ಪ್ರಧಾನಮಂತ್ರಿ 15ಅಂಶಗಳ ಕಾರ್ಯಕ್ರಮ ಸಮರ್ಪಕ ಅನುಷ್ಟಾನಗೊಳಿಸಬೇಕು: ಜಿಲ್ಲಾಧಿಕಾರಿ ಕೆ.ಎ.ದಯಾನಂದ

Source: so news | By MV Bhatkal | Published on 18th June 2019, 9:39 PM | State News | Don't Miss |

ಶಿವಮೊಗ್ಗ: ಪ್ರಧಾನಮಂತ್ರಿಗಳ ಹೊಸ 15ಅಂಶಗಳ ಕಾರ್ಯಕ್ರಮದಡಿಯಲ್ಲಿ ವಿವಿಧ ಇಲಾಖೆಗಳಲ್ಲಿ ಅಲ್ಪಸಂಖ್ಯಾತರ ಕಲ್ಯಾಣಕ್ಕಾಗಿ ಜಾರಿಗೊಳಿಸಲಾಗಿರುವ ಯೋಜನೆಗಳನ್ನು ಸಮರ್ಪಕವಾಗಿ ಅನುಷ್ಟಾನಗೊಳಿಸಬೇಕು ಎಂದು ಜಿಲ್ಲಾಧಿಕಾರಿ ಕೆ.ಎ.ದಯಾನಂದ ಅವರು ತಿಳಿಸಿದರು.
ಅವರು ಮಂಗಳವಾರ ಜಿಲ್ಲಾಧಿಕಾರಿ ಕಚೇರಿಯಲ್ಲಿ ಪ್ರಧಾನಮಂತ್ರಿಗಳ ಹೊಸ 15ಅಂಶಗಳ ಕಾರ್ಯಕ್ರಮದ ಪ್ರಗತಿ ಪರಿಶೀಲನೆ ನಡೆಸಿದರು.
ಎಲ್ಲಾ ಇಲಾಖೆಗಳಲ್ಲಿನ ಅನುದಾನದ ಶೇ.15ರಷ್ಟನ್ನು ಜೈನರು, ಸಿಖ್ಖರು, ಪಾರ್ಸಿಗಳು, ಮುಸ್ಲಿಮರು, ಕ್ರೈಸ್ತರು ಹಾಗೂ ಬೌದ್ಧರನ್ನು ಒಳಗೊಂಡ ಅಲ್ಪಸಂಖ್ಯಾತ ಸಮುದಾಯದ ಜನರ ಅಭಿವೃದ್ಧಿಗಾಗಿ ಮೀಸಲಿರಿಸಿ ಅನುಷ್ಟಾನಗೊಳಿಸಲು ಸರ್ಕಾರ ಆದೇಶ ಹೊರಡಿಸಿದೆ. ಆದರೆ ಹಲವು ಇಲಾಖೆಗಳಲ್ಲಿ ಅಲ್ಪಸಂಖ್ಯಾತರಿಗಾಗಿ ನಿಗದಿಪಡಿಸಿರುವ ಯೋಜನೆಗಳನ್ನು ಸಮರ್ಪಕವಾಗಿ ಅನುಷ್ಟಾನಗೊಳಿಸಿರುವುದಿಲ್ಲ. ಅರ್ಜಿಗಳು ಬರಲಿಲ್ಲ ಎಂದು ನೆಪಗಳನ್ನು ಹೇಳದೆ ಲಭ್ಯ ಯೋಜನೆಗಳ ಕುರಿತು ಜನರಿಗೆ ಮಾಹಿತಿಯನ್ನು ನೀಡಿ ಅನುಷ್ಟಾನಗೊಳಿಸಬೇಕು ಎಂದು ಅವರು ಹೇಳಿದರು.
