ರಾಯಲ್ಪಾಡು: ಪ್ರೌಡಶಾಲೆಗಳ ನೆಲವಂಕಿ ಹೋಬಳಿ ಮಟ್ಟದ ಕ್ರೀಡಾಕೂಟ ಉದ್ಘಾಟನೆ

Source: shabbir | By Arshad Koppa | Published on 2nd August 2017, 8:26 AM | State News | Guest Editorial |

ರಾಯಲ್ಪಾಡು 1 : ವಿದ್ಯಾರ್ಥಿಗಳಿಗೆ ಆಟಗಳು ದೈಹಿಕ, ಮಾನಸಿಕವಾಗಿ ಧೈರ್ಯ,ಸ್ಥೈರ್ಯ ಹಾಗು ಜೀವರಕ್ಷಣಾ ಕೌಶಲ್ಯಗಳ ಜತೆ ಕ್ರೀಡೆಗಳಿಂದ ಮಕ್ಕಳಲ್ಲಿ ಏಕಾಗ್ರತೆ ಬೆಳೆಯಲು ಸಹಕಾರಿಯಾಗುತ್ತದೆ ಎಂದು ತಾಲೂಕು ದೈಹಿಕ ಶಿಕ್ಷಣ ಪರಿವೀಕ್ಷಕರಾದ ಮುನಿರೆಡ್ಡಿ ತಿಳಿಸಿದರು.
ಲಕ್ಷ್ಮೀಪುರ ಗ್ರಾಮದ ಸರ್ಕಾರಿ ಪ್ರೌಡಶಾಲಾವರಣದಲ್ಲಿ ಪ್ರೌಡಶಾಲೆಗಳ ನೆಲವಂಕಿ ಹೋಬಳಿ ಮಟ್ಟದ ಕ್ರೀಡಾಕೂಟವನ್ನು ಉದ್ಗಾಟಿಸಿ ಮಾತನಾಡುತ್ತಾ
ಇಂದಿನ ಯುವ ಜನತೆಯಲ್ಲಿ ಮಾನಸಿಕ ಹಾಗು ದೈಹಿಕವಾಗಿ ಉತ್ಸಾಹ ತುಂಬಿದರೆ , ಭವಿಷ್ಯದಲ್ಲಿ ಆರೋಗ್ಯವಂತ ಸಮಾಜ ಕಟ್ಟಲು ಸ್ಪೂರ್ತಿ ತುಂಬಲಿದೆ.
ಲಕ್ಷ್ಮೀಪುರ ಶಾಲೆಯ ಮುಖ್ಯ ಶಿಕ್ಷಕ ಎಮ್.ಕೆ.ವೆಂಕಟರಮಣ ಮಾತನಾಡುತ್ತಾ ಕ್ರೀಡೆಗಳಲ್ಲಿ ದ್ವೇಷ, ಅಸೂಯೆ, ಸೇಡು ಎಂಬುವುದೇ ಇಲ್ಲ, ಬದಲಾಗಿ ಪರಸ್ಪರ ಪ್ರೀತಿ , ಒಗ್ಗಟಿನ ಬಲ ,ಏಕಾಗ್ರತೆ ,ಕ್ರೀಯಾಶೀಲತೆ , ಬುದ್ದಿವಂತಿಕೆಯನ್ನು ಚುರುಕುಗೊಳಿಸುವಂತಹ ಶಕ್ತಿ ತುಂಬಿವೆ ಎಂದರು. 
ಈ ಕ್ರೀಡಾಕೂಟದಲ್ಲಿ ಸರ್ಕಾರಿ ಪ್ರೌಡಶಾಲೆಗಳಾದ ಲಕ್ಷ್ಮೀಪುರ, ಪುಲಗೂರಕೋಟೆ, ತಾಡಿಗೋಳ್, ಖಾಸಗಿ ಪ್ರೌಡಶಾಲೆಗಳಾದ ವಿಎಸ್‍ಆರ್, ಮಿನರ್ವ, ಭಗವಾನ್‍ಬುದ್ದ ಶಾಲೆಗಳ ವಿದ್ಯಾರ್ಥಿಗಳು ಹಾಗು ಉಪನ್ಯಾಸಕರಾ ಶೇಷಗಿರಿ ,ಶಿಕ್ಷಕರಾದ ಕೆ.ಆರ್.ಶ್ರೀನಿವಾಸಲು, ಎಲ್.ಆರ್.ರೆಡ್ಡಪ್ಪ, ಅಶೋಕ್, ಅರುಣಾ.ಜಿ, ಡಿ.ಎನ್.ಸತೀಶ್‍ರೆಡ್ಡಿ, ಯುಗಂದರ್ ಮುಖ್ಯಶಿಕ್ಷಕರು ಹಾಗು ದೈಹಿಕಶಿಕ್ಷಕರು ಬಾಗವಹಿಸಿದ್ದರು.   
ಪೋಟು 1 : ಲಕ್ಷ್ಮೀಪುರ ಗ್ರಾಮದ ಸರ್ಕಾರಿ ಪ್ರೌಡಶಾಲಾವರಣದಲ್ಲಿ ಪ್ರೌಡಶಾಲೆಗಳ ನೆಲವಂಕಿ ಹೋಬಳಿ ಮಟ್ಟದ ಕ್ರೀಡಾಕೂಟವನ್ನು ಗಣ್ಯರು ಉದ್ಗಾಟಿಸಿದರು.

