ಕಾರವಾರ: ಬಕ್ರೀದ್ ಹಬ್ಬದ ಸಮಯದಲ್ಲಿ ಕಾನೂನು ಮತ್ತು ಸುವ್ಯವಸ್ಥೆ ಕಾಪಾಡುವ ದೃಷ್ಟಿಯಿಂದ ಜಿಲ್ಲಾಧಿಕಾರಿ ಡಾ.ಹರೀಶ ಕುಮಾರ ಕೆ ಅವರು ಎಲ್ಲಾ ರೀತಿಯ ಮದ್ಯದ ಅಂಗಡಿ ವೈನ್ಶಾಪ ಮತ್ತು ಬಾರ್ಗಳನ್ನು ಬಂದ್ ಮಾಡುವಂತೆ ಆದೇಶ ಹೊರಡಿಸಿದ್ದಾರೆ.
ಜುಲೈ 31ರಂದು ಬೆಳಗ್ಗೆ 6 ಗಂಟೆಯಿಂದ ಅಗಸ್ಟ್ 1 ರ ಮಧ್ಯರಾತ್ರಿವರೆಗೆ ಹಳಿಯಾಳ ಮತ್ತು ದಾಂಡೇಲಿ ತಾಲೂಕುಗಳಲ್ಲಿ ಹಾಗೂ ಅಗಸ್ಟ್ 2 ರ ಮಧ್ಯರಾತ್ರಿವರೆಗೆ ಭಟ್ಕಳ ತಾಲೂಕು, ಅಗಸ್ಟ್ 1 ರಂದು ಬೆಳಗ್ಗೆ 6 ಗಂಟೆಯಿಂದ ಮಧ್ಯರಾತ್ರಿವರೆಗೆ ಹೊನ್ನಾವರ, ಕುಮುಟಾ, ಶಿರಸಿ, ಯಲ್ಲಾಪುರ, ಮುಂಡಗೋಡ, ಸಿದ್ದಾಪುರ ತಾಲೂಕುಗಳಲ್ಲಿ ಮದ್ಯ ಮಾರಾಟ ಹಾಗೂ ಸಾಗಾಟ ನಿಷೇಧಿಸಿ ಜಿಲ್ಲಾಧಿಕಾರಿ ಆದೇಶ ಹೊರಡಿಸಿದ್ದಾರೆ.