NDTV ಯ ಹಿರಿಯ ಪತ್ರಕರ್ತ ರವೀಶ್ ಕುಮಾರ್ ಗೆ ರಾಮನ್ ಮ್ಯಾಗ್ಸೆಸೆ ಪ್ರಶಸ್ತಿ

Source: sonews | By Staff Correspondent | Published on 3rd August 2019, 5:49 PM | National News | Special Report | Don't Miss |

ಹೊಸದಿಲ್ಲಿ: ಏಶ್ಯಾದ ‘ನೋಬಲ್ ಪ್ರಶಸ್ತಿ’ ಎಂಬ ಹೆಗ್ಗಳಿಕೆ ಹೊಂದಿರುವ ರಾಮನ್ ಮ್ಯಾಗ್ಸೆಸೆ ಪ್ರಶಸ್ತಿಗೆ ಈ ಬಾರಿ ಎನ್‌ಡಿಟಿವಿ ಪತ್ರಕರ್ತ ರವೀಶ್ ಕುಮಾರ್ ಆಯ್ಕೆಯಾಗಿದ್ದಾರೆ.

ಭಾರತದ ಅತ್ಯಂತ ಪ್ರಭಾವೀ ಟಿವಿ ಪತ್ರಕರ್ತರಾಗಿರುವ ರವೀಶ್ ಕುಮಾರ್ ಧ್ವನಿ ಇಲ್ಲದವರಿಗೆ ಧ್ವನಿಯಾಗಿದ್ದಾರೆ. ಸತ್ಯದ ಪರ, ಸ್ವಾತಂತ್ರ್ಯದ ಪರ ಹಾಗೂ ಸಮಗ್ರತೆಯ ಪರವಾಗಿ ಧ್ವನಿ ಎತ್ತುವ ಧೈರ್ಯ ತೋರಿದ್ದಾರೆ. ಸಮಚಿತ್ತದ, ಹರಿತವಾದ, ಮಾಹಿತಿ ಹೊಂದಿದ ಟಿವಿ ಆ್ಯಂಕರ್ ಆಗಿದ್ದಾರೆ. ಕಾರ್ಯಕ್ರಮದ ಅತಿಥಿಗಳ ಮೇಲೆ ನಿಯಂತ್ರಣ ಸಾಧಿಸಲು ಪ್ರಯತ್ನಿಸುತ್ತಿವುದಿಲ್ಲ. ಯಾವುದೇ ರಾಜಕೀಯ ಪಕ್ಷದ ಪರ ವಹಿಸದೆ ಕಾರ್ಯಕ್ರಮ ನಿರ್ವಹಿಸುತ್ತಿರುವ ರವೀಶ್ ಕುಮಾರ್‌ಗೆ ಒಂದಿಲ್ಲೊಂದು ರೀತಿಯಲ್ಲಿ ಕಿರುಕುಳ ಮತ್ತು ಬೆದರಿಕೆ ಎದುರಾಗುತ್ತಿದೆ. ಆದರೆ ಪತ್ರಿಕಾ ಧರ್ಮಕ್ಕೆ ಚ್ಯುತಿಯಾಗದಂತೆ ಕಾರ್ಯ ನಿರ್ವಹಿಸುತ್ತಿರುವ ಅವರನ್ನು ಈ ಬಾರಿಯ ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ ಎಂದು ಪ್ರಶಸ್ತಿ ಪತ್ರದಲ್ಲಿ ತಿಳಿಸಲಾಗಿದೆ.

ರವೀಶ್ ಕುಮಾರ್ ಅವರಲ್ಲದೆ, ಮ್ಯಾನ್ಮಾರ್ ಮೂಲದ ಪತ್ರಕರ್ತ ಕೊ ಸ್ವೆವಿನ್, ಥೈಲ್ಯಾಂಡಿನ ಮಾನವ ಹಕ್ಕುಗಳ ಕಾರ್ಯಕರ್ತ ಆಂಖಾನಾ ನೀಲಪಜಿತ್, ಫಿಲಿಪ್ಪೀನ್ಸ್‌ನ ಪುಜಂತೆ ಕಯಾಬ್ಯಾಬ್ ಹಾಗೂ ದಕ್ಷಿಣ ಕೊರಿಯಾದ ಕಿಮ್ ಜೊಂಗ್‌ಕಿಯವರನ್ನೂ ಈ ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ.

