ಮಕ್ಕಳ ಅಪೌಷ್ಠಿಕ ಮಟ್ಟ, ಗರ್ಭಿಣಿ, ಬಾಣಂತಿಯರಲ್ಲಿರುವ ರಕ್ತಹೀನತೆಯನ್ನು ತಡೆಯಲು ಅಂಗನವಾಡಿ ಕಾರ್ಯಕರ್ತೆಯರ ಪಾತ್ರ ಅತಿ ಮುಖ್ಯ : ಜಹೀರಾ ನಸೀಮ್

Source: SO News | By Laxmi Tanaya | Published on 4th September 2021, 8:23 PM | State News | Don't Miss |

ಬೀದರ : ಜಿಲ್ಲಾಡಳಿತ, ಜಿಲ್ಲಾ ಪಂಚಾಯತ ಬೀದರ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ಬೀದರ,  ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಬೀದರ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಹಾಗೂ ಆಯುಷ್ ಇಲಾಖೆ, ನಗರ ಸಭೆ ಬೀದರ ಮತ್ತು ಶಿಶು ಅಭಿವೃದ್ಧಿ ಯೋಜನೆ,  ಬೀದರ ಇವರ ಸಂಯುಕ್ತಾಶ್ರಯದಲ್ಲಿ ಅಪೌಷ್ಠಿಕ ವಿರುದ್ಧ ಸಮರ ಸಾರೋಣ, ರಾಷ್ಟ್ರೀಯ  ಪೋಷಣ ಮಾಸಾಚಾರಣೆ ಸೆಪ್ಟಂಬರ.2021  ಮತ್ತು ಪ್ರಧಾನಮಂತ್ರಿ ಮಾತೃವಂದನಾ ಸಪ್ತಾಹ ಕಾರ್ಯಕ್ರಮವನ್ನು ಜಿಲ್ಲಾ ಬಾಲಭವನದಲ್ಲಿ   ಇತ್ತೀಚೆಗೆ  ನಡೆಯಿತು.

ಕಾರ್ಯಕ್ರಮಕ್ಕೆ ಬೀದರ ಜಿಲ್ಲಾ ಪಂಚಾಯತ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಜಹೇರಾ ನಾಸಿಮ್ ಅವರು ದೀಪ ಬೆಳಗಿಸುವ ಮುಖಾಂತರ ಉದ್ಘಾಟನೆ ಮಾಡಿದರು.

ಕಾರ್ಯಕ್ರಮ ಉದ್ದೇಶಿಸಿ ಮಾತನಾಡಿದ ಅವರು, ಪೋಷಣ ಅಭಿಯಾನ ಇದು ರಾಷ್ಟ್ರೀಯ ಕಾರ್ಯಕ್ರಮವಾಗಿದ್ದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯಲ್ಲಿ ಮಕ್ಕಳ ಅಪೌಷ್ಠಿಕ ಮಟ್ಟ ಹಾಗೂ ಗರ್ಭಿಣಿ ಮತ್ತು ಬಾಣಂತಿಯಲ್ಲಿರುವ  ರಕ್ತಹೀನತೆಯನ್ನು   ತಡೆಯಲು ಅಂಗನವಾಡಿ ಕಾರ್ಯಕರ್ತೆಯರ ಪಾತ್ರ ಅತಿ ಮುಖ್ಯವಾದುದ್ದು ಎಂದು ಹೇಳಿದರು.

 ಅಂಗನವಾಡಿ ಕೇಂದ್ರಗಳಲ್ಲಿ ತಾಯಂದಿರ ಸಭೆಗಳ ಮತ್ತು ಪೌಷ್ಠಿಕ ಆಹಾರ ಹಾಗೂ ಪ್ರಾತ್ಯೆಕ್ಷಿತೆ ಸಭೆಗಳ ಮುಖಾಂತರ ಮೊಳಕೆ ಬರಿಸಿದ ಕಾಳು, ಹಸಿ ಸೊಪ್ಪು, ತರಕಾರಿಗಳು, ಮೊಟ್ಟೆ ಹಾಗೂ ಹಣ್ಣುಗಳನ್ನು ಬಳಸುವುದರಿಂದ ಮಕ್ಕಳ ಆರೋಗ್ಯ ಹಾಗೂ ಗರ್ಭಿಣಿ ಬಾಣಂತಿಯರ ಆರೋಗ್ಯದಲ್ಲಿ ಸುಧಾರಣೆ ಉಂಟಾಗುವುದೆಂದರು. 

