ವಿಶ್ವಸಂಸ್ಥೆಯಲ್ಲಿ ಕಾಂಗ್ರೆಸ್ ಸಾಧನೆ ಹೊಗಳಿದ ಸುಷ್ಮಾ ಸ್ವರಾಜ್'ಗೆ ಧನ್ಯವಾದ: ರಾಹುಲ್ ಗಾಂಧಿ

Source: KP/ANI | By I.G. Bhatkali | Published on 25th September 2017, 1:23 AM | National News |
ನವದೆಹಲಿ: ವಿಶ್ವಸಂಸ್ಥೆ 72ನೇ ಮಹಾ ಅಧಿವೇಶನದಲ್ಲಿ ವಿದೇಶಾಂಗ ಸಚಿವೆ ಸುಷ್ಮಾ ಸ್ವರಾಜ್ ಅವರು ಮಾಡಿದ್ದ ಭಾಷಣವನ್ನು ಕಾಂಗ್ರೆಸ್ ಸ್ವಾಗತಿಸಿದ್ದು, ವಿಶ್ವಸಂಸ್ಥೆಯಲ್ಲಿ ಕಾಂಗ್ರೆಸ್ ಸಾಧನೆ ಹೊಗಳಿದ ಸುಷ್ಮಾ ಅವರಿಗೆ ಧನ್ಯವಾದಗಳು ಎಂದು ಕಾಂಗ್ರೆಸ್ ಉಪಾಧ್ಯಕ್ಷ ರಾಹುಲ್ ಗಾಂಧಿಯವರು ಭಾನುವಾರ ಹೇಳಿದ್ದಾರೆ. 

72ನೇ ವಿಶ್ವಸಂಸ್ಥೆಯ ಮಹಾ ಅಧಿವೇಶನದಲ್ಲಿ ಮಾತನಾಡಿದ್ದ ಸುಷ್ಮಾ ಸ್ವರಾಜ್ ಅವರು, ಭಾರತ ಬಡತನ ನಿರ್ಮೂಲನೆ ಬಗ್ಗೆ ಗಮನ ಹರಿಸಿದರೆ, ಪಾಕಿಸ್ತಾನ ಉಗ್ರ ಸಂಘಟನೆಗಳನ್ನು ಹುಟ್ಟು ಹಾಕುವಿಕೆಯತ್ತ ಗಮನ ಹರಿಸುತ್ತಿದೆ. ನಾವು ಐಐಟಿ, ಎಐಐಎಂಎಸ್ ಮತ್ತು ಇಸ್ರೋ ಸಂಸ್ಥೆಗಳನ್ನು ಸ್ಥಾಪಿಸಿ ಅಭಿವೃದ್ಧಿ ನೋಡುತ್ತಿದ್ದೇವೆಂದು ಹೇಳಿದ್ದರು. 

ಈ ಹೇಳಿಕೆಯನ್ನು ಸ್ವಾಗತಿಸಿ ಸಾಮಾಜಿಕ ಜಾಲತಾಣ ಟ್ವಿಟರ್ ನಲ್ಲಿ ಪ್ರತಿಕ್ರಿಯೆ ನೀಡಿರುವ ರಾಹುಲ್ ಗಾಂಧಿಯವರು, ಕಾಂಗ್ರೆಸ್'ನ ಸಾಧನೆಗಳನ್ನು ವಿಶ್ವಸಂಸ್ಥೆಯಲ್ಲಿ ಹೊಗಳಿದ ಸುಷ್ಮಾ ಜೀಯವರಿಗೆ ಧನ್ಯವಾದಗಳು, ನಾವು ಕೈಗೊಂಡ ಅಭಿವೃದ್ಧಿ ಕಾರ್ಯಗಳನ್ನು ಕೊನೆಗೂ ಎನ್ ಡಿಎ ಸರ್ಕಾರ ಒಪ್ಪಿಕೊಂಡಿದೆ ಎಂದು ಹೇಳಿಕೊಂಡಿದ್ದಾರೆ. 