ಶಿಕ್ಷಣ ಇಲಾಖೆ, ಜಿಲ್ಲಾ ಕೈಗಾರಿಕಾ ಕೇಂದ್ರ, ಕೃಷಿ ಇಲಾಖೆ, ಕಾರ್ಮಿಕ ಇಲಾಖೆ, ತೋಟಗಾರಿಕಾ ಇಲಾಖೆ, ಪಶುಪಾಲನಾ ಮತ್ತು ಪಶು ಸಂಗೋಪನಾ ಇಲಾಖೆ, ಮೀನುಗಾರಿಕೆ ಇಲಾಖೆ, ರೇಷ್ಮೆ ಇಲಾಖೆ, ಜಿಲ್ಲಾ ನಗರಾಭಿವೃದ್ಧಿ ಕೋಶ, ಕೊಳಚೆಗೇರಿ ಅಭಿವೃದ್ಧಿ ಮಂಡಳಿ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ, ವಸತಿ ಯೋಜನೆಗಳು ಸೇರಿದಂತೆ ಪ್ರಮುಖ ಇಲಾಖೆಗಳಲ್ಲಿ ಅಲ್ಪಸಂಖ್ಯಾತರಿಗಾಗಿ ಪ್ರತ್ಯೇಕ ನಿಧಿಯನ್ನು ಮೀಸಲಿರಿಸಲಾಗಿದ್ದು, ಕಾಲಮಿತಿಯ ಒಳಗಾಗಿ ಅನುಷ್ಟಾನಗೊಳಿಸಬೇಕು ಎಂದು ಅವರು ಸ್ಪಷ್ಟಪಡಿಸಿದರು.
ಕೃಷಿ ಇಲಾಖೆಯಲ್ಲಿ ಕಳೆದ ಸಾಲಿನಲ್ಲಿ ಅಲ್ಪಸಂಖ್ಯಾತರಿಗಾಗಿ ರಾಜ್ಯ ವಲಯದಲ್ಲಿ 1.97ಕೋಟಿ ರೂ. ಅನುದಾನ ನಿಗದಿಪಡಿಸಲಾಗಿದ್ದು, ಕೇವಲ 62ಲಕ್ಷ ರೂ. ವೆಚ್ಚ ಮಾಡಲಾಗಿದೆ. ಕೃಷಿ ಯಾಂತ್ರೀಕರಣದಲ್ಲಿ ಶೇ.9ರಷ್ಟು, ಕೃಷಿ ಸಂಸ್ಕರಣಾ ಘಟಕದಲ್ಲಿ ಶೇ.3ರಷ್ಟು, ಸೂಕ್ಷ್ಮ ನೀರಾವರಿ ಯೋಜನೆಯಡಿ ಕೇವಲ ಶೇ.3ರಷ್ಟು ಪ್ರಗತಿ ಸಾಧಿಸಲಾಗಿದ್ದು, ಒಟ್ಟಾರೆಯಾಗಿ ಶೇ.6ರಷ್ಟು ಮಾತ್ರ ಪ್ರಗತಿ ಸಾಧಿಸಲಾಗಿದೆ. ಇದೇ ರೀತಿ ಜಿಲ್ಲಾ ವಲಯದಲ್ಲಿ ಶೇ.3ರಷ್ಟು ಹಾಗೂ ಕೇಂದ್ರ ಪುರಸ್ಕøತ ಯೋಜನೆಗಳಲ್ಲಿ ಶೇ.4ರಷ್ಟು ಮಾತ್ರ ಪ್ರಗತಿ ಇದೆ.
ತೋಟಗಾರಿಕಾ ಇಲಾಖೆಯಲ್ಲಿ ಕಳೆದ ಸಾಲಿನಲ್ಲಿ ಕೇಂದ್ರ ಪುರಸ್ಕøತ ಯೋಜನೆಯಡಿ 18.95ಕೋಟಿ ರೂ. ಅನುದಾನ ಬಿಡುಗಡೆಯಾಗಿದ್ದು, ಕೇವಲ 26ಲಕ್ಷ ರೂ. ವೆಚ್ಚ ಮಾಡಲಾಗಿದೆ. ರಾಜ್ಯ ಯೋಜನೆಯಡಿ 3.11ಕೋಟಿ ರೂ. ಬಿಡುಗಡೆಯಾಗಿದ್ದು 18ಲಕ್ಷ ರೂ. ವೆಚ್ಚವಾಗಿದೆ. ಜಿಲ್ಲಾ ಯೋಜನೆಯಡಿ 91ಲಕ್ಷ ರೂ. ಬಿಡುಗಡೆಯಾಗಿದ್ದು 5ಲಕ್ಷ ರೂ. ವೆಚ್ಚ ಮಾಡಲಾಗಿದೆ.
