ತೈಲ ಬೆಲೆ ಹೆಚ್ಚಳದ ವಿರುದ್ಧ ಪ್ರತಿಭಟನೆ ನ.5ರಂದು ಲಾರಿ ಮಾಲಕರಿಂದ ವಿಧಾನಸೌಧ ಮುತ್ತಿಗೆ

Source: VB News | By I.G. Bhatkali | Published on 25th October 2021, 10:57 AM | State News | National News |

ಬೆಂಗಳೂರು:  ರಾಜ್ಯ ಸರಕಾರ ಈ ಕೂಡಲೇ ಇಂಧನ ಬೆಲೆ ತಗ್ಗಿಸುವಂತೆ ಆಗ್ರಹಿಸಿ ನ5ರಂದು ವಿಧಾನಸೌಧಕ್ಕೆ ಮುತ್ತಿಗೆ ಹಾಕಲಾಗುವುದೆಂದು ಫೆಡರೇಷನ್ ಆಫ್ ಕರ್ನಾಟಕ ಸೇಟ್ ಲಾರಿ ಓನರ್ಸ್ ಆ್ಯಂಡ್ ಏಜೆಂಟ್ಸ್ ಅಸೋಸಿಯೇಷನ್ ತಿಳಿಸಿದೆ.

ರವಿವಾರ ಈ ಕುರಿತು ಸುದ್ದಿಗೋಷ್ಠಿ ಯನ್ನುದ್ದೇಶಿಸಿ ಮಾತನಾಡಿದ ಅಸೋಸಿಯೇಷನ್‌ ಅಧ್ಯಕ್ಷ ಜಿ.ಆರ್. ಷಣುಗಪ್ಪ, ಕೋವಿಡ್ ಆರ್ಥಿಕ ನಷ್ಟ ಅನುಭವಿಸುತ್ತಿದ್ದರೂ ಪ್ರತಿ ನಿತ್ಯ ಡಿಸೇಲ್ ದರ ಏರಿಕೆಯಾಗುತ್ತಿದೆ. ಸದ್ಯ ಡಿಸೇಲ್ ಬೆಲೆ ಲೀಟರ್‌ಗೆ 103 ರೂ. ಇದೆ. 2019ರ ಸೆಪ್ಟೆಂಬರ್‌ನಿಂದ ಈವರೆಗೆ ಡಿಸೇಲ್ ಮೇಲೆ ಒಟ್ಟಾರೆ 35 ರೂ. ಹೆಚ್ಚಳವಾಗಿದೆ ಎಂದು ಆರೋಪಿಸಿದರು.

ಕೇಂದ್ರ ಮತ್ತು ರಾಜ್ಯ ಸರಕಾರಗಳು ಇದಕ್ಕೆ ಹೆಚ್ಚು ಮ ತೆರಿಗೆ ಹಾಕುತ್ತಿವೆ. ಇದರಿಂದ ಪ್ರತಿ ಕಿ.ಮೀ.ಗೆ 12 ರೂ. ಹೆಚ್ಚಿನ ಹೊರೆ ಬೀಳುತ್ತಿದೆ. ಶೀಘ್ರದಲ್ಲೇ ಈ ದರವನ್ನು ಕಡಿಮೆಗೊಳಿಸದಿದ್ದು ವಿಧಾನಸೌಧ ಹಾಗೂ ಸಾರಿಗೆ ಕಚೇರಿಗಳಿಗೆ ಮುತ್ತಿಗೆ ಹಾಕಲಾಗು ವುದು ಎಂದು ಎಚ್ಚರಿಕೆ ನೀಡಿದರು. ಕೇಂದ್ರ ಸರಕಾರ ಹಣಕಾಸು ಸಂಸ್ಥೆಗಳಿಗೆ ಅಂದಾಜು 70 ಸಾವಿರ ಕೋಟಿ ರೂ. ನೆರವು ನೀಡಿದೆ. ಆದರೆ, ಫೈನಾನ್ಸ್ ಕಂಪನಿಗಳು ಸಾಲ ಪಡೆದಿರುವ ವಾಹನ ಮಾಲಕರಿಗೆ ಅಧಿಕ ಬಡ್ಡಿ ಹಾಕುತ್ತಿವೆ. ವಾಹನಗಳನ್ನು ಜಪ್ತಿ ಮಾಡುವ ಕೆಲಸ ಮಾಡುತ್ತಿದ್ದಾರೆ. ಇದರಿಂದ ಮನನೊಂದು ಮಾಲಕರು ಆತ್ಮಹತ್ಯೆಯ ಹಾದಿ ತುಳಿಯುತ್ತಿದ್ದಾರೆ ಎಂದು ಆರೋಪಿಸಿದರು.

ಸಂಸ್ಥೆಗಳ ಜತೆ ಚರ್ಚಿಸಬೇಕು ಎಂದ ಅವರು, ಪರವಾನಿಗೆ ಪರ್ಮಿಟ್ ಅವಧಿಯನ್ನು ಅ.31ರವರೆಗೆ ವಿಸ್ತರಿಸಿದ್ದರೂ ಸಾರಿಗೆ ಇಲಾಖೆಯ ಅಧಿಕಾರಿಗಳು ತೆರಿಗೆ ಕಟ್ಟುವಂತೆ ನಮಗೆ ಕಿರುಕುಳ ನೀಡುತ್ತಿದ್ದಾರೆ ಎಂದು ಆರೋಪಿಸಿದರು.

