ಯಲ್ಲಾಪುರ : ತಾಲೂಕಿನ ಉಮ್ಮಚಗಿಯ ಸುಮೇರು ಜ್ಯೋತಿರ್ವನಮ್ ನಲ್ಲಿ ಭಾರತೀಯ ಜ್ಞಾನ ವಿಜ್ಞಾನ ಟ್ರಸ್ಟ್, ಆಪ್ಯಂ ಆಯುರ್ವೇದ ಪ್ರತಿಷ್ಠಾನ ಹಾಗೂ ಸಾತ್ವಿಕ ಫೌಂಡೇಶನ್ ಅವರ ಸಂಯುಕ್ತ ಆಶ್ರಯದಲ್ಲಿ ಆಯೋಜಿಸಿದ್ದ " ವೇದಾಯುರ್ಜ್ಯೋತಿಷಸಸ್ಯ ಸಮೀಕ್ಷಾ " ಕಾರ್ಯಕ್ರಮವನ್ನು ಕಾರ್ಮಿಕ ಖಾತೆ ಸಚಿವರಾದ ಶಿವರಾಮ ಹೆಬ್ಬಾರ್ ಅವರು ದೀಪ ಬೆಳಗಿಸುವುದರ ಮೂಲಕ ಉದ್ಘಾಟಿಸಿ ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಿದರು.
ಈ ಸಂದರ್ಭದಲ್ಲಿ ಸಂಘಟಕರು ಸಚಿವ ಶಿವರಾಮ ಹೆಬ್ಬಾರ್ ಅವರನ್ನು ಸನ್ಮಾನಿಸಿ ಗೌರವಿಸಿದರು, ಈ ಸಂದರ್ಭದಲ್ಲಿ ಜ್ಯೋತಿರ್ವನ ಸಂಸ್ಥಾಪಕ ನಾಗೇಶ ಭಟ್ಟ, ಎ.ಪಿ.ಎಮ್.ಸಿ ಅಧ್ಯಕ್ಷ ಎಮ್.ಜಿ.ಭಟ್ ಹಾಗೂ ಟ್ರಸ್ಟ್ ನ ಪ್ರಮುಖರು ಸ್ಥಳೀಯ ಮುಖಂಡರು ಉಪಸ್ಥಿತರಿದ್ದರು.