ಕಂಟೇನ್ಮೆಂಟ್ ವಲಯಗಳ ಕುರಿತ ಪರಿಷ್ಕೃತ ಮಾರ್ಗಸೂಚಿ

Source: SO News | By Laxmi Tanaya | Published on 20th January 2022, 10:43 PM | State News | Don't Miss |

ಧಾರವಾಡ : ರಾಜ್ಯದಲ್ಲಿ ಕೋವಿಡ್-19 ರೂಪಾಂತರಿ ಓಮಿಕ್ರಾನ್‍ನಿಂದ ಉಂಟಾಗಿರುವ 3ನೇ ಅಲೆಯು ವೇಗವಾಗಿ ಹರಡುತ್ತಿರುವುದರಿಂದ ಪ್ರಕರಣಗಳ ಸಂಖ್ಯೆ ಗಣನೀಯವಾಗಿ ಏರಿಕೆಯಾಗುತ್ತಿದೆ. ಈ ಹಿನ್ನೆಲೆಯಲ್ಲಿ ಕಂಟೆನ್ಮೆಂಟ್ ವಲಯಗಳ ಅಧಿಸೂಚನೆ ಹಾಗೂ ಮುಕ್ತಗೊಳಿಸುವ ಬಗ್ಗೆ ಪರಿಷ್ಕøತ ಮಾರ್ಗಸೂಚಿಗಳನ್ನು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ  ಹೊರಡಿಸಿದ್ದು, ಸಾರ್ವಜನಿಕರು ಇವುಗಳನ್ನು ಪಾಲಿಸುವ ಮೂಲಕ ಕೋವಿಡ್ ನಿಯಂತ್ರಣಕ್ಕೆ ಸಹಕರಿಸಬೇಕೆಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಆಯುಕ್ತರು ಜಿಲ್ಲಾಡಳಿತಕ್ಕೆ ನಿರ್ದೇಶನ ನೀಡಿದೆ.  

ಕ್ಲಸ್ಟರ್: 5 ಅಥವಾ ಅದಕ್ಕಿಂಥ ಹೆಚ್ಚು ಪ್ರಕರಣಗಳು ವರದಿಯಾದಲ್ಲಿ ಆ ಪ್ರದೇಶವನ್ನು ಕ್ಲಸ್ಟರ್ ಎಂದು ಪರಿಗಣಿಸಲಾಗುವುದು.   
*ಮೈಕ್ರೋ ಕಂಟೇನ್ಮೆಂಟ್ ವಲಯ*: ನಗರ ಮತ್ತು ಗ್ರಾಮೀಣ ಪ್ರದೇಶಗಳಲ್ಲಿ ಒಂದು ಅಥವಾ ಅದಕ್ಕಿಂತ ಹೆಚ್ಚು ಮನೆಗಳಲ್ಲಿ ಪ್ರಕರಣಗಳು ವರದಿಯಾದರೆ, ಆ ಸಾಲಿನಲ್ಲಿರುವ ಎಲ್ಲ ಮನೆಗಳು ಅಥವಾ 50 ಮೀಟರ್ (ರೇಡಿಯಸ್) ವ್ಯಾಪ್ತಿಯಲ್ಲಿ ಬರುವ ಮನೆಗಳು. ವಸತಿ ಸಮುಚ್ಛಯಗಳಲ್ಲಿ ಪ್ರಕರಣಗಳು ವರದಿಯಾದರೆ ಆಯಾ ಮಹಡಿ (ಫ್ಲೋರ್) ಗಳು ಅಥವಾ ಕಾರ್ಯಾಚರಣೆ ಸಾಧ್ಯವಾಗುವಂತೆ ಸ್ಥಳೀಯ ಆರೋಗ್ಯ ಪ್ರಾಧಿಕಾರದ ನಿರ್ಧಾರದಂತೆ ಅಂತಹ ಪ್ರದೇಶಗಳನ್ನು  ಮೈಕ್ರೋ ಕಂಟೇನ್ಮೆಂಟ್ ವಲಯವೆಂದು ಘೋಷಿಸಲಾಗುತ್ತದೆ. 

