ಮಂಗಳೂರು: ಸುಮಾರು ಐದು ತಿಂಗಳ ನಂತರ ಸೆಪ್ಟೆಂಬರ್ 1 ರಂದು ಕರ್ನಾಟಕ ಕರಾವಳಿಯಲ್ಲಿ ಆಳವಾದ ಸಮುದ್ರ ಮೀನುಗಾರಿಕೆ ಪ್ರಾರಂಭವಾಗುವ ಸಾಧ್ಯತೆಯಿದೆ.
ಕೋವಿಡ್ ನೆಗೆಟಿವ್ ಪ್ರಮಾಣಪತ್ರವನ್ನು ಹೊಂದಿಲ್ಲದಿದ್ದರೆ ರಾಜ್ಯದ ಹೊರಗಿನಿಂದ ಬರುವ ಮೀನುಗಾರಿಕೆ ಕಾರ್ಮಿಕರಿಗೆ ಉಚಿತವಾಗು ಕೋವಿಡ್ ಪರೀಕ್ಷೆಯನ್ನು ನಡೆಸಲಾಗುವುದು ಎಂದು ಬಂದರು ಮತ್ತು ಮೀನುಗಾರಿಕೆ ಸಚಿವ ಕೋಟಾ ಶ್ರೀನಿವಾಸ ಪೂಜಾರಿ ಹೇಳಿದರು.
ಅಲ್ಲದೆ ಯಾರೇ ಆದರೂ ಅನ್ಯರಾಜ್ಯದಿಂದ ಬಂದ ಮೀನುಗಾರಿಕೆ ಕಾರ್ಮಿಕರು ಸಮುದ್ರಕ್ಕೆ ಇಳಿಯುವ ಮುನ್ನ ಮೀನುಗಾರಿಕಾ ದೋಣಿಗಳ ಒಳಗೆ 14 ದಿನಗಳ ಕ್ವಾರಂಟೈನ್ ಮಾಡಬೇಕಿದೆ ಎಂದು ಸಚಿವರು ಹೇಳಿದ್ದಾರೆ.
ಕೋವಿಡ್ -19 ಏಕಾಏಕಿ ನಂತರ ಮಾರ್ಚ್ ತಿಂಗಳಲ್ಲಿ ರಾಜ್ಯದಲ್ಲಿ ಆಳ ಸಮುದ್ರದ ಮೀನುಗಾರಿಕೆ ಚಟುವಟಿಕೆ ಸ್ಥಗಿತವಾಗಿತ್ತು, ಇದೀಗ ಆಗಸ್ಟ್ 1 ರಂದು ಪುನರಾರಂಭಿಸಲು ನಿರ್ಧರಿಸಲಾಗಿತ್ತಾದರೂ ಅಧಿಕಾರಿಗಳು ಮತ್ತು ದೋಣಿ ಮಾಲೀಕರು ಕೋವಿಡ್ -19 ಪ್ರಕರಣಗಳ ಹೆಚ್ಚಳದಿಂದಾಗಿ ಅದನ್ನು ಮುಂದೂಡಲು ನಿರ್ಧರಿಸಿದರು ಮತ್ತು ರಾಜ್ಯಕ್ಕೆ ಹೊರರಾಜ್ಯದಿಂದ ಕಾರ್ಮಿಕರು ಆಗಮಿಸಿಲ್ಲವಾದ ಕಾರಣ ಮೀನುಗಾರಿಕೆಯನ್ನು ಮುಂದೂಡಲಾಗಿತ್ತು,
ಮೀನುಗಾರಿಕೆಯಲ್ಲಿ ಭಾಗಿಯಾಗಿರುವ ಶೇ .80 ಕ್ಕಿಂತ ಹೆಚ್ಚು ಕಾರ್ಮಿಕರು ತಮಿಳುನಾಡು, ಆಂಧ್ರಪ್ರದೇಶ, ಒಡಿಶಾ, ಪಶ್ಚಿಮ ಬಂಗಾಳ ಮತ್ತು ಇತರ ರಾಜ್ಯಗಳವರು.
