ನವದೆಹಲಿ: ಭಾರತದ ಕೊರೊನಾ ರೋಗಿಗಳಲ್ಲಿ ಭರವಸೆಯ ಆಶಾಕಿರಣ ಮೂಡಿಸಿರುವ ದೇಶದ ಪ್ರಪ್ರಥಮ ಕೋವಿಡ್-19 ವೈರಸ್ ನಿಗ್ರಹ ಲಸಿಕೆಯನ್ನು 375 ಜನರ ಮೇಲೆ ಪ್ರಯೋಗಿಸುವ ಹ್ಯೂಮನ್ ಟ್ರಯಲ್ (ಮಾನವ ಪ್ರಯೋಗ) ಶೀಘ್ರ ಆರಂಭವಾಗಲಿದೆ.
ಆಗಸ್ಟ್ 15ರ ಸ್ವಾತಂತ್ರ್ಯೋತ್ಸವಕ್ಕೆ ಮುನ್ನವೇ ದೇಶದ ಪ್ರಪ್ರಥಮ ಕೋವಿಡ್-19 ವೈರಸ್ ನಿಗ್ರಹ ಲಸಿಕೆ ಕೊವ್ಯಾಕ್ಸಿನ್ ಬಿಡುಗಡೆ ಮಾಡಲು ಕೇಂದ್ರ ಸರ್ಕಾರ ಉದ್ದೇಶಿಸಿತ್ತು.
ಈ ನಿಟ್ಟಿನಲ್ಲಿ ದೆಹಲಿಯಲ್ಲಿರುವ ಭಾರತೀಯ ವೈದ್ಯಕೀಯ ಸಂಶೋಧನಾ ಸಂಸ್ಥೆ (ಐಸಿಎಂಆರ್) ಅಹರ್ನಿಷಿ ಕಾರ್ಯೋನ್ಮುಖವಾಗಿತ್ತು. ಅಲ್ಲದೆ, ಬೆಳಗಾವಿ ಸೇರಿದಂತೆ ದೇಶದ 15 ಕೇಂದ್ರಗಳಿಗೆ ಈ ಸಂಬಂಧ ಪ್ರಯೋಗ ನಡೆಸಿ ಅಂತಿಮ ವರದಿ ನೀಡುವಂತೆ ಐಸಿಎಂಆರ್ ಸೂಚಿಸಿತ್ತು.
ಆಗಸ್ಟ್ 15ರೊಳಗೆ ಈ ಲಸಿಕೆಯನ್ನು ಅಭಿವೃದ್ಧಿಗೊಳಿಸುವುದು ಅಸಾಧ್ಯ. ಕನಿಷ್ಟ 5 ತಿಂಗಳು ಅಥವಾ ವರ್ಷಾಂತ್ಯದವರೆಗೂ ಸಮಯಾವಕಾಶ ಬೇಕಾಗುತ್ತದೆ ಎಂದು ಬಹುತೇಕ ವೈರಾಣು ತಜ್ಞರು ಮತ್ತು ಸಂಶೋಧಕರು ಅಭಿಪ್ರಾಯಪಟ್ಟು ಐಸಿಎಂಆರ್ಗೆ ತಿಳಿಸಿದ್ದರು.
ಈ ಹಿನ್ನೆಲೆಯಲ್ಲಿ ಈಗ 365 ರೋಗಿಗಳ ಮೇಲೆ ಹಂತ ಹಂತವಾಗಿ ಕೊವ್ಯಾಕ್ಸಿನ್ ಲಸಿಕೆಯನ್ನು ಪ್ರಯೋಗಕ್ಕೆ ಒಳಪಡಿಸಲು ಐಸಿಎಂಆರ್ ನಿರ್ಧರಿಸಿದೆ. ಇದಕ್ಕೆ ಕೇಂದ್ರ ಆರೋಗ್ಯ ಸಚಿವಾಲಯ ಸಮ್ಮತಿ ನೀಡಿದ್ದು, ಶೀಘ್ರವೇ 375 ಜನರ ಮೇಲೆ ಅತ್ಯಂತ ಎಚ್ಚರಿಕೆಯಿಂದ ಈ ಲಸಿಕೆ ಪ್ರಯೋಗ ಆರಂಭವಾಗಲಿದೆ.