 ಮಹಾಮಾರಿ ಕೋವಿಡ-19ರ ಲಸಿಕೆಯಲ್ಲಿ ಅಂಗನವಾಡಿ ಕಾರ್ಯಕರ್ತೆಯರ ಪಾತ್ರ ಅತಿ ಮುಖ್ಯವಾದದ್ದು ಹಾಗೂ ಮುಂಬರುವ ಕೋರೊನಾ ಮೂರನೆ ಅಲೆಯ ಕುರಿತು ಮುನ್ನೆಚ್ಚೆರಿಕೆ ಕ್ರಮಗಳನ್ನು ಕೈಗೊಳ್ಳಲು ಎಲ್ಲಾ ಅಂಗನವಾಡಿ ಕಾರ್ಯಕರ್ತೆಯರಿಗೆ ತಿಳಿಸಿದರು. 
 ಪ್ರತಿ ಅಂಗನವಾಡಿ ಕೇಂದ್ರಗಳಲ್ಲಿ ಮೂಲಭೂತ ಸೌಕರ್ಯಗಳ ಕುರಿತು ಉತ್ತಮ ರೀತಿಯಲ್ಲಿ ತಮ್ಮ-ತಮ್ಮ ವಲಯಗಳಲ್ಲಿ ಬರುವ ಎಲ್ಲಾ ಕೇಂದ್ರಗಳಲ್ಲಿ ಉತ್ತಮ ರೀತಿಯಲ್ಲಿ ನಿರ್ವಹಿಸಲು ತಿಳಿಸಿದರು.

ಅದೆ ರೀತಿಯಾಗಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪ ನಿರ್ದೇಶಕರಾದ ರವೀಂದ್ರ ಎಸ್ ರತ್ನಾಕರ ಅವರು ಮಾತನಾಡಿ ಅಂಗನವಾಡಿ ಕೇಂದ್ರಗಳಲ್ಲಿನ ಶಿಶು ಮರಣ, ತಾಯಂದಿರ ಮರಣ, ಅಪೌಷ್ಠಿಕ ಮಕ್ಕಳ ಜನನ, ರಕ್ತಹೀನತೆ, ಮುಂತಾದ ಸಮಸ್ಯಗಳಿಗೆ ಇಂದಿನ ದಿನ ಪರಿಹಾರ ಸಿಗಬೇಕಾದರೆ ಉತ್ತಮ ಪೌಷ್ಠಿಕಯುಕ್ತ ಆಹಾರ ಸೇವನೆ ಅವಶ್ಯಕವಾಗಿದೆ. ಪ್ರತಿ ಅಂಗನವಾಡಿಯಲ್ಲಿ ಮಕ್ಕಳ ತೂಕ ಮತ್ತು ಎತ್ತರ ಮಾಡುವುದರಿಂದ ಮಕ್ಕಳ ಬೆಳವಣಿಗೆ ಪತ್ತೆ ಹಚ್ಚಬಹುದು ಎಂದು ತಿಳಿಸಿದರು. 

ಪ್ರತಿ ತಿಂಗಳು ಮೊದಲನೆ ಶುಕ್ರವಾರ ಹಾಗೂ ಮೂರನೆ ಶುಕ್ರವಾರ  ಗರ್ಭಿಣಿಯರಿಗೆ ಸೀಮಂತ ಕಾರ್ಯಕ್ರಮ ಹಾಗೂ 06 ತಿಂಗಳ ಮಗುವಿಗೆ ಅನ್ನಪ್ರಾಶನ ಕಾರ್ಯಕ್ರಮವನ್ನು ಏರ್ಪಡಿಸಲಾಗುವುದು ಎಂದರು.

