ಮುಂಡಗೋಡ: ಬಾಚಣಕಿ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಬರುವ ನ್ಯಾಸರ್ಗಿ ಗ್ರಾಮದ ಸೂರ್ಯನಾರಾಯಣ ಗುಡ್ಡದ ಆಂಜನೇಯ ದೇವಸ್ಥಾನಕ್ಕೆ ನೀರಿನ, ವಿದ್ಯುತ್ ಸೇರಿದಂತೆ ಮೂಲಭೂತ ಸೌಕರ್ಯ ಕಲ್ಪಿಸುವಂತೆ ದೇವಸ್ಥಾನದ ಭಕ್ತ ಮಂಡಳಿ ಒತ್ತಾಯಿಸಿ ಬಾಚಣಿಕಿ ಗ್ರಾಮ ಪಂಚಾಯತ್ ಮನವಿ ಅರ್ಪಿಸಿದರು.
ಈ ಸಂದರ್ಭದಲ್ಲಿ ಬಾಚಣಿಕಿ ಗ್ರಾಮ್ಪಂಚಾಯತ್ ಅಧ್ಯಕ್ಷರು, ಉಪಾಧ್ಯಕ್ಷರು, ಸರ್ವ ಸದಸ್ಯರು ಸೇರಿದಂತೆ ಅಯ್ಯಪ್ಪ ಭಜಂತ್ರಿ, ಉದಯ ಶಿರಾಲಿ, ವೆಂಕಟೇಶ ಕಾಟ್ವೇಕರ, ಮಾಂತೇಶ ಕಿಣಿ, ಅಣ್ಣಪ್ಪ ಭೋವಿ ಸೇರಿದಂತೆ ಮುಂತಾದವರು ಇದ್ದರು.