ಈ ಪ್ರಯೋಗದ ವೇಳೆ ಲಸಿಕೆಯ ಸಾಧಕ-ಬಾಧಕ ಮತ್ತು ಅಡ್ಡ ಪರಿಣಾಮಗಳನ್ನು ಗಣನೆಗೆ ತೆಗೆದುಕೊಂಡು ಅತ್ಯಂತ ಸುರಕ್ಷಿತ ಮತ್ತು ನಿಖರವಾದ ಕೊವ್ಯಾಕ್ಸಿನ್ ಲಸಿಕೆಯನ್ನು ಅತ್ಯಂತ ಸುರಕ್ಷಿತ ರೀತಿಯಲ್ಲಿ ಸಿದ್ಧಪಡಿಸಲಾಗುತ್ತದೆ.
ಐಸಿಎಂಆರ್ ಉನ್ನತ ಮೂಲಗಳ ಪ್ರಕಾರ, ಈ ಪ್ರಯೋಗ ಪೂರ್ಣಗೊಂಡು ಪರಿಪೂರ್ಣ ಲಸಿಕೆ ಸಿದ್ಧವಾಗಲು ಕನಿಷ್ಟ 5 ರಿಂದ 6 ತಿಂಗಳು ಬೇಕಾಗುತ್ತದೆ. ಐಸಿಎಂಆರ್ನ ಎಲ್ಲ ಶಾಖಾ ಕಚೇರಿಗಳು ಮತ್ತು ಇತರ ಕೇಂದ್ರಗಳಲ್ಲಿ ಅಂತಿಮ ಹಂತದ ಮಾನವ ಪ್ರಯೋಗ ನಡೆಯಲಿದ್ದು, ಇವೆಲ್ಲವುಗಳ ಫಲಿತಾಂಶವನ್ನು ಕ್ರೋಢೀಕರಿಸಿ ಅಂತಿಮವಾಗಿ ಕೊವ್ಯಾಕ್ಸಿನ್ ಸ್ಪಷ್ಟ ರೂಪದ ಲಸಿಕೆ ಲಭ್ಯವಾಗಲಿದೆ ಎಂದು ಉನ್ನತ ಮೂಲಗಳು ಹೇಳಿವೆ.
ಈ ನಡುವೆ ಮತ್ತೊಂದು ಪರಿಣಾಮಕಾರಿ ಔಷಧಿ ಎಂದೇ ಪರಿಗಣಿತವಾಗಿರುವ ರೆಮಿಡಿಸಿವಿಯರ್ ಔಷಧಿಯನ್ನು 4800ರೂ.ಗಳಿಗೆ ಮಾರಾಟ ಮಾಡಲು ಉದ್ದೇಶಿಸಲಾಗಿದ್ದು, ಮಾರುಕಟ್ಟೆಯಲ್ಲಿ ಲಭ್ಯವಾಗಲಿದೆ.
Read These Next
ಸೋಮವಾರದ ಒಳಗೆ ಬರ ಪರಿಹಾರ ಬಿಡುಗಡೆ ಮಾಡಲು ಒಪ್ಪಿದ ಕೇಂದ್ರ ಸರ್ಕಾರ
ನವದೆಹಲಿ/ಬೆಂಗಳೂರು: ಕರ್ನಾಟಕಕ್ಕೆ ಸೋಮವಾರದ ಏಪ್ರಿಲ್ 29ರ ಒಳಗೆ ಬರ ಪರಿಹಾರ ಬಿಡುಗಡೆ ಮಾಡುತ್ತೇವೆ ಎಂದು ಕೇಂದ್ರ ಸರ್ಕಾರ ...
