ಅಪ್ರಾಪ್ತ ಬಾಲಕಿಗೆ ಲೈಂಗಿಕ ದೌರ್ಜನ್ಯ ಪ್ರಕರಣ: ಸ್ಪೂರ್ತಿ ಸಂಸ್ಥೆಯ ಕೇಶವ ಕೋಟೇಶ್ವರ ಸಹಿತ ಇಬ್ಬರ ಬಂಧನ

Source: sonews | By Staff Correspondent | Published on 16th March 2019, 12:21 AM | Coastal News | Don't Miss |

ಉಡುಪಿ: ಅಪ್ರಾಪ್ತ ಬಾಲಕಿಯರಿಗೆ ಲೈಂಗಿಕ ದೌರ್ಜನ್ಯ ಎಸಗಿರುವ ಆರೋಪದಲ್ಲಿ ಕುಂದಾಪುರ ತಾಲೂಕಿನ ಕೆದೂರು ಬೇಳೂರು ಸ್ಪೂರ್ತಿಧಾಮದ ಮುಖ್ಯಸ್ಥ ಕೇಶವ ಕೋಟೇಶ್ವರ (50) ಸಹಿತ ಇಬ್ಬರನ್ನು ಉಡುಪಿ ಮಹಿಳಾ ಠಾಣೆಯ ಪೊಲೀಸರು ಪೋಕ್ಸೊ ಕಾಯಿದೆಯಡಿ ಬಂಧಿಸಿದ್ದಾರೆ.

ಇನ್ನೋರ್ವ ಆರೋಪಿ ಕುಂದಾಪುರ ಕೊರ್ಗಿಯ ಹನುಮಂತ(28) ಎಂದು ಗುರುತಿಸಲಾಗಿದೆ. ಸಂಸ್ಥೆಯ ಅರ್ಹ ಮಕ್ಕಳ ಕೇಂದ್ರದಲ್ಲಿರುವ ಅಪ್ರಾಪ್ತ ವಯಸ್ಸಿನ ಬಾಲಕಿಯರು ಉಡುಪಿ ಮಹಿಳಾ ಠಾಣೆಗೆ ನೀಡಿದ ದೂರಿಂತೆ ಆರೋಪಿಗಳನ್ನು ಬಂಧಿಸಲಾಗಿದೆ.

ಇವರಲ್ಲಿ ಹನುಮಂತ ವಿರುದ್ಧ ಎರಡು ಹಾಗೂ ಕೇಶವ ಕೋಟೇಶ್ವರ ವಿರುದ್ಧ ಒಂದು ಪ್ರಕರಣ ದಾಖಲಾಗಿದೆ. ಇವುಗಳ ಪೈಕಿ ಒಂದು ಪ್ರಕರಣದಲ್ಲಿ ಇವರಿ ಬ್ಬರು ಆರೋಪಿಗಳಾಗಿದ್ದಾರೆ. ಪೊಲೀಸರು ಗುರುವಾರ ನಸುಕಿನ ವೇಳೆ ಸಂಸ್ಥೆಗೆ ದಾಳಿ ನಡೆಸಿ ಕೇಶವ ಕೋಟೇಶ್ವರನನ್ನು ವಶಕ್ಕೆ ಪಡೆದು ತೀವ್ರ ವಿಚಾರಣೆಗೆ ಒಳಪಡಿಸಿ ಬಂಧಿಸಿದ್ದರು. ಅದೇ ದಿನ ಹನುಮಂತನನ್ನು ಕೂಡ ಪೊಲೀಸರು ಬಂಧಿಸಿದ್ದರು.

ಕೇಶವ ಕೋಟೇಶ್ವರನನ್ನು ಮಾ.14ರಂದು ರಾತ್ರಿ ವೇಳೆ ಜಿಲ್ಲಾ ವಿಶೇಷ ನ್ಯಾಯಾಲಯದ ನ್ಯಾಯಾಧೀಶರ ನಿವಾಸ ಮುಂದೆ ಹಾಜರು ಪಡಿಸಿ 14 ದಿನಗಳ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ. ಹನುಮಂತನನ್ನು ಇಂದು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು, ಈತನಿಗೂ 14 ದಿನಗಳ ನ್ಯಾಯಾಂಗ ಬಂಧನ ವಿಧಿಸಲಾಗಿದೆ.

ಸ್ಪೂರ್ತಿಧಾಮದಲ್ಲಿ ಕಾನೂನು ಬಾಹಿರ ಚಟುವಟಿಕೆಗಳು ನಡೆಯುತ್ತಿರುವ ಕುರಿತು 2016ರಲ್ಲಿ ಸರಕಾರಕ್ಕೆ ಸಲ್ಲಿಕೆಯಾದ ದೂರಿನ ಹಿನ್ನೆಲೆಯಲ್ಲಿ ಸಮಗ್ರ ತನಿಖೆ ನಡೆಸಲು ಉಡುಪಿ ಜಿಲ್ಲಾಡಳಿತ ಅಧಿಕಾರಿಗಳ ತಂಡವನ್ನು ರಚಿಸಿತ್ತು. ತನಿಖೆಯಿಂದ ಸಂಸ್ಥೆಯ ಮೇಲಿನ ಆರೋಪಗಳು ಸಾಬೀತಾಗಿರುವುದರಿಂದ ಸಂಸ್ಥೆಯ ಪರವಾನಿಗೆಯನ್ನು ರದ್ದು ಪಡಿಸಲು ಅಗತ್ಯ ಕ್ರಮ ತೆಗೆದುಕೊಳ್ಳುವಂತೆ ಸರಕಾರ ಜಿಲ್ಲಾಡಳಿತಕ್ಕೆ ನಿರ್ದೇಶನ ನೀಡಿತ್ತು.