ಕಂಟೇನ್ಮೆಂಟ್ ವಲಯ: ಒಂದು ಅಥವಾ ಅದಕ್ಕಿಂತ ಹೆಚ್ಚು ಮನೆಗಳಲ್ಲಿ ಪ್ರಕರಣಗಳು ವರದಿಯಾದರೆ ಆ ಸಾಲಿನಲ್ಲಿರುವ ಎಲ್ಲಾ ಮನೆಗಳು ಅಥವಾ 100 ಮೀಟರ್ (ರೇಡಿಯಸ್) ವ್ಯಾಪ್ತಿಯಲ್ಲಿರುವ ಮನೆಗಳು. ವಸತಿ ಸಮುಚ್ಛಯಗಳಲ್ಲಿ ಪ್ರಕರಣಗಳು ವರದಿಯಾದರೆ ಆಯಾ ಮಹಡಿಗಳು ಅಥವಾ ಕಾರ್ಯಾಚರಣೆಗೆ ಸಾಧ್ಯವಾಗುವಂತೆ ಸ್ಥಳೀಯ ಆರೋಗ್ಯ ಪ್ರಾಧಿಕಾರದ ನಿರ್ಧಾರದ ಅನ್ವಯ ಅಂತಹ ಪ್ರದೇಶಗಳನ್ನು ಕಂಟೇನ್ಮೆಂಟ್ ವಲಯವೆಂದು ಘೋಷಿಸಲಾಗುತ್ತದೆ.

ಕಂಟೇನ್ಮೆಂಟ್ ವಲಯಗಳ ಮುಕ್ತಗೊಳಿಸುವಿಕೆ : ಮೈಕ್ರೊ ಕಂಟೇನ್ಮೆಂಟ್, ಕಂಟೆನ್ಮೆಂಟ್ ವಲಯಗಳಲ್ಲಿ ಖಚಿತ ಕೋವಿಡ್-19 ಪ್ರಕರಣವು ವರದಿಯಾದ 7 ದಿನಗಳ ನಂತರ ಯಾವುದೇ ಖಚಿತ ಪ್ರಕರಣಗಳು ವರದಿಯಾಗದಿದ್ದರೆ ಅವುಗಳನ್ನು ಮುಕ್ತಗೊಳಿಸಲಾಗುವುದು. 
 ಸಾರ್ವಜನಿಕ ಆರೋಗ್ಯದ  ಹಿತದೃಷ್ಟಿಯಿಂದ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಆಯುಕ್ತರು ಹೊರಡಿಸಿರುವ ಈ ಸುತ್ತೋಲೆಯ ಮಾನದಂಡಗಳನ್ನು ಆಧರಿಸಿ ಜಿಲ್ಲಾಡಳಿತವು ತಕ್ಷಣ ಜಾರಿಗೆ ಬರುವಂತೆ ಕ್ರಮಗಳನ್ನು ಕೈಗೊಂಡಿದೆ.

Read These Next

ಗುಲಬರ್ಗಾ ಲೋಕಸಭಾ (ಮೀಸಲು) ಕ್ಷೇತ್ರದ ಚುನಾವಣೆ: ಚುನಾವಣಾ ಸ್ಪರ್ಧಾ ಕಣದಲ್ಲಿ 14 ಅಭ್ಯರ್ಥಿಗಳು

ಕಲಬುರಗಿ : ಗುಲಬರ್ಗಾ ಲೋಕಸಭಾ (ಪ.ಜಾ. ಮೀಸಲು) ಕ್ಷೇತ್ರಕ್ಕೆ 2024ರ ಮೇ 7ರಂದು ನಡೆಯುವ ಚುನಾವಣೆಗಾಗಿ ನಾಮಪತ್ರಗಳನ್ನು ಹಿಂದಕ್ಕೆ ಪಡೆಯಲು ...

