ಜೈಪುರ : ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆಗೆ ಗೈರು ಹಾಜರಾದ ಸಚಿನ್ ಪೈಲಟ್ ಮತ್ತು ಅವರ ಬೆಂಬಲಿಗರಾದ 18 ಮಂದಿ ಶಾಸಕರನ್ನು ಅನರ್ಹಗೊಳಿಸುವ ಸಂಬಂಧ ಕಾರಣ ಕೇಳಿ ವಿಧಾನಸಭೆಯ ಸ್ಪೀಕರ್ ಸಿ.ಪಿ.ಜೋಷಿ ಷೋಕಾಸ್ ನೋಟಿಸ್ ನೀಡಿದ್ದು, ಶುಕ್ರವಾರದ ಒಳಗೆ ಉತ್ತರ ನೀಡುವಂತೆ ಸೂಚಿಸಲಾಗಿದೆ.
ರಾಜಸ್ಥಾನ ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್ ವಿರುದ್ಧ ಬಂಡಾಯ ಎದ್ದಿರುವ ಪೈಲಟ್ ಅವರನ್ನು ಈಗಾಗಲೇ ಉಪಮುಖ್ಯಮಂತ್ರಿ ಮತ್ತು ಪಕ್ಷದ ರಾಜ್ಯ ಘಟಕದ ಅಧ್ಯಕ್ಞ ಸ್ಥಾನದಿಂದ ವಜಾಗೊಳಿಸಲಾಗಿದೆ. ಅಲ್ಲದೆ ಅವರ ಪರವಾಗಿ ಇದ್ದ ವಿಶ್ವೇಂದ್ರ ಸಿಂಗ್ ಮತ್ತು ರಮೇಶ್ ಮೀನಾ ಅವರನ್ನು ಸಚಿವ ಸಂಪುಟದಿಂದ ಕೈಬಿಡಲಾಗಿದೆ.
ಶಾಸಕಾಂಗ ಪಕ್ಷದ ಸಭೆಗೆ ಗೈರು ಹಾಜರಾದ ಶಾಸಕರನ್ನು ಅನರ್ಹಗೊಳಿಸುವಂತೆ ಕೋರಿ ಪಕ್ಷದ ಮುಖ್ಯಸಚೇತಕ ಮಹೇಶ್ ಜೋಷಿ ಅವರು ಸ್ಪೀಕರ್ಗೆ ಪತ್ರ ಬರೆದಿದ್ದರು. ಇದಾದ ಬಳಿಕ ಮಂಗಳವಾರವೇ ಸ್ಪೀಕರ್ ಅವರು ನೋಟಿಸ್ ನೀಡಿದ್ದಾರೆ. ಅವರನ್ನು ಅನರ್ಹಗೊಳಿಸುವಂತೆ ಪಕ್ಷವು ಸ್ಪೀಕರ್ ಅವರಿಗೆ ಮನವಿ ಮಾಡಲಿದೆ ಎಂದು ಎಐಸಿಸಿ ಪ್ರಧಾನ ಕಾರ್ಯದರ್ಶಿ ಅವಿನಾಶ್ ಪಾಂಡೆ ತಿಳಿಸಿದರು.
ಒಟ್ಟು 19 ಮಂದಿ ಶಾಸಕರು ಗೈರು ಹಾಜರಾಗಿದ್ದರು. ಸ್ಪೀಕರ್ ನೀಡುವ ನೋಟಿಸ್ಗೆ ಅವರು ಉತ್ತರ ನೀಡಬೇಕಾಗಿದ್ದು, ಅಂತಿಮವಾಗಿ ಸ್ಪೀಕರ್ ಅವರು ಈ ಬಗ್ಗೆ ತೀರ್ಮಾನ ತೆಗೆದುಕೊಳ್ಳಲಿದ್ದಾರೆ ಎಂದು ಅವರು ಹೇಳಿದರು.
