ಜೈಪುರ : ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆಗೆ ಗೈರು ಹಾಜರಾದ ಸಚಿನ್ ಪೈಲಟ್ ಮತ್ತು ಅವರ ಬೆಂಬಲಿಗರಾದ 18 ಮಂದಿ ಶಾಸಕರನ್ನು ಅನರ್ಹಗೊಳಿಸುವ ಸಂಬಂಧ ಕಾರಣ ಕೇಳಿ ವಿಧಾನಸಭೆಯ ಸ್ಪೀಕರ್ ಸಿ.ಪಿ.ಜೋಷಿ ಷೋಕಾಸ್ ನೋಟಿಸ್ ನೀಡಿದ್ದು, ಶುಕ್ರವಾರದ ಒಳಗೆ ಉತ್ತರ ನೀಡುವಂತೆ ಸೂಚಿಸಲಾಗಿದೆ.
ರಾಜಸ್ಥಾನ ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್ ವಿರುದ್ಧ ಬಂಡಾಯ ಎದ್ದಿರುವ ಪೈಲಟ್ ಅವರನ್ನು ಈಗಾಗಲೇ ಉಪಮುಖ್ಯಮಂತ್ರಿ ಮತ್ತು ಪಕ್ಷದ ರಾಜ್ಯ ಘಟಕದ ಅಧ್ಯಕ್ಞ ಸ್ಥಾನದಿಂದ ವಜಾಗೊಳಿಸಲಾಗಿದೆ. ಅಲ್ಲದೆ ಅವರ ಪರವಾಗಿ ಇದ್ದ ವಿಶ್ವೇಂದ್ರ ಸಿಂಗ್ ಮತ್ತು ರಮೇಶ್ ಮೀನಾ ಅವರನ್ನು ಸಚಿವ ಸಂಪುಟದಿಂದ ಕೈಬಿಡಲಾಗಿದೆ.
ಶಾಸಕಾಂಗ ಪಕ್ಷದ ಸಭೆಗೆ ಗೈರು ಹಾಜರಾದ ಶಾಸಕರನ್ನು ಅನರ್ಹಗೊಳಿಸುವಂತೆ ಕೋರಿ ಪಕ್ಷದ ಮುಖ್ಯಸಚೇತಕ ಮಹೇಶ್ ಜೋಷಿ ಅವರು ಸ್ಪೀಕರ್ಗೆ ಪತ್ರ ಬರೆದಿದ್ದರು. ಇದಾದ ಬಳಿಕ ಮಂಗಳವಾರವೇ ಸ್ಪೀಕರ್ ಅವರು ನೋಟಿಸ್ ನೀಡಿದ್ದಾರೆ. ಅವರನ್ನು ಅನರ್ಹಗೊಳಿಸುವಂತೆ ಪಕ್ಷವು ಸ್ಪೀಕರ್ ಅವರಿಗೆ ಮನವಿ ಮಾಡಲಿದೆ ಎಂದು ಎಐಸಿಸಿ ಪ್ರಧಾನ ಕಾರ್ಯದರ್ಶಿ ಅವಿನಾಶ್ ಪಾಂಡೆ ತಿಳಿಸಿದರು.
ಒಟ್ಟು 19 ಮಂದಿ ಶಾಸಕರು ಗೈರು ಹಾಜರಾಗಿದ್ದರು. ಸ್ಪೀಕರ್ ನೀಡುವ ನೋಟಿಸ್ಗೆ ಅವರು ಉತ್ತರ ನೀಡಬೇಕಾಗಿದ್ದು, ಅಂತಿಮವಾಗಿ ಸ್ಪೀಕರ್ ಅವರು ಈ ಬಗ್ಗೆ ತೀರ್ಮಾನ ತೆಗೆದುಕೊಳ್ಳಲಿದ್ದಾರೆ ಎಂದು ಅವರು ಹೇಳಿದರು.
