ್ರ ಮೋದಿಯವರು ಮುಸ್ಲಿಮ್ ಸಮುದಾಯದ ವಿರುದ್ದ ಆಕ್ಷೇಪಕಾರಿ ಭಾಷಣಗೈದು ತೀವ್ರ ವಿವಾದಕ್ಕೆ ಗುರಿಯಾಗಿದ್ದಾರೆ. ...

ಅಣಕು ಮತದಾನದ ವೇಳೆ ಬಿಜೆಪಿಗೆ ಮತ

ಕೇರಳದ ಕಾಸರಗೋಡಿನಲ್ಲಿ ಅಣಕು ಮತದಾನದವೇಳೆ ಇವಿಎಂಗಳು ತಪ್ಪಾಗಿ ಬಿಜೆಪಿ ಪರವಾಗಿ ಮತಗಳನ್ನು ದಾಖಲಿಸಿವೆ ಎಂದು ಅರ್ಜಿದಾರರೊಬ್ಬರು ...

ಚುನಾವಣಾ ಪ್ರಕ್ರಿಯೆಯಲ್ಲಿ ಪಾವಿತ್ರ್ಯವಿರಬೇಕು; ಆಯೋಗಕ್ಕೆ ಹೇಳಿದ ಸುಪ್ರೀಂ ಕೋರ್ಟ್

ಚುನಾವಣಾ ಪ್ರಕ್ರಿಯೆ ಯಲ್ಲಿ ಪಾವಿತ್ರ್ಯವಿರಬೇಕು ಎಂದು ಚುನಾವಣಾ ಆಯೋಗಕ್ಕೆ ಇಂದು ಸುಪ್ರೀಂ ಕೋರ್ಟ್ ಹೇಳಿದೆಯಲ್ಲದೆ ಸ್ವತಂತ್ರ ...

ಮನೆಯಿಂದ‌ ಮತದಾನ ಪ್ರಕ್ರಿಯೆಗೆ ಡಿ.ಸಿ. ಚಾಲನೆ. ಹಿರಿಯ ನಾಗರೀಕರು, ವಿಶೇಷ ಚೇತನರಿಂದ ಮತದಾನ

ಕಲಬುರಗಿ : ಸಾರ್ವತ್ರಿಕ ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ 85 ವರ್ಷ ಮೇಲ್ಪಟ್ಟ ಹಿರಿಯ ನಾಗರೀಕರು ಹಾಗೂ ವಿಶೇಷಚೇತನರು ಮನೆಯಿಂದಲೇ ಮತ ...

ಒತ್ತಡ ನಿರ್ವಹಣೆ ಸಮರ್ಪಕವಾಗಿ ನಿರ್ವಹಿಸಿ ಸದೃಢ ಆರೋಗ್ಯ ಕಾಯ್ದುಕೊಳ್ಳಿ: ಡಾ.ವೀರೇಂದ್ರ ಕುಮಾರ್

ಬಳ್ಳಾರಿ : ಮಾನಸಿಕ ಆರೋಗ್ಯದ ಸದೃಢತೆಗೆ ಜೀವನದ ಪ್ರತಿಯೊಂದು ಕ್ಷಣಗಳನ್ನು ಸಮನಾಗಿ ಸ್ವೀಕರಿಸುವ ಮೂಲಕ ಆರೋಗ್ಯದ ಮೇಲುಂಟಾಗುವ ...