ಲಸಿಕೆ ಪ‍ಡೆಯಲು ಆನ್‌ಲೈನ್‌ ನೋಂದಣಿ ಕಡ್ಡಾಯ ಬೇಡ: ರಾಹುಲ್ ಗಾಂಧಿ ಆಗ್ರಹ

Source: PTI | By MV Bhatkal | Published on 10th June 2021, 9:09 PM | National News | Don't Miss |

ನವದೆಹಲಿ: ಇಂಟರ್‌ನೆಟ್‌ ಸೌಲಭ್ಯ ಇಲ್ಲದವರಿಗೂ ಲಸಿಕೆ ಪಡೆಯುವ ಹಕ್ಕಿದೆ. ಹೀ ಕೋವಿಡ್‌ ಲಸಿಕೆ ನೀಡಬೇಕು ಎಂದು ಕಾಂಗ್ರೆಸ್‌ ಮುಖಂಡ ರಾಹುಲ್‌ ಗಾಂಧಿ ಗುರುವಾರ ಆಗ್ರಹಿಸಿದ್ದಾರೆ.ಗಾಗಿ ‘ಕೋವಿನ್‌’ ಪೋರ್ಟಲ್‌ನಲ್ಲಿ ನೋಂದಣಿ ಮಾಡಿಸದೇ, ನೇರವಾಗಿ ಲಸಿಕೆ ಕೇಂದ್ರಕ್ಕೆ ಬರುವವರಿಗೂ
ಆನ್‌ಲೈನ್‌ ಮೂಲಕ ನೋಂದಣಿ ಕಡ್ಡಾಯ ಎಂಬುದು ಸರಿಯಲ್ಲ. ಲಸಿಕೆ ಕೇಂದ್ರಕ್ಕೆ ಬರುವ ಪ್ರತಿ ಅರ್ಹ ವ್ಯಕ್ತಿಗೂ ಲಸಿಕೆ ನೀಡಬೇಕು. ಇಂಟರ್‌ನೆಟ್‌ ಸೌಲಭ್ಯ ಹೊಂದಿರದವರೂ ಬದುಕುವ ಹಕ್ಕು ಹೊಂದಿದ್ದಾರೆ’ ಎಂದು ಅವರು ಹಿಂದಿಯಲ್ಲಿ ಟ್ವೀಟ್‌ ಮಾಡಿದ್ದಾರೆ.
ಕೋವಿಡ್‌ ಲಸಿಕೆ ಪಡೆಯಲು ‘ಕೋವಿನ್‌’ ಪೋರ್ಟಲ್‌ನಲ್ಲಿ ನೋಂದಣಿ ಮಾಡಿಸುವುದನ್ನು ಕಡ್ಡಾಯಗೊಳಿಸಬಾರದು ಎಂದು ಕಾಂಗ್ರೆಸ್‌ ಮೊದಲಿನಿಂದಲೂ ಆಗ್ರಹಿಸುತ್ತಲೇ ಇದೆ.
ಪಟ್ಟಣ–ನಗರ ಪ್ರದೇಶಗಳಿಂದ ದೂರ ವಾಸಿಸುತ್ತಿರುವವರು, ಗ್ರಾಮೀಣ ಪ್ರದೇಶದವರು ಹಾಗೂ ಬಡವರಲ್ಲಿ ಸ್ಮಾರ್ಟ್‌ಫೋನ್‌ ಇರುವುದಿಲ್ಲ. ಡಿಜಿಟಲ್‌ ಸಂಪರ್ಕದಿಂದ ವಂಚಿತ ಇವರಿಗೂ ಸಹ ಲಸಿಕೆ ನೀಡಬೇಕು ಎಂಬುದು ಪಕ್ಷದ ಪ್ರಮುಖ ಬೇಡಿಕೆಯಾಗಿದೆ.

 

Read These Next

ಅಣಕು ಮತದಾನದ ವೇಳೆ ಬಿಜೆಪಿಗೆ ಮತ

ಕೇರಳದ ಕಾಸರಗೋಡಿನಲ್ಲಿ ಅಣಕು ಮತದಾನದವೇಳೆ ಇವಿಎಂಗಳು ತಪ್ಪಾಗಿ ಬಿಜೆಪಿ ಪರವಾಗಿ ಮತಗಳನ್ನು ದಾಖಲಿಸಿವೆ ಎಂದು ಅರ್ಜಿದಾರರೊಬ್ಬರು ...

ಚುನಾವಣಾ ಪ್ರಕ್ರಿಯೆಯಲ್ಲಿ ಪಾವಿತ್ರ್ಯವಿರಬೇಕು; ಆಯೋಗಕ್ಕೆ ಹೇಳಿದ ಸುಪ್ರೀಂ ಕೋರ್ಟ್

ಚುನಾವಣಾ ಪ್ರಕ್ರಿಯೆ ಯಲ್ಲಿ ಪಾವಿತ್ರ್ಯವಿರಬೇಕು ಎಂದು ಚುನಾವಣಾ ಆಯೋಗಕ್ಕೆ ಇಂದು ಸುಪ್ರೀಂ ಕೋರ್ಟ್ ಹೇಳಿದೆಯಲ್ಲದೆ ಸ್ವತಂತ್ರ ...