ಜಿಲ್ಲಾ ಆರೋಗ್ಯ ಮತ್ತು ಕಲ್ಯಾಣ ಕುಟುಂಬ ಅಧಿಕಾರಿಗಳಾದ ಡಾ. ವಿ.ಜಿ.ರೆಡ್ಡಿ ಅವರು ಮಾತನಾಡಿ,  ಅಂಗನವಾಡಿ  ಕೇಂದ್ರದಲ್ಲಿನ ಮಕ್ಕಳಿಗೆ ಹಾಲು ಮತ್ತು ಮೊಟ್ಟೆ ತಿನ್ನುವುದರಿಂದ ಉತ್ತಮ ಬೆಳವಣಿಗೆಗೆ ಸಹಾಯವಾಗುವುದು. ಕೋವಿಡ್ ವಾಕ್ಸಿನ ನಲ್ಲಿ ಗರ್ಭಿಣಿ, ಬಾಣಂತಿಯರಿಗೆ, ಅಂಗವಿಕಲರಿಗೆ ಹಾಗೂ ಸಾರ್ವಜನಿಕರಿಗೆ ಲಸಿಕೆ ಕೊಡಿಸುವುದರಲ್ಲಿ ಅಂಗನವಾಡಿ ಕಾರ್ಯಕರ್ತೆಯರು ಉತ್ತಮ ಸ್ಪಂದನೆ ನೀಡಿ ಯಶಸ್ವಿ ಗೊಳಿಸಿದ್ದಾರೆ ಎಂದು ಹೇಳಿದರು. 

 ಜಿಲ್ಲಾ ಆಯುಷ ಅಧಿಕಾರಿಗಳಾದ  ಶಾರದಾ ಮೇತ್ರೆ ಅವರು ಗರ್ಭಿಣಿ, ಬಾಣಂತಿ ಹಾಗೂ ಮಕ್ಕಳಿಗೆ ಉತ್ತಮವಾದ ಪೌಷ್ಠಿಕ ಆಹಾರ ನೀಡಿ, ಅಪೌಷ್ಠಿಕತೆಯನ್ನು ಹೋಗಲಾಡಿಸುವುದರಲ್ಲಿ ಯಶಸ್ವಿಗೊಳಿಸಬೇಕು ಎಂದು ಹೇಳಿದರು.

ಬೀದರ ತಾಲೂಕಿನ ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳಾದ ಮಹಾಂತೇಶ ಭಂಜತ್ರಿ ರವರು ಪೋಷಣ ಅಭಿಯಾನ ಯೋಜನೆಯ ಗುರಿ ಹಾಗೂ ಉದ್ದೇಶ , ಮಕ್ಕಳಲ್ಲಿ ಉಂಟಾಗುವ ಕುಂಠಿತ ಬೆಳವಣಿಗೆಯನ್ನು ತಡೆಗಟ್ಟುವುದು. ಮಕ್ಕಳಲ್ಲಿನ ಅಪೌಷ್ಠಿಕತೆಯನ್ನು ಹೊಗಲಾಡಿಸುವುದು. ಗರ್ಭಿಣಿ ಹಾಗೂ ಬಾಣಂತಿಯರಿಗೆ ಪೌಷ್ಠಿಕ ಆಹಾರದ ಬಗ್ಗೆ ಅರಿವು ಮೂಡಿಸುವುದು. ಮತ್ತು ಚಿಕ್ಕ ಮಕ್ಕಳಲ್ಲಿ ಉಂಟಾಗುವ ರಕ್ತಹೀನತೆಯನ್ನು ಕಡಿಮೆಗೊಳಿಸುವುದು, ಎಲ್ಲರು ತಮ್ಮ ತಮ್ಮ ಜವಾಬ್ದಾರಿ ವಹಿಸಿಕೊಂಡು ಕೆಲಸ ಕಾರ್ಯಗಳನ್ನು ಅಚ್ಚು ಕಟ್ಟಾಗಿ ಮಾಡಬೇಕೆಂದು ತಿಳಿಸಿದ್ದರು.

 ಅದೇ ರಿತಿಯಾಗಿ ಪೋಷಣ ಮಾಸಾಚಾರಣೆ ಪ್ರತಿ ವರ್ಷ ಸೆಪ್ಟೆಂಬರ ಒಂದು ತಿಂಗಳು ದಿನಾಲೂ ಬೇರೆ ಬೇರೆ ಚಟುವಟಿಕೆದೊಂದಿಗೆ ಎಲ್ಲಾ ಇಲಾಖೆ ಒಗ್ಗುಡಿ ಪೋಷಣ ಮಾಸಾಚರನೆಯನ್ನು ಯಶಸ್ವಿಯಾಗಿ ಮಾಡಬೇಕು ಎಂದು ತಿಳಿಸಿದರು.

