ಹುಬ್ಬಳ್ಳಿ: ಹುಬ್ಬಳ್ಳಿಯ ಚರ್ಚ್‌ಗೆ ನುಗ್ಗಿ ಭಜನೆ ಮಾಡಿದ ಸಂಘಪರಿವಾರದ ಕಾರ್ಯಕರ್ತರು

Source: VB News | By I.G. Bhatkali | Published on 19th October 2021, 5:27 PM | State News | National News |

ಹುಬ್ಬಳ್ಳಿ:  ಬಲವಂತದಿಂದ ಮತಾಂತರಗಳನ್ನು ಮಾಡಲಾಗುತ್ತಿದೆ ಎಂದು ಆರೋಪಿಸಿ ರವಿವಾರ ಬೆಳಗ್ಗೆ ಇಲ್ಲಿಯ ಭೈರಿದೇವರ ಕೊಪ್ಪದಲ್ಲಿರುವ ಚರ್ಚೆಂದಕ್ಕೆ ನುಗ್ಗಿದ ಬಜರಂಗ ದಳ ಮತ್ತು ವಿಹಿಂಪ ಕಾರ್ಯಕರ್ತರು ಭಜನೆಗಳನ್ನು ಹಾಡಿದ ಘಟನೆ ರವಿವಾರ ನಡೆದಿದೆ.

ಚರ್ಚ್‌ನೊಳಗೆ ನೆಲದಲ್ಲಿ ಕುಳಿತಿದ್ದ ಹಲವಾರು ಪುರುಷರು ಮತ್ತು ಮಹಿಳೆಯರು ತಲೆಯ ಮೇಲೆ ಕೈಗಳನ್ನು ನಮಸ್ಕಾರದ ಭಂಗಿಯಲ್ಲಿ ಎತ್ತಿ ಹಿಡಿದು ಭಜನೆ ಮಾಡುತ್ತಿರುವುದನ್ನು ವೀಡಿಯೊ ತೋರಿಸಿದೆ.

ಈ ಮಧ್ಯೆ ಚರ್ಚ್ನ ಪ್ಲಾಸ್ಟರ್ ಸೋಮು ಅವರಾಧಿ ಬಂಧನಕ್ಕೆ ಆಗ್ರಹಿಸಿ ಸ್ಥಳೀಯ ಬಿಜೆಪಿ ಶಾಸಕ ಅರವಿಂದ ಬೆಲ್ಲದ್ ನೇತೃತ್ವದಲ್ಲಿ ಕಾರ್ಯಕರ್ತರು ಹೆದ್ದಾರಿ ತಡೆ ನಡೆಸಿದರು.

ಘಟನೆಗೆ ಸಂಬಂಧಿಸಿದಂತೆ ತಮ್ಮ ಮೇಲೆ ಹಲ್ಲೆ ನಡೆಸಲಾಗಿದೆ ಎಂದು ಚರ್ಚ್‌ನ ಸದಸ್ಯರು ಮತ್ತು ಬಲಪಂಥೀಯ ಸಂಘಟನೆಗಳ ಕಾರ್ಯಕರ್ತರು ಪರಸ್ಪರ ಆರೋಪಿಸಿದ್ದಾರೆ. ಅವರಾಧಿ ಮತ್ತು ಅವರ ಕೆಲವು ಸಹವರ್ತಿಗಳು ಸಣ್ಣಪುಟ್ಟ ಗಾಯಗಳೊಂದಿಗೆ ಆಸ್ಪತ್ರೆಗೆ ದಾಖಲಾಗಿದ್ದರು. ಘಟನೆ ಬಗ್ಗೆ ತಾವು ಸೋಮವಾರ ದೂರು ಸಲ್ಲಿಸಿರುವುದಾಗಿ ಚರ್ಚ್ ಅಧಿಕಾರಿಗಳು ತಿಳಿಸಿದ್ದಾರೆ.

ಪರಿಶಿಷ್ಟ ಜಾತಿ ಮತ್ತು ಪಂಗಡಗಳ ರಕ್ಷಣೆ ಕಾಯ್ದೆ ಮತ್ತು ಧಾರ್ಮಿಕ ಭಾವನೆಗಳನ್ನು ಕೆರಳಿಸುವ ಉದ್ದೇಶಪೂರ್ವಕ ಕೃತ್ಯಗಳ ವಿರುದ್ಧ ಕಾಯ್ದೆಯಡಿ ಅವರಾಧಿ ಮತ್ತು ಇತರರ ವಿರುದ್ಧ ದೂರನ್ನು ದಾಖಲಿಸಲಾಗಿದೆ. ಅವರಾಧಿಯವರನ್ನು ಬಂಧಿಸಿರುವ ಪೊಲೀಸರು

