ಭಟ್ಕಳದಲ್ಲಿ ನಡೆದ ಸಕ್ಸಂ ಸೈಕ್ಲೋಥ್ಯಾನ್ ಸೈಕಲ್ ರ್ಯಾಲಿ

Source: S.O. News Service | By MV Bhatkal | Published on 12th February 2019, 4:24 PM | Coastal News | Don't Miss |

ಭಟ್ಕಳ: ರಂಜನ್ ಇಂಡೇನ್, ರಫಾತ್ ಏಜೆನ್ಸಿ ಮತ್ತು ಗಾಡ್‍ವಿನ್ ಸೈಕಲ್ ಟ್ರೇಡಿಂಗ್ ಕಂಪನಿ ಭಟ್ಕಳ ಇವರ ಸಂಯುಕ್ತ ಆಶ್ರಯದಲ್ಲಿ ಇಂಧನ ಬಳಕೆ ಹಾಗೂ ಪರಿಸರ ಸಂರಕ್ಷಣೆಯ ಬಗ್ಗೆ ಜಾಗೃತಿ ಮೂಡಿಸುವ ನಿಟ್ಟಿನಲ್ಲಿ ಹಮ್ಮಿಕೊಳ್ಳಲಾದ ಸಕ್ಸಂ ಸೈಕ್ಲೋಥ್ಯಾನ್ ಬೃಹತ್ ಸೈಕಲ್ ಜಾಥಾ ಯಶಸ್ವಿಯಾಗಿ ನಡೆಯಿತು.
ಇಲ್ಲಿನ ಪೊಲೀಸ್ ಪರೇಡ್ ಮೈದಾನದಲ್ಲಿ ಸೈಕಲ್ ಜಾಥಾವನ್ನು ರಂಜನ್ ಇಂಡೇನ್ ಏಜೆನ್ಸಿಯ ಮಾಲಕಿ ಶಿವಾನಿ ಶಾಂತಾರಾಮ ಉದ್ಘಾಟಿಸಿದರು. ನಂತರ ಮಾತನಾಡಿದ ಅವರು, ಇಂಧನ ಮತ್ತು ಪರಿಸರ ಸಂರಕ್ಷಣೆ, ಪೆಟ್ರೋಲಿಯಮ್ ಉತ್ಪನ್ನಗಳ ಸದ್ಭಳಕೆಯ ಬಗ್ಗೆ ಸಂದೇಶ ನೀಡಲು ಈ ಸೈಕಲ್ ಜಾಥಾ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ ಎಂದರು. ಭಟ್ಕಳ ಪೊಲೀಸ್ ವೃತ್ತ ನಿರೀಕ್ಷಕ ಕೆ.ಎಲ್.ಗಣೇಶ ಸೈಕಲ್ ಜಾಥಾಕ್ಕೆ ಹಸಿರು ಬಾವುಟ ತೋರಿಸುವ ಮೂಲಕ ಚಾಲನೆ ನೀಡಿದರು. ಭಟ್ಕಳ ಶಹರ ಠಾಣಾ ಎಸೈ ಕುಸುಮಾಧರ ಉಪಸ್ಥಿತರಿದ್ದರು. ಭಟ್ಕಳ ಪೊಲೀಸ್ ಪರೇಡ್ ಮೈದಾನದಿಂದ ಹೊರಟ ಸೈಕಲ್ ರ್ಯಾಲಿಯು ಸಂಶುದ್ದೀನ್ ಸರ್ಕಲ್, ಹನೀಫಾಬಾದ್ ರಸ್ತೆ, ತಾಲೂಕು ಕ್ರೀಡಾಂಗಣ, ಜಾಲಿ ರಸ್ತೆ ಮಾರ್ಗವಾಗಿ ಪುನಃ ಪೊಲೀಸ್ ಪರೇಡ್ ಮೈದಾನವನ್ನು ತಲುಪಿ ಅಂತ್ಯವಾಯಿತು. 300ಕ್ಕೂ ಹೆಚ್ಚು ವಿದ್ಯಾರ್ಥಿಗಳು, ಸಾರ್ವಜನಿಕರು ಭಾಗವಹಿಸಿದ್ದರು. ನಂತರ ನಡೆದ ಲಕ್ಕಿ ಡ್ರಾನಲ್ಲಿ ಬೆಳಕೆ ಪ್ರೌಢಶಾಲೆಯ 9ನೇ ತರಗತಿಯ ವಿದ್ಯಾರ್ಥಿ ಶಶಾಂಕ ನಾಯ್ಕ ಸೈಕಲ್‍ನ್ನು ಪಡೆದುಕೊಂಡರು. ರಫಾತ್ ಏಜೆನ್ಶಿಯ ನದೀಖ್ ಉಪಸ್ಥಿತರಿದ್ದರು.