ಸಭೆಯಲ್ಲಿ ಹಾಜರಿದ್ದ ಮಂಗಳೂರು ಟ್ರಾಲ್ ಬೋಟ್ ಮೀನುಗಾರರ ಸಂಘದ ನಿತಿನ್ ಕುಮಾರ್ ಮಾತನಾಡಿ ರೈಲು ಕಾರ್ಯಾಚರಣೆಗಳು ಇನ್ನೂ ಪೂರ್ಣವಾಗಿ ಪುನರಾರಂಭಗೊಳ್ಳದ ಕಾರಣ ದೋಣಿ ಮಾಲೀಕರು ರಾಜ್ಯದ ಹೊರಗಿನ ಮೀನುಗಾರರನ್ನು ಬಸ್ ಮತ್ತು ಟೆಂಪೊಗಳಲ್ಲಿ ಕರೆತರಲು ವ್ಯವಸ್ಥೆ ಮಾಡುತ್ತಾರೆ. ಮಂಗಳೂರಿನಲ್ಲಿ 3 ಸಾವಿರಕ್ಕೂ ಹೆಚ್ಚು ಜನರಿಗೆ ಇಂತಹ ವ್ಯವಸ್ಥೆ ಮಾಡಲು ಬೇರೆ ಸೌಲಭ್ಯವಿಲ್ಲದ ಕಾರಣ ದೋಣಿಗಳಲ್ಲಿ ಕಾರ್ಮಿಕರನ್ನುಕ್ವಾರಂಟೈನ್ ನಲ್ಲಿರಿಸಲು ತೀರ್ಮಾನಿಸಲಾಗಿದೆ, “ಅವರು ರಾಜ್ಯಕ್ಕೆ ಹಂತಹಂತವಾಗಿ ಆಗಮಿಸುತ್ತಾರೆ ಮತ್ತು ಒಮ್ಮೆಗೇ ಇದು ಸಾಧ್ಯವಿಲ್ಲ. ಹೇಗಾದರೂ ನಾವು ದೋಣಿ ಯಲ್ಲೇ ಕ್ವಾರಂಟೈನ್ ನಿರ್ವಹಿಸಬಹುದು, ”ಎಂದರು.
ಮೀನುಗಾರಿಕೆ ಬಂದರನ್ನು ಪ್ರತಿದಿನವೂ ಸ್ವಚ್ಚಗೊಳಿಸುವುದು ಬಂದರಿನಲ್ಲಿ ಮೀನುಗಾರರು ಮತ್ತು ಇತರ ಜನರ ಥರ್ಮಲ್ ಟೆಸ್ಟ್ ಗೆ ಸಿದ್ದತೆ ಮಾಡಲಾಗಿದೆ ಎಂದು ಅವರು ತಿಳಿಸಿದ್ದಾರೆ
Read These Next
ರೈಲಿನಡಿ ಆತ್ಮಹತ್ಯೆ ಮಾಡಿಕೊಂಡ ಅಪರಿಚಿತ ವ್ಯಕ್ತಿ
ಭಟ್ಕಳ: ಅಪರಿಚಿತ ವ್ಯಕ್ತಿಯೋರ್ವ ರೈಲಿಗೆ ತಲೆ ಕೊಟ್ಟು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ತಾಲೂಕಿನ ತೆರ್ನಮಕ್ಕಿಯಲ್ಲಿ ...
ಭಟ್ಕಳದ ಶಮ್ಸುದ್ಧೀನ್ ವೃತ್ತದ ಬಳಿ ರಸ್ತೆ ಅಪಘಾತ; ಆಟೋ ರಿಕ್ಷಾ ಚಾಲಕ ಗಂಭೀರ
ಭಟ್ಕಳ: ಭಟ್ಕಳದ ಹೃದಯಭಾಗವಾಗಿರುವ ಶಂಶುದ್ದೀನ್ ವೃತ್ತದ ಬಳಿ ಖಾಸಗಿ ಬಸ್ ಮತ್ತು ಆಟೋ ನಡುವೆ ಡಿಕ್ಕಿ ಸಂಭವಿಸಿ ಆಟೋ ಚಾಲಕ ಗಂಭೀರವಾಗಿ ...
ಹೊನ್ನಾವರ: ಕಾಸರಕೋಡು ಬಂದರು ನಿರ್ಮಾಣಕ್ಕೆ ಸಹಕರಿಸಿ : ಜಿಲ್ಲಾಧಿಕಾರಿ
ಕಾಸರಕೋಡುನಲ್ಲಿ ನಿರ್ಮಾಣ ಮಾಡಲು ಉದ್ದೇಶಿಸಿರುವ ಬಂದರು ಕಾಮಗಾರಿಗೆ ಅಗತ್ಯವಿರುವ ಸರ್ವೇ ಕಾರ್ಯವನ್ನು ಈ ತಿಂಗಳಲ್ಲಿ ...
ಜಿಲ್ಲೆಯಲ್ಲಿ ಗರಿಷ್ಠ ಮತದಾನದ ಉದ್ದೇಶ : ಜಿಲ್ಲಾಧಿಕಾರಿ ಗಂಗೂಬಾಯಿ ಮಾನಕರ
ಜಿಲ್ಲೆಯಲ್ಲಿ ಗರಿಷ್ಠ ಮತದಾನದ ಉದ್ದೇಶ : ಜಿಲ್ಲಾಧಿಕಾರಿ ಗಂಗೂಬಾಯಿ ಮಾನಕರ
ಭಟ್ಕಳದ ತಂಝೀಮ್ ವತಿಯಿಂದ ಮಾರ್ಚ್ 30 ಮತ್ತು 31 ರಂದು ಮೆಗಾ ವೋಟರ್ ಐಡಿ ಶಿಬಿರ
ಭಟ್ಕಳ: ಮುಂಬರುವ ಲೋಕಸಭೆ ಚುನಾವಣೆಗೆ ಮುಂಚಿತವಾಗಿ ಅರ್ಹ ಮತದಾರರನ್ನು ನೋಂದಾಯಿಸಲು ಮತ್ತು ಮತದಾರರ ಗುರುತಿನ ಚೀಟಿ ನೀಡಲು ಭಟ್ಕಳದ ...