ಮೀನುಗಾರಿಕಾ ಇಲಾಖೆಯಲ್ಲಿ ಒಟ್ಟು 12.80ಲಕ್ಷ ರೂ. ಬಿಡುಗಡೆಯಾಗಿದ್ದು, 1.80ಲಕ್ಷ ರೂ. ವೆಚ್ಚ ಮಾಡಲಾಗಿದೆ. ರೇಷ್ಮೆ ಇಲಾಖೆಯಲ್ಲಿ 69ಲಕ್ಷ ರೂ. ಬಿಡುಗಡೆಯಾಗಿದ್ದು, 3.54ಲಕ್ಷ ರೂ. ವೆಚ್ಚ ಮಾಡಲಾಗಿದೆ. ಜಿಲ್ಲಾ ಕೈಗಾರಿಕಾ ಕೇಂದ್ರದ ಅಡಿಯಲ್ಲಿ ಪ್ರಧಾನಮಂತ್ರಿಗಳ ಉದ್ಯೋಗ ಸೃಜನೆ ಯೋಜನೆಯಡಿ 40ಭೌತಿಕ ಗುರಿ ಇದ್ದು ಕೇವಲ 5 ಗುರಿ ಸಾಧಿಸಲಾಗಿದೆ. ಈ ಅವಧಿಯಲ್ಲಿ 1ಕೋಟಿ ರೂ. ಗುರಿ ನಿಗದಿಪಡಿಸಲಾಗಿದ್ದು, 9.76ಲಕ್ಷ ರೂ. ವೆಚ್ಚ ಮಾಡಲಾಗಿದೆ. ಮುಖ್ಯಮಂತ್ರಿಗಳ ಸ್ವಯಂ ಉದ್ಯೋಗ ಸೃಜನೆ ಯೋಜನೆಯಡಿ 43 ಭೌತಿಕ ಗುರಿ ಇದ್ದು ಕೇವಲ 2 ಗುರಿ ಸಾಧಿಸಲಾಗಿದೆ. 1.20 ಕೋಟಿ ರೂ. ಗುರಿ ನಿಗದಿ ಪಡಿಸಲಾಗಿದ್ದು 2.90 ಲಕ್ಷ ರೂ. ವೆಚ್ಚ ಮಾಡಲಾಗಿದೆ.
ಯೋಜನೆಗಳ ಬಗ್ಗೆ ಅಲ್ಪಸಂಖ್ಯಾತ ಸಮುದಾಯದಲ್ಲಿ ಅರಿವು ಮೂಡಿಸುವ ಕಾರ್ಯವನ್ನು ಇಲಾಖೆ ವತಿಯಿಂದ ಮಾಡಬೇಕು. ನಿಗದಿತ ಗುರಿಯನ್ನು ಸಾಧಿಸದೇ ಇರುವ ಇಲಾಖೆಗಳು ಅಧಿಕಾರಿಗಳನ್ನು ಜವಾಬ್ದಾರರನ್ನಾಗಿ ಮಾಡಲಾಗುವುದು ಎಂದು ಅವರು ಹೇಳಿದರು.
ಜಿಲ್ಲಾ ಪಂಚಾಯತ್ ಉಪ ಕಾರ್ಯದರ್ಶಿ ರಂಗಸ್ವಾಮಿ, ಅಲಸ್ಪಂಖ್ಯಾತ ಕಲ್ಯಾಣ ಅಧಿಕಾರಿ ಧರ್ಮಪ್ಪ ಮತ್ತಿತರರು ಉಪಸ್ಥಿತರಿದ್ದರು.

