ಬಿಜೆಪಿ ಮಿತ್ರಪಕ್ಷಗಳಿಂದ ವಿವಾದಿತ ಕೃಷಿ ಮಸೂದೆ ವಿರೋಧಿಸಿ ’ಚಕ್ಕಾಜಾಮ್’ ಪ್ರತಿಭಟನೆಗೆ ಕರೆ

Source: sonews | By Staff Correspondent | Published on 22nd September 2020, 6:14 PM | National News |

ಚಂಡೀಗಢ: ಸಂಸತ್ತಿನಲ್ಲಿ ಅಂಗೀಕಾರ ಪಡೆದ ವಿವಾದಾತ್ಮಕ ಕೃಷಿ ಮಸೂದೆಗಳನ್ನು ವಿರೋಧಿಸಿ ಪಂಜಾಬ್ ರಾಜ್ಯದಲ್ಲಿ ಬಿಜೆಪಿಯ ಮಿತ್ರ ಪಕ್ಷ ಶಿರೋಮಣಿ ಅಕಾಲಿ ದಳ ಸೆಪ್ಟೆಂಬರ್ 25ರಂದು 'ಚಕ್ಕಾ ಜಾಮ್' (ರಸ್ತೆ ತಡೆ)  ಪ್ರತಿಭಟನೆಯನ್ನು ನಡೆಸಲಿದೆ ಎಂದು ಅಕಾಲಿ ದಳದ ನಾಯಕ ದಲ್ಜಿತ್ ಸಿಂಗ್ ಚೀಮಾ ಹೇಳಿದ್ದಾರೆ.

ಪ್ರತಿಭಟನೆಯ ಭಾಗವಾಗಿ ಪಕ್ಷದ ಹಿರಿಯ ನಾಯಕರು, ರೈತರು ಹಾಗೂ ಕೃಷಿ ಕಾರ್ಮಿಕರು ರಾಜ್ಯಾದ್ಯಂತ ಬೆಳಿಗ್ಗೆ 11 ಗಂಟೆಯಿಂದ ಮೂರು ತಾಸು ಶಾಂತಿಯುತ ರಸ್ತೆತಡೆ ನಡೆಸಲಿದ್ದಾರೆ.

ಸೋಮವಾರ ಶಿರೋಮಣಿ ಅಕಾಲಿ ದಳದ ನಾಯಕರ ನಿಯೋಗವೊಂದು ರಾಷ್ಟ್ರಪತಿಗಳನ್ನು ಭೇಟಿಯಾಗಿ ಮಸೂದೆಗಳಿಗೆ ಅಂಕಿತ ನೀಡದಂತೆ ಮನವಿ ಮಾಡಿದೆ. ಈಗಾಗಲೇ ಶಿರೋಮಣಿ ಅಕಾಲಿ ದಳದ ಭಟಿಂಡಾ ಸಂಸದೆ ಹರ್‍ಸಿಮ್ರತ್ ಕೌರ್ ಅವರು ಮಸೂದೆಗಳನ್ನು ವಿರೋಧಿಸಿ ಕೇಂದ್ರ ಸಚಿವ ಸಂಪುಟಕ್ಕೆ ರಾಜೀನಾಮೆ ನೀಡಿದ್ದಾರೆ.

ಸುಮಾರು 30 ರೈತ ಸಂಘಟನೆಗಳು ಈಗಾಗಲೇ ಸೆಪ್ಟೆಂಬರ್ 25ರಂದು ಪಂಜಾಬ್ ಬಂದ್‍ಗೆ ಕರೆ ನೀಡಿವೆ.

Read These Next

ಪ್ರಧಾನಿ ಮೋದಿಯಿಂದ ದ್ವೇಷ ಭಾಷಣ! ಚುನಾವಣಾ ಆಯೋಗದ ನಿಷ್ಕ್ರಿಯತೆಗೆ ಪ್ರತಿಪಕ್ಷಗಳ ಆಕ್ರೋಶ

ಪ್ರಧಾನಿ ನರೇಂದ್ರ ಮೋದಿಯವರು ಮುಸ್ಲಿಮ್ ಸಮುದಾಯದ ವಿರುದ್ದ ಆಕ್ಷೇಪಕಾರಿ ಭಾಷಣಗೈದು ತೀವ್ರ ವಿವಾದಕ್ಕೆ ಗುರಿಯಾಗಿದ್ದಾರೆ. ...

ಅಣಕು ಮತದಾನದ ವೇಳೆ ಬಿಜೆಪಿಗೆ ಮತ

ಕೇರಳದ ಕಾಸರಗೋಡಿನಲ್ಲಿ ಅಣಕು ಮತದಾನದವೇಳೆ ಇವಿಎಂಗಳು ತಪ್ಪಾಗಿ ಬಿಜೆಪಿ ಪರವಾಗಿ ಮತಗಳನ್ನು ದಾಖಲಿಸಿವೆ ಎಂದು ಅರ್ಜಿದಾರರೊಬ್ಬರು ...

ಚುನಾವಣಾ ಪ್ರಕ್ರಿಯೆಯಲ್ಲಿ ಪಾವಿತ್ರ್ಯವಿರಬೇಕು; ಆಯೋಗಕ್ಕೆ ಹೇಳಿದ ಸುಪ್ರೀಂ ಕೋರ್ಟ್

ಚುನಾವಣಾ ಪ್ರಕ್ರಿಯೆ ಯಲ್ಲಿ ಪಾವಿತ್ರ್ಯವಿರಬೇಕು ಎಂದು ಚುನಾವಣಾ ಆಯೋಗಕ್ಕೆ ಇಂದು ಸುಪ್ರೀಂ ಕೋರ್ಟ್ ಹೇಳಿದೆಯಲ್ಲದೆ ಸ್ವತಂತ್ರ ...