ಪ್ರಧಾನಿ ಮೋದಿಯಿಂದ ದ್ವೇಷ ಭಾಷಣ! ಚುನಾವಣಾ ಆಯೋಗದ ನಿಷ್ಕ್ರಿಯತೆಗೆ ಪ್ರತಿಪಕ್ಷಗಳ ಆಕ್ರೋಶ
ಪ್ರಧಾನಿ ನರೇಂದ್ರ ಮೋದಿಯವರು ಮುಸ್ಲಿಮ್ ಸಮುದಾಯದ ವಿರುದ್ದ ಆಕ್ಷೇಪಕಾರಿ ಭಾಷಣಗೈದು ತೀವ್ರ ವಿವಾದಕ್ಕೆ ಗುರಿಯಾಗಿದ್ದಾರೆ. ...
ಇವಿಎಂ - ವಿವಿಪ್ಯಾಟ್ ಮತ ಪರಿಶೀಲನೆ ತೀರ್ಪು ಕಾದಿರಿಸಿದ ಸುಪ್ರೀಂಕೋರ್ಟ್
ಇಲೆಕ್ಟ್ರಾನಿಕ್ ಮತಯಂತ್ರ (ಇವಿಎಂ)ದ ಮೂಲಕ ಚಲಾಯಿತವಾದ ಮತಗಳನ್ನು ವಿವಿಪ್ಯಾಟ್ ಯಂತ್ರದಲ್ಲಿ ದಾಖಲಾದ ಸ್ಲಿಪ್;ಗಳ ಜೊತೆ ತಾಳೆ ಹಾಕುವ ...
ಅಣಕು ಮತದಾನದ ವೇಳೆ ಬಿಜೆಪಿಗೆ ಮತ
ಕೇರಳದ ಕಾಸರಗೋಡಿನಲ್ಲಿ ಅಣಕು ಮತದಾನದವೇಳೆ ಇವಿಎಂಗಳು ತಪ್ಪಾಗಿ ಬಿಜೆಪಿ ಪರವಾಗಿ ಮತಗಳನ್ನು ದಾಖಲಿಸಿವೆ ಎಂದು ಅರ್ಜಿದಾರರೊಬ್ಬರು ...
ಚುನಾವಣಾ ಪ್ರಕ್ರಿಯೆಯಲ್ಲಿ ಪಾವಿತ್ರ್ಯವಿರಬೇಕು; ಆಯೋಗಕ್ಕೆ ಹೇಳಿದ ಸುಪ್ರೀಂ ಕೋರ್ಟ್
ಚುನಾವಣಾ ಪ್ರಕ್ರಿಯೆ ಯಲ್ಲಿ ಪಾವಿತ್ರ್ಯವಿರಬೇಕು ಎಂದು ಚುನಾವಣಾ ಆಯೋಗಕ್ಕೆ ಇಂದು ಸುಪ್ರೀಂ ಕೋರ್ಟ್ ಹೇಳಿದೆಯಲ್ಲದೆ ಸ್ವತಂತ್ರ ...
ಇಂದು ಮೊದಲ ಹಂತದ ಚುನಾವಣೆ; ದೇಶಾದ್ಯಂತ 102 ಕ್ಷೇತ್ರಗಳಿಗೆ ಮತದಾನ
ಪ್ರಜಾಪ್ರಭುತ್ವದ ಹಬ್ಬಕ್ಕೆ ಭಾರತ ಸಜ್ಜಾಗಿದ್ದು ಮೊದಲ ಹಂತದ ಲೋಕಸಭಾ ಚುನಾವಣೆ ಶುಕ್ರವಾರ ನಡೆಯಲಿದೆ. 21 ರಾಜ್ಯಗಳು, ಕೇಂದ್ರಾಡಳಿತ ...
ಮನೆಯಿಂದ ಮತದಾನ ಪ್ರಕ್ರಿಯೆಗೆ ಡಿ.ಸಿ. ಚಾಲನೆ. ಹಿರಿಯ ನಾಗರೀಕರು, ವಿಶೇಷ ಚೇತನರಿಂದ ಮತದಾನ
ಕಲಬುರಗಿ : ಸಾರ್ವತ್ರಿಕ ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ 85 ವರ್ಷ ಮೇಲ್ಪಟ್ಟ ಹಿರಿಯ ನಾಗರೀಕರು ಹಾಗೂ ವಿಶೇಷಚೇತನರು ಮನೆಯಿಂದಲೇ ಮತ ...
