ಸುಪ್ರೀಮ್ ತೀರ್ಪು ಗೌರವಿಸುತ್ತೇವೆ; ತೀರ್ಪಿನಿಂದ ಸಂತೋಷವಾಗಿಲ್ಲ-ಜಿಲಾನಿ

Source: sonews | By Staff Correspondent | Published on 9th November 2019, 2:07 PM | National News | Don't Miss |

ನವದೆಹಲಿ: ಸರ್ವೊಚ್ಚ ನ್ಯಾಯಾಲಯದ ತೀರ್ಪು ನಮ್ಮ ನಿರೀಕ್ಷೆಯಂತೆ ಇರಲಿಲ್ಲ. ಆದರೆ ಜನತೆಯಲ್ಲಿ ಶಾಂತಿ ಮತ್ತು ಕಾನೂನು ಸುವ್ಯವಸ್ಥೆ ಕಾಪಾಡುವಂತೆ ಸುನ್ನಿ ವಕ್ಫ್ ಬೋರ್ಡ್ ಪರ ವಕೀಲ ಝಫ್ರಾಯ್ಬ್ ಜಿಲಾನಿ ತಿಳಿಸಿದ್ದಾರೆ.

ಈ ತೀರ್ಪಿನ ಬಗ್ಗೆ ಬಾಬರಿ ಆ್ಯಕ್ಷನ್ ಕಮಿಟಿ ಸಭೆ ನಡೆಸಿದ ನಂತರವಷ್ಟೇ ತೀರ್ಪಿನ ಪರಿಶೀಲನೆ ನಡೆಸಿ ಮುಂದಿನ ತೀರ್ಮಾನದ ಬಗ್ಗೆ ಚಿಂತಿಸಲಾಗುವುದೆಂದು ತಿಳಿಸಿದ್ದಾರೆ.

ಇಡೀ ಮುಸ್ಲಿಮ್ ಸಮುದಾಯದಲ್ಲಿ ಪ್ರತಿಭಟನೆಯಾಗಲಿ ಅಥವಾ ಯಾವುದೇ ಸಭೆ ನಡೆಸದಂತೆ ಮುಸ್ಲಿಮ್ ಪರ್ಸನಲ್ ಬೋರ್ಡ್ ವಿನಂತಿಸಿದೆ. ಮಸೀದಿಯ ಬದಲಿಗೆ ಯಾವುದೇ ಪರ್ಯಾಯ ಜಾಗದ ಅಗತ್ಯ ನಮಗಿರಲಿಲ್ಲ. ನಾವು ಈ ತೀರ್ಪಿನ ಮರು ಪರಿಶೀಲನೆಯ ಬಗ್ಗೆ ಈಗ ತೀರ್ಮಾನ ನಡೆಸಿಲ್ಲ. ಸಭೆಯ ನಂತರ ಹೆಚ್ಚಿನ ಮಾಹಿತಿ ನೀಡುತ್ತೇವೆಂದು ಹೇಳಿದ್ದಾರೆ.

ಈ ತೀರ್ಪಿನಿಂದ ನಮ್ಮ ಹಕ್ಕು ಚ್ಯುತಿಯಾಗಿದೆ. ಈ ತೀರ್ಪಿನಲ್ಲಿ ಯಾವುದೇ ಪ್ರಭಾವವಿದೆಯೆಂದು ಖಂಡಿತ ಹೇಳುವುದಿಲ್ಲ. ನಾವು ತೀರ್ಪನ್ನು ಗೌರವಿಸುತ್ತೇವೆ. ಆದರೆ ನಮ್ಮ ನಿರೀಕ್ಷೆಯಂತೆ ಈ ತೀರ್ಪು ಬಂದಿಲ್ಲ ಆದ್ದರಿಂದ ಸಭೆ ನಡೆಸಿ ಮುಂದಿನ ತೀರ್ಮಾನ ಕೈಗೊಳ್ಳುತ್ತೇವೆಂದು ತಿಳಿಸಿದ್ದಾರೆ.

