ಭಾರತೀಯ ಪೌರತ್ವ ಸಾಬೀತು ಪಡಿಸುವಂತೆ 120 ನಾಗರಿಕರಿಗೆ ನೋಟಿಸ್ ಜಾರಿ

Source: sonews | By Staff Correspondent | Published on 19th February 2020, 11:21 PM | National News | Don't Miss |

ಹೈದರಾಬಾದ್: ಕಾನೂನು ಬಾಹಿರವಾಗಿ ಆಧಾರ್ ಕಾರ್ಡ್ ಪಡೆದುಕೊಂಡಿರುವುದಾಗಿ ಆರೋಪಿಸಿರುವ ಭಾರತದ ಅನನ್ಯ ಗುರುತು ಪ್ರಾಧಿಕಾರ (ಯುಐಡಿಎಐ) ಪೌರತ್ವ ಸಾಬೀತುಪಡಿಸುವಂತೆ ಆಗ್ರಹಿಸಿ ನಗರದ 120 ಜನರಿಗೆ ನೋಟಿಸು ಜಾರಿ ಮಾಡಿದೆ.

ಪೊಲೀಸರಿಂದ ವರದಿ ಪಡೆದ ಬಳಿಕ ಈ ನೋಟಿಸು ಜಾರಿ ಮಾಡಲಾಗಿದೆ ಎಂದು ಯುಐಡಿಎಐ ಹೇಳಿದೆ. ‘‘ಆಧಾರ್ ಪೌರತ್ವಕ್ಕೆ ದಾಖಲೆಯಲ್ಲ. ಆಧಾರ್‌ಗೆ ಅರ್ಜಿ ಸಲ್ಲಿಸುವ ಮುನ್ನ 182 ದಿನಗಳ ಕಾಲ ಭಾರತದಲ್ಲಿ ವಾಸಿಸಿರಬೇಕು ಎಂದು ಖಚಿತಪಡಿಸಿಕೊಳ್ಳುವುದು ಆಧಾರ್ ಕಾಯ್ದೆ ಅಡಿಯಲ್ಲಿ ಯುಐಡಿಎಐ ಕಡ್ಡಾಯಗೊಳಿಸಿದೆ’’ ಎಂದು ಯುಐಡಿಎಐ ತನ್ನ ಹೇಳಿಕೆಯಲ್ಲಿ ತಿಳಿಸಿದೆ.

 ಅಕ್ರಮ ವಲಸಿಗರಿಗೆ ಆಧಾರ್ ಕಾರ್ಡ್ ನೀಡಬೇಡಿ ಎಂದು ಸುಪ್ರೀಂ ಕೋರ್ಟ್ ತನ್ನ ಐತಿಹಾಸಿಕ ತೀರ್ಪಿನಲ್ಲಿ ಹೇಳಿದೆ ಎಂದು ಅದು ತಿಳಿಸಿದೆ. ನೊಟೀಸ್ ಸ್ವೀಕರಿಸಿದವರು ಇದನ್ನು ಪ್ರಶ್ನಿಸಿ ಹೈಕೋರ್ಟ್‌ನ ಮೆಟ್ಟಿಲೇರಲು ಚಿಂತಿಸುತ್ತಿದ್ದಾರೆ. ಒಂದು ನೋಟಿಸ್ ಅನ್ನು ಇಲ್ಲಿನ ಹಳೆ ನಗರ ಪ್ರದೇಶದ ತಲಬಾ ಕಟ್ಟಾದ ನಿವಾಸಿ ಮುಹಮ್ಮದ್ ಸತ್ತಾರ್‌ಗೆ ರವಾನಿಸಲಾಗಿದೆ. ನೋಟಿಸ್‌ನಲ್ಲಿ ಮುಹಮ್ಮದ್ ಸತ್ತಾರ್ ಅವರು ಸುಳ್ಳು ಮಾಹಿತಿ ನೀಡಿ ಆಧಾರ್ ಕಾರ್ಡ್ ಪಡೆದುಕೊಂಡಿದ್ದಾರೆ ಹಾಗೂ ಅವರು ಭಾರತದ ಪ್ರಜೆ ಅಲ್ಲ ಎಂದು ಹೇಳಲಾಗಿದೆ.

 ‘‘ನಿಮ್ಮ ಪೌರತ್ವ ಸಾಬೀತುಪಡಿಸಿ. ನೀವು ಭಾರತೀಯ ಪ್ರಜೆ ಅಲ್ಲದೇ ಇದ್ದರೆ, ಭಾರತದ ಗಡಿಯನ್ನು ಕಾನೂನಾತ್ಮಕವಾಗಿ ಪ್ರವೇಶಿಸಿರುವುದನ್ನು ಹಾಗೂ ಕಾನೂನುಬದ್ಧವಾಗಿ ವಾಸಿಸುತ್ತಿರುವುದನ್ನು ಸಾಬೀತುಪಡಿಸಿ’’ ಎಂದು ಯುಐಡಿಎಐ ಸತ್ತಾರ್‌ಗೆ ನಿರ್ದೇಶಿಸಿದೆ. ಹಾಜರಾಗದೇ ಇದ್ದರೆ ಹಾಗೂ ಅಗತ್ಯ ಇರುವ ದಾಖಲೆಗಳನ್ನು ಸಲ್ಲಿಸದೇ ಇದ್ದರೇ ಪ್ರಕರಣವನ್ನು ಸ್ವಯಂ ಪ್ರೇರಿತವಾಗಿ ನಿರ್ಧರಿಸಲಾಗುವುದು ಎಂದು ಯುಐಡಿಎಐ ಸತ್ತಾರ್ ಅವರಿಗೆ ಎಚ್ಚರಿಕೆ ನೀಡಿದೆ.

