ಲಾಕ್‌ಡೌನ್ ಕೊರೋನಾ ವಿರುದ್ಧವಲ್ಲ, ಅಸಂಘಟಿತ ವಲಯದ ಮೇಲಿನ ದಾಳಿ: ರಾಹುಲ್ ಗಾಂಧಿ ಟೀಕೆ

Source: uni | Published on 10th September 2020, 12:23 AM | National News |

 

ನವದೆಹಲಿ: ಯಾವುದೇ ಸೂಚನೆಯಿಲ್ಲದೆ ಸರ್ಕಾರ ಲಾಕ್ ಡೌನ್ ಘೋಷಿಸಿತ್ತು ಎಂದು ಆರೋಪಿಸಿರುವ ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ, ಲಾಕ್ ಡೌನ್ ಕೊರೋನಾ ವಿರುದ್ಧದ ದಾಳಿಯಲ್ಲ, ಆದರೆ, ಅಸಂಘಟಿತ ವಲಯದ ಮೇಲಿನ ದಾಳಿಯಾಗಿದೆ ಎಂದು ಟೀಕಿಸಿದ್ದಾರೆ.   
ರಾಹುಲ್ ಗಾಂಧಿ ಬುಧವಾರ ಬಿಡುಗಡೆ ಮಾಡಿರುವ ಆರ್ಥಿಕತೆಯ ಸದ್ಯದ ಸ್ಥಿತಿಯ ವೀಡಿಯೊ ಸರಣಿಯಲ್ಲಿ, ಅಸಂಘಟಿತ ವಲಯದ ಮೇಲೆ ಮೂರನೇ ದಾಳಿಯನ್ನು ಕೊರೋನಾ ಹೆಸರಿನಲ್ಲಿ ಮಾಡಲಾಗಿದೆ ಎಂದು ಟೀಕಿಸಿದ್ದಾರೆ.
ಬಡವರು, ಸಣ್ಣ ಮತ್ತು ಮಧ್ಯಮ ವ್ಯಾಪಾರಗಳಲ್ಲಿ ಕೆಲಸ ಮಾಡುವವರು, ದೈನಂದಿನ ಕೂಲಿ ಮಾಡುವವರು ದಿನದ ಗಳಿಕೆಯನ್ನು ಅಲಂಭಿಸಿ ಅದರಿಂದ ಹೊಟ್ಟೆ ತುಂಬಿಸಿಕೊಳ್ಳುತ್ತಾರೆ. ಆದರೆ, ಸರ್ಕಾರ ಯಾವುದೇ ಮುನ್ಸೂಚನೆಯಿಲ್ಲದೆ ಲಾಕ್ ಡೌನ್ ಘೋಷಿಸುವ ಮೂಲಕ ಅವರ ಹೊಟ್ಟೆಯ ಮೇಲೆ ಹೊಡೆದಿದೆ ಎಂದು ರಾಹುಲ್ ಗಾಂಧಿ ಹೇಳಿದ್ದಾರೆ.
ಕೊರೋನಾ ವಿರುದ್ಧ 21 ದಿನಗಳ ಹೋರಾಟ ನಡೆಯಲಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದರು. ಆದರೆ, ಅಸಂಘಟಿತ ವಲಯದ ಬೆನ್ನೆಲುಬು 21 ದಿನಗಳಲ್ಲೇ ಮುರಿದಿದೆ ಎಂದು ಅವರು ಹೇಳಿದ್ದಾರೆ.
ಲಾಕ್ ಡೌನ್ ತೆರವಾದ ನಂತರ ಬಡವರಿಗೆ ಸಹಾಯ ಮಾಡುವುದು ಅತ್ಯಗತ್ಯ ಎಂದು ಕಾಂಗ್ರೆಸ್ ಈಗಾಗಲೇ ಸರ್ಕಾರಕ್ಕೆ ಹಲವಾರು ಬಾರಿ ಹೇಳಿದೆ. ನ್ಯಾಯ್ ನಂತಹ ಯೋಜನೆಯನ್ನು ಜಾರಿಗೆ ತರಬೇಕು. ಮತ್ತು ಹಣವನ್ನು ನೇರವಾಗಿ ಬ್ಯಾಂಕ್ ಖಾತೆಗಳಲ್ಲಿ ಜಮಾ ಮಾಡಬೇಕು. ಆದರೆ ಸರ್ಕಾರ ಅದನ್ನು ಮಾಡಿಲ್ಲ ಎಂದು ರಾಹುಲ್ ಗಾಂಧಿ ಹೇಳಿದ್ದಾರೆ. 
ಸಣ್ಣ ಮತ್ತು ಮಧ್ಯಮ ವ್ಯಾಪಾರಗಳಿಗೆ ಸರ್ಕಾರ ಪ್ಯಾಕೇಜ್ ಸಿದ್ಧಪಡಿಸಬೇಕು ಎಂದು ನಾವು ಸೂಚಿಸಿದ್ದೇವೆ. ಈ ವ್ಯಾಪಾರಗಳನ್ನು ಉಳಿಸಬೇಕಾಗಿದೆ. ಹಣವಿಲ್ಲದೆ ಅವರು ಬದುಕಲು ಸಾಧ್ಯವಾಗುವುದಿಲ್ಲ. ಆದರೆ ಸರ್ಕಾರ ಏನೂ ಮಾಡಲಿಲ್ಲ. ಬದಲಾಗಿ, ಶ್ರೀಮಂತ ಹದಿನೈದು-ಇಪ್ಪತ್ತು ಜನರ ಕೋಟಿಗಟ್ಟಲೆ ಮೌಲ್ಯದ ತೆರಿಗೆಯನ್ನು ಸರ್ಕಾರ ಮನ್ನಾ ಮಾಡಿದೆ ಎಂದು ರಾಹುಲ್ ಗಾಂಧಿ ಟೀಕಿಸಿದ್ದಾರೆ.
ಲಾಕ್ ಡೌನ್ ಕೊರೋನಾ ವಿರುದ್ಧದ ದಾಳಿಯಲ್ಲಿ. ಬದಲಾಗಿ ಇದು ದೇಶದ ಬಡವರ ಮೇಲೆ ಎಸೆದ ದಾಳಿಯಾಗಿದೆ. ಇದು ನಮ್ಮ ಯುವಕರ ಭವಿಷ್ಯದ ಮೇಲಿನ ದಾಳಿಯಾಗಿದೆ ಎಂದು ರಾಹುಲ್ ಗಾಂಧಿ ಆರೋಪಿಸಿದ್ದಾರೆ.
ಅಲ್ಲದೆ, ಲಾಕ್ ಡೌನ್ ಕಾರ್ಮಿಕರು, ರೈತರು ಮತ್ತು ಸಣ್ಣ ವ್ಯಾಪಾರಿಗಳ ಮೇಲಿನ ದಾಳಿಯಾಗಿದೆ. ಅಸಂಘಟಿತ ವಲಯದ ಮೇಲಿನ ದೊಡ್ಡ ದಾಳಿ ಇದಾಗಿದೆ. ಇದನ್ನು ನಾವು ಅರ್ಥಮಾಡಿಕೊಳ್ಳಬೇಕು. ಈ ದಾಳಿಯ ವಿರುದ್ಧ ನಾವೆಲ್ಲರೂ ನಿಲ್ಲಬೇಕು ಎಂದು ರಾಹುಲ್ ಗಾಂಧಿ ಮನವಿ ಮಾಡಿದ್ದಾರೆ