'ಚುನಾವಣಾ ಬಾಂಡ್' ವಿಶ್ವದ ದೊಡ್ಡ ಹಗರಣ; ಬಿಜೆಪಿ ವಿರುದ್ಧ ರಾಹುಲ್‌ ಗಾಂಧಿ ವಾಗ್ದಾಳಿ

ಬಿಜೆಪಿಯ ಚುನಾ ವಣಾ ಬಾಂಡ್ ವಿಶ್ವದ ಅತ್ಯಂತ ದೊಡ್ಡ ಹಗರಣವಾಗಿದ್ದು, ಗೂಂಡಾಗಳ ರೀತಿಯಲ್ಲಿ ಕೆಲವು ಉದ್ಯಮಿಗಳನ್ನು ಬೆದರಿಸಿ ಹಫ್ತಾ ...

ಗುಂಪಿನಿಂದ ಹತ್ಯೆ, ಗೋರಕ್ಷಣೆ ಹೆಸರಿನಲ್ಲಿ ಹಿಂಸಾಚಾರ ತಡೆಯಲು ಕೈಗೊಂಡ ಕ್ರಮಗಳ ಬಗ್ಗೆ ತಿಳಿಸಿ; ರಾಜ್ಯಗಳಿಗೆ ಸುಪ್ರೀಂ ಸೂಚನೆ

ಗುಂಪಿನಿಂದ ಥಳಿಸಿ ಹತ್ಯೆ ಮತ್ತು ಗೋರಕ್ಷಣೆಯ ಹೆಸರಿನಲ್ಲಿ ಹಿಂಸಾಚಾರದ ಘಟನೆಗಳನ್ನು ತಡೆಯಲು ಕೈಗೊಂಡಿರುವ ಕ್ರಮಗಳ ಬಗ್ಗೆ ಆರು ...

ಉತ್ತರಕನ್ನಡ ಲೋಕಸಭಾ ಕ್ಷೇತ್ರದಲ್ಲಿ ಒಟ್ಟು 19 ಅಭ್ಯರ್ಥಿಗಳಿಂದ 36 ನಾಮಪತ್ರ ಸಲ್ಲಿಕೆ.

ಕಾರವಾರ :12- ಉತ್ತರ ಕನ್ನಡ ಲೋಕಸಭಾ ಕ್ಷೇತ್ರದ ಸಾರ್ವತ್ರಿಕ ಚುನಾವಣೆಗೆ ಸಂಬಂಧಿಸಿದಂತೆ , ನಾಮಪತ್ರಗಳ ಸಲ್ಲಿಕೆಗೆ ಕೊನೆಯ ದಿನವಾದ ...

ಭಟ್ಕಳ : ಈದುಲ್ ಫಿತ್ರ್ ನಿಮಿತ್ತ ಒಂದು ಲಕ್ಷ ಇಪ್ಪತ್ತು ಸಾವಿರಕ್ಕೂ ಅಧಿಕ ಫೀತ್ರ್ ಅಕ್ಕಿ ವಿತರಣೆ

ಭಟ್ಕಳ: ಈದುಲ್ ಫಿತ್ರ್ ಸಂದರ್ಭದಲ್ಲಿ ಪ್ರತಿಯೊಬ್ಬ ಮುಸ್ಲಿಮನು ತನ್ನ ಈದ್ ಹಬ್ಬಕ್ಕೆ ಒಂದು ಮುಂಚೆ ಕಡ್ಡಾಯವಾಗಿ ನೀಡುವ ಫಿತ್ರ್ ...

ಭಟ್ಕಳ ಸ್ಪೋರ್ಟ್ಸ್ ಅಕಾಡೆಮಿ ಮತ್ತು BMYF ಸಹಯೋಗದೊಂದಿಗೆ ಎ.20-21 ರಂದು ಯುವ ಪ್ರತಿಭೆಗಳಿಗಾಗಿ ಇಂಟರ್-ಕ್ರಿಕೆಟ್ ಲೀಗ್ ಆಯ್ಕೆ

ಭಟ್ಕಳ: ಉತ್ತರ ಕನ್ನಡ ಜಿಲ್ಲೆಯ ಉದಯೋನ್ಮುಖ ಕ್ರಿಕೆಟ್ ಪ್ರತಿಭೆಗಳನ್ನು ಗುರುತಿಸುವ ಮತ್ತು ಪೋಷಿಸುವ ಪ್ರಯತ್ನದಲ್ಲಿ, ಭಟ್ಕಳ ...