ಮಾರ್ಚ 28 ಕ್ಕೆ ಕುಮಟದಲ್ಲಿನ ಬೃಹತ್ ಅರಣ್ಯ ಅತಕ್ರಮಣದಾರರ ಸಭೆ ಮುಂದಕ್ಕೆ
ಮಾರ್ಚ 28 ರ ಕುಮಟದಲ್ಲಿನ ಬೃಹತ್ ಅರಣ್ಯ ಅತಕ್ರಮಣದಾರರ ಸಭೆ ಮುಂದಕ್ಕೆ
ಭಾಷಾ ಜ್ಞಾನದ ಕುರಿತು ಯಾರ ಬಗ್ಗೆಯೂ ಕೇವಲವಾಗಿ ಮಾತನಾಡಿಲ್ಲ: ಜೆ.ಪಿ.ಹೆಗ್ಡೆ ಸ್ವಷ್ಟನೆ
ಉಡುಪಿ: ಈವರೆಗಿನ ರಾಜಕೀಯ ಜೀವನದಲ್ಲಿ ಯಾರ ಮನಸ್ಸನ್ನೂ ನೋಯಿಸುವುದಾಗಲಿ ಅಥವಾ ಕೇವಲವಾಗಿ ಮಾತನಾಡುವುದನ್ನಾಗಲಿ ಮಾಡದೆ ಇರುವ ನಾನು ...
ಲೋಕಸಭಾ ಚುನಾವಣೆ: ಉಡುಪಿ ಜಿಲ್ಲೆಯಲ್ಲಿ ಮದ್ಯ ಮಾರಾಟ ನಿಷೇಧ
ಉಡುಪಿ: ಸಾರ್ವತ್ರಿಕ ಲೋಕಸಭಾ ಚುನಾವಣೆ-2024ರ ಹಿನ್ನೆಲೆಯಲ್ಲಿ ಜಿಲ್ಲೆಯಲ್ಲಿ ಎಪ್ರಿಲ್ 26ರಂದು ಮತದಾನ ಹಾಗೂ ಜೂನ್ 4ರಂದು ಮತ ಎಣಿಕೆ ...
ಮಂಗಳೂರು: ಲೋಕಸಭಾ ಚುನಾವಣೆ ಹಿನ್ನೆಲೆ – 12 ಮಂದಿಗೆ ಗಡಿಪಾರು
ಮಂಗಳೂರು: ಲೋಕಸಭಾ ಚುನಾವಣೆಯಲ್ಲಿ ಮುನ್ನೆಚ್ಚರಿಕಾ ಕ್ರಮವಾಗಿ ನಗರ ಪೊಲೀಸ್ ಆಯುಕ್ತಾಲಯ ವ್ಯಾಪ್ತಿಯಲ್ಲಿ ಕ್ರಿಮಿನಲ್ ...
ಸೌಹಾರ್ದ ಕಾರ್ಯಕ್ರಮಗಳಿಂದ ಮಾತ್ರವೇ ಸ್ವಾಸ್ಥ್ಯ ಸಮಾಜದ ನಿರ್ಮಾಣ ಸಾಧ್ಯ – ಬಶೀರ್ ಮದನಿ
ಮಂಗಳೂರು : ಎಲ್ಲಾ ಧರ್ಮಗಳ ಭೋದನೆಗಳು ಸತ್ಯದ ಹಾದಿಯಲ್ಲಿದ್ದು,ಮನುಷ್ಯ ಕುಲದ ಏಳಿಗೆಗಾಗಿ ಅವುಗಳು ಶ್ರಮಿಸುತ್ತಿದೆಯೇ ಹೊರತು ...
ಭಟ್ಕಳ: ಒಂಟಿ ಚಕ್ರದ ಸೈಕಲ್ಲಿನಲ್ಲೇ ಕೇರಳಿಗನ ಕನ್ಯಾಕುಮಾರಿ-ಕಾಶ್ಮೀರ ಪ್ರಯಾಣ!
ಒಂಟಿ ಚಕ್ರದ ಸೈಕಲ್ಲಿನಲ್ಲೇ ಕೇರಳಿಗನ ಕನ್ಯಾಕುಮಾರಿ-ಕಾಶ್ಮೀರ ಪ್ರಯಾಣ!