ಗಣರಾಜ್ಯೋತ್ಸವ ಸಮಾರಂಭದಲ್ಲಿ ನ್ಯೂ ಶಮ್ಸ್ ಶಾಲಾ ವಿದ್ಯಾರ್ಥಿಗಳಿಂದ ಸಂವಿಧಾನದ ಪ್ರಸ್ತಾವನೆ ಓದು

Source: sonews | By Staff Correspondent | Published on 26th January 2020, 4:42 PM | Coastal News | Don't Miss |

ಭಟ್ಕಳ: ಇಲ್ಲಿನ ತರಬಿಯತ್ ಎಜ್ಯುಕೇಶನ್ ಸೂಸೈಟಿ ನ್ಯೂ ಶಮ್ಸ್ ಸ್ಕೂಲ್ ನಲ್ಲಿ ರವಿವಾರ ಜರಗಿದ 71ನೆ ಗಣರಾಜ್ಯೋತ್ಸವ ಅತ್ಯಂತ ಸಡಗರದೊಂದಿಗೆ ನೆರವೇರಿತು. 

ಮಜ್ಲಿಸೆ ಇಸ್ಲಾಹ್-ವ-ತಂಝೀಮ್ ಸಂಸ್ಥೆಯ ಅಧ್ಯಕ್ಷ ಎಸ್.ಎಂ.ಸೈಯ್ಯದ್ ಪರ್ವೇಝ್ ದ್ವಜಾರೋಹಣ ನೆರವೇರಿಸಿದರು. 

ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಸಂಸ್ಥೆಯ ಉಪಾಧ್ಯಕ್ಷ ಇಂಜಿನೀಯರ್ ನಝೀರ್ ಆಹ್ಮದ್ ಖಾಝಿ, ವಿದ್ಯಾರ್ಥಿಗಳಿಗೆ ಸಂವಿಧಾನದ ಪ್ರಸ್ತಾವನೆಯನ್ನು ಓದಿಸುವುದರ ಮೂಲಕ ಸಂವಿಧಾನದ ಗೌರವರವನ್ನು ಎತ್ತಿ ಹಿಡಿಯುವಂತೆ ಮತ್ತು ಸಂವಿಧಾನದ ರಕ್ಷಣೆಗಾಗಿ ಯಾವುದೇ ರೀತಿಯ ತ್ಯಾಗಕ್ಕೆ ಸಿದ್ಧರಾಗುವಂತೆ ವಿದ್ಯಾರ್ಥಿಗಳಿಗೆ ಕರೆ ನೀಡಿದರು. 

ಜಾಲಿ ಪಟ್ಟಣ ಪಂಚಾಯತ್ ಸ್ಥಾಯಿ ಸಮಿತಿಯ ಅಧ್ಯಕ್ಷ ನ್ಯಾಯಾವಾದಿ sಸೈಯ್ಯದ್ ಇಮ್ರಾನ್ ಲಂಕಾ ಸಂವಿಧಾನದ ಇತಿಹಾಸ ಮತ್ತು ಮಹತ್ವದ ಕುರಿತಂತೆ ಮಾತನಾಡಿದರು. 

ಸಂಸ್ಥೆಯ ಅಧ್ಯಕ್ಷ ಮುಹಮ್ಮದ್ ಇಸ್ಮಾಯಿಲ್ ಮೊಹತೆಶಮ್, ಸ್ಕೂಲ್ ಬೋರ್ಡ್ ಚೇರಮನ್ ಕಾದಿರ್ ಮೀರಾ ಪಟೇಲ್,  ಸಾರ್ವಜನಿಕ ಸಂಪರ್ಕ ಕಾರ್ಯದರ್ಶಿ ಅಝೀಝುರ್ರಹ್ಮಾನ್ ನದ್ವಿ ರುಕ್ನುದ್ದೀನ್, ಗುಫ್ರಾನ್ ಲಂಕಾ, ಹಬೀಬುಲ್ಲಾ ರುಕ್ನುದ್ದೀನ್, ನಜೀಬ್ ಇಕ್ಕೇರಿ ಮತ್ತಿತರರು ಉಪಸ್ಥಿತರಿದ್ದರು. 

ಶಿಕ್ಷಕ ಎಂ.ಆರ್.ಮಾನ್ವಿ ಸ್ವಾಗತಿಸಿದರು. ಸಖ್ಲೈನ್ ಎಸ್.ಎಮ್ ವಂದಿಸಿದರು. ವಿದ್ಯಾರ್ಥಿ ಕು. ಸಯೀಫ್ ಕಾರ್ಯಕ್ರಮ ನಿರೂಪಿಸಿದರು. 
 

Read These Next

ಕಾರವಾರ: ಮತದಾನ ಜಾಗೃತಿ ಜಾಥಾ

ಪ್ರತಿಯೊಂದು ಮತವು ದೇಶದ ಭವಿಷ್ಯವನ್ನು ನಿರ್ಧರಿಸುತ್ತದೆ. ಹಾಗಾಗಿ ನೀವು ನಿಮ್ಮ ಸುತ್ತಲಿನವರಿಗೂ ಮತದಾನ ಜಾಗೃತಿ ಮೂಡಿಸಬೇಕು ...

ಮನೆಯಿಂದ‌ ಮತದಾನ ಪ್ರಕ್ರಿಯೆಗೆ ಡಿ.ಸಿ. ಚಾಲನೆ. ಹಿರಿಯ ನಾಗರೀಕರು, ವಿಶೇಷ ಚೇತನರಿಂದ ಮತದಾನ

ಕಲಬುರಗಿ : ಸಾರ್ವತ್ರಿಕ ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ 85 ವರ್ಷ ಮೇಲ್ಪಟ್ಟ ಹಿರಿಯ ನಾಗರೀಕರು ಹಾಗೂ ವಿಶೇಷಚೇತನರು ಮನೆಯಿಂದಲೇ ಮತ ...

ಒತ್ತಡ ನಿರ್ವಹಣೆ ಸಮರ್ಪಕವಾಗಿ ನಿರ್ವಹಿಸಿ ಸದೃಢ ಆರೋಗ್ಯ ಕಾಯ್ದುಕೊಳ್ಳಿ: ಡಾ.ವೀರೇಂದ್ರ ಕುಮಾರ್

ಬಳ್ಳಾರಿ : ಮಾನಸಿಕ ಆರೋಗ್ಯದ ಸದೃಢತೆಗೆ ಜೀವನದ ಪ್ರತಿಯೊಂದು ಕ್ಷಣಗಳನ್ನು ಸಮನಾಗಿ ಸ್ವೀಕರಿಸುವ ಮೂಲಕ ಆರೋಗ್ಯದ ಮೇಲುಂಟಾಗುವ ...