ಸದರಿ ಉದ್ಘಾಟನೆ ಸಮಾರಂಭ ಕಾರ್ಯಕ್ರಮದಲ್ಲಿ ಬೀದರ ತಾಲೂಕಿನ ಎಲ್ಲಾ ಮೆಲ್ವೀಚಾರಕಿಯರು, ಮಾತೃವಂದನ ಜಿಲ್ಲಾ ಸಂಯೋಜಕರು, ಪೋಷಣ  ಅಭಿಯಾನದ ಜಿಲ್ಲಾ ಹಾಗೂ ತಾಲೂಕಿನ ಸಿಬ್ಬಂದಿ ವರ್ಗದವರು, ಹಾಗೂ ಅಂಗನವಾಡಿ ಕಾರ್ಯಕರ್ತೆಯರ, ಅಂಗನವಾಡಿ ಸಹಾಯಕಿಯರು, ಹಾಗೂ ಫಲಾನುಭವಿಗಳು ಭಾಗವಹಿಸಿದರು.

Read These Next

ಸಂವಿಧಾನದ ಆಶಯವನ್ನು ಎತ್ತಿಹಿಡಿಯುವಲ್ಲಿ ನ್ಯಾಯಾಂಗದ ಪಾತ್ರ ದೊಡ್ಡದು: ಮುಖ್ಯಮಂತ್ರಿ ಸಿದ್ದರಾಮಯ್ಯ

ಭಾರತದ ನ್ಯಾಯಾಂಗವು ಸಂವಿಧಾನದ ಆಶಯಗಳನ್ನು ಎತ್ತಿ ಹಿಡಿಯುವಲ್ಲಿ ಪ್ರಮುಖ ಪಾತ್ರ ವಹಿಸುತ್ತಾ ಬಂದಿದೆ. ಮೂಲಭೂತ ಹಕ್ಕುಗಳಿಗೆ ...

ವಿದ್ಯಾರ್ಥಿಗಳ ಗೊಂದಲಕ್ಕೆ ತೆರೆ: 5, 8, 9ನೇ ತರಗತಿಗೆ ಬೋರ್ಡ್ ಪರೀಕ್ಷೆ ನಡೆಸಲು ಹೈಕೋರ್ಟ್ ವಿಭಾಗೀಯ ಪೀಠ ಅಸ್ತು!

ವಿದ್ಯಾರ್ಥಿಗಳ ಗೊಂದಲಕ್ಕೆ ತೆರೆ: 5, 8, 9ನೇ ತರಗತಿಗೆ ಬೋರ್ಡ್ ಪರೀಕ್ಷೆ ನಡೆಸಲು ಹೈಕೋರ್ಟ್ ವಿಭಾಗೀಯ ಪೀಠ ಅಸ್ತು!

ಕೋಲಾರ ಕ್ಷೇತ್ರಕ್ಕೆ ಏಪ್ರಿಲ್ 26 ಕ್ಕೆ ಮತದಾನ, ಜೂನ್ 4ಕ್ಕೆ ಫಲಿತಾಂಶ, ತಕ್ಷಣದಿಂದಲೆ ಜಿಲ್ಲೆಯಾದ್ಯಂತ ನೀತಿ ಸಂಹಿತೆ ಜಾರಿ

ಲೋಕಸಭಾ ಚುನಾವಣೆಗೆ ಚುನಾವಣಾ ಆಯೋಗ ದಿನಾಂಕ ಘೋಷಣೆ ಮಾಡಿರುವ ಹಿನ್ನೆಲೆಯಲ್ಲಿ ತಕ್ಷಣದಿಂದಲೆ ಜಿಲ್ಲೆಯಾದ್ಯಂತ ಮಾದರಿ ನೀತಿ ಸಂಹಿತೆ ...

ಭಾಷಾ ಜ್ಞಾನದ ಕುರಿತು ಯಾರ ಬಗ್ಗೆಯೂ ಕೇವಲವಾಗಿ ಮಾತನಾಡಿಲ್ಲ: ಜೆ.ಪಿ.ಹೆಗ್ಡೆ ಸ್ವಷ್ಟನೆ

ಉಡುಪಿ: ಈವರೆಗಿನ ರಾಜಕೀಯ ಜೀವನದಲ್ಲಿ ಯಾರ ಮನಸ್ಸನ್ನೂ ನೋಯಿಸುವುದಾಗಲಿ ಅಥವಾ ಕೇವಲವಾಗಿ ಮಾತನಾಡುವುದನ್ನಾಗಲಿ ಮಾಡದೆ ಇರುವ ನಾನು ...