ಬಾಗಿಲು ಮುಚ್ಚಿಲ್ಲ: ಸಚಿನ್ ಪೈಲಟ್ ಮತ್ತು ಅವರ ಬೆಂಬಲಿಗರಿಗೆ ಪಕ್ಷದ ಬಾಗಿಲು ಮುಚ್ಚಿಲ್ಲ ಎಂದು ಅವಿನಾಶ್ ಪಾಂಡೆ ಹೇಳಿದ್ದಾರೆ. ಕಳೆದ ಚುನಾವಣೆಯಲ್ಲಿ ರಾಜಸ್ಥಾನದಲ್ಲಿ ಪಕ್ಷವನ್ನು ಅಧಿಕಾರಕ್ಕೆ ತರಲು ಪೈಲಟ್ ಅವರು ಶಕ್ತಿಮೀರಿ ಶ್ರಮಿಸಿದ್ದಾರೆ. ಅವರಿಗೆ ತಮ್ಮ ತಪ್ಪಿನ ಅರಿವಾಗಿ, ಬಿಜೆಪಿ ಬೀಸಿರುವ ಗಾಳಕ್ಕೆ ಬೀಳದಂತೆ ದೇವರು ಒಳ್ಳೆಯ ಬುದ್ದಿಯನ್ನು ನೀಡಲು ಎಂದು ದೇವರಲ್ಲಿ ಪ್ರಾರ್ಥಿಸುವುದಾಗಿ ಅವರು ಟ್ವಿಟ್ ಮಾಡಿದ್ದಾರೆ
Read These Next
ರಿಲಯನ್ಸ್ ಜೊತೆ ನಂಟು ಹೊಂದಿರುವ ಕಂಪೆನಿಯಿಂದ ಬಿಜೆಪಿಗೆ 375 ಕೋಟಿ ರೂ. ಮೌಲ್ಯದ ಚುನಾವಣಾ ಬಾಂಡ್
ರಿಲಯನ್ಸ್ ಗುಂಪಿನೊಂದಿಗೆ ನಂಟು ಹೊಂದಿರುವ, ಆದರೆ ಹೊರಜಗತ್ತಿಗೆ ಅಪರಿಚಿತವಾಗಿರುವ ಕಂಪೆನಿ ಕ್ವಿಕ್ ಸಪ್ಪೆ ಚೇನ್ ಪ್ರೈವೇಟ್ ...
ಚುನಾವಣಾ ಬೌಂಡ್; ವಿಶಿಷ್ಟ ಸಂಖ್ಯೆ, ವಿವರ ಚು.ಆಯೋಗಕ್ಕೆ ಸಲ್ಲಿಸಿದ ಎಸ್ಬಿಐ
ಭಾರತೀಯ ಸ್ಟೇಟ್ ಬ್ಯಾಂಕ್ (ಎಸ್ಬಿಐ) ಸರ್ವೋಚ್ಚ ನ್ಯಾಯಾಲಯದ ಆದೇಶಕ್ಕೆ ಅನುಗುಣವಾಗಿ ವಿಶಿಷ್ಟ ಸಂಖ್ಯೆಗಳು ಸೇರಿದಂತೆ ಚುನಾವಣಾ ...
ಅಬಕಾರಿ ನೀತಿ ಹಗರಣ; ಕೇಜ್ರಿವಾಲ್ ಬಂಧನ; ಈ. ಡಿ. ವಶದಲ್ಲಿ ದಿಲ್ಲಿ ಸಿಎಂ
ಅಬಕಾರಿ ನೀತಿ ಹಗರಣಕ್ಕೆ ಸಂಬಂಧಿಸಿ ದಿಲ್ಲಿ ಮುಖ್ಯಮಂತ್ರಿ ಹಾಗೂ ಆಮ್ ಆದ್ಮಿ ಪಕ್ಷದ ವರಿಷ್ಠ ಅರವಿಂದ ಕೇಜ್ರಿವಾಲ್ ಅವರನ್ನು ಜಾರಿ ...
ಲೋಕಸಭಾ ಚುನಾವಣೆ; ಕಾಂಗ್ರೇಸ್ ನ ಎರಡನೇ ಪಟ್ಟಿ ಬಿಡುಗಡೆ; ಉ.ಕ ಕ್ಷೇತ್ರಕ್ಕೆ ಅಂಜಲಿ ನಿಂಬಾಳ್ಕರ್
ಲೋಕಸಭಾ ಚುನಾವಣೆಗೆ ಕಾಂಗ್ರೆಸ್ ಪಕ್ಷ ತನ್ನ ಅಭ್ಯರ್ಥಿಗಳ ಎರಡನೇ ಪಟ್ಟಿಯನ್ನು ಬಿಡುಗಡೆಗೊಳಿಸಿದ್ದು, ಕರ್ನಾಟಕದ 17, ಅರುಣಾಚಲ ...
ಸಿಎಎ ನಿಯಮಾವಳಿಗಳಿಗೆ ತಡೆ ಕೋರುವ ಅರ್ಜಿಗಳ ವಿಚಾರಣೆ ; ಸು.ಕೋರ್ಟ್ನಿಂದ ಕೇಂದ್ರಕ್ಕೆ ನೋಟಿಸ್
ಪೌರತ್ವ ತಿದ್ದುಪಡಿ ಕಾಯ್ದೆ (ಸಿಎಎ)ಯ ನಿಯಮಗಳಿಗೆ ತಡೆಯಾಜ್ಞೆ ನೀಡಬೇಕೆಂದು ಕೋರಿ ಸಲ್ಲಿಸಲಾಗಿರುವ ಅರ್ಜಿಗಳನ್ನು ಮಂಗಳವಾರ ...
