ಕಾರವಾರ: ಕನ್ನಡ ಪ್ರವೇಶ, ಕಾವ, ಜಾಣ ಮತ್ತು ರತ್ನ ಪರೀಕ್ಷೆಗಳ ಫಲಿತಾಂಶ ಪ್ರಕಟ
ಕಾರವಾರ: ಕನ್ನಡ ಸಾಹಿತ್ಯ ಪರಿಷತ್ತು 2020-21ನೇ ಸಾಲಿನಲ್ಲಿ ನಡೆಸಿದ ಕನ್ನಡ ಪ್ರವೇಶ, ಕಾವ, ಜಾಣ ಮತ್ತು ರತ್ನ ಪರೀಕ್ಷೆಗಳ ಫಲಿತಾಂಶವನ್ನು ಪ್ರಕಟಿಸಲಾಗಿದೆ ಎಂದು ಪರಿಷತ್ನ ಗೌರವ ಕಾರ್ಯದರ್ಶಿ ಡಾ.ಪದ್ಮರಾಜ ದಂಡಾವತಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ರಾಜ್ಯದ ಎಲ್ಲಾ ಪರೀಕ್ಷಾ ಕೇಂದ್ರಗಳಿಗೆ ಫಲಿತಾಂಶದ ಪಟ್ಟಿ ಕಳುಹಿಸಲಾಗಿದ್ದು, ಕನ್ನಡ ಸಾಹಿತ್ಯ ಪರಷತ್ತಿನ ಪ್ರಕಟಣಾ ಫಲಕ ಹಾಗೂ ವೆಬ್ ಸೈಟ್ www.kasapa.in ನಲ್ಲಿ ಪ್ರಕಟಿಸಲಾಗಿದೆ. ಅಂಕಪಟ್ಟಿ ಮತ್ತು ಪ್ರಮಾಣಪತ್ರಗಳನ್ನು ಶೀಘ್ರದಲ್ಲಿಯೇ ಅಭ್ಯರ್ಥಿಗಳಿಗೆ ಕಳುಹಿಸಿಕೊಡಲಾಗುವುದು. ಅಂಕಪಟ್ಟಿಗಳು ಕಳುಹಿಸಿದ ದಿನಾಂಕದಿಂದ ಒಂದು ತಿಂಗಳೊಳಗೆ ಮರುಮೌಲ್ಯಮಾಪನಕ್ಕೆ ಅರ್ಜಿ ಸಲ್ಲಿಸಬಹುದು. ಹೆಚ್ಚಿನ ಮಾಹಿತಿಗಾಗಿ ಕನ್ನಡ ಸಾಹಿತ್ಯ ಪರಿಷತ್ನ ಗೌರವ ಕಾರ್ಯದರ್ಶಿ ಅಥವಾ ದೂರವಾಣಿ ಸಂಖ್ಯೆ: 26623584ಗೆ ಸಂಪರ್ಕಿಸಬಹುದು ಎಂದು ಅವರು ಹೇಳಿದ್ದಾರೆ.