ಉಡುಪಿ : ಬ್ರಹ್ಮಾವರ ಸಕ್ಕರೆ ಕಾರ್ಖಾನೆಯನ್ನು ಪುನಶ್ಚೇತನಗೊಳಿಸಬೇಕೆಂದು ಉಡುಪಿ ಶಾಸಕ ರಘುಪತಿ ಭಟ್ ಅವರು ಕಾರ್ಮಿಕ ಹಾಗೂ ಸಕ್ಕರೆ ಸಚಿವ ಶಿವರಾಮ್ ಹೆಬ್ಬಾರ್ ಅವರಿಗೆ ಮನವಿ ನೀಡಿದ್ದಾರೆ.
ಈ ಸಂಬಂಧ ಅವರು ಸಚಿವರೊಂದಿಗೆ ಚರ್ಚಿಸಿ ರಘುಪತಿ ಭಟ್, ರೈತರ ಬಹುದಿನದ ಬೇಡಿಕೆಯಾದ ಬ್ರಹ್ಮಾವರ ಸಕ್ಕರೆ ಕಾರ್ಖಾನೆಯನ್ನ ಆರಂಭಿಸಬೇಕು. ಗ್ಲೋಬಲ್ ಟೆಂಡರ್ ಮೂಲಕ ಖಾಸಗಿಯವರಿಗೆ ವಹಿಸಿ ಕಾರ್ಖಾನೆ ಪುನಶ್ಚೇತನಗೊಳಿಸಬೇಕೆಂದು ಒತ್ತಾಯಿಸಿದ್ದಾರೆ.