ಭಟ್ಕಳದಲ್ಲಿ ಜಿ.ಪಂ., ತಾ.ಪಂ ಚುನಾವಣೆಯಲ್ಲಿ ಸಮಾಜವಾದಿ ಪಕ್ಷ ಸ್ಪರ್ಧೆ - ನಾಗರಾಜ್ ನಾಯ್ಕ

Source: SO News | By Laxmi Tanaya | Published on 27th August 2021, 8:07 PM | Coastal News | Don't Miss |

ಭಟ್ಕಳ : ಮುಂಬರುವ ತಾಲೂಕು ಮತ್ತು ಜಿಲ್ಲಾ ಜಿಲ್ಲಾ ಪಂಚಾಯತ್ ಚುನಾವಣೆಯಲ್ಲಿ ಭಟ್ಕಳದಲ್ಲಿ‌ ಸಮಾಜವಾದಿ ಪಕ್ಷದಿಂದ  ಎಲ್ಲ ಕ್ಷೇತ್ರಗಳಲ್ಲಿ ಅಭ್ಯರ್ಥಿ ಸ್ಪರ್ದಿಸಲಿದ್ದಾರೆಂದು 
ಸಮಾಜವಾದಿ ಪಕ್ಷದ ಕಾರ್ಮಿಕ ವಿಭಾಗದ ರಾಜ್ಯಾಧ್ಯಕ್ಷ ನಾಗರಾಜ್ ನಾಯ್ಕ  ಹೇಳಿದ್ದಾರೆ.

ಪಕ್ಷ ಸಂಘಟನೆ  ವಿಚಾರವಾಗಿ ಭಟ್ಕಳದಲ್ಲಿ  ಮಾಧ್ಯಮಗೋಷ್ಠಿಯಲ್ಲಿ ಮಾತನಾಡುತ್ತಿದ್ದರು. ಅಗಸ್ಟ್  30 ರಂದು ಶಿರಸಿಗೆ ಸಮಾಜವಾದಿ ಪಕ್ಷದ ನೂತನ ರಾಜ್ಯಾಧ್ಯಕ್ಷ  ಎನ್.ಮಂಜಪ್ಪ ಆಗಮಿಸುತ್ತಿದ್ದಾರೆ.  ಶಿರಸಿಯ ಮಧುವನ ಹೋಟೆಲ್ ಆರಾಧನಾ ಸಭಾ ಭವನದಲ್ಲಿ ನೂತನ ರಾಜ್ಯ ಅಧ್ಯಕ್ಷರಿಗೆ ಸನ್ಮಾನ ಕಾರ್ಯಕ್ರಮ ಮತ್ತು ಉತ್ತರ ಕನ್ನಡ ಜಿಲ್ಲೆಯ ನೂತನ ಜಿಲ್ಲಾ ಅಧ್ಯಕ್ಶರು ಮತ್ತು ಪದಾಧಿಕಾರಿಗಳ ಸಭೆ ಪದಗ್ರಹಣ ಕಾರ್ಯಕ್ರಮ ನಡೆಯಲಿದೆ ಎಂದು ತಿಳಿಸಿದರು.

ಮುಂದಿನ ತಾಲೂಕು ಮತ್ತು ಜಿಲ್ಲಾ ಪಂಚಾಯತ್ ಚುನಾವಣೆಯಲ್ಲಿ ಭಟ್ಕಳದಲ್ಲಿ ಸಮಾಜವಾದಿ ಪಕ್ಷ  ಎಲ್ಲ ಕ್ಷೇತ್ರಗಳಲ್ಲಿ  ಭಟ್ಕಳ ತಾಲೂಕ ಅಧ್ಯಕ್ಷ ಅಂತೋನ ನೇತೃತ್ವದಲ್ಲಿ ಸ್ಫರ್ಧೆ ಮಾಡಲಿದ್ದೇವೆ ಎಂದು ತಿಳಿಸಿದರು. 

ಈ ಸಂದರ್ಭದಲ್ಲಿ ಸಮಾಜವಾದಿ ಪಕ್ಷದ ರಾಜ್ಯ ಮುಖಂಡ ಬಳಿಗಾರ್, ಅಲ್ಪಸಂಖ್ಯಾತ ಘಟಕದ ಜಿಲ್ಲಾಧ್ಯಕ್ಷ ಸಮಿಉಲ್ಲಾ ಭಟ್ಕಳ, ತಾಲೂಕಾಧ್ಯಕ್ಷ  ಅಂತೋನ ಜೂಜೆ ಲೂಯಿಸ್ ಮುಂಡಳ್ಳಿ ಉಪಸ್ಥಿತರಿದ್ದರು.

Read These Next

ಭಟ್ಕಳದಲ್ಲಿ ಭಾವೈಕ್ಯತೆ ಮತ್ತು ಧರ್ಮ ಸಮನ್ವಯತೆ ಸಾರುವ ಚೆನ್ನಪಟ್ಟಣ ಶ್ರೀಹನುಮಂತ ದೇವರ ರಥೋತ್ಸವ ಸಂಪನ್ನ

ಭಟ್ಕಳ: ತಾಲೂಕಿನ ಐತಿಹಾಸಿಕ ಚೆನ್ನಪಟ್ಟಣ ಶ್ರೀ ಹನುಮಂತ ದೇವರ ಭಾವೈಕ್ಯದ ಬ್ರಹ್ಮರಥೋತ್ಸವ ಬುಧವಾರ ಸಂಜೆ ಅತ್ಯಂತ ಸಡಗರ ...

ಕುಂದಾಪುರ: ಚಾಲಕನ ನಿಯಂತ್ರಣ ತಪ್ಪಿ ಕಾರು ಪಲ್ಟಿ – ಓರ್ವ ಮಹಿಳೆ ಮೃತ್ಯು, ಇಬ್ಬರ ಸ್ಥಿತಿ ಗಂಭೀರ!

ರಾಷ್ಟ್ರೀಯ ಹೆದ್ದಾರಿ 66 ರಲ್ಲಿ ಇಂದು ಮಧ್ಯಾಹ್ನ ನಡೆದ ರಸ್ತೆ ಅಪಘಾತದಲ್ಲಿ ಕಾರಿನಲ್ಲಿದ್ದ ಓರ್ವ ಮಹಿಳೆ ಮೃತಪಟ್ಟು, ಇಬ್ಬರು ಗಂಭೀರ ...