Read These Next

'ಚುನಾವಣಾ ಬಾಂಡ್' ವಿಶ್ವದ ದೊಡ್ಡ ಹಗರಣ; ಬಿಜೆಪಿ ವಿರುದ್ಧ ರಾಹುಲ್‌ ಗಾಂಧಿ ವಾಗ್ದಾಳಿ

ಬಿಜೆಪಿಯ ಚುನಾ ವಣಾ ಬಾಂಡ್ ವಿಶ್ವದ ಅತ್ಯಂತ ದೊಡ್ಡ ಹಗರಣವಾಗಿದ್ದು, ಗೂಂಡಾಗಳ ರೀತಿಯಲ್ಲಿ ಕೆಲವು ಉದ್ಯಮಿಗಳನ್ನು ಬೆದರಿಸಿ ಹಫ್ತಾ ...

ಸಂವಿಧಾನ ಮತ್ತು  ಪ್ರಜಾಪ್ರಭುತ್ವ ಉಳಿಸುವುದಕ್ಕೆ ಕಾಂಗ್ರೆಸ್ ಪಕ್ಷಕ್ಕೆ ಮತ ನೀಡಿ ಎಂದು ರಾಹುಲ್ ಗಾಂಧಿ ಕರೆ

ಮಾಲೂರು : ಈ ಲೋಕಸಭೆ ಚುನಾವಣೆಯು ಎರಡು ಸಿದ್ಧಾಂತಗಳ ನಡುವಿನ ಯುದ್ಧ ಇಂಡಿಯಾ ಬಣ ಒಂದು ಕಡೆ "ಸಂವಿಧಾನಕ್ಕಾಗಿ ಹೋರಾಟ" ನಡೆಸುತ್ತಿದೆ ...

ಭಟ್ಕಳ : ಈದುಲ್ ಫಿತ್ರ್ ನಿಮಿತ್ತ ಒಂದು ಲಕ್ಷ ಇಪ್ಪತ್ತು ಸಾವಿರಕ್ಕೂ ಅಧಿಕ ಫೀತ್ರ್ ಅಕ್ಕಿ ವಿತರಣೆ

ಭಟ್ಕಳ: ಈದುಲ್ ಫಿತ್ರ್ ಸಂದರ್ಭದಲ್ಲಿ ಪ್ರತಿಯೊಬ್ಬ ಮುಸ್ಲಿಮನು ತನ್ನ ಈದ್ ಹಬ್ಬಕ್ಕೆ ಒಂದು ಮುಂಚೆ ಕಡ್ಡಾಯವಾಗಿ ನೀಡುವ ಫಿತ್ರ್ ...

ಭಟ್ಕಳ ಸ್ಪೋರ್ಟ್ಸ್ ಅಕಾಡೆಮಿ ಮತ್ತು BMYF ಸಹಯೋಗದೊಂದಿಗೆ ಎ.20-21 ರಂದು ಯುವ ಪ್ರತಿಭೆಗಳಿಗಾಗಿ ಇಂಟರ್-ಕ್ರಿಕೆಟ್ ಲೀಗ್ ಆಯ್ಕೆ

ಭಟ್ಕಳ: ಉತ್ತರ ಕನ್ನಡ ಜಿಲ್ಲೆಯ ಉದಯೋನ್ಮುಖ ಕ್ರಿಕೆಟ್ ಪ್ರತಿಭೆಗಳನ್ನು ಗುರುತಿಸುವ ಮತ್ತು ಪೋಷಿಸುವ ಪ್ರಯತ್ನದಲ್ಲಿ, ಭಟ್ಕಳ ...