1996ರಿಂದಲೂ ಎನ್‌ಡಿಟಿವಿ ಜೊತೆ ಕಾರ್ಯನಿರ್ವಹಿಸುತ್ತಿರುವ ರವೀಶ್ ಕುಮಾರ್ ತಮ್ಮ ಭೀತಿಯಿಲ್ಲದ ನೇರ ನುಡಿಗಾಗಿ ಹೆಸರಾಗಿದ್ದರು ಮತ್ತು ಇದೇ ಕಾರಣಕ್ಕೆ ಇವರಿಗೆ ಹಲವು ಬಾರಿ ಜೀವಬೆದರಿಕೆ ಕರೆ ಬಂದಿತ್ತು. ಬಿಹಾರದ ಜಿತ್‌ವಾರ್‌ಪುರ ಎಂಬಲ್ಲಿ ಬಾಲ್ಯ ಕಳೆದ ರವೀಶ್ ಕುಮಾರ್ ದಿಲ್ಲಿ ವಿವಿಯಲ್ಲಿ ಉನ್ನತ ಅಧ್ಯಯನ ನಡೆಸುವಾಗ ಚರಿತ್ರೆ ಮತ್ತು ಸಾರ್ವಜನಿಕ ವ್ಯವಹಾರ ವಿಷಯವನ್ನು ಆಯ್ಕೆ ಮಾಡಿಕೊಂಡಿದ್ದರು. ಈ ಹಿಂದೆ ಆರ್‌ಕೆ ಲಕ್ಷ್ಮಣ್, ಪಿ ಸಾಯಿನಾಥ್, ಅರುಣ್ ಶೌರಿ, ಕಿರಣ್ ಬೇಡಿ ಹಾಗೂ ಅರವಿಂದ್ ಕೇಜ್ರಿವಾಲ್ ಈ ಪ್ರತಿಷ್ಠಿತ ಪ್ರಶಸ್ತಿ ಪಡೆದ ಭಾರತೀಯರಾಗಿದ್ದಾರೆ.

“ಮ್ಯಾಗ್ಸೆಸೆ ಪುರಸ್ಕೃತರ ಕೂಟಕ್ಕೆ ರವೀಶ್ ಕುಮಾರ್‌ಗೆ ಸುಸ್ವಾಗತ. ಈಗಿನ ಕಠಿಣ ದಿನಗಳಲ್ಲಿ ಅವರ ಧೀರ ಪತ್ರಿಕೋದ್ಯಮ ಮತ್ತಷ್ಟು ಬಲಿಷ್ಟವಾಗಲಿದೆ ಎಂಬ ಆಶಾವಾದ ಹೊಂದಿದ್ದೇನೆ” ಎಂದು ದಿಲ್ಲಿಯ ಮುಖ್ಯಮಂತ್ರಿ ಅರವಿಂದ್ ಕೇಜ್ರೀವಾಲ್ ಟ್ವೀಟ್ ಮಾಡಿದ್ದಾರೆ.

ಸರಕಾರದ ಹಸ್ತಕ್ಷೇಪದಿಂದ ಬೆದರಿಕೆಗೆ ಒಳಗಾಗಿರುವ, ಕಟು ರಾಷ್ಟ್ರೀಯವಾದಿಗಳಿಂದ ಕಲುಷಿತಗೊಂಡಿರುವ, ಟ್ರೋಲ್‌ಗಳು ಹಾಗೂ ಸುಳ್ಳು ಸುದ್ದಿ ಪ್ರಸಾರ ಮಾಡುವವರಿಂದ, ಟಿಆರ್‌ಪಿ ಮೋಹಕ್ಕೆ ಒಳಗಾಗಿರುವ ಮಾಧ್ಯಮದ ವ್ಯಕ್ತಿಗಳ ನಡುವಿನ ಸ್ಪರ್ಧೆಗೆ ವೇದಿಕೆಯಾಗಿರುವ ಮಾಧ್ಯಮ ಕ್ಷೇತ್ರದಲ್ಲಿ, ಜನರಲ್ಲಿ ಕೌತುಕ ಹುಟ್ಟಿಸುವ ಬ್ರೇಕಿಂಗ್ ನ್ಯೂಸ್‌ಗಳ ಭರಾಟೆಯ ಮಧ್ಯೆ ರವೀಶ್ ಕುಮಾರ್ ಸಂಯಮದ, ಸಮತೋಲಿತ, ವಸ್ತುನಿಷ್ಟ ವರದಿಗಾರಿಕೆಯ ಕರ್ತವ್ಯ ನಿಭಾಯಿಸಿದ್ದಾರೆ ಎಂದು ಮ್ಯಾಗ್ಸೇಸೆ ಪ್ರತಿಷ್ಠಾನ ಹೇಳಿದೆ.