ರಾಹುಲ್ ಗಾಂಧಿಯವರ ಟ್ವೀಟ್ ಬೆನ್ನಲ್ಲೇ ಕಾಂಗ್ರೆಸ್ ವಕ್ತಾರ ರಣದೀಪ್ ಸುಜ್ವೇಲಾ ಕೂಡ ಟ್ವೀಟ್ ಮಾಡಿದ್ದು, ಕಾಂಗ್ರೆಸ್ ಸರ್ಕಾರ 70 ವರ್ಷಗಳ ಕಾಲ ದೇಶದಲ್ಲಿ ಆಡಳಿತ ನಡೆಸಿತ್ತು. ಅಂದು ನಾವು ಮಾಡಿದ್ದ ಕಾರ್ಯಗಳನ್ನು ಇಂದು ಬಹಿರಂಪಡಿಸಿ ನಮ್ಮ ದಕ್ಷ ಆಡಳಿತವನ್ನು ಮೆಲುಕು ಹಾಕಲು ಸುಷ್ಮಾ ಸ್ವರಾಜ್ ಅವರು ಕನ್ನಡಿಯಾಗಿದ್ದಾರೆ. ಕಾಂಗ್ರೆಸ್ ಸರ್ಕಾರ ಭಾರತದ ಅಭಿವೃದ್ಧಿಯನ್ನು ಬಯಸಿತ್ತು. ಹೀಗಾಗಿ ಮತ್ತೆ ನಮ್ಮ ಕಾರ್ಯಗಳನ್ನು ಎನ್ ಡಿಎ ಸರ್ಕಾರ ಒಪ್ಪಿಕೊಂಡಿದೆ ಎಂದು ವ್ಯಂಗ್ಯವಾಡಿದ್ದಾರೆ. 

Read These Next

ಅಣಕು ಮತದಾನದ ವೇಳೆ ಬಿಜೆಪಿಗೆ ಮತ

ಕೇರಳದ ಕಾಸರಗೋಡಿನಲ್ಲಿ ಅಣಕು ಮತದಾನದವೇಳೆ ಇವಿಎಂಗಳು ತಪ್ಪಾಗಿ ಬಿಜೆಪಿ ಪರವಾಗಿ ಮತಗಳನ್ನು ದಾಖಲಿಸಿವೆ ಎಂದು ಅರ್ಜಿದಾರರೊಬ್ಬರು ...

ಚುನಾವಣಾ ಪ್ರಕ್ರಿಯೆಯಲ್ಲಿ ಪಾವಿತ್ರ್ಯವಿರಬೇಕು; ಆಯೋಗಕ್ಕೆ ಹೇಳಿದ ಸುಪ್ರೀಂ ಕೋರ್ಟ್

ಚುನಾವಣಾ ಪ್ರಕ್ರಿಯೆ ಯಲ್ಲಿ ಪಾವಿತ್ರ್ಯವಿರಬೇಕು ಎಂದು ಚುನಾವಣಾ ಆಯೋಗಕ್ಕೆ ಇಂದು ಸುಪ್ರೀಂ ಕೋರ್ಟ್ ಹೇಳಿದೆಯಲ್ಲದೆ ಸ್ವತಂತ್ರ ...

'ಚುನಾವಣಾ ಬಾಂಡ್' ವಿಶ್ವದ ದೊಡ್ಡ ಹಗರಣ; ಬಿಜೆಪಿ ವಿರುದ್ಧ ರಾಹುಲ್‌ ಗಾಂಧಿ ವಾಗ್ದಾಳಿ

ಬಿಜೆಪಿಯ ಚುನಾ ವಣಾ ಬಾಂಡ್ ವಿಶ್ವದ ಅತ್ಯಂತ ದೊಡ್ಡ ಹಗರಣವಾಗಿದ್ದು, ಗೂಂಡಾಗಳ ರೀತಿಯಲ್ಲಿ ಕೆಲವು ಉದ್ಯಮಿಗಳನ್ನು ಬೆದರಿಸಿ ಹಫ್ತಾ ...

ಗುಂಪಿನಿಂದ ಹತ್ಯೆ, ಗೋರಕ್ಷಣೆ ಹೆಸರಿನಲ್ಲಿ ಹಿಂಸಾಚಾರ ತಡೆಯಲು ಕೈಗೊಂಡ ಕ್ರಮಗಳ ಬಗ್ಗೆ ತಿಳಿಸಿ; ರಾಜ್ಯಗಳಿಗೆ ಸುಪ್ರೀಂ ಸೂಚನೆ

ಗುಂಪಿನಿಂದ ಥಳಿಸಿ ಹತ್ಯೆ ಮತ್ತು ಗೋರಕ್ಷಣೆಯ ಹೆಸರಿನಲ್ಲಿ ಹಿಂಸಾಚಾರದ ಘಟನೆಗಳನ್ನು ತಡೆಯಲು ಕೈಗೊಂಡಿರುವ ಕ್ರಮಗಳ ಬಗ್ಗೆ ಆರು ...