Read These Next

ರಾಜ್ಯದಲ್ಲಿ ಶೇ.69.23 ಮತದಾನ; ಮಂಡ್ಯದಲ್ಲಿ ಗರಿಷ್ಠ ಶೇ.81.48; ಬೆಂಗಳೂರು ಕೇಂದ್ರದಲ್ಲಿ ಕನಿಷ್ಠ ಶೇ.52.81

ರಾಜ್ಯದ 14 ಲೋಕಸಭಾ ಕ್ಷೇತ್ರಗಳಿಗೆ ಶುಕ್ರವಾರ ನಡೆದ ಮೊದಲ ಹಂತದ ಮತದಾನವು ಬಹುತೇಕ ಶಾಂತಿಯುತವಾಗಿ ನೆರವೇರಿತು. ಒಟ್ಟಾರೆ ಶೇ.69.23ರಷ್ಟು ...

ಪ್ರಧಾನಿ ಮೋದಿಯಿಂದ ದ್ವೇಷ ಭಾಷಣ! ಚುನಾವಣಾ ಆಯೋಗದ ನಿಷ್ಕ್ರಿಯತೆಗೆ ಪ್ರತಿಪಕ್ಷಗಳ ಆಕ್ರೋಶ

ಪ್ರಧಾನಿ ನರೇಂದ್ರ ಮೋದಿಯವರು ಮುಸ್ಲಿಮ್ ಸಮುದಾಯದ ವಿರುದ್ದ ಆಕ್ಷೇಪಕಾರಿ ಭಾಷಣಗೈದು ತೀವ್ರ ವಿವಾದಕ್ಕೆ ಗುರಿಯಾಗಿದ್ದಾರೆ. ...

ಅಣಕು ಮತದಾನದ ವೇಳೆ ಬಿಜೆಪಿಗೆ ಮತ

ಕೇರಳದ ಕಾಸರಗೋಡಿನಲ್ಲಿ ಅಣಕು ಮತದಾನದವೇಳೆ ಇವಿಎಂಗಳು ತಪ್ಪಾಗಿ ಬಿಜೆಪಿ ಪರವಾಗಿ ಮತಗಳನ್ನು ದಾಖಲಿಸಿವೆ ಎಂದು ಅರ್ಜಿದಾರರೊಬ್ಬರು ...

ಮನೆಯಿಂದ‌ ಮತದಾನ ಪ್ರಕ್ರಿಯೆಗೆ ಡಿ.ಸಿ. ಚಾಲನೆ. ಹಿರಿಯ ನಾಗರೀಕರು, ವಿಶೇಷ ಚೇತನರಿಂದ ಮತದಾನ

ಕಲಬುರಗಿ : ಸಾರ್ವತ್ರಿಕ ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ 85 ವರ್ಷ ಮೇಲ್ಪಟ್ಟ ಹಿರಿಯ ನಾಗರೀಕರು ಹಾಗೂ ವಿಶೇಷಚೇತನರು ಮನೆಯಿಂದಲೇ ಮತ ...

ಒತ್ತಡ ನಿರ್ವಹಣೆ ಸಮರ್ಪಕವಾಗಿ ನಿರ್ವಹಿಸಿ ಸದೃಢ ಆರೋಗ್ಯ ಕಾಯ್ದುಕೊಳ್ಳಿ: ಡಾ.ವೀರೇಂದ್ರ ಕುಮಾರ್

ಬಳ್ಳಾರಿ : ಮಾನಸಿಕ ಆರೋಗ್ಯದ ಸದೃಢತೆಗೆ ಜೀವನದ ಪ್ರತಿಯೊಂದು ಕ್ಷಣಗಳನ್ನು ಸಮನಾಗಿ ಸ್ವೀಕರಿಸುವ ಮೂಲಕ ಆರೋಗ್ಯದ ಮೇಲುಂಟಾಗುವ ...