ಜೈಪುರ: ರಾಕೇಶ್ ಟಿಕಾಯತ್ ವಾಹನದ ಮೇಲೆ ದಾಳಿ; ಬಿಜೆಪಿ ಗೂಂಡಾಗಳಿಂದ ನಡೆದ ಕೃತ್ಯ: ಆರೋಪ

Source: VB | By S O News | Published on 4th April 2021, 1:13 PM | National News |

ಜೈಪುರ: ಭಾರತೀಯ ಕಿಸಾನ್ ಒಕ್ಕೂಟ (ಬಿಕೆಯು)ದ ನಾಯಕ ರಾಕೇಶ್ ಟಿಕಾಯತ್ ಅವರ ವಾಹನ ವ್ಯೂಹದ ಮೇಲೆ ರಾಜಸ್ಥಾನದ ಅಲ್ವಾರ್‌ ಜಿಲ್ಲೆಯ ತಾತರ್‌ಪುರ ಗ್ರಾಮದಲ್ಲಿ ಶುಕ್ರವಾರ ದಾಳಿ ನಡೆದಿದೆ.

ಈ ದಾಳಿಯಿಂದ ಟಿಕಾಯತ್ ಅವರ ಕಾರಿನ ಕಿಟಕಿಯ ಗಾಜು ಒಡೆದಿದೆ.

ರಾಕೇಶ್ ಟಿಕಾಯತ್ ಅವರ ವಾಹನ ವ್ಯೂಹ ಅಲ್ವಾರ್‌ನ ಹರಸೋರಾ ಗ್ರಾಮದಿಂದ ಬಾನಸೂರ್‌ಗೆ ಸಂಚರಿಸುತ್ತಿದ್ದ ಸಂದರ್ಭ ಈ ದಾಳಿ ನಡೆದಿದೆ. ಹರಸೋರಾದಲ್ಲಿ ರೈತರ ಸಭೆ ಉದ್ದೇಶಿಸಿ ಮಾತನಾಡಿದ ಬಳಿಕ ರಾಕೇಶ್ ಟಿಕಾಯತ್ ಅವರು ಬಾನಸೂರ್‌ಗೆ ತೆರಳುತ್ತಿದ್ದರು.

ಹಾನಿಗೀಡಾದ ಕಾರಿನ ವೀಡಿಯೊವನ್ನು ಟ್ವಿಟ್ಟರ್‌ನಲ್ಲಿ ಅಪ್ ಲೋಡ್ ಮಾಡಿರುವ ರಾಕೇಶ್ ಟಿಕಾಯತ್, ಬಿಜೆಪಿ ಗೂಂಡಾಗಳು ಈ ದಾಳಿ ನಡೆಸಿದ್ದಾರೆ ಎಂದಿದ್ದಾರೆ.

“ರಾಜಸ್ಥಾನದ ಅಲ್ವಾರ್‌ ಜಿಲ್ಲೆಯ ತಾತರ್‌ಪುರದ ಬಾನಸೂರ್ ರಸ್ತೆಯಲ್ಲಿ ಬಿಜೆಪಿಯ ಗೂಂಡಾಗಳು ದಾಳಿ ನಡೆಸಿದ್ದಾರೆ. ಇದು ಪ್ರಜಾಪ್ರಭುತ್ವದ ಸಾವು'' ಎಂದು ಟಿಕಾಯತ್  ಟ್ವೀಟ್ ಮಾಡಿದ್ದಾರೆ.

Read These Next

ಅಣಕು ಮತದಾನದ ವೇಳೆ ಬಿಜೆಪಿಗೆ ಮತ

ಕೇರಳದ ಕಾಸರಗೋಡಿನಲ್ಲಿ ಅಣಕು ಮತದಾನದವೇಳೆ ಇವಿಎಂಗಳು ತಪ್ಪಾಗಿ ಬಿಜೆಪಿ ಪರವಾಗಿ ಮತಗಳನ್ನು ದಾಖಲಿಸಿವೆ ಎಂದು ಅರ್ಜಿದಾರರೊಬ್ಬರು ...

ಚುನಾವಣಾ ಪ್ರಕ್ರಿಯೆಯಲ್ಲಿ ಪಾವಿತ್ರ್ಯವಿರಬೇಕು; ಆಯೋಗಕ್ಕೆ ಹೇಳಿದ ಸುಪ್ರೀಂ ಕೋರ್ಟ್

ಚುನಾವಣಾ ಪ್ರಕ್ರಿಯೆ ಯಲ್ಲಿ ಪಾವಿತ್ರ್ಯವಿರಬೇಕು ಎಂದು ಚುನಾವಣಾ ಆಯೋಗಕ್ಕೆ ಇಂದು ಸುಪ್ರೀಂ ಕೋರ್ಟ್ ಹೇಳಿದೆಯಲ್ಲದೆ ಸ್ವತಂತ್ರ ...

'ಚುನಾವಣಾ ಬಾಂಡ್' ವಿಶ್ವದ ದೊಡ್ಡ ಹಗರಣ; ಬಿಜೆಪಿ ವಿರುದ್ಧ ರಾಹುಲ್‌ ಗಾಂಧಿ ವಾಗ್ದಾಳಿ

ಬಿಜೆಪಿಯ ಚುನಾ ವಣಾ ಬಾಂಡ್ ವಿಶ್ವದ ಅತ್ಯಂತ ದೊಡ್ಡ ಹಗರಣವಾಗಿದ್ದು, ಗೂಂಡಾಗಳ ರೀತಿಯಲ್ಲಿ ಕೆಲವು ಉದ್ಯಮಿಗಳನ್ನು ಬೆದರಿಸಿ ಹಫ್ತಾ ...

ಗುಂಪಿನಿಂದ ಹತ್ಯೆ, ಗೋರಕ್ಷಣೆ ಹೆಸರಿನಲ್ಲಿ ಹಿಂಸಾಚಾರ ತಡೆಯಲು ಕೈಗೊಂಡ ಕ್ರಮಗಳ ಬಗ್ಗೆ ತಿಳಿಸಿ; ರಾಜ್ಯಗಳಿಗೆ ಸುಪ್ರೀಂ ಸೂಚನೆ

ಗುಂಪಿನಿಂದ ಥಳಿಸಿ ಹತ್ಯೆ ಮತ್ತು ಗೋರಕ್ಷಣೆಯ ಹೆಸರಿನಲ್ಲಿ ಹಿಂಸಾಚಾರದ ಘಟನೆಗಳನ್ನು ತಡೆಯಲು ಕೈಗೊಂಡಿರುವ ಕ್ರಮಗಳ ಬಗ್ಗೆ ಆರು ...