Read These Next

ಅಣಕು ಮತದಾನದ ವೇಳೆ ಬಿಜೆಪಿಗೆ ಮತ

ಕೇರಳದ ಕಾಸರಗೋಡಿನಲ್ಲಿ ಅಣಕು ಮತದಾನದವೇಳೆ ಇವಿಎಂಗಳು ತಪ್ಪಾಗಿ ಬಿಜೆಪಿ ಪರವಾಗಿ ಮತಗಳನ್ನು ದಾಖಲಿಸಿವೆ ಎಂದು ಅರ್ಜಿದಾರರೊಬ್ಬರು ...

ಚುನಾವಣಾ ಪ್ರಕ್ರಿಯೆಯಲ್ಲಿ ಪಾವಿತ್ರ್ಯವಿರಬೇಕು; ಆಯೋಗಕ್ಕೆ ಹೇಳಿದ ಸುಪ್ರೀಂ ಕೋರ್ಟ್

ಚುನಾವಣಾ ಪ್ರಕ್ರಿಯೆ ಯಲ್ಲಿ ಪಾವಿತ್ರ್ಯವಿರಬೇಕು ಎಂದು ಚುನಾವಣಾ ಆಯೋಗಕ್ಕೆ ಇಂದು ಸುಪ್ರೀಂ ಕೋರ್ಟ್ ಹೇಳಿದೆಯಲ್ಲದೆ ಸ್ವತಂತ್ರ ...

'ಚುನಾವಣಾ ಬಾಂಡ್' ವಿಶ್ವದ ದೊಡ್ಡ ಹಗರಣ; ಬಿಜೆಪಿ ವಿರುದ್ಧ ರಾಹುಲ್‌ ಗಾಂಧಿ ವಾಗ್ದಾಳಿ

ಬಿಜೆಪಿಯ ಚುನಾ ವಣಾ ಬಾಂಡ್ ವಿಶ್ವದ ಅತ್ಯಂತ ದೊಡ್ಡ ಹಗರಣವಾಗಿದ್ದು, ಗೂಂಡಾಗಳ ರೀತಿಯಲ್ಲಿ ಕೆಲವು ಉದ್ಯಮಿಗಳನ್ನು ಬೆದರಿಸಿ ಹಫ್ತಾ ...

ಗುಂಪಿನಿಂದ ಹತ್ಯೆ, ಗೋರಕ್ಷಣೆ ಹೆಸರಿನಲ್ಲಿ ಹಿಂಸಾಚಾರ ತಡೆಯಲು ಕೈಗೊಂಡ ಕ್ರಮಗಳ ಬಗ್ಗೆ ತಿಳಿಸಿ; ರಾಜ್ಯಗಳಿಗೆ ಸುಪ್ರೀಂ ಸೂಚನೆ

ಗುಂಪಿನಿಂದ ಥಳಿಸಿ ಹತ್ಯೆ ಮತ್ತು ಗೋರಕ್ಷಣೆಯ ಹೆಸರಿನಲ್ಲಿ ಹಿಂಸಾಚಾರದ ಘಟನೆಗಳನ್ನು ತಡೆಯಲು ಕೈಗೊಂಡಿರುವ ಕ್ರಮಗಳ ಬಗ್ಗೆ ಆರು ...

ಭಟ್ಕಳ : ಈದುಲ್ ಫಿತ್ರ್ ನಿಮಿತ್ತ ಒಂದು ಲಕ್ಷ ಇಪ್ಪತ್ತು ಸಾವಿರಕ್ಕೂ ಅಧಿಕ ಫೀತ್ರ್ ಅಕ್ಕಿ ವಿತರಣೆ

ಭಟ್ಕಳ: ಈದುಲ್ ಫಿತ್ರ್ ಸಂದರ್ಭದಲ್ಲಿ ಪ್ರತಿಯೊಬ್ಬ ಮುಸ್ಲಿಮನು ತನ್ನ ಈದ್ ಹಬ್ಬಕ್ಕೆ ಒಂದು ಮುಂಚೆ ಕಡ್ಡಾಯವಾಗಿ ನೀಡುವ ಫಿತ್ರ್ ...

ಭಟ್ಕಳ ಸ್ಪೋರ್ಟ್ಸ್ ಅಕಾಡೆಮಿ ಮತ್ತು BMYF ಸಹಯೋಗದೊಂದಿಗೆ ಎ.20-21 ರಂದು ಯುವ ಪ್ರತಿಭೆಗಳಿಗಾಗಿ ಇಂಟರ್-ಕ್ರಿಕೆಟ್ ಲೀಗ್ ಆಯ್ಕೆ

ಭಟ್ಕಳ: ಉತ್ತರ ಕನ್ನಡ ಜಿಲ್ಲೆಯ ಉದಯೋನ್ಮುಖ ಕ್ರಿಕೆಟ್ ಪ್ರತಿಭೆಗಳನ್ನು ಗುರುತಿಸುವ ಮತ್ತು ಪೋಷಿಸುವ ಪ್ರಯತ್ನದಲ್ಲಿ, ಭಟ್ಕಳ ...