ಸು.ಕೋರ್ಟ್ ವಕೀಲರ ಸಂಘದ ಅಧ್ಯಕ್ಷರಿಗೆ ಸಿಜೆಐ ಛೀಮಾರಿ
ಚುನಾವಣಾ ಬಾಂಡ್ಗಳ ಕುರಿತು ತೀರ್ಪನ್ನು ಸ್ವಯಂಪ್ರೇರಿತವಾಗಿ ಮರುಪರಿಶೀಲಿಸುವಂತೆ ಕೋರಿ ಪತ್ರ ಬರೆದಿದ್ದಕ್ಕಾಗಿ ಸುಪ್ರೀಂ ...
ಮಾರ್ಚ 28 ಕ್ಕೆ ಕುಮಟದಲ್ಲಿನ ಬೃಹತ್ ಅರಣ್ಯ ಅತಕ್ರಮಣದಾರರ ಸಭೆ ಮುಂದಕ್ಕೆ
ಮಾರ್ಚ 28 ರ ಕುಮಟದಲ್ಲಿನ ಬೃಹತ್ ಅರಣ್ಯ ಅತಕ್ರಮಣದಾರರ ಸಭೆ ಮುಂದಕ್ಕೆ
ಭಾಷಾ ಜ್ಞಾನದ ಕುರಿತು ಯಾರ ಬಗ್ಗೆಯೂ ಕೇವಲವಾಗಿ ಮಾತನಾಡಿಲ್ಲ: ಜೆ.ಪಿ.ಹೆಗ್ಡೆ ಸ್ವಷ್ಟನೆ
ಉಡುಪಿ: ಈವರೆಗಿನ ರಾಜಕೀಯ ಜೀವನದಲ್ಲಿ ಯಾರ ಮನಸ್ಸನ್ನೂ ನೋಯಿಸುವುದಾಗಲಿ ಅಥವಾ ಕೇವಲವಾಗಿ ಮಾತನಾಡುವುದನ್ನಾಗಲಿ ಮಾಡದೆ ಇರುವ ನಾನು ...
ಲೋಕಸಭಾ ಚುನಾವಣೆ: ಉಡುಪಿ ಜಿಲ್ಲೆಯಲ್ಲಿ ಮದ್ಯ ಮಾರಾಟ ನಿಷೇಧ
ಉಡುಪಿ: ಸಾರ್ವತ್ರಿಕ ಲೋಕಸಭಾ ಚುನಾವಣೆ-2024ರ ಹಿನ್ನೆಲೆಯಲ್ಲಿ ಜಿಲ್ಲೆಯಲ್ಲಿ ಎಪ್ರಿಲ್ 26ರಂದು ಮತದಾನ ಹಾಗೂ ಜೂನ್ 4ರಂದು ಮತ ಎಣಿಕೆ ...
ಮಂಗಳೂರು: ಲೋಕಸಭಾ ಚುನಾವಣೆ ಹಿನ್ನೆಲೆ – 12 ಮಂದಿಗೆ ಗಡಿಪಾರು
ಮಂಗಳೂರು: ಲೋಕಸಭಾ ಚುನಾವಣೆಯಲ್ಲಿ ಮುನ್ನೆಚ್ಚರಿಕಾ ಕ್ರಮವಾಗಿ ನಗರ ಪೊಲೀಸ್ ಆಯುಕ್ತಾಲಯ ವ್ಯಾಪ್ತಿಯಲ್ಲಿ ಕ್ರಿಮಿನಲ್ ...
ಸೌಹಾರ್ದ ಕಾರ್ಯಕ್ರಮಗಳಿಂದ ಮಾತ್ರವೇ ಸ್ವಾಸ್ಥ್ಯ ಸಮಾಜದ ನಿರ್ಮಾಣ ಸಾಧ್ಯ – ಬಶೀರ್ ಮದನಿ
ಮಂಗಳೂರು : ಎಲ್ಲಾ ಧರ್ಮಗಳ ಭೋದನೆಗಳು ಸತ್ಯದ ಹಾದಿಯಲ್ಲಿದ್ದು,ಮನುಷ್ಯ ಕುಲದ ಏಳಿಗೆಗಾಗಿ ಅವುಗಳು ಶ್ರಮಿಸುತ್ತಿದೆಯೇ ಹೊರತು ...
ಭಟ್ಕಳ: ಒಂಟಿ ಚಕ್ರದ ಸೈಕಲ್ಲಿನಲ್ಲೇ ಕೇರಳಿಗನ ಕನ್ಯಾಕುಮಾರಿ-ಕಾಶ್ಮೀರ ಪ್ರಯಾಣ!
ಒಂಟಿ ಚಕ್ರದ ಸೈಕಲ್ಲಿನಲ್ಲೇ ಕೇರಳಿಗನ ಕನ್ಯಾಕುಮಾರಿ-ಕಾಶ್ಮೀರ ಪ್ರಯಾಣ!