ಮುಝಫರ್ನಗರ: ಕೃಷಿ ಕಾಯ್ದೆಗಳನ್ನು ಹಿಂಪಡೆಯುವವರೆಗೆ ಪ್ರತಿಭಟನೆ ಮುಂದುವರಿಯಲಿದೆ: ಟಿಕಾಯತ್
ಮುಝಫರ್ನಗರ: ವಿವಾದಾತ್ಮಕ ಮೂರು ಕೃಷಿ ಕಾಯ್ದೆಗಳನ್ನು ಹಿಂಪಡೆಯುವ ವರೆಗೆ ತಮ್ಮ ಚಳವಳಿ ಮುಂದುವರಿಯಲಿದೆ ಎಂದು ರೈತ ನಾಯಕ ರಾಕೇಶ್ ಟಿಕಾಯತ್ ಹೇಳಿದ್ದಾರೆ.
ಕೇಂದ್ರ ಸರಕಾರದ ಕೃಷಿ ಕಾಯ್ದೆಗಳ ವಿರುದ್ದ ದಿಲ್ಲಿ ಗಡಿಯಲ್ಲಿ ನಡೆಯುತ್ತಿರುವ ರೈತರ ಪ್ರತಿಭಟನೆ 100 ದಿನ ಪೂರ್ಣಗೊಂಡ ಹಿನ್ನೆಲೆಯಲ್ಲಿ ಮುಝಪ್ಟರ್ನಗರ್ನ ರಾಮರಾಜ್ ಪಟ್ಟಣದಲ್ಲಿ ಶನಿವಾರ ಅವರು ಮಾತನಾಡಿದರು. ಮೂರು ಕೃಷಿ ಕಾಯ್ದೆಗಳನ್ನು ಸಂಪೂರ್ಣವಾಗಿ ಹಿಂಪಡೆಯಲು ರೈತರು ಆಗ್ರಹಿಸುತ್ತಿದ್ದಾರೆ. ಅಲ್ಲದೆ, ಕೇಂದ್ರ ಸರಕಾರ ತಮ್ಮ ಬೇಡಿಕೆ ಈಡೇರಿಸುವವರೆಗೆ ಚಳವಳಿ ಮುಂದುವರಿಯಲಿದೆ ಎಂದು ಟಿಕಾಯತ್ ಹೇಳಿದ್ದಾರೆ. ಟ್ರ್ಯಾಕ್ಟರ್ ಕ್ಯಾಲಿಗೆ ಹಸಿರು ನಿಶಾನೆ ತೋರಿಸಿದ ಕಾರ್ಯಕ್ರಮದಲ್ಲಿ ಅವರು, ತಾನು ಉತ್ತರಪ್ರದೇಶ ಹಾಗೂ ಉತ್ತರಾ ಖಂಡದ ಜಿಲ್ಲೆಗಳಾದ್ಯಂತ ಪ್ರವಾಸ ಕೈಗೊಳ್ಳ ಲಿದ್ದೇನೆ ಹಾಗೂ ಮಾರ್ಚ್ 27ರಂದು ಘಾಝಿಪುರದ ಪ್ರತಿಭಟನಾ ಸ್ಥಳಕ್ಕೆ ತಲುಪ ಲಿದ್ದೇನೆ ಎಂದರು.