ಬಾಗಿಲು ಮುಚ್ಚಿಲ್ಲ: ಸಚಿನ್ ಪೈಲಟ್ ಮತ್ತು ಅವರ ಬೆಂಬಲಿಗರಿಗೆ ಪಕ್ಷದ ಬಾಗಿಲು ಮುಚ್ಚಿಲ್ಲ ಎಂದು ಅವಿನಾಶ್ ಪಾಂಡೆ ಹೇಳಿದ್ದಾರೆ. ಕಳೆದ ಚುನಾವಣೆಯಲ್ಲಿ ರಾಜಸ್ಥಾನದಲ್ಲಿ ಪಕ್ಷವನ್ನು ಅಧಿಕಾರಕ್ಕೆ ತರಲು ಪೈಲಟ್ ಅವರು ಶಕ್ತಿಮೀರಿ ಶ್ರಮಿಸಿದ್ದಾರೆ. ಅವರಿಗೆ ತಮ್ಮ ತಪ್ಪಿನ ಅರಿವಾಗಿ, ಬಿಜೆಪಿ ಬೀಸಿರುವ ಗಾಳಕ್ಕೆ ಬೀಳದಂತೆ ದೇವರು ಒಳ್ಳೆಯ ಬುದ್ದಿಯನ್ನು ನೀಡಲು ಎಂದು ದೇವರಲ್ಲಿ ಪ್ರಾರ್ಥಿಸುವುದಾಗಿ ಅವರು ಟ್ವಿಟ್ ಮಾಡಿದ್ದಾರೆ
Read These Next
ರೈತರ ಮೇಲೆ ಹಿಂಸಾತ್ಮಕ ದಾಳಿಗೆ ಸಂಚು. ಸಿಕ್ಕಿಬಿದ್ದ ಯುವಕನಿಂದ ಬಯಲು
ನವದೆಹಲಿ : ಕೃಷಿ ಕಾಯ್ದೆ ಹಿಂಪಡೆಯುವುದಕ್ಕೆ ಆಗ್ರಹಿಸಿ ಜ. 26ರಂದು ರೈತರ ಟ್ರ್ಯಾಕ್ಟರ್ ಪರೇಡ್ ನಡೆಸಲಿರುವ ರೈತರ ಮೇಲೆ ಹಿಂಸಾತ್ಮಕ ...
69 ವರ್ಷಗಳ ಹಿಂದೆ ನಡೆದ ಗಣರಾಜ್ಯೋತ್ಸವದಂದು ಟ್ರ್ಯಾಕ್ಟರ್ ಪರೇಡ್ ನಡೆದಿತ್ತು.
ನವದೆಹಲಿ, ಜ. 21: ಕೃಷಿ ಕಾಯ್ದೆಗಳನ್ನು ಹಿಂಪಡೆಯುವಂತೆ ಹೋರಾಟ ನಡೆಸುತ್ತಿರುವ ರೈತರು ಜ. 26ರಂದು ಟ್ರ್ಯಾಕ್ಟರ್ ಪರೇಡ್ ...
ಕಾರವಾರ ನೌಕಾನೆಲೆಗೆ ಕೇಂದ್ರ ರಕ್ಷಣಾ ಸ್ಥಾಯಿ ಸಮಿತಿ ತಂಡ ಭೇಟಿ.
ಕಾರವಾರ : ಇಲ್ಲಿನ ಐಎನ್ಎಸ್ ಕದಂಬ ನೌಕಾನೆಲೆಗೆ ಕೇಂದ್ರ ರಕ್ಷಣಾ ಸ್ಥಾಯಿ ಸಮಿತಿ ಸದಸ್ಯರು ಬುಧವಾರ ಭೇಟಿ ನೀಡಿ ವಾಪಾಸ್ಸಾಗಿದ್ದಾರೆ
ಜನವರಿ 26ಕ್ಕೆ ಟ್ರ್ಯಾಕ್ಟರ್ ಪರೇಡ್ ಖಚಿತ; ಶಾಂತಿಯುತವಾಗಿ ದೆಹಲಿ ರಿಂಗ್ ರೋಡ್ನಲ್ಲಿ ರ್ಯಾಲಿ
ನವದೆಹಲಿ : ದೆಹಲಿ ಪೊಲೀಸ್ನ ತಕರಾರಿನ ನಡುವೆಯೂ ದೆಹಲಿ ಗಡಿಯಲ್ಲಿ ನೆರೆದಿರುವ ರೈತರು ತಮ್ಮ ಈ ಹಿಂದಿನ ನಿರ್ಧಾರದಂತೆ ಜನವರಿ 26ರ ...
ಕೃಷಿ ನೀತಿ ವಿರೋಧಿ ಹೋರಾಟ; ಪೆರುವಿನ ರೈತರ ಹೋರಾಟಕ್ಕೆ ಗೆಲವು ಸಿಕ್ಕಂತೆ, ಭಾರತೀಯರು ರೈತರಿಗೂ ಸಿಗಬಹುದೆ?
ನವದೆಹಲಿ : ನಮ್ಮಿಂದ ಸಾಧ್ಯವಾಯಿತು! ...
ಸುಪ್ರೀಂ ಕೋರ್ಟ್ ಸಮಿತಿ ನೇಮಿಸಿದ ಸಮಿತಿಯ ಮುಂದೆ ಹೋಗುವುದಿಲ್ಲ : ರೈತ ಮುಖಂಡ ದರ್ಶನ್ ಪಾಲ್
9ನೇ ಸುತ್ತಿನ ಮಾತುಕತೆಯ ಮೂಲಕ ಕೇಂದ್ರ ಸರ್ಕಾರ ಮತ್ತು ರೈತ ಸಂಘಟನೆಗಳ ಜೊತೆಗೆ ಮಾತುಕತೆ ಮುಕ್ತಾಯಗೊಂಡಿದೆ. ಇನ್ನೇನಿದ್ದರೂ ...