ಇತರ ಮೂವರನ್ನು ವಿಚಾರಣೆಯ ಬಳಿಕ ಬಿಡುಗಡೆಗೊಳಿಸಿದ್ದಾರೆ. ಘಟನೆಯನ್ನು ದೃಢಪಡಿಸಿದ ಹುಬ್ಬಳ್ಳಿ-ಧಾರವಾಡ ಪೊಲೀಸ್

ಆಯುಕ್ತ ಲಾಬುರಾಮ ಅವರು, ತನಿಖೆಯು ಪ್ರಗತಿಯಲ್ಲಿದೆ. ಅವರಾಧಿಯವರನ್ನು ಮಾತ್ರ ಬಂಧಿಸಲಾಗಿದೆ. ಈವರೆಗೆ ಚರ್ಚ್ ನಿಂದ ಯಾವುದೇ ದೂರನ್ನು ನಾವು ಸ್ವೀಕರಿಸಿಲ್ಲ' ಎಂದು ತಿಳಿಸಿದರು.

'ವಿಶ್ವನಾಥ ಎಂಬ ವ್ಯಕ್ತಿಯನ್ನು ಮತಾಂತರಕ್ಕಾಗಿ ಚರ್ಚ್‌ಗೆ ಕರೆತರಲಾಗಿತ್ತು. ಅವರು ಚರ್ಚ್‌ನಿಂದ ಪೊಲೀಸ್ ಠಾಣೆಗೆ ತೆರಳಿ ಅವರಾಧಿ ಮತ್ತು ಇತರರ ವಿರುದ್ಧ ದೂರು ದಾಖಲಿಸಿದ್ದರು. ಬಳಿಕ ನಮ್ಮ ಕಾರ್ಯಕರ್ತರು ಚರ್ಚ್‌ನೊಳಗೆ ಸಮಾವೇಶಗೊಂಡು ಹಿಂದೂ ಧರ್ಮದ ಭಜನೆಗಳನ್ನು ಹಾಡುವ ಮೂಲಕ ಪ್ರತಿಭಟಿಸಿದ್ದರು ಎಂದು ಬಜರಂಗ ದಳದ ರಾಜ್ಯ ಸಂಚಾಲಕ ರಾಘು ಸಕಲೇಶಪುರ ಹೇಳಿದ್ದಾರೆ.

ಬಲವಂತದ ಮತಾಂತರದ ಆರೋಪವನ್ನು ಮಾಡಿರುವ ವಿಶ್ವನಾಥ, ಚರ್ಚ್‌ನ ಪ್ರಾರ್ಥನೆಯ ಬದಲು ತಾನು ಹಿಂದೂ ಪ್ರಾರ್ಥನೆಯನ್ನು ಹಾಡಿದಾಗ ಪ್ಯಾಸ್ಟರ್ ಅವರಾಧಿ ತನ್ನನ್ನು ನಿಂದಿಸಿದ್ದರು ಎಂದೂ ಆರೋಪಿಸಿದ್ದಾರೆ. ಮತಾಂತರದ ಯಾವುದೇ ಪ್ರಯತ್ನಗಳನ್ನು ಚರ್ಚ್ ಅಧಿಕಾರಿಗಳು ನಿರಾಕರಿಸಿದ್ದಾರೆ.

ಸಂಘಪರಿವಾರ ಕಾರ್ಯಕರ್ತರು ಚರ್ಚ್‌ನಲ್ಲಿ ಭಜನೆಗಳನ್ನು ಹಾಡುತ್ತಿದ್ದಾಗ ಅವರಾಧಿ ಅಲ್ಲಿಗೆ ಬಂದಿದ್ದು, ಅವರಿಗೆ ಮುತ್ತಿಗೆ ಹಾಕಲಾಗಿತ್ತು. ಸ್ಥಳದಲ್ಲಿ ಕೆಲವು ಮಹಿಳೆಯರೂ ಇದ್ದು,ವಾಗ್ವಾದ ಮತ್ತು ತಳ್ಳಾಟಗಳ ವೇಳೆ ಗಾಯಗೊಂಡಿದ್ದಾರೆ ಎಂದು ಚರ್ಚ್‌ನ ಹಿರಿಯ ಸದಸ್ಯ ಸೆಡ್ರಿಕ್ ಜಾಕೋಬ್‌ ತಿಳಿಸಿದರು.

Read These Next

ಸಂವಿಧಾನದ ಆಶಯವನ್ನು ಎತ್ತಿಹಿಡಿಯುವಲ್ಲಿ ನ್ಯಾಯಾಂಗದ ಪಾತ್ರ ದೊಡ್ಡದು: ಮುಖ್ಯಮಂತ್ರಿ ಸಿದ್ದರಾಮಯ್ಯ

ಭಾರತದ ನ್ಯಾಯಾಂಗವು ಸಂವಿಧಾನದ ಆಶಯಗಳನ್ನು ಎತ್ತಿ ಹಿಡಿಯುವಲ್ಲಿ ಪ್ರಮುಖ ಪಾತ್ರ ವಹಿಸುತ್ತಾ ಬಂದಿದೆ. ಮೂಲಭೂತ ಹಕ್ಕುಗಳಿಗೆ ...