ವರದಿ: ಮೊಹಮ್ಮದ್ ಶಬ್ಬೀರ್, ಶ್ರೀನಿವಾಸಪುರ

Read These Next

ರಾಜ್ಯದಲ್ಲಿ ಶೇ.69.23 ಮತದಾನ; ಮಂಡ್ಯದಲ್ಲಿ ಗರಿಷ್ಠ ಶೇ.81.48; ಬೆಂಗಳೂರು ಕೇಂದ್ರದಲ್ಲಿ ಕನಿಷ್ಠ ಶೇ.52.81

ರಾಜ್ಯದ 14 ಲೋಕಸಭಾ ಕ್ಷೇತ್ರಗಳಿಗೆ ಶುಕ್ರವಾರ ನಡೆದ ಮೊದಲ ಹಂತದ ಮತದಾನವು ಬಹುತೇಕ ಶಾಂತಿಯುತವಾಗಿ ನೆರವೇರಿತು. ಒಟ್ಟಾರೆ ಶೇ.69.23ರಷ್ಟು ...

ಮನೆಯಿಂದ‌ ಮತದಾನ ಪ್ರಕ್ರಿಯೆಗೆ ಡಿ.ಸಿ. ಚಾಲನೆ. ಹಿರಿಯ ನಾಗರೀಕರು, ವಿಶೇಷ ಚೇತನರಿಂದ ಮತದಾನ

ಕಲಬುರಗಿ : ಸಾರ್ವತ್ರಿಕ ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ 85 ವರ್ಷ ಮೇಲ್ಪಟ್ಟ ಹಿರಿಯ ನಾಗರೀಕರು ಹಾಗೂ ವಿಶೇಷಚೇತನರು ಮನೆಯಿಂದಲೇ ಮತ ...

ಒತ್ತಡ ನಿರ್ವಹಣೆ ಸಮರ್ಪಕವಾಗಿ ನಿರ್ವಹಿಸಿ ಸದೃಢ ಆರೋಗ್ಯ ಕಾಯ್ದುಕೊಳ್ಳಿ: ಡಾ.ವೀರೇಂದ್ರ ಕುಮಾರ್

ಬಳ್ಳಾರಿ : ಮಾನಸಿಕ ಆರೋಗ್ಯದ ಸದೃಢತೆಗೆ ಜೀವನದ ಪ್ರತಿಯೊಂದು ಕ್ಷಣಗಳನ್ನು ಸಮನಾಗಿ ಸ್ವೀಕರಿಸುವ ಮೂಲಕ ಆರೋಗ್ಯದ ಮೇಲುಂಟಾಗುವ ...

ಪ್ರಜಾಸತ್ತೆಯ ಬಂಧನ!

ಭಾರತದಲ್ಲಿ ಮತ್ತೆ ಬ್ರಿಟಿಷ್ ಕ್ರೌರ್ಯದ ಕಾಲಕ್ಕೆ ಮರಳಿದೆ. ಮನುವಾದಿ ಶಕ್ತಿಗಳು ಆ ಕಾಲವನ್ನು ನಿಯಂತ್ರಿಸುತ್ತಿದೆ. ಏಕಲವ್ಯನ ಬೆರಳು ...

ಚಿಂದಿ ಆಯುವ ಹಕ್ಕು

ಗಂಭೀರವಾಗಿ ಚರ್ಚಿಸುವುದಾದಲ್ಲಿ ಒಂದು ಸಾಮಾಜಿಕವಾಗಿ ತಿರಸ್ಕಾರಕ್ಕೊಳಪಟ್ಟ ವೃತ್ತಿಯಾದ ಚಿಂದಿ ಆಯುವುದು ನೈತಿಕವಾಗಿ ...

ನಿಜಕ್ಕೂ ಸಾದಿಯಾ ಯಾರು?

ಗಣರಾಜೋತ್ಸವದಂದು ಕಾಶ್ಮೀರದಲ್ಲಿ ಬಾಂಬ್ ಸ್ಫೋಟಿಸಲು ಸಂಚು ನಡೆಸಿರುವಳೆಂದು ಶಂಕಿಸಿ ಬಂಧಿಸಲಾಗಿದ್ದ ಯುವತಿಯನ್ನು ಪೊಲೀಸರು ಫೆ. ...