ಭಟ್ಕಳ: 10.95 ಕೋಟಿದ ಮಿನಿ ವಿಧಾನ ಸೌಧ ಉದ್ಘಾಟನೆ
ಸರಕಾರ ಅತಿವೃಷ್ಟಿಯಿಂದ ರೈತರ ಬೆಳೆ ಹಾನಿಯಾಗಿದ್ದನ್ನು ಪರಿಗಣಿಸಿ ಈಗಾಗಲೇ ರಾಜ್ಯದಲ್ಲಿ 922631 ರೈತರಿಗೆ ನೇರವಾಗಿ ಅವರ ಬ್ಯಾಂಕ್ ...
14 ಎಕರೆಯಲ್ಲಿ ಐಟಿ ಪಾರ್ಕ್ ಸ್ಥಾಪನೆ : 200 ಕೋಟಿ ವಿನಿಯೋಗ
ಹಾಸನ : ನಗರದ ಡೈರಿ ಸಮೀಪದ ಕೈಗಾರಿಕಾ ಪ್ರದೇಶದಲ್ಲಿನ ಮೈಸೂರು ಮಿನರಲ್ಸ್ಗೆ ಸೇರಿದ 14 ಎಕರೆ ಜಾಗವಿದ್ದು ಇಲ್ಲಿ ಐಟಿ ಪಾರ್ಕ್ ಹಾಗೂ ...
ಮತದಾನ ಒಂದು ಅಸ್ತ್ರ : ಜಿಲ್ಲಾಧಿಕಾರಿ ಆರ್.ಗಿರೀಶ್
ಹಾಸನ : ಮತದಾನ ಒಂದು ಅಸ್ತ್ರವಿದ್ದಂತೆ ಸರ್ಕಾರವನ್ನೇ ಬದಲಾಯಿಸುವ ಶಕ್ತಿ ಚುನಾವಣೆಗಿದೆ ಎಂದು ಜಿಲ್ಲಾಧಿಕಾರಿ ಆರ್. ಗಿರೀಶ್ ...
ಆಯುಷ್ ವಿಭಾಗ - ಕೋವಿಡ್ -19 ಲಸಿಕಾ ಕಾರ್ಯಕ್ರಮ ಉದ್ಘಾಟನೆ
ಮಂಗಳೂರು : ನಗರದ ವೆನ್ಲಾಕ್ ಆಸ್ಪತ್ರೆಯ ಆಯುಷ್ ವಿಭಾಗದಲ್ಲಿ ಪಡೀಲ್ ಹಾಗೂ ಶಕ್ತಿನಗರದ ಆರೋಗ್ಯ ಕೇಂದ್ರದ ಸಹಭಾಗಿತ್ವದಲ್ಲಿ ಕೋವಿಡ್ ...
ಕಾರವಾರ: ‘ಯುವ ವಿಜ್ಞಾನಿ ಪ್ರಶಸ್ತಿ’ಗೆ ಅರ್ಜಿ ಆಹ್ವಾನ
ಕರ್ನಾಟಕ ರಾಜ್ಯ ವಿಜ್ಞಾನ ಪರಿಷತ್ ಮಕ್ಕಳಿಗೆ ವಿಜ್ಞಾನ ವಿಷಯಗಳಲ್ಲಿ ಆಸಕ್ತಿ ಹಾಗೂ ಚಿಂತನಾ ಕೌಶಲ್ಯ ವೃದ್ಧಿಸಬೇಕೆಂಬ ಉದ್ದೇಶದಿಂದ 9 ...
ಭಟ್ಕಳ: ಕಾಂಗ್ರೇಸ್ ಪ್ರೇರಿತ ಪ್ರತಿಭಟನೆಗಳಿಗೆ ಯಾವುದೇ ಬೆಲೆ ಇಲ್ಲ-ಆರ್. ಅಶೋಕ
ಭಟ್ಕಳ: ರಾಜ್ಯದಲ್ಲಿ ಕಾಂಗ್ರೇಸ್ ಪಕ್ಷ ರೈತರನ್ನು ಎತ್ತಿಕಟ್ಟುವುದರ ಮೂಲಕ ಹಿಂಬಾಗಿಲ ರಾಜಕೀಯ ಮಾಡುತ್ತಿದ್ದು ಕಾಂಗ್ರೇಸ್ ಪ್ರೇರಿತ ...