ವಿದ್ಯಾರ್ಥಿಗಳ ಗೊಂದಲಕ್ಕೆ ತೆರೆ: 5, 8, 9ನೇ ತರಗತಿಗೆ ಬೋರ್ಡ್ ಪರೀಕ್ಷೆ ನಡೆಸಲು ಹೈಕೋರ್ಟ್ ವಿಭಾಗೀಯ ಪೀಠ ಅಸ್ತು!

ವಿದ್ಯಾರ್ಥಿಗಳ ಗೊಂದಲಕ್ಕೆ ತೆರೆ: 5, 8, 9ನೇ ತರಗತಿಗೆ ಬೋರ್ಡ್ ಪರೀಕ್ಷೆ ನಡೆಸಲು ಹೈಕೋರ್ಟ್ ವಿಭಾಗೀಯ ಪೀಠ ಅಸ್ತು!

ಕೋಲಾರ ಕ್ಷೇತ್ರಕ್ಕೆ ಏಪ್ರಿಲ್ 26 ಕ್ಕೆ ಮತದಾನ, ಜೂನ್ 4ಕ್ಕೆ ಫಲಿತಾಂಶ, ತಕ್ಷಣದಿಂದಲೆ ಜಿಲ್ಲೆಯಾದ್ಯಂತ ನೀತಿ ಸಂಹಿತೆ ಜಾರಿ

ಲೋಕಸಭಾ ಚುನಾವಣೆಗೆ ಚುನಾವಣಾ ಆಯೋಗ ದಿನಾಂಕ ಘೋಷಣೆ ಮಾಡಿರುವ ಹಿನ್ನೆಲೆಯಲ್ಲಿ ತಕ್ಷಣದಿಂದಲೆ ಜಿಲ್ಲೆಯಾದ್ಯಂತ ಮಾದರಿ ನೀತಿ ಸಂಹಿತೆ ...

ರಿಲಯನ್ಸ್ ಜೊತೆ ನಂಟು ಹೊಂದಿರುವ ಕಂಪೆನಿಯಿಂದ ಬಿಜೆಪಿಗೆ 375 ಕೋಟಿ ರೂ. ಮೌಲ್ಯದ ಚುನಾವಣಾ ಬಾಂಡ್

ರಿಲಯನ್ಸ್ ಗುಂಪಿನೊಂದಿಗೆ ನಂಟು ಹೊಂದಿರುವ, ಆದರೆ ಹೊರಜಗತ್ತಿಗೆ ಅಪರಿಚಿತವಾಗಿರುವ ಕಂಪೆನಿ ಕ್ವಿಕ್ ಸಪ್ಪೆ ಚೇನ್ ಪ್ರೈವೇಟ್ ...

ಲೋಕಸಭಾ ಚುನಾವಣೆ; ಕಾಂಗ್ರೇಸ್ ನ ಎರಡನೇ ಪಟ್ಟಿ ಬಿಡುಗಡೆ; ಉ.ಕ ಕ್ಷೇತ್ರಕ್ಕೆ ಅಂಜಲಿ ನಿಂಬಾಳ್ಕರ್

ಲೋಕಸಭಾ ಚುನಾವಣೆಗೆ ಕಾಂಗ್ರೆಸ್‌ ಪಕ್ಷ ತನ್ನ ಅಭ್ಯರ್ಥಿಗಳ ಎರಡನೇ ಪಟ್ಟಿಯನ್ನು ಬಿಡುಗಡೆಗೊಳಿಸಿದ್ದು, ಕರ್ನಾಟಕದ 17, ಅರುಣಾಚಲ ...

ಸಿಎಎ ನಿಯಮಾವಳಿಗಳಿಗೆ ತಡೆ ಕೋರುವ ಅರ್ಜಿಗಳ ವಿಚಾರಣೆ ; ಸು.ಕೋರ್ಟ್‌ನಿಂದ ಕೇಂದ್ರಕ್ಕೆ ನೋಟಿಸ್

ಪೌರತ್ವ ತಿದ್ದುಪಡಿ ಕಾಯ್ದೆ (ಸಿಎಎ)ಯ ನಿಯಮಗಳಿಗೆ ತಡೆಯಾಜ್ಞೆ ನೀಡಬೇಕೆಂದು ಕೋರಿ ಸಲ್ಲಿಸಲಾಗಿರುವ ಅರ್ಜಿಗಳನ್ನು ಮಂಗಳವಾರ ...