ಆಸೋಸಿಯೇಷನ್' ಪ್ರಧಾನ ಕಾರ್ಯದರ್ಶಿ ಕೆ.ಎನ್. ಅಶ್ವಥ್ ಮಾತನಾಡಿ, ಹೊಸ ವಾಹನ ಗಳು, ಬಿಡಿಭಾಗಗಳು, ಡೀಸೆಲ್ ಮತ್ತು ಟೋಲ್ ಸೇರಿ ಹಲವು ತೆರಿಗೆಗಳ ಭಾರದಿಂದ ಸರಕು ಸಾಗಣೆ ಉದ್ಯಮ ನಷ್ಟದಲ್ಲಿದೆ. ಸಾವಿರಾರು ಮಾಲಕರು ವಾಹನಗಳ ದಾಖಲೆಗಳನ್ನೇ ಸಾರಿಗೆ ಇಲಾಖೆಗೆ ಹಿಂದಿರುಗಿಸುತ್ತಿದ್ದಾರೆ ಎಂದರು.

Read These Next

ಸಂವಿಧಾನದ ಆಶಯವನ್ನು ಎತ್ತಿಹಿಡಿಯುವಲ್ಲಿ ನ್ಯಾಯಾಂಗದ ಪಾತ್ರ ದೊಡ್ಡದು: ಮುಖ್ಯಮಂತ್ರಿ ಸಿದ್ದರಾಮಯ್ಯ

ಭಾರತದ ನ್ಯಾಯಾಂಗವು ಸಂವಿಧಾನದ ಆಶಯಗಳನ್ನು ಎತ್ತಿ ಹಿಡಿಯುವಲ್ಲಿ ಪ್ರಮುಖ ಪಾತ್ರ ವಹಿಸುತ್ತಾ ಬಂದಿದೆ. ಮೂಲಭೂತ ಹಕ್ಕುಗಳಿಗೆ ...

ವಿದ್ಯಾರ್ಥಿಗಳ ಗೊಂದಲಕ್ಕೆ ತೆರೆ: 5, 8, 9ನೇ ತರಗತಿಗೆ ಬೋರ್ಡ್ ಪರೀಕ್ಷೆ ನಡೆಸಲು ಹೈಕೋರ್ಟ್ ವಿಭಾಗೀಯ ಪೀಠ ಅಸ್ತು!

ವಿದ್ಯಾರ್ಥಿಗಳ ಗೊಂದಲಕ್ಕೆ ತೆರೆ: 5, 8, 9ನೇ ತರಗತಿಗೆ ಬೋರ್ಡ್ ಪರೀಕ್ಷೆ ನಡೆಸಲು ಹೈಕೋರ್ಟ್ ವಿಭಾಗೀಯ ಪೀಠ ಅಸ್ತು!

ರಿಲಯನ್ಸ್ ಜೊತೆ ನಂಟು ಹೊಂದಿರುವ ಕಂಪೆನಿಯಿಂದ ಬಿಜೆಪಿಗೆ 375 ಕೋಟಿ ರೂ. ಮೌಲ್ಯದ ಚುನಾವಣಾ ಬಾಂಡ್

ರಿಲಯನ್ಸ್ ಗುಂಪಿನೊಂದಿಗೆ ನಂಟು ಹೊಂದಿರುವ, ಆದರೆ ಹೊರಜಗತ್ತಿಗೆ ಅಪರಿಚಿತವಾಗಿರುವ ಕಂಪೆನಿ ಕ್ವಿಕ್ ಸಪ್ಪೆ ಚೇನ್ ಪ್ರೈವೇಟ್ ...

ಲೋಕಸಭಾ ಚುನಾವಣೆ; ಕಾಂಗ್ರೇಸ್ ನ ಎರಡನೇ ಪಟ್ಟಿ ಬಿಡುಗಡೆ; ಉ.ಕ ಕ್ಷೇತ್ರಕ್ಕೆ ಅಂಜಲಿ ನಿಂಬಾಳ್ಕರ್

ಲೋಕಸಭಾ ಚುನಾವಣೆಗೆ ಕಾಂಗ್ರೆಸ್‌ ಪಕ್ಷ ತನ್ನ ಅಭ್ಯರ್ಥಿಗಳ ಎರಡನೇ ಪಟ್ಟಿಯನ್ನು ಬಿಡುಗಡೆಗೊಳಿಸಿದ್ದು, ಕರ್ನಾಟಕದ 17, ಅರುಣಾಚಲ ...

ಸಿಎಎ ನಿಯಮಾವಳಿಗಳಿಗೆ ತಡೆ ಕೋರುವ ಅರ್ಜಿಗಳ ವಿಚಾರಣೆ ; ಸು.ಕೋರ್ಟ್‌ನಿಂದ ಕೇಂದ್ರಕ್ಕೆ ನೋಟಿಸ್

ಪೌರತ್ವ ತಿದ್ದುಪಡಿ ಕಾಯ್ದೆ (ಸಿಎಎ)ಯ ನಿಯಮಗಳಿಗೆ ತಡೆಯಾಜ್ಞೆ ನೀಡಬೇಕೆಂದು ಕೋರಿ ಸಲ್ಲಿಸಲಾಗಿರುವ ಅರ್ಜಿಗಳನ್ನು ಮಂಗಳವಾರ ...