ಭಟ್ಕಳದ ರತನ್ ರಾಜ್ಯ ಕಬಡ್ಡಿ ತಂಡಕ್ಕೆ ಆಯ್ಕೆ

Source: S O News service | By I.G. Bhatkali | Published on 13th April 2021, 6:18 PM | Coastal News | Don't Miss |

ಭಟ್ಕಳ: ಉತ್ತರ ಪ್ರದೇಶದ ಅಯೋಧ್ಯೆಯಲ್ಲಿ ನಡೆಯುವ 68ನೇ ರಾಷ್ಟ್ರೀಯ ಸೀನಿಯರ್ ಕಬಡ್ಡಿ ಪಂದ್ಯಾವಳಿಯಲ್ಲಿ ಭಾಗವಹಿಸುತ್ತಿರುವ ಕರ್ನಾಟಕ ತಂಡಕ್ಕೆ ಭಟ್ಕಳ ಮಾವಿನಕುರ್ವೆ ತಲಗೋಡು ನಿವಾಸಿ ರತನ್ ಗಣಪತಿ ನಾಯ್ಕ ಆಯ್ಕೆಯಾಗಿದ್ದಾರೆ.

ಇವರು ಸುಳ್ಯ ನೆಹರೂ ಮೆಮೊರಿಯಲ್ ಕಾಲೇಜಿನ ಬಿಕಾಮ್ ವಿದ್ಯಾರ್ಥಿಯಾಗಿದ್ದು, ಭಟ್ಕಳದ ಕಟ್ಟೇವೀರ ಸ್ಪೋಟ್ರ್ಸ ಕ್ಲಬ್ಬಿನ ಸದಸ್ಯರಾಗಿದ್ದಾರೆ. ಕಳೆದ 2 ವರ್ಷಗಳಿಂದ ಪುಣೇರಿ ಯುವ ಪಲ್ಟನ್ ತಂಡದ ಸದಸ್ಯರಾಗಿ ತರಬೇತಿ ಪಡೆಯುತ್ತಿದ್ದಾರೆ. ಅಯೋಧ್ಯೆಯಲ್ಲಿ ಏ.13ರಿಂದ 17ರವರೆಗೆ ಪಂದ್ಯಾವಳಿ ನಡೆಯಲಿದ್ದು, ರತನ್ ಆಯ್ಕೆಗೆ ಭಟ್ಕಳದ ವಿವಿಧ ಸಂಘ ಸಂಸ್ಥೆಗಳ ಮುಖಂಡರು, ಕ್ರೀಡಾಭಿಮಾನಿಗಳು ಅಭಿನಂದನೆ ಸಲ್ಲಿಸಿದ್ದಾರೆ. 
 

Read These Next

ಕಾರವಾರ: ಮತದಾನ ಜಾಗೃತಿ ಜಾಥಾ

ಪ್ರತಿಯೊಂದು ಮತವು ದೇಶದ ಭವಿಷ್ಯವನ್ನು ನಿರ್ಧರಿಸುತ್ತದೆ. ಹಾಗಾಗಿ ನೀವು ನಿಮ್ಮ ಸುತ್ತಲಿನವರಿಗೂ ಮತದಾನ ಜಾಗೃತಿ ಮೂಡಿಸಬೇಕು ...

ಮನೆಯಿಂದ‌ ಮತದಾನ ಪ್ರಕ್ರಿಯೆಗೆ ಡಿ.ಸಿ. ಚಾಲನೆ. ಹಿರಿಯ ನಾಗರೀಕರು, ವಿಶೇಷ ಚೇತನರಿಂದ ಮತದಾನ

ಕಲಬುರಗಿ : ಸಾರ್ವತ್ರಿಕ ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ 85 ವರ್ಷ ಮೇಲ್ಪಟ್ಟ ಹಿರಿಯ ನಾಗರೀಕರು ಹಾಗೂ ವಿಶೇಷಚೇತನರು ಮನೆಯಿಂದಲೇ ಮತ ...

ಒತ್ತಡ ನಿರ್ವಹಣೆ ಸಮರ್ಪಕವಾಗಿ ನಿರ್ವಹಿಸಿ ಸದೃಢ ಆರೋಗ್ಯ ಕಾಯ್ದುಕೊಳ್ಳಿ: ಡಾ.ವೀರೇಂದ್ರ ಕುಮಾರ್

ಬಳ್ಳಾರಿ : ಮಾನಸಿಕ ಆರೋಗ್ಯದ ಸದೃಢತೆಗೆ ಜೀವನದ ಪ್ರತಿಯೊಂದು ಕ್ಷಣಗಳನ್ನು ಸಮನಾಗಿ ಸ್ವೀಕರಿಸುವ ಮೂಲಕ ಆರೋಗ್ಯದ ಮೇಲುಂಟಾಗುವ ...