ಚಿಂಚೋಳಿಯಲ್ಲಿ ಬೈಕ್ ಜಾಥಾದ ಮೂಲಕ ಮತದಾನದ ಜಾಗೃತಿ
ಕಲಬುರಗಿ : ಚಿಂಚೋಳಿ ತಾಲೂಕು ಆಡಳಿತ, ತಾಲೂಕು ಸ್ವೀಪ್ ಸಮಿತಿ ಹಾಗೂ ತಾಲೂಕು ಪಂಚಾಯತ ವತಿಯಿಂದ ಹಮ್ಮಿಕೊಳ್ಳಲಾದ "ಮತದಾನ ಜಾಗೃತಿ ಜಾಥಾ ...
ಒತ್ತಡ ನಿರ್ವಹಣೆ ಸಮರ್ಪಕವಾಗಿ ನಿರ್ವಹಿಸಿ ಸದೃಢ ಆರೋಗ್ಯ ಕಾಯ್ದುಕೊಳ್ಳಿ: ಡಾ.ವೀರೇಂದ್ರ ಕುಮಾರ್
ಬಳ್ಳಾರಿ : ಮಾನಸಿಕ ಆರೋಗ್ಯದ ಸದೃಢತೆಗೆ ಜೀವನದ ಪ್ರತಿಯೊಂದು ಕ್ಷಣಗಳನ್ನು ಸಮನಾಗಿ ಸ್ವೀಕರಿಸುವ ಮೂಲಕ ಆರೋಗ್ಯದ ಮೇಲುಂಟಾಗುವ ...
ಏ.29 ರಿಂದ ದ್ವಿತೀಯ ಪಿಯುಸಿ ಪರೀಕ್ಷೆ -2 : ಸಕಲ ಸಿದ್ದತೆಗೆ ಸೂಚನೆ
ಶಿವಮೊಗ್ಗ : ಜಿಲ್ಲೆಯಲ್ಲಿ ಏಪ್ರಿಲ್ 29 ರಿಂದ ಮೇ 16 ರವರೆಗೆ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆ-2 ನಡೆಯಲಿದೆ. ಪರೀಕ್ಷೆಗಳು ...
ಅಂಕೋಲದಲ್ಲಿ ಬೈಕ್ ಮತ್ತು ಟ್ರಾಕ್ಸ್ ನಡುವೆ ಅಪಘಾತ. ಸವಾರ ಸಾವು. ಇಬ್ಬರು ಗಂಭೀರ.
ಅಂಕೋಲಾ : ಬೈಕ್ ಮತ್ತು ಟ್ರಾಕ್ಸ್ ನಡುವೆ ಸಂಭವಿಸಿದ ಅಪಘಾತದಲ್ಲಿ ಬೈಕ್ ಸವಾರ ಸಾವನ್ನಪ್ಪಿದ ಘಟನೆ ಅಕೋಲಾ ತಾಲೂಕಿನ ಹಟ್ಟಿಕೇರಿ ...
ಪ್ರಧಾನಿ ನರೇಂದ್ರ ಮೋದಿ ಅವರಿಂದ ಹಸಿ ಸುಳ್ಳು : ಸಿ lಎಂ ಸಿದ್ದರಾಮಯ್ಯ ಆರೋಪ
ಬೆಂಗಳೂರು : ಹಿಂದುಳಿದ ಜಾತಿ ಮತ್ತು ದಲಿತರ ಮೀಸಲಾತಿಯನ್ನು ಕಿತ್ತು ಮುಸ್ಲಿಮರಿಗೆ ನೀಡಲು ಕಾಂಗ್ರೆಸ್ ಹೊರಟಿದೆ ಎಂದು ಪ್ರಧಾನಿ ...