ವಿದ್ಯಾರ್ಥಿನಿಯರ ಮೇಲೆ ಲಾಠಿ ಚಾರ್ಜ್; ಭೇಟಿ ಬಚಾವೊ, ಭೇಟಿ ಪಡಾವೊ ಆಂದೋಲನದ ಬಿಜೆಪಿ ಆವೃತ್ತಿ: ರಾಹುಲ್ ವ್ಯಂಗ್ಯ

Source: ಪ್ರಜಾವಾಣಿ ವಾರ್ತೆ | By I.G. Bhatkali | Published on 25th September 2017, 1:22 AM | National News | Don't Miss |

ಬನಾರಸ್: ಬನಾರಸ್ ಹಿಂದೂ ವಿಶ್ವವಿದ್ಯಾಲಯದಲ್ಲಿ ಪ್ರತಿಭಟನಾ ನಿರತ ವಿದ್ಯಾರ್ಥಿನಿಯರ ಮೇಲೆ ಪೊಲೀಸರು ಲಾಠಿ ಚಾರ್ಜ್ ಮಾಡಿದ ವಿಷಯದ ಬಗ್ಗೆ ಪ್ರತಿಕ್ರಿಯಿಸಿದ ರಾಹುಲ್ ಗಾಂಧಿ, ಬಿಎಚ್‍ಯುನಲ್ಲಿ ಭೇಟಿ ಬಚಾವೋ  ಭೇಟಿ ಪಡಾವೊ ಆಂದೋಲನದ ಬಿಜೆಪಿ ಆವೃತ್ತಿ ನಡೆಯುತ್ತಿದೆ ಎಂದು ಟ್ವೀಟ್ ಮಾಡಿದ್ದಾರೆ.

ಬಿಎಚ್‍ಯುವಿನ ಉಪ ಕುಲಪತಿಯವರ ಮನೆಯ ಮುಂದೆ ವಿದ್ಯಾರ್ಥಿಗಳು ಪ್ರತಿಭಟನೆ ನಡೆಸಿದಾಗ ಅವರನ್ನು ಚದುರಿಸಲು ಶನಿವಾರ ರಾತ್ರಿ ಪೊಲೀಸರು ಲಾಠಿ ಚಾರ್ಜ್ ಮಾಡಿದ್ದರು. ಈ ಲಾಠಿ ಚಾರ್ಜ್‍ನಲ್ಲಿ ಹಲವಾರು ವಿದ್ಯಾರ್ಥಿನಿಯರಿಗೆ ಗಾಯಗಳಾಗಿವೆ ಎಂದು ವಿಶ್ವ ವಿದ್ಯಾಲಯದ ವಿದ್ಯಾರ್ಥಿಗಳು ದೂರಿದ್ದಾರೆ.

ಪ್ರತಿಭಟನೆಯಲ್ಲಿ ನಿರತರಾಗಿದ್ದ ಹುಡುಗರ ಮೇಲೆ ಲಾಠಿ ಚಾರ್ಜ್ ಮಾಡಿದ್ದಲ್ಲದೆ, ಪೊಲೀಸರು ಹುಡುಗಿಯರನ್ನೂ ಬಿಟ್ಟಿಲ್ಲ.ನಮ್ಮ ಮೇಲೆ ದೌರ್ಜನ್ಯ ನಡೆಸಲಾಗಿದೆ ಎಂದು ವಿದ್ಯಾರ್ಥಿಯೊಬ್ಬಳು ಹೇಳಿರುವುದಾಗಿ ಎಎನ್‍ಐ ಸುದ್ದಿ ಸಂಸ್ಥೆ ವರದಿ ಮಾಡಿದೆ.

ಏನಿದು ಪ್ರಕರಣ?
ಬನಾರಸ್ ಹಿಂದೂ ವಿಶ್ವವಿದ್ಯಾಲಯದ ತ್ರಿವೇಣಿ ಹಾಸ್ಟೆಲ್ ವಿದ್ಯಾರ್ಥಿನಿಯೊಬ್ಬಳು ಗುರುವಾರ ಸಂಜೆ 6 ಗಂಟೆಗೆ ಹಾಸ್ಟೆಲ್‍ಗೆ ಮರಳುತ್ತಿದ್ದ ವೇಳೆ ಕಲಾ ಭವನ್ ಬಳಿ ಬೈಕ್‍ನಲ್ಲಿ ಆಗಮಿಸಿದ ಮೂವರು ಪುಂಡರು ಆಕೆಯೊಂದಿಗೆ ಅಸಭ್ಯ ರೀತಿಯಲ್ಲಿ ವರ್ತಿಸಿದ್ದಾರೆ. ಆ ವೇಳೆ ವಿದ್ಯಾರ್ಥಿನಿ ಸಹಾಯಕ್ಕಾಗಿ ಅಂಗಾಲಾಚಿದರೂ ಹಾಸ್ಟೆಲ್ ಕಾವಲುಗಾರ ಸಹಾಯಕ್ಕೆ ಬರಲಿಲ್ಲ. ಈ ಬಗ್ಗೆ ವಿದ್ಯಾರ್ಥಿನಿ ವಾರ್ಡನ್‍ಗೆ ದೂರು ನೀಡಿದಾಗ, ಆಕೆಗೆ ಸಹಾಯ ನೀಡುವ ಬದಲು ಕಾಲೇಜು ಅಧಿಕೃತರು ಆಕೆಯನ್ನು ಅವಹೇಳನ ಮಾಡಿದ್ದಾರೆ.