ಜನತೆಯ ಸುದ್ದಿಮನೆ ಜನತೆ ಆಧಾರಿತ ಪತ್ರಿಕೋದ್ಯಮದ ನಿಟ್ಟಿನಲ್ಲಿ ಶ್ರಮಿಸುತ್ತಿರುವ ರವೀಶ್ ಕುಮಾರ್ ತಾವು ಕಾರ್ಯ ನಿರ್ವಹಿಸುತ್ತಿದ್ದ ಸುದ್ದಿಮನೆಯನ್ನು ‘ಜನತೆಯ ಸುದ್ದಿಮನೆ’ ಎಂದೇ ಕರೆಯುತ್ತಿದ್ದರು. ವೃತ್ತಿಪರ ಮೌಲ್ಯಗಳಾದ ಸಂಯಮ, ಉದ್ವೇಗರಹಿತ, ಸಮತೋಲನ, ವಸ್ತುನಿಷ್ಟ ವರದಿಗಾರಿಕೆ ಪತ್ರಕರ್ತರ ಕರ್ತವ್ಯವಾಗಬೇಕು ಎಂದು ಪ್ರತಿಪಾದಿಸುವ ಜೊತೆಗೆ ಇತರರಿಗೆ ಮಾದರಿಯಾಗಿದ್ದರು ಎಂದು ಮ್ಯಾಗ್ಸೆಸೆ ಪ್ರತಿಷ್ಟಾನದ ಹೇಳಿಕೆಯಲ್ಲಿ ತಿಳಿಸಲಾಗಿದೆ.

Read These Next

ಅಣಕು ಮತದಾನದ ವೇಳೆ ಬಿಜೆಪಿಗೆ ಮತ

ಕೇರಳದ ಕಾಸರಗೋಡಿನಲ್ಲಿ ಅಣಕು ಮತದಾನದವೇಳೆ ಇವಿಎಂಗಳು ತಪ್ಪಾಗಿ ಬಿಜೆಪಿ ಪರವಾಗಿ ಮತಗಳನ್ನು ದಾಖಲಿಸಿವೆ ಎಂದು ಅರ್ಜಿದಾರರೊಬ್ಬರು ...

ಚುನಾವಣಾ ಪ್ರಕ್ರಿಯೆಯಲ್ಲಿ ಪಾವಿತ್ರ್ಯವಿರಬೇಕು; ಆಯೋಗಕ್ಕೆ ಹೇಳಿದ ಸುಪ್ರೀಂ ಕೋರ್ಟ್

ಚುನಾವಣಾ ಪ್ರಕ್ರಿಯೆ ಯಲ್ಲಿ ಪಾವಿತ್ರ್ಯವಿರಬೇಕು ಎಂದು ಚುನಾವಣಾ ಆಯೋಗಕ್ಕೆ ಇಂದು ಸುಪ್ರೀಂ ಕೋರ್ಟ್ ಹೇಳಿದೆಯಲ್ಲದೆ ಸ್ವತಂತ್ರ ...

'ಚುನಾವಣಾ ಬಾಂಡ್' ವಿಶ್ವದ ದೊಡ್ಡ ಹಗರಣ; ಬಿಜೆಪಿ ವಿರುದ್ಧ ರಾಹುಲ್‌ ಗಾಂಧಿ ವಾಗ್ದಾಳಿ

ಬಿಜೆಪಿಯ ಚುನಾ ವಣಾ ಬಾಂಡ್ ವಿಶ್ವದ ಅತ್ಯಂತ ದೊಡ್ಡ ಹಗರಣವಾಗಿದ್ದು, ಗೂಂಡಾಗಳ ರೀತಿಯಲ್ಲಿ ಕೆಲವು ಉದ್ಯಮಿಗಳನ್ನು ಬೆದರಿಸಿ ಹಫ್ತಾ ...

ಗುಂಪಿನಿಂದ ಹತ್ಯೆ, ಗೋರಕ್ಷಣೆ ಹೆಸರಿನಲ್ಲಿ ಹಿಂಸಾಚಾರ ತಡೆಯಲು ಕೈಗೊಂಡ ಕ್ರಮಗಳ ಬಗ್ಗೆ ತಿಳಿಸಿ; ರಾಜ್ಯಗಳಿಗೆ ಸುಪ್ರೀಂ ಸೂಚನೆ

ಗುಂಪಿನಿಂದ ಥಳಿಸಿ ಹತ್ಯೆ ಮತ್ತು ಗೋರಕ್ಷಣೆಯ ಹೆಸರಿನಲ್ಲಿ ಹಿಂಸಾಚಾರದ ಘಟನೆಗಳನ್ನು ತಡೆಯಲು ಕೈಗೊಂಡಿರುವ ಕ್ರಮಗಳ ಬಗ್ಗೆ ಆರು ...

ದಹನಕಾರಿ ಹೇಳಿಕೆಗಳಿಗೆ ಹೆಸರಾದ ಅನಂತ್ ಕುಮಾರ್ ಹೆಗಡೆ ಸಂಸತ್ತಿನಲ್ಲೇಕೆ ಮೌನವಾಗಿದ್ದಾರೆ?