 

Read These Next

ಕಾರವಾರ: ಮತದಾನ ಜಾಗೃತಿ ಜಾಥಾ

ಪ್ರತಿಯೊಂದು ಮತವು ದೇಶದ ಭವಿಷ್ಯವನ್ನು ನಿರ್ಧರಿಸುತ್ತದೆ. ಹಾಗಾಗಿ ನೀವು ನಿಮ್ಮ ಸುತ್ತಲಿನವರಿಗೂ ಮತದಾನ ಜಾಗೃತಿ ಮೂಡಿಸಬೇಕು ...

ಗುಲಬರ್ಗಾ ಲೋಕಸಭಾ (ಮೀಸಲು) ಕ್ಷೇತ್ರದ ಚುನಾವಣೆ: ಚುನಾವಣಾ ಸ್ಪರ್ಧಾ ಕಣದಲ್ಲಿ 14 ಅಭ್ಯರ್ಥಿಗಳು

ಕಲಬುರಗಿ : ಗುಲಬರ್ಗಾ ಲೋಕಸಭಾ (ಪ.ಜಾ. ಮೀಸಲು) ಕ್ಷೇತ್ರಕ್ಕೆ 2024ರ ಮೇ 7ರಂದು ನಡೆಯುವ ಚುನಾವಣೆಗಾಗಿ ನಾಮಪತ್ರಗಳನ್ನು ಹಿಂದಕ್ಕೆ ಪಡೆಯಲು ...

ಧಾರವಾಡ ಲೋಕಸಭೆ : ಉಮೇದುವಾರಿಕೆ ಹಿಂಪಡೆದ ಎಂಟು ಅಭ್ಯರ್ಥಿಗಳು; ಅಂತಿಮವಾಗಿ ಚುನಾವಣಾ ಸ್ಪರ್ಧೆಯಲ್ಲಿ 17 ಅಭ್ಯರ್ಥಿಗಳು

ಧಾರವಾಡ : 11-ಧಾರವಾಡ ಚುನಾವಣಾ ಕ್ಷೇತ್ರದಿಂದ ಲೋಕಸಭೆಗೆ ನಡೆಯುವ ಚುನಾವಣೆಗೆ ಕ್ರಮಬದ್ದವಾಗಿ ನಾಮನಿರ್ದೇಶನ ಮಾಡಲ್ಪಟ್ಟಿದ್ದ 25 ...

ಅಡಕೆ, ಕಾಫಿ ಬೆಳೆಗಾರರ ಸಂಕಷ್ಟಕ್ಕೆ ಬಿಜೆಪಿ ಏಕೆ ಸ್ಪಂದಿಸಿಲ್ಲ: ಜಯಪ್ರಕಾಶ್ ಹೆಗ್ಡೆ ಪ್ರಶ್ನೆ

ಬಾಳೆಹೊನ್ನೂರು: ಕಳೆದ ಹತ್ತು ವರ್ಷಗಳಿಂದ ಕೇಂದ್ರದಲ್ಲಿ ಅಧಿಕಾರದಲ್ಲಿರುವ ಬಿಜೆಪಿ, ಮಲೆನಾಡಿನ ಅಡಕೆ, ಕಾಫಿ ಬೆಳೆಗಾರರ ಸಂಕಷ್ಟಕ್ಕೆ ...