ವಿದ್ಯಾರ್ಥಿನಿಯನ್ನು ಅವಹೇಳನ ಮಾಡಿದ ವಿವಿ ಅಧಿಕೃತರ ವಿರುದ್ಧ ಹಾಸ್ಟೆಲ್‍ನ ವಿದ್ಯಾರ್ಥಿನಿಯರು ಶುಕ್ರವಾರದಿಂದ ಪ್ರತಿಭಟನೆ ನಡೆಸುತ್ತಿದ್ದಾರೆ. ಲೈಂಗಿಕ ದೌರ್ಜನ್ಯಕ್ಕೊಳಗಾಗಿರುವ ವಿದ್ಯಾರ್ಥಿನಿಯನ್ನು ಅವಹೇಳನ ಮಾಡಿದ ಹಾಸ್ಟೆಲ್ ಅಧಿಕೃತರು ಮತ್ತು ವಿಶ್ವವಿದ್ಯಾಲಯದ ಆಡಳಿತ ವರ್ಗದವರ ವಿರುದ್ಧ ಈ ಪ್ರತಿಭಟನೆ ನಡೆದಿದೆ.

Read These Next

ಪ್ರಧಾನಿ ಮೋದಿಯಿಂದ ದ್ವೇಷ ಭಾಷಣ! ಚುನಾವಣಾ ಆಯೋಗದ ನಿಷ್ಕ್ರಿಯತೆಗೆ ಪ್ರತಿಪಕ್ಷಗಳ ಆಕ್ರೋಶ

ಪ್ರಧಾನಿ ನರೇಂದ್ರ ಮೋದಿಯವರು ಮುಸ್ಲಿಮ್ ಸಮುದಾಯದ ವಿರುದ್ದ ಆಕ್ಷೇಪಕಾರಿ ಭಾಷಣಗೈದು ತೀವ್ರ ವಿವಾದಕ್ಕೆ ಗುರಿಯಾಗಿದ್ದಾರೆ. ...

ಅಣಕು ಮತದಾನದ ವೇಳೆ ಬಿಜೆಪಿಗೆ ಮತ

ಕೇರಳದ ಕಾಸರಗೋಡಿನಲ್ಲಿ ಅಣಕು ಮತದಾನದವೇಳೆ ಇವಿಎಂಗಳು ತಪ್ಪಾಗಿ ಬಿಜೆಪಿ ಪರವಾಗಿ ಮತಗಳನ್ನು ದಾಖಲಿಸಿವೆ ಎಂದು ಅರ್ಜಿದಾರರೊಬ್ಬರು ...

ಚುನಾವಣಾ ಪ್ರಕ್ರಿಯೆಯಲ್ಲಿ ಪಾವಿತ್ರ್ಯವಿರಬೇಕು; ಆಯೋಗಕ್ಕೆ ಹೇಳಿದ ಸುಪ್ರೀಂ ಕೋರ್ಟ್

ಚುನಾವಣಾ ಪ್ರಕ್ರಿಯೆ ಯಲ್ಲಿ ಪಾವಿತ್ರ್ಯವಿರಬೇಕು ಎಂದು ಚುನಾವಣಾ ಆಯೋಗಕ್ಕೆ ಇಂದು ಸುಪ್ರೀಂ ಕೋರ್ಟ್ ಹೇಳಿದೆಯಲ್ಲದೆ ಸ್ವತಂತ್ರ ...

ಮನೆಯಿಂದ‌ ಮತದಾನ ಪ್ರಕ್ರಿಯೆಗೆ ಡಿ.ಸಿ. ಚಾಲನೆ. ಹಿರಿಯ ನಾಗರೀಕರು, ವಿಶೇಷ ಚೇತನರಿಂದ ಮತದಾನ

ಕಲಬುರಗಿ : ಸಾರ್ವತ್ರಿಕ ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ 85 ವರ್ಷ ಮೇಲ್ಪಟ್ಟ ಹಿರಿಯ ನಾಗರೀಕರು ಹಾಗೂ ವಿಶೇಷಚೇತನರು ಮನೆಯಿಂದಲೇ ಮತ ...

ಒತ್ತಡ ನಿರ್ವಹಣೆ ಸಮರ್ಪಕವಾಗಿ ನಿರ್ವಹಿಸಿ ಸದೃಢ ಆರೋಗ್ಯ ಕಾಯ್ದುಕೊಳ್ಳಿ: ಡಾ.ವೀರೇಂದ್ರ ಕುಮಾರ್

ಬಳ್ಳಾರಿ : ಮಾನಸಿಕ ಆರೋಗ್ಯದ ಸದೃಢತೆಗೆ ಜೀವನದ ಪ್ರತಿಯೊಂದು ಕ್ಷಣಗಳನ್ನು ಸಮನಾಗಿ ಸ್ವೀಕರಿಸುವ ಮೂಲಕ ಆರೋಗ್ಯದ ಮೇಲುಂಟಾಗುವ ...