ಕುಸಿತುಬಿದ್ದ ಶಿಥಿಲಗೊಂಡ ಕೆ.ಎಸ್.ಆರ್.ಟಿ.ಸಿ ಬಸ್ ನಿಲ್ದಾಣ ಕಟ್ಟಡ

Source: sonews | By Staff Correspondent | Published on 16th July 2018, 5:59 PM | Coastal News | State News | Don't Miss |

ಭಟ್ಕಳ: ಭಟ್ಕಳ ಬಸ್ ನಿಲ್ದಾಣವನ್ನು ನವೀಕರಿಸುತ್ತಿದ್ದು ಇದಕ್ಕಾಗಿ ತೆರವುಗೊಂಡ ಕಟ್ಟಡವೊಂದು ಮಳೆಗೆ ಕುಸಿದು ಬಿದ್ದ ಘಟನೆ ಸೋಮವಾರ ನಡೆದಿದೆ. 

ಸುಮಾರು 40 ವರ್ಷಗಳ ಹಳೆಯದಾದ ಕಟ್ಟಡವನ್ನು ಸಾರಿಗೆ ಇಲಾಖೆ ನವೀಕರಿಸುತ್ತಿದ್ದು ಹೊಸ ಬಸ್ ನಿಲ್ದಾಣ ಕಾಮಾಗಾರಿ ಆರಂಭಗೊಂಡಿದೆ. ಬಿರುಕುಗೊಂಡಿರುವ ಕಟ್ಟಡದಲ್ಲಿ ಹೊಟೇಲ್ ನಡೆಸುತ್ತಿದ್ದು ಕಳೆದ ತಿಂಗಳಷ್ಟೆ ಅದನ್ನು ತೆರವುಗೊಳಿಸಿದ್ದಾರೆ. ಈ ಹಿಂದೆಯೆ ಕಟ್ಟಡದಲ್ಲಿ ಬಿರುಕು ಕಾಣಿಸಿಕೊಂಡಿದ್ದರಿಂದ ಅಲ್ಲಿನ ಮಳಿಗೆಗಳನ್ನು ಖಾಲಿ ಮಾಡುವಂತೆ ಭಟ್ಕಳ ಬಸ್ ಘಟಕದಿಂದ ಅಂಗಡಿಕಾರರಿಗೆ ನೋಟಿಸ್ ನೀಡಲಾಗಿತ್ತು. ಹಲವು ದಿನಗಳ ಹಿಂದೆ ಅಂಗಡಿಕಾರರು ಅಂಗಡಿಗಳನ್ನು ಖಾಲಿ ಮಾಡಿದ್ದರು . ಭಾನುವಾರದಂದು ಕಟ್ಟಡದ ಗೋಡೆಯೊಂದು ಕುಸಿದಿತ್ತು. ಇದನ್ನು ಕಂಡ ಡಿಪೋ ಮ್ಯಾನೇಜರ್ ಅಲ್ಲಿ ಜನಸಂಚಾರವನ್ನು ನಿಷೇಧಿಸಿದ್ದರು. ಸೋಮವಾರ ಬೆಳಿಗ್ಗೆ ಸಂಪೂರ್ಣ ಕಟ್ಟಡ ಕುಸಿದುಬಿದ್ದಿದೆ. ಆದರೆ, ಡಿಪೊ ಮ್ಯಾನೆಜರ್ ಇದನ್ನ ತಾವೆ ತೆರವುಗೊಳಿಸಿದ್ದೆವೆ ಎಂದು ಹೇಳಿಕೊಳ್ಳುತ್ತಿದ್ದಾರೆ.ಸದ್ಯ  ಕಟ್ಟಡ ಕುಸಿಯುಯುತ್ತಿರುವ ಆಡಿಯೋ ವೈರಲ್ ಆಗಿದೆ.