ಗದಗ: ಒಂದೇ ಕುಟುಂಬದ ನಾಲ್ವರ ಹತ್ಯೆ ಪ್ರಕರಣ ಭೇದಿಸಿದ ಪೊಲೀಸರು; ಸುಪಾರಿ ನೀಡಿದ ಮನೆಮಗ ಸಹಿತ 8 ಮಂದಿಯ ಬಂಧನ

ಮೂರು ದಿನಗಳ ಹಿಂದೆ ಗದಗದಲ್ಲಿ ನಡೆದಿದ್ದ ಒಂದೇ ಕುಟುಂಬದ ನಾಲ್ವರ ಹತ್ಯೆ ಪ್ರಕರಣವನ್ನು ಭೇದಿಸಿರುವ ಪೊಲೀಸರು ಎಂಟು ಮಂದಿ ...

ಧಾರವಾಡ ಲೋಕಸಭೆ : ಉಮೇದುವಾರಿಕೆ ಹಿಂಪಡೆದ ಎಂಟು ಅಭ್ಯರ್ಥಿಗಳು; ಅಂತಿಮವಾಗಿ ಚುನಾವಣಾ ಸ್ಪರ್ಧೆಯಲ್ಲಿ 17 ಅಭ್ಯರ್ಥಿಗಳು

ಧಾರವಾಡ : 11-ಧಾರವಾಡ ಚುನಾವಣಾ ಕ್ಷೇತ್ರದಿಂದ ಲೋಕಸಭೆಗೆ ನಡೆಯುವ ಚುನಾವಣೆಗೆ ಕ್ರಮಬದ್ದವಾಗಿ ನಾಮನಿರ್ದೇಶನ ಮಾಡಲ್ಪಟ್ಟಿದ್ದ 25 ...

ಗುಲಬರ್ಗಾ ಲೋಕಸಭಾ (ಮೀಸಲು) ಕ್ಷೇತ್ರದ ಚುನಾವಣೆ: ಚುನಾವಣಾ ಸ್ಪರ್ಧಾ ಕಣದಲ್ಲಿ 14 ಅಭ್ಯರ್ಥಿಗಳು

ಕಲಬುರಗಿ : ಗುಲಬರ್ಗಾ ಲೋಕಸಭಾ (ಪ.ಜಾ. ಮೀಸಲು) ಕ್ಷೇತ್ರಕ್ಕೆ 2024ರ ಮೇ 7ರಂದು ನಡೆಯುವ ಚುನಾವಣೆಗಾಗಿ ನಾಮಪತ್ರಗಳನ್ನು ಹಿಂದಕ್ಕೆ ಪಡೆಯಲು ...

ಧಾರವಾಡ ಲೋಕಸಭೆ : ಉಮೇದುವಾರಿಕೆ ಹಿಂಪಡೆದ ಎಂಟು ಅಭ್ಯರ್ಥಿಗಳು; ಅಂತಿಮವಾಗಿ ಚುನಾವಣಾ ಸ್ಪರ್ಧೆಯಲ್ಲಿ 17 ಅಭ್ಯರ್ಥಿಗಳು

ಧಾರವಾಡ : 11-ಧಾರವಾಡ ಚುನಾವಣಾ ಕ್ಷೇತ್ರದಿಂದ ಲೋಕಸಭೆಗೆ ನಡೆಯುವ ಚುನಾವಣೆಗೆ ಕ್ರಮಬದ್ದವಾಗಿ ನಾಮನಿರ್ದೇಶನ ಮಾಡಲ್ಪಟ್ಟಿದ್ದ 25 ...

ಅಡಕೆ, ಕಾಫಿ ಬೆಳೆಗಾರರ ಸಂಕಷ್ಟಕ್ಕೆ ಬಿಜೆಪಿ ಏಕೆ ಸ್ಪಂದಿಸಿಲ್ಲ: ಜಯಪ್ರಕಾಶ್ ಹೆಗ್ಡೆ ಪ್ರಶ್ನೆ

ಬಾಳೆಹೊನ್ನೂರು: ಕಳೆದ ಹತ್ತು ವರ್ಷಗಳಿಂದ ಕೇಂದ್ರದಲ್ಲಿ ಅಧಿಕಾರದಲ್ಲಿರುವ ಬಿಜೆಪಿ, ಮಲೆನಾಡಿನ ಅಡಕೆ, ಕಾಫಿ ಬೆಳೆಗಾರರ ಸಂಕಷ್ಟಕ್ಕೆ ...