Read These Next

ಭಟ್ಕಳ : ಈದುಲ್ ಫಿತ್ರ್ ನಿಮಿತ್ತ ಒಂದು ಲಕ್ಷ ಇಪ್ಪತ್ತು ಸಾವಿರಕ್ಕೂ ಅಧಿಕ ಫೀತ್ರ್ ಅಕ್ಕಿ ವಿತರಣೆ

ಭಟ್ಕಳ: ಈದುಲ್ ಫಿತ್ರ್ ಸಂದರ್ಭದಲ್ಲಿ ಪ್ರತಿಯೊಬ್ಬ ಮುಸ್ಲಿಮನು ತನ್ನ ಈದ್ ಹಬ್ಬಕ್ಕೆ ಒಂದು ಮುಂಚೆ ಕಡ್ಡಾಯವಾಗಿ ನೀಡುವ ಫಿತ್ರ್ ...

ಭಟ್ಕಳ ಸ್ಪೋರ್ಟ್ಸ್ ಅಕಾಡೆಮಿ ಮತ್ತು BMYF ಸಹಯೋಗದೊಂದಿಗೆ ಎ.20-21 ರಂದು ಯುವ ಪ್ರತಿಭೆಗಳಿಗಾಗಿ ಇಂಟರ್-ಕ್ರಿಕೆಟ್ ಲೀಗ್ ಆಯ್ಕೆ

ಭಟ್ಕಳ: ಉತ್ತರ ಕನ್ನಡ ಜಿಲ್ಲೆಯ ಉದಯೋನ್ಮುಖ ಕ್ರಿಕೆಟ್ ಪ್ರತಿಭೆಗಳನ್ನು ಗುರುತಿಸುವ ಮತ್ತು ಪೋಷಿಸುವ ಪ್ರಯತ್ನದಲ್ಲಿ, ಭಟ್ಕಳ ...

ಭಟ್ಕಳ ತಾಲೂಕಿನಲ್ಲಿ ಸರಣಿ ಕಳ್ಳತನ; ತಲೆಗೆ ಹೆಲ್ಮೆಟ್ ಹಾಗೂ ಮುಖಕ್ಕೆ ಮಾಸ್ಕ್ ಧರಿಸಿ ಲಕ್ಷಾಂತರ ರೂ ಲೂಟಿ

ಭಟ್ಕಳ: ನಗರದ ರಂಗನಕಟ್ಟೆಯಲ್ಲಿರುವ ವಿನಾಯಕ ಸಹಕಾರಿ ಸಂಘ ಸೇರಿದಂತೆ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಒಂದು ಅಂಗಡಿ ಹಾಗೂ ...

ಭಟ್ಕಳ : ಈದುಲ್ ಫಿತ್ರ್ ನಿಮಿತ್ತ ಒಂದು ಲಕ್ಷ ಇಪ್ಪತ್ತು ಸಾವಿರಕ್ಕೂ ಅಧಿಕ ಫೀತ್ರ್ ಅಕ್ಕಿ ವಿತರಣೆ

ಭಟ್ಕಳ: ಈದುಲ್ ಫಿತ್ರ್ ಸಂದರ್ಭದಲ್ಲಿ ಪ್ರತಿಯೊಬ್ಬ ಮುಸ್ಲಿಮನು ತನ್ನ ಈದ್ ಹಬ್ಬಕ್ಕೆ ಒಂದು ಮುಂಚೆ ಕಡ್ಡಾಯವಾಗಿ ನೀಡುವ ಫಿತ್ರ್ ...

ಭಟ್ಕಳ ಸ್ಪೋರ್ಟ್ಸ್ ಅಕಾಡೆಮಿ ಮತ್ತು BMYF ಸಹಯೋಗದೊಂದಿಗೆ ಎ.20-21 ರಂದು ಯುವ ಪ್ರತಿಭೆಗಳಿಗಾಗಿ ಇಂಟರ್-ಕ್ರಿಕೆಟ್ ಲೀಗ್ ಆಯ್ಕೆ

ಭಟ್ಕಳ: ಉತ್ತರ ಕನ್ನಡ ಜಿಲ್ಲೆಯ ಉದಯೋನ್ಮುಖ ಕ್ರಿಕೆಟ್ ಪ್ರತಿಭೆಗಳನ್ನು ಗುರುತಿಸುವ ಮತ್ತು ಪೋಷಿಸುವ ಪ್ರಯತ್ನದಲ್ಲಿ, ಭಟ್ಕಳ ...

ಭಟ್ಕಳ ತಾಲೂಕಿನಲ್ಲಿ ಸರಣಿ ಕಳ್ಳತನ; ತಲೆಗೆ ಹೆಲ್ಮೆಟ್ ಹಾಗೂ ಮುಖಕ್ಕೆ ಮಾಸ್ಕ್ ಧರಿಸಿ ಲಕ್ಷಾಂತರ ರೂ ಲೂಟಿ

ಭಟ್ಕಳ: ನಗರದ ರಂಗನಕಟ್ಟೆಯಲ್ಲಿರುವ ವಿನಾಯಕ ಸಹಕಾರಿ ಸಂಘ ಸೇರಿದಂತೆ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಒಂದು ಅಂಗಡಿ ಹಾಗೂ ...