ತಹಸಿಲದ್ದಾರರಿಂದ ಪರಿಶೀಲನೆ; ಬಸ್ ನಿಲ್ದಾಣದ ಕಟ್ಟಡ ಕುಸಿಯುತ್ತಿರುವ ವಿಡಿಯೋ ವೈರಲ್ ಆಗುತ್ತಿದ್ದಂತೆ ತಾಲೂಕಾಡಳಿತ ಎಚ್ಚೆತ್ತುಕೊಂಡಿದ್ದು ತಹಸಿಲದಾರ ವಿ.ಎನ್.ಬಾಡಕರ್ ಸ್ಥಳಕ್ಕಾಗಮಿಸಿ ಪರಿಶೀಲನೆ ನಡಿಸಿದ್ದಾರೆ. ಇಂಜಿನೀಯರ್ಸ್ ಗಳ ಸಮ್ಮುಖದಲ್ಲಿ ಸಂಪೂರ್ಣ ಕಟ್ಟಡವನ್ನು ಕೂಡಲೇ ಬೀಳಿಸಬೇಕೆಂಬ ಆದೇಶ ನೀಡಿದ್ದಾರೆ ಎನ್ನಲಾಗಿದೆ.
 

Read These Next

ಸಂವಿಧಾನದ ಆಶಯವನ್ನು ಎತ್ತಿಹಿಡಿಯುವಲ್ಲಿ ನ್ಯಾಯಾಂಗದ ಪಾತ್ರ ದೊಡ್ಡದು: ಮುಖ್ಯಮಂತ್ರಿ ಸಿದ್ದರಾಮಯ್ಯ

ಭಾರತದ ನ್ಯಾಯಾಂಗವು ಸಂವಿಧಾನದ ಆಶಯಗಳನ್ನು ಎತ್ತಿ ಹಿಡಿಯುವಲ್ಲಿ ಪ್ರಮುಖ ಪಾತ್ರ ವಹಿಸುತ್ತಾ ಬಂದಿದೆ. ಮೂಲಭೂತ ಹಕ್ಕುಗಳಿಗೆ ...

ವಿದ್ಯಾರ್ಥಿಗಳ ಗೊಂದಲಕ್ಕೆ ತೆರೆ: 5, 8, 9ನೇ ತರಗತಿಗೆ ಬೋರ್ಡ್ ಪರೀಕ್ಷೆ ನಡೆಸಲು ಹೈಕೋರ್ಟ್ ವಿಭಾಗೀಯ ಪೀಠ ಅಸ್ತು!

ವಿದ್ಯಾರ್ಥಿಗಳ ಗೊಂದಲಕ್ಕೆ ತೆರೆ: 5, 8, 9ನೇ ತರಗತಿಗೆ ಬೋರ್ಡ್ ಪರೀಕ್ಷೆ ನಡೆಸಲು ಹೈಕೋರ್ಟ್ ವಿಭಾಗೀಯ ಪೀಠ ಅಸ್ತು!

ಕೋಲಾರ ಕ್ಷೇತ್ರಕ್ಕೆ ಏಪ್ರಿಲ್ 26 ಕ್ಕೆ ಮತದಾನ, ಜೂನ್ 4ಕ್ಕೆ ಫಲಿತಾಂಶ, ತಕ್ಷಣದಿಂದಲೆ ಜಿಲ್ಲೆಯಾದ್ಯಂತ ನೀತಿ ಸಂಹಿತೆ ಜಾರಿ

ಲೋಕಸಭಾ ಚುನಾವಣೆಗೆ ಚುನಾವಣಾ ಆಯೋಗ ದಿನಾಂಕ ಘೋಷಣೆ ಮಾಡಿರುವ ಹಿನ್ನೆಲೆಯಲ್ಲಿ ತಕ್ಷಣದಿಂದಲೆ ಜಿಲ್ಲೆಯಾದ್ಯಂತ ಮಾದರಿ ನೀತಿ ಸಂಹಿತೆ ...

ಭಾಷಾ ಜ್ಞಾನದ ಕುರಿತು ಯಾರ ಬಗ್ಗೆಯೂ ಕೇವಲವಾಗಿ ಮಾತನಾಡಿಲ್ಲ: ಜೆ.ಪಿ.ಹೆಗ್ಡೆ ಸ್ವಷ್ಟನೆ

ಉಡುಪಿ: ಈವರೆಗಿನ ರಾಜಕೀಯ ಜೀವನದಲ್ಲಿ ಯಾರ ಮನಸ್ಸನ್ನೂ ನೋಯಿಸುವುದಾಗಲಿ ಅಥವಾ ಕೇವಲವಾಗಿ ಮಾತನಾಡುವುದನ್ನಾಗಲಿ ಮಾಡದೆ ಇರುವ ನಾನು ...