ಪ್ರಜಾಪ್ರಭುತ್ವದಲ್ಲಿ, ಜನರ ಧ್ವನಿಯನ್ನು ಚುನಾಯಿತ ಪ್ರತಿನಿಧಿಗಳ ಮೂಲಕ ಕೇಳಬೇಕು. ಆದಾಗ್ಯೂ, ಸಂಸತ್ತಿನ ಕೆಲವು ಸದಸ್ಯರು (ಸಂಸದರು) ...

ಭಟ್ಕಳದಲ್ಲಿ ಹೆಚ್ಚಿದ ಹೆಣ್ಣು ಮಕ್ಕಳ ಸಂಖ್ಯೆ: ಗರಿಷ್ಠ ಲಿಂಗಾನುಪಾತ; ಕಾರವಾರ ಮತ್ತು ಮುಂಡಗೋಡನಲ್ಲಿ ಅತೀ ಕಡಿಮೆ ಲಿಂಗಾನುಪಾತ

ಹೆಣ್ಣು ಮತ್ತು ಗಂಡು ನಡುವಿನ ಲಿಂಗಾನುಪಾತದ ವ್ಯತ್ಯಾಸ ದೇಶಾದ್ಯಂತ ವ್ಯಾಪಕವಾಗಿ ಕಂಡು ಬರುತ್ತಿದ್ದು, ಈಗಾಗಲೇ ಈ ವ್ಯತ್ಯಾಸದಿಂದ ...

ಕಾರವಾರ: ವಿಶೇಷ ಚೇತನರಿಗೆ ಯುಡಿಐಡಿ ಕಾರ್ಡ್ ವಿತರಣೆ; ಉತ್ತರ ಕನ್ನಡ ಜಿಲ್ಲೆ ರಾಜ್ಯದಲ್ಲಿ ದ್ವಿತೀಯ

ವಿಶೇಷ ಚೇತನರಿಗಾಗಿ ರೂಪಿಸಲಾಗುವ ಸರ್ಕಾರದ ವಿವಿಧ ಯೋಜನೆಗಳ ಸೌಲಭ್ಯಗಳನ್ನು ವಿಶೇಷ ಚೇತನರಿಗೆ ಪರಿಣಾಮಕಾರಿಯಾಗಿ ತಲುಪಿಸುವ ...

ಭಟ್ಕಳ : ಈದುಲ್ ಫಿತ್ರ್ ನಿಮಿತ್ತ ಒಂದು ಲಕ್ಷ ಇಪ್ಪತ್ತು ಸಾವಿರಕ್ಕೂ ಅಧಿಕ ಫೀತ್ರ್ ಅಕ್ಕಿ ವಿತರಣೆ

ಭಟ್ಕಳ: ಈದುಲ್ ಫಿತ್ರ್ ಸಂದರ್ಭದಲ್ಲಿ ಪ್ರತಿಯೊಬ್ಬ ಮುಸ್ಲಿಮನು ತನ್ನ ಈದ್ ಹಬ್ಬಕ್ಕೆ ಒಂದು ಮುಂಚೆ ಕಡ್ಡಾಯವಾಗಿ ನೀಡುವ ಫಿತ್ರ್ ...

ಭಟ್ಕಳ ಸ್ಪೋರ್ಟ್ಸ್ ಅಕಾಡೆಮಿ ಮತ್ತು BMYF ಸಹಯೋಗದೊಂದಿಗೆ ಎ.20-21 ರಂದು ಯುವ ಪ್ರತಿಭೆಗಳಿಗಾಗಿ ಇಂಟರ್-ಕ್ರಿಕೆಟ್ ಲೀಗ್ ಆಯ್ಕೆ

ಭಟ್ಕಳ: ಉತ್ತರ ಕನ್ನಡ ಜಿಲ್ಲೆಯ ಉದಯೋನ್ಮುಖ ಕ್ರಿಕೆಟ್ ಪ್ರತಿಭೆಗಳನ್ನು ಗುರುತಿಸುವ ಮತ್ತು ಪೋಷಿಸುವ ಪ್ರಯತ್ನದಲ್ಲಿ, ಭಟ್ಕಳ ...

ಭಟ್ಕಳ ತಾಲೂಕಿನಲ್ಲಿ ಸರಣಿ ಕಳ್ಳತನ; ತಲೆಗೆ ಹೆಲ್ಮೆಟ್ ಹಾಗೂ ಮುಖಕ್ಕೆ ಮಾಸ್ಕ್ ಧರಿಸಿ ಲಕ್ಷಾಂತರ ರೂ ಲೂಟಿ

ಭಟ್ಕಳ: ನಗರದ ರಂಗನಕಟ್ಟೆಯಲ್ಲಿರುವ ವಿನಾಯಕ ಸಹಕಾರಿ ಸಂಘ ಸೇರಿದಂತೆ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಒಂದು ಅಂಗಡಿ ಹಾಗೂ ...