Read These Next

ಪ್ರಜ್ವಲ್ ರೇವಣ್ಣ ಲೈಂಗಿಕ ದೌರ್ಜನ್ಯಗಳ ಬಗ್ಗೆ ಮೂರು ದಿನಗಳಲ್ಲಿ ವರದಿ ಕೊಡಿ; ರಾಜ್ಯ ಡಿಜಿಪಿಗೆ ರಾಷ್ಟ್ರೀಯ ಮಹಿಳಾ ಆಯೋಗ ಸೂಚನೆ

ಹಾಸನ ಸಂಸದ ಪ್ರಜ್ವಲ್ ರೇವಣ್ಣ ಸಾವಿರಾರು ಮಹಿಳೆಯರ ಮೇಲೆ ನಡೆಸಿದ್ದಾರೆನ್ನಲಾದ ಲೈಂಗಿಕ ದೌರ್ಜನ್ಯಗಳ ಬಗ್ಗೆ ಮೂರು ದಿನಗಳಲ್ಲಿ ...

ನಾಮಪತ್ರ ಹಿಂಪಡೆದ ಇಂದೋರ್ ಕಾಂಗ್ರೆಸ್ ಅಭ್ಯರ್ಥಿ; ಅಕ್ಷಯ್ ಕಾಂತಿ ಬಮ್ ಬಿಜೆಪಿ ಸೇರ್ಪಡೆ

ಇಂದೋರ್ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಅಕ್ಷಯ್ ಕಾಂತಿ ಬಮ್ ಅವರು ತನ್ನ ನಾಮಪತ್ರವನ್ನು ಹಿಂಪಡೆದಿದ್ದಾರೆ ಹಾಗೂ ಬಿಜೆಪಿ ...

ಲೈಂಗಿಕ ಹಗರಣ; ಪ್ರಜ್ವಲ್ ರೇವಣ್ಣರನ್ನು ಮೋದಿ ರಕ್ಷಿಸುತ್ತಿದ್ದಾರೆ; ಕಾಂಗ್ರೆಸ್

ಮಹಿಳೆಯರ ವಿರುದ್ಧ ಲೈಂಗಿಕ ದೌರ್ಜನ್ಯದ ಆರೋಪವನ್ನು ಹೊತ್ತಿರುವ ಹಾಸನ ಸಂಸದ ಪ್ರಜ್ವಲ್ ರೇವಣ್ಣರನ್ನು ಪ್ರಧಾನಿ ನರೇಂದ್ರ ಮೋದಿಯವರು ...