ಬಳ್ಳಾರಿ : ತಾಲೂಕು ಮಟ್ಟದ ಬಾಲಕಾರ್ಮಿಕ ಹಾಗೂ ಕಿಶೋರ ಕಾರ್ಮಿಕ ಅಡಿಯಲ್ಲಿ ನೇಮಕವಾದ ನಿರೀಕ್ಷಕರ ಟಾಸ್ಕ್ ಪೋರ್ಸ್ ಕಾರ್ಯಕಾರಿ ಸಮಿತಿ ಅಧಿಕಾರಿಗಳು ಗುರುವಾರರಂದು ನಗರದ ಎಪಿಎಂಸಿ ಮಾರ್ಕೆಟ್ ಹತ್ತಿರ ಪಂಚರ್ ಶಾಪ್, ಟಿಂಕರಿಂಗ್ ಶಾಪ್, ಗ್ಯಾರೇಜ್ ವುಡ್ ವರ್ಕ್ಸ್ ಶಾಪ್, ಮೆಕ್ಯಾನಿಕ್ ಶಾಪ್ ಇತ್ಯಾದಿ ಅಂಗಡಿ ಉದ್ದಿಮೆಗಳ ಮೇಲೆ ಆಕಸ್ಮಿಕ ದಾಳಿ ನಡೆಸಿ ಐವರು ಬಾಲಕಾರ್ಮಿಕ ಮಕ್ಕಳನ್ನು ಕೆಲಸದಿಂದ ಬಿಡುಗಡೆಗೊಳಿಸಿ, ಓರ್ವ ಮಾಲೀಕರ ವಿರುದ್ಧ ಎಫ್ಐಆರ್ ದಾಖಲಿಸಿದೆ.
ರಾಷ್ಟ್ರೀಯ ಬಾಲಕಾರ್ಮಿಕ ಯೋಜನೆಯ ಯೋಜನಾ ನಿರ್ದೇಶಕರು
ನಡೆಸಿದ ದಾಳಿ ಬಳಿಕ ಒಬ್ಬ ಮಾಲೀಕನ ಮೇಲೆ ಎಫ್ಐಆರ್ ದಾಖಲಿಸಿ ಕಾನೂನು ಕ್ರಮ ಕೈಗೊಳ್ಳಲಾಯಿತು. ಉಳಿದ ನಾಲ್ಕು ಮಾಲೀಕರ ಮೇಲೆ ಕಾರ್ಮಿಕ ಕಾಯ್ದೆಯಡಿಯಲ್ಲಿ ನೋಟಿಸ್ ಜಾರಿ ಮಾಡಲಾಯಿತು. ಮಕ್ಕಳನ್ನು ಪೋಷಕರೊಂದಿಗೆ ಕಳುಹಿಸಲಾಯಿತು. ಈ ಸಂದರ್ಭದಲ್ಲಿ ಅಂಗಡಿ ಮತ್ತು ಉದ್ದಿಮೆ ಮಾಲೀಕರಿಗೆ ಬಾಲಕಾರ್ಮಿಕ ಹಾಗೂ ಕಿಶೋರ ಕಾರ್ಮಿಕರನ್ನು ಕೆಲಸಕ್ಕೆ ನೇಮಿಸಿಕೊಳ್ಳಬಾರದೆಂದು ಜಾಗೃತಿ ಮೂಡಿಸಲಾಯಿತು.
ಈ ದಾಳಿ ಮಾಡಿದ ಸಂದರ್ಭದಲ್ಲಿ ಟಾಸ್ಕ್ ಪೋರ್ಸ್ ಸಮಿತಿಯಲ್ಲಿ 2ನೇ ವೃತ್ತ ಕಾರ್ಮಿಕ ನಿರೀಕ್ಷಕರಾದ ಎಂ.ರವಿದಾಸ್, ರಾಷ್ಟ್ರೀಯ ಬಾಲಕಾರ್ಮಿಕ ಯೋಜನಾ ನಿರ್ದೇಶಕರಾದ ಎ.ಮೌನೇಶ್, 1ನೇ ವೃತ್ತ ಕಾರ್ಮಿಕ ನಿರೀಕ್ಷಕರಾದ ಸಿ.ಎನ್ ರಾಜೇಶ್, ಕ್ಷೇತ್ರಾಧಿಕಾರಿಗಳಾದ ಪಿ.ಎಂ.ಈಶ್ವರಯ್ಯ, ಕಂದಾಯ ನಿರೀಕ್ಷಕರಾದ ಎಸ್ ಸುರೇಶ್, ಶಿಕ್ಷಣ ಇಲಾಖೆಯ ರುದ್ರಮಣಿ, ಜಿಲ್ಲಾ ಮಕ್ಕಳ ರಕ್ಷಣಾ ಘಟಕದ ಗಂಗಾಧರ, ಚೈಲ್ಡ್ ಲೈನ್ ಸಿಬ್ಬಂದಿಗಳಾದ ಕಾರ್ತಿಕ್ ಮತ್ತು ಚಂದ್ರಕಲಾ, ಗ್ರಾಮ ಲೆಕ್ಕಾಧಿಕಾರಿಯಾದ ಪ್ರಭುಲಿಂಗ ಸೇರಿದಂತೆ ಇತರರು ಇದ್ದರು.